• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೋದಿ ಅವಧಿಯಲ್ಲಿ ಆರ್ಥಿಕ ಅಭಿವೃದ್ಧಿಯಷ್ಟೇ ಅಲ್ಲಾ, ರುಪಾಯಿ ಮೌಲ್ಯವೂ ಕುಸಿತ!

by
November 26, 2019
in ದೇಶ
0
ಮೋದಿ  ಅವಧಿಯಲ್ಲಿ ಆರ್ಥಿಕ ಅಭಿವೃದ್ಧಿಯಷ್ಟೇ ಅಲ್ಲಾ
Share on WhatsAppShare on FacebookShare on Telegram

ದೇಶದ ಆರ್ಥಿಕ ಪರಿಸ್ಥಿತಿ ಆರು ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿಯಲಿದೆ ಎಂಬ ವಿವಿಧ ವಿತ್ತೀಯ ಸಂಸ್ಥೆಗಳ ಮುನ್ನಂದಾಜುಗಳ ನಡುವೆ ಈ ವಾರಾಂತ್ಯದಲ್ಲಿ ಭಾರತ ಸರ್ಕಾರವು ಪ್ರಸಕ್ತ ವಿತ್ತೀಯ ವರ್ಷದ ಎರಡನೇ ತ್ರೈಮಾಸಿಕದ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) ಬೆಳವಣಿಗೆ ಅಂಕಿಅಂಶಗಳನ್ನು ಬಿಡುಗಡೆ ಮಾಡಲಿದೆ. ಈಗಾಗಲೇ ಜನರ ಖರೀದಿ ಶಕ್ತಿ ಕುಂದಿರುವ ಕುರಿತಾದ ಎನ್ಎಸ್ಎಸ್ಒ ವರದಿಯನ್ನು ಪ್ರಕಟಿಸದೇ ಹಾಗೆ ‘ಸುರಕ್ಷಿತ’ವಾಗಿಟ್ಟುಕೊಂಡಿರುವ ಮೋದಿ ಸರ್ಕಾರ ನಿಖರವಾದ ಜಿಡಿಪಿ ಅಂಕಿ ಅಂಶಗಳನ್ನು ತಿರುಚದೆಯೇ ಬಿಡುಗಡೆ ಮಾಡುತ್ತದೆಯೇ ಎಂಬುದು ಐದು ಟ್ರಿಲಿಯನ್ ಡಾಲರ್ ಪ್ರಶ್ನೆ!

ADVERTISEMENT

ಆದರೆ, ಮೋದಿ ಆಡಳಿತದ ಅವಧಿಯಲ್ಲಿ ಜಿಡಿಪಿ ಕುಸಿಯುತ್ತಿರುವಂತೆಯೇ ದೇಶೀಯ ರುಪಾಯಿ ಮೌಲ್ಯವೂ ಕುಸಿಯುತ್ತಿದೆ. 2014ರಲ್ಲಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದಾಗ ರುಪಾಯಿ ಮೌಲ್ಯವು ಪ್ರತಿ ಡಾಲರ್ ಗೆ 58.52 ಇದ್ದದ್ದು ಪ್ರಸ್ತುತ (ನವೆಂಬರ್ 26 ರಂದು) 71.62ಕ್ಕೆ ಕುಸಿದಿದೆ. ಈ ಅವಧಿಯಲ್ಲಿ 13.2746 ರುಪಾಯಿಗಳಷ್ಟು ಮೌಲ್ಯ ಕುಸಿದಿದೆ. ಮೋದಿ ಆಡಳಿತದ ಅವಧಿಯಲ್ಲಿ ಇದುವರೆಗೆ ಆಗಿರುವ ರುಪಾಯಿ ಮೌಲ್ಯ ಕುಸಿತ ಶೇ. 22.68 ರಷ್ಟಾಗಿದೆ.

ಪ್ರಸಕ್ತ ತ್ರೈಮಾಸಿಕದಲ್ಲಿ ಭಾರತೀಯ ರುಪಾಯಿಯು ಏಷಿಯಾದ ಉದಯಿಸುತ್ತಿರುವ ಮಾರುಕಟ್ಟೆ ರಾಷ್ಟ್ರಗಳ ಪೈಕಿ ಅತ್ಯಂತ ದುರ್ಬಲ ಕರೆನ್ಸಿಯಾಗಿ ಹೊರ ಹೊಮ್ಮಿದೆ. ಪ್ರಸಕ್ತ ವರ್ಷದಲ್ಲಿ ಅತಿ ಗರಿಷ್ಠ ಮಟ್ಟಕ್ಕೆ ಮುಟ್ಟಿದ್ದ ಜುಲೈ ತಿಂಗಳ ವಿನಿಮಯ ಮೌಲ್ಯಕ್ಕೆ ಹೋಲಿಸಿದರೆ ಡಾಲರ್ ವಿರುದ್ಧ ಶೇ.5ರಷ್ಟು ಕುಸಿತ ಕಂಡಿದೆ. ಇಷ್ಟು ಕಡಮೆ ಅವಧಿಯಲ್ಲಿ ಶೇ.5ರಷ್ಟು ಕುಸಿತ ಕಂಡಿರುವುದು ಆತಂಕದ ಸಂಗತಿ.

ರುಪಾಯಿ ಮೌಲ್ಯ ಕುಸಿತವು ದೇಶದ ಆರ್ಥಿಕತೆ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ದೇಶದ ಆಮದು ಮತ್ತು ರಫ್ತುಗಳ ನಡುವಿನ ಸಮತೋಲನ ತಪ್ಪಿದ್ದು, ವ್ಯಾಪಾರ ಕೊರತೆ (ಆಮದು ಪ್ರಮಾಣ ಹೆಚ್ಚಳವಾಗಿ ರಫ್ತು ಪ್ರಮಾಣ ತಗ್ಗುವುದು) ತೀವ್ರಗತಿಯಲ್ಲಿ ಏರುತ್ತಿದೆ. ಒಂದು ಕಡೆ ಆಮದು ಪ್ರಮಾಣ ಹೆಚ್ಚುತ್ತಿರುವಂತೆಯೇ ರುಪಾಯಿ ಮೌಲ್ಯವು ಕುಸಿದಾಗ ಆರ್ಥಿಕತೆ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ. ಭಾರತ ಆಮದು ಮಾಡಿಕೊಳ್ಳುವ ಎಲ್ಲಾ ಸರಕು ಮತ್ತು ಸೇವೆಗಳಿಗೂ ಡಾಲರ್ ರೂಪದಲ್ಲಿಯೇ ಪಾವತಿ ಮಾಡಬೇಕಿರುವುದರಿಂದ ರುಪಾಯಿಯ ಡಾಲರ್ ಖರೀದಿ ಶಕ್ತಿ ಕುಂದಿದಾಗ ನಾವು ಆಮದು ಮಾಡಿಕೊಳ್ಳುವ ಸರಕು ಮತ್ತು ಸೇವೆಗಳಿಗೆ ವಾಸ್ತವಿಕ ಬೆಲೆಗಿಂತ ಹೆಚ್ಚಿನ ಬೆಲೆ ಪಾವತಿಸಿದಂತಾಗುತ್ತದೆ. ಸರಳವಾಗಿ ಹೇಳಬೇಕೆಂದರೆ 100 ರುಪಾಯಿಗೆ ಖರೀದಿಸಬಹುದಾದ ಪೆನ್ನನ್ನು ನಾವು 108-110 ರುಪಾಯಿ ಕೊಟ್ಟು ಖರೀದಿಸುತ್ತೇವೆ. ಅಂದರೆ ಮೇಲ್ನೋಟಕ್ಕೆ ನಮಗೆ ಶೇ.8 ರಿಂದ 10 ರಷ್ಟು ಹೊರೆ ಬೀಳುತ್ತದೆ.

ಬ್ಲೂಮ್ಬರ್ಗ್ ವರದಿ ಪ್ರಕಾರ, ಸರ್ಕಾರದ ಸಾಲದ ಪ್ರಮಾಣ ಗಣನೀಯವಾಗಿ ಏರುತ್ತಿರುವುದರಿಂದ ಮತ್ತು ದೇಶೀಯ ಮಾರುಕಟ್ಟೆಯಲ್ಲಿ ನಗದು ಕೊರತೆಯಿಂದಾಗಿ ಸಾಲದ ಬಿಕ್ಕಟ್ಟು ತೀವ್ರವಾಗಿರುವುದರಿಂದ ಕರೆನ್ಸಿ ಮಾರುಕಟ್ಟೆಯಲ್ಲಿ ರುಪಾಯಿ ಮಾರಾಟದ ಒತ್ತಡ ಹೆಚ್ಚಿದೆ. ಐಎಲ್ಅಂಡ್ಎಫ್ಎಸ್ ಹಗರಣ ಹೊರಬಿದ್ದ ನಂತರ ಉದ್ಭವಿಸಿದ ಬ್ಯಾಂಕೇತರ ಹಣಕಾಸು ಸಂಸ್ಥೆಗಳ ನಗದು ಕೊರತೆ ಸಮಸ್ಯೆ ಹಾಗೆಯೇ ಇದೆ. ಇದು ಸಹ ರುಪಾಯಿ ಮೇಲಿನ ಒತ್ತಡಕ್ಕೆ ಕಾರಣವಾಗಿದೆ.

ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಈಗಾಗಲೇ ದ್ವಿತೀಯ ತ್ರೈಮಾಸಿಕದ ಜಿಡಿಪಿ ಮುನ್ನಂದಾಜನ್ನು ಶೇ.4.2ಕ್ಕೆ ತಗ್ಗಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಸಹ ತನ್ನ ದ್ವೈಮಾಸಿಕ ಹಣಕಾಸು ನೀತಿ ಪರಾಮರ್ಶೆ ವೇಳೆ ಜಿಡಿಪಿ ಮುನ್ನಂದಾಜನ್ನು ಗಣನೀಯವಾಗಿ ತಗ್ಗಿಸಿದೆ. ಈ ನಡುವೆ ಜಾಗತಿಕ ರೇಟಿಂಗ್ ಏಜೆನ್ಸಿ ಮೂಡಿ ಸಾವರಿನ್ ರೇಟಿಂಗ್ ಅನ್ನು ತಗ್ಗಿಸಿದೆ. ದೇಶೀಯ ರೇಟಿಂಗ್ ಏಜೆನ್ಸಿಗಳ ಜತೆಗೆ ವಿಶ್ವಬ್ಯಾಂಕ್, ಅಂತರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಸಹ ಜಿಡಿಪಿ ಮುನ್ನಂದಾಜನ್ನು ಶೇ.5ಕ್ಕಿಂತ ಕಳಮಟ್ಟಕ್ಕೆ ಇಳಿಸಿವೆ. ಈ ಎಲ್ಲಾ ಏಜೆನ್ಸಿಗಳು, ವಿತ್ತೀಯ ಸಂಸ್ಥೆಗಳು ಭಾರತದ ಜಿಡಿಪಿ ಶೇ.7ರ ಆಜುಬಾಜಿನಲ್ಲಿ ಇರುತ್ತದೆಂದು ಮುನ್ನಂದಾಜು ಮಾಡಿದ್ದವು. ಇಷ್ಟು ಕಡಮೆ ಅವಧಿಯಲ್ಲಿ ಶೇ.2ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಜಿಡಿಪಿ ಕುಸಿಯುತ್ತಿದೆ. ಒಂದು ವೇಳೆ ಎಸ್ಬಿಐ ಮುನ್ನಂದಾಜು ಮಾಡಿದಂತೆ ಶೇ.4.2ಕ್ಕೆ ಕುಸಿದರೆ, ಅದು ದಶಕಗಳ ಅತ್ಯಂತ ಕನಿಷ್ಠ ಮಟ್ಟಕ್ಕೆ ಕುಸಿದಂತಾಗುತ್ತದೆ.

ಜಿಡಿಪಿ ಕುಸಿತದ ಅಂಕಿ ಅಂಶಗಳು ವಾರಾಂತ್ಯದಲ್ಲಿ ಅಂದರೆ ಶುಕ್ರವಾರ ಪ್ರಕಟವಾಗಲಿದ್ದು, ಶೇ.5ಕ್ಕಿಂತ ಕೆಳಮಟ್ಟದಲ್ಲಿದ್ದರೆ ರುಪಾಯಿ ಮೌಲ್ಯವು ಮತ್ತಷ್ಟು ಸಮಯದವರೆಗೆ ಇಳಿಜಾರಿನಲ್ಲಿ ಸಾಗಬಹುದು. ಕಳೆದ ವರ್ಷ ಅಕ್ಟೋಬರ್ 19ರಂದು ರುಪಾಯಿ ಮೌಲ್ಯವು ಡಾಲರ್ ವಿರುದ್ಧ 73.44ಕ್ಕೆ ಕುಸಿದು ಅತ್ಯಂತ ಕನಿಷ್ಠ ಮಟ್ಟವೆಂದು ದಾಖಲಾಗಿತ್ತು. ಬರುವ ದಿನಗಳಲ್ಲಿ ರುಪಾಯಿ ಮೌಲ್ಯವು ಮತ್ತಷ್ಟು ಕುಸಿದು 74ರ ಮಟ್ಟವನ್ನು ಮುಟ್ಟಲೂ ಬಹುದು.

ರುಪಾಯಿ ಮೌಲ್ಯ ಕುಸಿದಾಗ ರಫ್ತು ಮಾಡುವ ಸಂಸ್ಥೆಗಳಿಗೆ ಹೆಚ್ಚಿನ ಲಾಭವಾಗುತ್ತದೆ. ನಿಜಾ. ಆದರೆ, ಭಾರತದ ಅಂತಾರಾಷ್ಟ್ರೀಯ ವಹಿವಾಟಿನಲ್ಲಿ ಸಮತೋಲನ ಇಲ್ಲ. ಆಮದು ಹಿಗ್ಗಿದ್ದು, ರಫ್ತು ಕುಗ್ಗಿದೆ. 2017-18ರಲ್ಲಿ ಒಟ್ಟಾರೆ ವ್ಯಾಪಾರ ಕೊರತೆಯು ಅಂದರೆ ಆಮದು ಮಾಡಿಕೊಂಡ ಪ್ರಮಾಣಕ್ಕಿಂತ ರಫ್ತು ಪ್ರಮಾಣದಲ್ಲಿನ ಕೊರತೆಯು 84 ಬಿಲಿಯನ್ ಡಾಲರ್ ಗಳಷ್ಟು ಇತ್ತು. ಇದು 2018-19ರಲ್ಲಿ 103.63 ಬಿಲಿಯನ್ ಡಾಲರ್ ಜಿಗಿದಿತ್ತು. ಪ್ರಸಕ್ತ ವಿತ್ತೀಯ ವರ್ಷದಲ್ಲಿ ಇದು 120 ಬಿಲಿಯನ್ ಡಾಲರ್ ಮುಟ್ಟುವ ಅಂದಾಜು ಇದೆ. ದೇಶದ ಆರ್ಥಿಕತೆಯ ಆರೋಗ್ಯದ ದೃಷ್ಟಿಯಿಂದ ಇಷ್ಟೊಂದು ಪ್ರಮಾಣದಲ್ಲಿನ ವ್ಯಾಪಾರ ಕೊರತೆ ಒಳ್ಳೆಯದಲ್ಲ. ದೀರ್ಘಕಾಲದಲ್ಲಿ ಇದು ಬೃಹದಾರ್ಥಿಕತೆಯ ಮೇಲೆ ತೀವ್ರ ಪರಿಣಾಮ ಬೀರಲಿದ್ದು, ದೇಶದ ಸಾಲದ ಹೊರೆಯು ತ್ವರಿತಗತಿಯಲ್ಲಿ ಜಿಗಿಯುವ ಅಪಾಯ ಇದೆ.

Tags: exportGDPimportNarendra ModinormsRBIrupee valueಆಮದುಆರ್ ಬಿಐಆರ್ಥಿಕ ಬಿಕ್ಕಟ್ಟುಜಿಡಿಪಿನರೇಂದ್ರ ಮೋದಿಮಾರ್ಗಸೂಚಿರಫ್ತುರೂಪಾಯಿ ಮೌಲ್ಯ
Previous Post

ದೇಸೀ`ದೃಷ್ಟಿ’ ಬಿಟ್ಟು ವಿದೇಶೀ `ದೃಷ್ಟಿ’ ಮೇಲೇಕೆ ಕಣ್ಣು?

Next Post

ಅಧಿಕಾರಕ್ಕಾಗಿ ಕಾಂಗ್ರೆಸ್, ಬಿಜೆಪಿಯಿಂದ ಸಂವಿಧಾನದ ಆಶಯಗಳಿಗೆ ಎಳ್ಳುನೀರು

Related Posts

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
0

ಮೋದಿ ಸರ್ಕಾರದ ಬದ್ಧತೆ ಪುನರುಚ್ಚರಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಉದ್ಯಮ ವಲಯದ ಸಾಧಕ ಕಂಪನಿಗಳಿಗೆ ಗೋಲ್ಡನ್ ಪೀಕಾಕ್ ಪ್ರಶಸ್ತಿ ಪ್ರದಾನ ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಪರಿಸರ...

Read moreDetails

Tiger: ಮಲೆ ಮಹದೇಶ್ವರ ವನ್ಯಧಾಮದಲ್ಲಿ ತಾಯಿ ಹುಲಿ ಸೇರಿ ಮೂರು ಹುಲಿ ಮರಿಗಳ ಅಸಹಜ ಸಾವು ತನಿಖೆಗೆ ಸಚಿವರ ಆದೇಶ

June 26, 2025

Santosh Lad: ಅನ್ನದಾತನಿಗೆ ಜೋಡಿ ಎತ್ತು ಕೊಡಿಸಿ ಮಾನವೀಯತೆ ಮೆರೆದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 26, 2025

Heartattack:1 ತಿಂಗಳಲ್ಲಿ 14 ಜನ ಸಾವು, 24 ಗಂಟೆಗಳಲ್ಲಿ ಹಾಸನದ ಇಬ್ಬರು ಹೃದಯಾಘಾತಕ್ಕೆ ಬಲಿ.

June 26, 2025

BJP Ex Renukacharya vs Congress MLA Shivaganga: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದ ರೇಣುಕಾಚಾರ್ಯ: ಎಂಎಲ್‌ಎ ಶಿವಗಂಗಾ

June 26, 2025
Next Post
ಅಧಿಕಾರಕ್ಕಾಗಿ ಕಾಂಗ್ರೆಸ್

ಅಧಿಕಾರಕ್ಕಾಗಿ ಕಾಂಗ್ರೆಸ್, ಬಿಜೆಪಿಯಿಂದ ಸಂವಿಧಾನದ ಆಶಯಗಳಿಗೆ ಎಳ್ಳುನೀರು

Please login to join discussion

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು
Top Story

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು
Top Story

ಕೊಡಗು ಮಳೆಹಾನಿ ಕುರಿತು ವರದಿಗೆ ಸೂಚನೆ: ಸಚಿವ ಎನ್.ಎಸ್.ಬೋಸರಾಜು

by ಪ್ರತಿಧ್ವನಿ
June 26, 2025
ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಒಂದೇ ರಾಜ್ಯದವರಾಗಿ ನಾವು ನಾವೇ ನೀರಿಗಾಗಿ ಕಿತ್ತಾಡುವುದು ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada