• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಯಡಿಯೂರಪ್ಪಗೆ ಕಂಟಕವಾಗಲಿದ್ದ ಮಂಗಳೂರು ನಗರ ಪೊಲೀಸರ ಯಡವಟ್ಟು

by
December 23, 2019
in ಕರ್ನಾಟಕ
0
ಯಡಿಯೂರಪ್ಪಗೆ ಕಂಟಕವಾಗಲಿದ್ದ ಮಂಗಳೂರು ನಗರ ಪೊಲೀಸರ ಯಡವಟ್ಟು
Share on WhatsAppShare on FacebookShare on Telegram

ಪೌರತ್ವ ತಿದ್ದುಪಡಿ ಕಾಯಿದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ವಿರುದ್ಧ ಮಂಗಳೂರಿನಲ್ಲಿ ನಡೆದಿರುವ ಪ್ರತಿಭಟನೆ ವೇಳೆ ನಡೆದಿರುವ ಕೃತ್ಯ ಮತ್ತು ಕೃತಿಗಳ ಬಗ್ಗೆ ಮಂಗಳೂರು ನಗರ ಪೊಲೀಸರು ಸಾಕಷ್ಟು ವಿಚಾರಗಳನ್ನು ವಿವರಿಸಬೇಕಾಗಬಹುದು.

ADVERTISEMENT

ಮಂಗಳೂರಿನಲ್ಲಿ ಪೊಲೀಸರು ನಡೆಸಿರುವ ಗೋಲಿಬಾರಿಗೆ ಇಬ್ಬರು ಸಾವನ್ನಪ್ಪಿದ್ದು, ಇತರ ಆರು ಮಂದಿ ಗುಂಡೇಟಿನ ಗಾಯದೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಷ್ಟು ಮಂದಿಗೆ ಗುಂಡೇಟು ತಗಲಿದೆ ಎಂದು ಪೊಲೀಸರು ಬಹಿರಂಗ ಪಡಿಸಿರಲಿಲ್ಲ.

ಪೊಲೀಸರ ಮತ್ತು ಆಡಳಿತ ಪಕ್ಷದ ಮೊದಲ ವಾದವಾಗಿತ್ತು ಕೇರಳದಿಂದ ಬಂದ ಜನರು ಮಂಗಳೂರಿನಲ್ಲಿ ಹಿಂಸಾಚಾರ ನಡೆಸಿದ್ದಾರೆ ಎಂಬುದು. ಪೊಲೀಸರು ಬಂಧಿಸಿರುವ ಮತ್ತು ವಶಕ್ಕೆ ಪಡೆದುಕೊಂಡವರು, ಗಾಯಗೊಂಡು ಆಸ್ಪತ್ರೆಗೆ ದಾಖಲಾದವರು, ಪೊಲೀಸರು ದಾಖಲಿಸಿರುವ ಹತ್ತಕ್ಕೂ ಹೆಚ್ಚು ಎಫ್ ಐ ಆರ್ ಗಳಲ್ಲಿ ಕೇರಳದ ಯಾರೊಬ್ಬರ ಹೆಸರು ಕೂಡ ಇಲ್ಲ.

ಪೊಲೀಸರು ತಮ್ಮ ವೈಫಲ್ಯವನ್ನು ಮುಚ್ಚಿ ಹಾಕಲು, ತಮ್ಮ ಯಡವಟ್ಟುಗಳನ್ನು ಮರೆ ಮಾಚಲು ಕಾಸರಗೋಡಿನಿಂದ ಆಗಮಿಸಿದ ಕೇರಳದ ಮಲೆಯಾಳಿ ಖಾಸಗಿ ಟಿವಿ ಚಾನಲುಗಳನ್ನು ವಸ್ತುಶಃ ದಿಗ್ಬಂಧನದಲ್ಲಿ ಇರಿಸಲಾಯಿತು. ಇದರಿಂದಾಗಿ ರಾಜ್ಯ ಸರಕಾರ ಮತ್ತು ಆಡಳಿತಾರೂಢ ಭಾರತೀಯ ಜನತಾ ಪಾರ್ಟಿಗೆ ಇನ್ನಷ್ಟು ಡ್ಯಾಮೇಜ್ ಆಯಿತೇ ಹೊರತು ಪೊಲೀಸರಿಂದ ಯಾವ ಫಲ ಸಾಧನೆಯೂ ಆಗಲಿಲ್ಲ. ಸಿದ್ದರಾಮಯ್ಯ ಸರಕಾರದಲ್ಲಿ ವಾರ್ತಾ ಇಲಾಖೆಯ ಕ್ರಿಯಾಶೀಲ ನಿರ್ದೇಶಕರಾಗಿದ್ದ ಇಂದಿನ ಮಂಗಳೂರು ನಗರ ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಅವರು ಮೊದಲಿಗೆ 50 ಮಂದಿ ನಕಲಿ ಪತ್ರಕರ್ತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದಿದ್ದರು. ಕಸ್ಟಡಿಯಲ್ಲಿದ್ದದ್ದು ಕೇವಲ ಏಳು ಮಂದಿ ಪತ್ರಕರ್ತರು. ಅವರಲ್ಲಿ ಮೂರು ಮಂದಿ ಕೇರಳ ಸರಕಾರದ ಮಾನ್ಯತಾ ಕಾರ್ಡ್ (ಅಕ್ರೆಡಿಶನ್) ಹೊಂದಿದ್ದರು.

ಎಲ್ಲಿಂದ ಆರಂಭ?

ಮಂಗಳೂರಿನಲ್ಲಿ ಗಲಭೆ ಆರಂಭವಾಗಿದ್ದು ಡಿಸೆಂಬರ್ 19 ರಂದು. ಅದಕ್ಕೂ ಮುನ್ನ ಹಲವು ದಿವಸಗಳಿಂದ ಪೌರತ್ವ ತಿದ್ದುಪಡಿ ಕಾಯಿದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ ವಿರುದ್ಧ ಪ್ರತಿಭಟನೆಗಳು ನಡೆಯುತ್ತಲೇ ಇದ್ದವು. ಕಾಂಗ್ರೆಸ್ ಪಕ್ಷ ಕೂಡ ತನ್ನದೇ ಆದ ರೀತಿಯಲ್ಲಿ ಡಿಸೆಂಬರ್ 17ರಂದು ಪ್ರತಿಭಟನಾ ಸಭೆ ನಡೆಸಿತ್ತು. ಆದರೆ, ಕೇಂದ್ರ ಸರಕಾರದ ಕಾಯಿದೆ ವಿರುದ್ಧದ ಪ್ರತಿಭಟನೆಗೆ ಮಂಗಳೂರಿನಲ್ಲಿ ನಿಜವಾದ ಕಾವು ನೀಡಿದ್ದು ಡಿಸೆಂಬರ್ 18ರಂದು ಸಂಜೆ ವಿದ್ಯಾರ್ಥಿಗಳು ನಡೆಸಿದ ಪ್ರದರ್ಶನ ಮತ್ತು ಘೋಷಣೆಗಳು. ಅಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಆರಕ್ಕೂ ಹೆಚ್ಚು ಪ್ರತಿಭಟನೆ ನಡೆದಿತ್ತು. ಸಂಜೆ ವೇಳೆ ಯಾವುದೇ ಸಂಘಟನೆ ಬ್ಯಾನರೇ ಇಲ್ಲದೆ ವಿದ್ಯಾರ್ಥಿನಿಯರು ಸೇರಿದಂತೆ ಬಹುದೊಡ್ಡ ಸಂಖ್ಯೆಯಲ್ಲಿ ವಿದ್ಯಾರ್ಥಿ ಸಮೂಹ ನಡೆಸಿದ ಪ್ರತಿಭಟನೆಯ ಬೆನ್ನಲ್ಲೇ ಮಂಗಳೂರು ನಗರ ಪೊಲೀಸರು ಸೆಕ್ಷನ್ 144ರ ಪ್ರಕಾರ ನಿಷೇದಾಜ್ಞೆ ಘೋಷಿಸಿದರು.

ಆದರೆ, ಮರುದಿನ ಅಂದರೆ ಈ ಗಲಭೆ ಆರಂಭವಾದ ಡಿ.19ರಂದು ಕೆಲವು ಸಂಘಟನೆಗಳಿಗೆ ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ಪತ್ರ ನೀಡಿದ್ದರು. ಕೊನೆ ಕ್ಷಣದಲ್ಲಿ ಅನುಮತಿ ನಿರಾಕರಿಸಿದ್ದಾರೆ. ಪೂರ್ವಾಹ್ನ 11 ಗಂಟೆಗೆ ಸೇರಿದ ಜನರಿಗೆ ಪ್ರತಿಭಟನೆ ನಡೆಸಲು ಪೊಲೀಸರು ಅವಕಾಶ ನೀಡಲಿಲ್ಲ. ಕೇವಲ ಮೈಕಿನಲ್ಲಿ ಘೋಷಣೆ ಮಾಡಿ ಚದುರಿಸುವ ಕೆಲಸ ನಡೆಯಿತೇ ಹೊರತು ಮುಖಂಡರನ್ನು ಕರೆದು ದಾವಣಗೆರೆ, ಬೆಂಗಳೂರು ಮುಂತಾದೆಡೆ ಪೊಲೀಸ್ ಅಧಿಕಾರಿಗಳು ನಡೆಸಿದ ದೇಶಭಕ್ತಿಯ ಪಾಠ ಮಾಡುವ ಬುದ್ಧಿವಂತಿಕೆಯನ್ನು ಇಲ್ಲಿನ ಪೊಲೀಸರು ತೋರಿಸಲಿಲ್ಲ.

ಹಿರಿಯ ಪೊಲೀಸ್ ಅಧಿಕಾರಿಗಳು ಅನುಮತಿ ನೀಡಿದ್ದರೆ, ಡಿಸೆಂಬರ್ 18ರಂದೇ ಸೇರಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಟಾರ್ಜ್ ಮಾಡಲು ರಣೋತ್ಸಾಹಿ ಪೊಲೀಸರು ಕಾತುರರಾಗಿದ್ದರು. ಅಂತೂ ಜಿಲ್ಲಾಧಿಕಾರಿ ಕಚೇರಿ ಸಮೀಪದ ನೆಲ್ಲಿಕಾಯಿ ರಸ್ತೆಯಲ್ಲಿ ಸೇರಿದ್ದ ಪ್ರತಿಭಟನಾಕಾರರನ್ನು ಚದುರಿಸುವಲ್ಲಿ ಪೊಲೀಸರು ವೃತ್ತಿಪರತೆ ತೋರಿಸಲೇ ಇಲ್ಲ.

ಅನಂತರ ಬೀಬಿ ಅಲಾಬಿ ರಸ್ತೆಯಲ್ಲಿ ಟಯರುಗಳಿಗೆ ಬೆಂಕಿ ಹಚ್ಚಿದಾಗ ಕೂಡ ಮೀಸಲು ಪೊಲೀಸ್, ಪೊಲೀಸರು ಮತ್ತು ಅಧಿಕಾರಿಗಳಲ್ಲಿ ತಾಳ ಮೇಳ ಇರಲಿಲ್ಲ. ಗಲಭೆಯೊಂದನ್ನು ನಿಯಂತ್ರಿಸುವ ಸಿದ್ಧತೆಯಲ್ಲಿ ಪೊಲೀಸರು ಇದ್ದಂತಿರಲಿಲ್ಲ. ಉತ್ತರ ಪೊಲೀಸ್ ಠಾಣೆ ಸಮೀಪದಲ್ಲಿ ಸಂಜೆ ವೇಳೆ ಪರಿಸ್ಥಿತಿ ಕೈಮೀರಿ ಹೋಗಿತ್ತು. ಪೊಲೀಸರು ಹೈರಾಣರಾಗಿದ್ದರು. ಆದೇಶ ನೀಡಿದರೊ ಇಲ್ಲವೊ ಹಲವು ಸುತ್ತಿನ ಗುಂಡಿನ ಮೊರತೆ ಕೇಳಿಸಿತು. ಹಲವಾರು ಮಂದಿ ಗಾಯಗೊಂಡು ಕಾರ್ಮಿಕರೊಬ್ಬರು ಅಲ್ಲೇ ಶವವಾಗಿ ಬಿದ್ದವರು. ಸತ್ತವರು ಮತ್ತು ಗುಂಡೇಟು ತಿಂದವರು ಪ್ರತಿಭಟನೆ ವೇಳೆ ಕಲ್ಲು ಬಿಸಾಡಿದವರು ಅಲ್ಲವೇ ಅಲ್ಲ ಎನ್ನಲಾಗುತ್ತಿದೆ.

Tags: BS YeddyurappaHighland HospitalInternetMagalore HospitalMangalore PoliceMangaluruprotestCAAtwo killed firingಇಂಟರ್ ನೆಟ್ಇಬ್ಬರ ಸಾವುಗೋಲಿಬಾರ್ಪ್ರತಿಭಟನೆಬಿಎಸ್ ಯಡಿಯೂರಪ್ಪಮಂಗಳೂರುಮಂಗಳೂರು ಆಸ್ಪತ್ರೆಮಂಗಳೂರು ಪೋಲಿಸರುಸಿಎಎಹೈಲ್ಯಾಂಡ್‌ ಆಸ್ಪತ್ರೆ
Previous Post

ಫೋನ್, ಲೈಟ್, ಆಟದ ಸಾಮಾನುಗಳಾಯ್ತು, ಈಗ ಚೀನಾದಿಂದ ಈರುಳ್ಳಿ ಬಂದಿದೆ!

Next Post

ವರ್ಷವೊಂದರಲ್ಲಿ 5 ರಾಜ್ಯ ಕಳೆದುಕೊಂಡ ಬಿಜೆಪಿ

Related Posts

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!
Top Story

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

by ಪ್ರತಿಧ್ವನಿ
December 3, 2025
0

ಬೆಂಗಳೂರು: ರಾಜ್ಯ ಸರ್ಕಾರ  ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ಋತುಚಕ್ರ ರಜೆಯನ್ನು ಮಂಜೂರು ಮಾಡಿ ಆರ್ಥಿಕ ಇಲಾಖೆ ಆದೇಶ ಹೊರಡಿಸಿದೆ. ಈ ಸೌಲಭ್ಯ ತಕ್ಷಣದಿಂದಲೇ ಜಾರಿ ಮಾಡಲಾಗಿದೆ....

Read moreDetails
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

December 2, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

December 2, 2025
Next Post
ವರ್ಷವೊಂದರಲ್ಲಿ 5 ರಾಜ್ಯ ಕಳೆದುಕೊಂಡ ಬಿಜೆಪಿ

ವರ್ಷವೊಂದರಲ್ಲಿ 5 ರಾಜ್ಯ ಕಳೆದುಕೊಂಡ ಬಿಜೆಪಿ

Please login to join discussion

Recent News

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ
Top Story

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

by ಪ್ರತಿಧ್ವನಿ
December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!
Top Story

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

by ಪ್ರತಿಧ್ವನಿ
December 3, 2025
ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?
Top Story

ರಜತ್‌, ಚೈತ್ರಾ ಈ ವಾರವೇ ಔಟ್‌: ಹಾಲಿ ಸ್ಪರ್ಧಿಗಳಿಗೆ ಚಮಕ್ ಕೊಟ್ರಾ ಬಿಗ್‌ ಬಾಸ್‌..?

by ಪ್ರತಿಧ್ವನಿ
December 3, 2025
Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
Top Story

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

by ಪ್ರತಿಧ್ವನಿ
December 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

ಕುಡುಕರಿಗೊಬ್ಬ, ಬ್ಯಾಚುಲರ್‌ಗೆ ಮತ್ತೊಬ್ಬ: ಹಿಂದೂ ದೇವತೆಗಳ ಬಗ್ಗೆ ರೇವಂತ್ ರೆಡ್ಡಿ ವಿವಾದಾತ್ಮಕ ಹೇಳಿಕೆ

December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada