• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಮೋದಿ ವಿರುದ್ಧ ಗುಡುಗಿದ್ದ ಚುನಾವಣಾ ಆಯುಕ್ತ ಲಾವಸ ರಾಜೀನಾಮೆ!

by
August 18, 2020
in ದೇಶ
0
ಮೋದಿ ವಿರುದ್ಧ ಗುಡುಗಿದ್ದ ಚುನಾವಣಾ ಆಯುಕ್ತ ಲಾವಸ ರಾಜೀನಾಮೆ!
Share on WhatsAppShare on FacebookShare on Telegram

ಕೆಲವೇ ದಿನಗಳಲ್ಲಿ ದೇಶದ ಮುಖ್ಯ ಚುನಾವಣಾ ಆಯುಕ್ತರಾಗಿ ಬಡ್ತಿ ಹೊಂದಲಿದ್ದ ಚುನಾವಣಾ ಆಯುಕ್ತ ಅಶೋಕ ಲಾವಸ ಅವರು ಮಂಗಳವಾರ ದಿಢೀರ್ ರಾಜೀನಾಮೆ ನೀಡಿದ್ದಾರೆ.

ADVERTISEMENT

ಕಳೆದ ಲೋಕಸಭಾ ಚುನಾವಣೆಯ ವೇಳೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ವಿರುದ್ಧ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ವಿಷಯದಲ್ಲಿ ದಿಟ್ಟ ನಿಲುವು ಕೈಗೊಂಡ ಹಿನ್ನೆಲೆಯಲ್ಲಿ ಅವರ ಈ ದಿಢೀರ್ ರಾಜೀನಾಮೆ ಮಹತ್ವ ಪಡೆದುಕೊಂಡಿದೆ. ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ಆಡಳಿತ ಪಕ್ಷದ ಪ್ರಮುಖರಿಬ್ಬರಿಗೆ ಕ್ಲೀನ್ ಚಿಟ್ ನೀಡಿದ ಆಯೋಗದ ಕ್ರಮವನ್ನು ಸ್ವತಃ ಚುನಾವಣಾ ಆಯೋಗದ ಎರಡನೇ ಪ್ರಮುಖ ಅಧಿಕಾರಿಯಾಗಿ ಅವರು ಬಲವಾಗಿ ವಿರೋಧಿಸಿದ್ದರು.

ಅದೇ ಹಿನ್ನೆಲೆಯಲ್ಲಿ; ಚುನಾವಣಾ ಬಳಿಕ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಲೇ ಲಾವಾಸ ಅವರ ಪತ್ನಿಯೂ ಸೇರಿದಂತೆ ಕುಟುಂಬದವರ ಮೇಲೆ ಆದಾಯ ತೆರಿಗೆ ದಾಳಿ ನಡೆದಿತ್ತು. ಆದಾಯ ಮೀರಿದ ಆಸ್ತಿ ಮತ್ತು ಆದಾಯ ಘೋಷಣೆ ಮಾಡದೇ ಇರುವ ಹಿನ್ನೆಲೆಯಲ್ಲಿ ಆ ದಾಳಿ ನಡೆಸಲಾಗಿತ್ತು ಎಂದು ಇಲಾಖೆ ಹೇಳಿದ್ದರೂ, ಪತ್ನಿ, ಪುತ್ರ ಮತ್ತು ಸಹೋದರಿಯ ವಿರುದ್ಧದ ತೆರಿಗೆ ಇಲಾಖೆಯ ಆ ಕ್ರಮವನ್ನು ಸೇಡಿನ ಕ್ರಮವೆಂದೇ ವ್ಯಾಖ್ಯಾನಿಸಲಾಗಿತ್ತು ಮತ್ತು ಕುಟಂಬವರ್ಗದವರು ಕೂಡ, ಇಲಾಖೆಯ ಆರೋಪಗಳನ್ನು ಸಾರಾಸಗಟಾಗಿ ತಳ್ಳಿಹಾಕಿ, ಕಾನೂನು ರೀತಿಯ ಎಲ್ಲಾ ಪ್ರಕ್ರಿಯೆಗಳನ್ನು ಚಾಚೂತಪ್ಪದೆ ನಿರ್ವಹಿಸಿದ್ದರೂ ಇಲಾಖೆ ತಮ್ಮ ವಿರುದ್ಧ ಈ ಕ್ರಮ ಜರುಗಿದೆ ಎಂದು ಪ್ರತ್ಯಾರೋಪ ಮಾಡಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಹರ್ಯಾಣ ಕೇಡರ್ ಐಎಎಸ್ ಅಧಿಕಾರಿಯಾಗಿ ಹಣಕಾಸು ಕಾರ್ಯದರ್ಶಿ, ಪರಿಸರ ಮತ್ತು ನಾಗರಿಕ ವಿಮಾನ ಯಾನ ಇಲಾಖಾ ಕಾರ್ಯದರ್ಶಿ ಸೇರಿದಂತೆ ಭಾರತ ಸರ್ಕಾರದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಅಶೋಕ ಲಾವಾಸ ಅವರು ತಮ್ಮ ನಿವೃತ್ತಿಯ ಬಳಿಕ, 2018ರ ಜನವರಿಯಲ್ಲಿ ಚುನಾವಣಾ ಆಯುಕ್ತರಾಗಿ ನೇಮಕಗೊಂಡಿದ್ದರು. 2022ರ ಅಕ್ಟೋಬರ್ ಅವರಿಗೆ ಸೇವಾ ಅವಧಿ ಹೊಂದಿದ್ದ ಅವರು, ಹಾಲಿ ಮುಖ್ಯ ಚುನಾವಣಾ ಆಯುಕ್ತರ ನಿವೃತ್ತಿಯ ಬಳಿಕ ಸೇವಾ ಹಿರಿತನದ ಆಧಾರದ ಮೇಲೆ ಭಾರತೀಯ ಚುನಾವಣಾ ಸಂಸ್ಥೆಯ ಚುಕ್ಕಾಣಿ ಹಿಡಿಯಲಿದ್ದರು. ಜೊತೆಗೆ ಸಿಇಸಿಯಾಗಿ ಮುಂಬರುವ ಉತ್ತರಪ್ರದೇಶ, ಪಶ್ಚಿಮಬಂಗಾಳ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾ ಸೇರಿದಂತೆ ಬಿಜೆಪಿಯ ಪಾಲಿನ ನಿರ್ಣಾಯಕ ರಾಜ್ಯಗಳ ವಿಧಾನಸಭಾ ಚುನಾವಣೆಗಳನ್ನು ನಡೆಸುವ ಅವಕಾಶ ಅವರಿಗಿತ್ತು.

ಆದರೆ, ಅವಧಿಗೆ ಮುನ್ನವೇ ಅವರು ತಮ್ಮ ಸ್ಥಾನದಿಂದ ನಿರ್ಗಮಿಸಿರುವುದರಿಂದ ಮುಂದಿನ ಮುಖ್ಯ ಚುನಾವಣಾ ಆಯುಕ್ತರಾಗುವ ಅವಕಾಶ, ಅವರ ನಂತರದ ಸ್ಥಾನದಲ್ಲಿರುವ ಮತ್ತೊಬ್ಬ ಚುನಾವಣಾ ಆಯುಕ್ತರಾದ ಸುಶೀಲ್ ಚಂದ್ರ ಅವರಿಗೆ ಒದಗಿಬಂದಿದೆ.

ಲಾವಸ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿಗಳಿಗೆ ಸಲ್ಲಿಸಿದ್ದು, ಆಗಸ್ಟ್ 31ರಂದು ತಮ್ಮನ್ನು ಸೇವೆಯಿಂದ ಬಿಡುಗಡೆಗೊಳಿಸುವಂತೆ ಕೋರಿದ್ದಾರೆ. ಈ ನಡುವೆ, ಅವರು ಫಿಲಿಪೈನ್ಸ್ ಮೂಲದ ಏಷ್ಯಾ ಅಭಿವೃದ್ಧಿ ಬ್ಯಾಂಕ್(ಎಡಿಬಿ) ಉಪಾಧ್ಯಕ್ಷರಾಗಿ ಮುಂದಿನ ತಿಂಗಳು ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದ್ದು, ಈಗಾಗಲೇ ಎಡಿಬಿ ಅವರ ನೇಮಕಾತಿಯನ್ನು ಘೋಷಿಸಿದೆ.

Tags: ನರೇಂದ್ರ ಮೋದಿಮೋದಿ
Previous Post

SDPI ತಪ್ಪು ಮಾಡಿದ್ದರೆ ಅವರ ವಿರುದ್ಧ ಕ್ರಮ ಕೈಗೊಳ್ಳಿ- ಸಿದ್ಧರಾಮಯ್ಯ ಆಗ್ರಹ

Next Post

ಕರ್ನಾಟಕ: ಕರೋನಾ ಸೋಂಕಿತರ ಸಂಖ್ಯೆ 2,40,948

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025
Next Post
ಕರ್ನಾಟಕ: ಕರೋನಾ ಸೋಂಕಿತರ ಸಂಖ್ಯೆ 2

ಕರ್ನಾಟಕ: ಕರೋನಾ ಸೋಂಕಿತರ ಸಂಖ್ಯೆ 2,40,948

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada