• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಯುವ ಆಟಗಾರರ ಕುರಿತ ಧೋನಿ ಹೇಳಿಕೆಗೆ ಕಿಡಿಕಾರಿದ ಕೆ ಶ್ರೀಕಾಂತ್‌

by
October 20, 2020
in Uncategorized
0
ಯುವ ಆಟಗಾರರ ಕುರಿತ ಧೋನಿ ಹೇಳಿಕೆಗೆ ಕಿಡಿಕಾರಿದ ಕೆ ಶ್ರೀಕಾಂತ್‌
Share on WhatsAppShare on FacebookShare on Telegram

ಸತತ ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಪಂದ್ಯಾವಳಿಯಿಂದಲೇ ಹೊರಬೀಳುವ ಆತಂಕದಲ್ಲಿದೆ. ಸೋಮವಾರ ರಾಜಸ್ಥಾನ ರಾಯಲ್ಸ್‌ ವಿರುದ್ದ ನಡೆದ ಪಂದ್ಯವನ್ನು ಕೂಡಾ ಕೈಚೆಲ್ಲಿ ಕುಳಿತ ಮಹೇಂದ್ರ ಸಿಂಗ್‌ ಧೋನಿ ನೇತೃತ್ವದ ಸಿಎಸ್‌ಕೆ ಪಡೆ ತನ್ನ ಪ್ಲೇ ಆಫ್‌ ಕನಸನ್ನು ಇನ್ನಷ್ಟು ಕಠಿಣವಾಗಿಸಿದೆ.

ADVERTISEMENT

ಈ ಸೋಲಿನ ನಂತರ ಸಿಎಸ್‌ಕೆ ತಂಡದ ಕಪ್ತಾನ ಮಹೇಂದ್ರ ಸಿಂಗ್‌ ಧೋನಿ ಆಡಿರುವ ಮಾತುಗಳಿಗೆ ಈಗ ಬಹಳಷ್ಟು ವಿರೋಧ ವ್ಯಕ್ತವಾಗುತ್ತಿದೆ. ಭಾರತ ತಂಡದ ಹಿಂದಿನ ಕಪ್ತಾನ ಹಾಗೂ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿದ್ದ ಕೃಷ್ಣಮಾಚಾರಿ ಶ್ರೀಕಾಂತ್‌ ಅವರು ಧೋನಿಯವರ ಹೇಳಿಕೆಗೆ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ರಾಜಸ್ಥಾನ ರಾಯಲ್ಸ್‌ ವಿರುದ್ದದ ಸೋಲು ಸಿಎಸ್‌ಕೆ ಈ ಪಂದ್ಯಾವಳಿಯ ಏಳನೇ ಸೋಲು. ಐಪಿಎಲ್‌ ಪ್ರಾರಂಭವಾದಾಗಿಂದ ಈವರೆಗೆ ಪ್ಲೇ ಆಫ್‌ ಪ್ರವೇಶ ಪಡೆಯಲು ವಿಫಲವಾಗದ ತಂಡ ಈ ಬಾರಿ ಐಪಿಎಲ್‌ ಅಂಕಪಟ್ಟಿಯಲ್ಲಿ ಕೊನೇಯ ಸ್ಥಾನದಲ್ಲಿದೆ. ಸೋಲಿನ ನಂತರ ಸ್ಟಾರ್‌ ಸ್ಪೋರ್ಟ್‌ನೊಂದಿಗೆ ಮಾತನಾಡಿದ ಧೋನಿ ಅವರು, “ಯುವ ಕ್ರಿಕೆಟಿಗರಲ್ಲಿ ಪಂದ್ಯವನ್ನು ಗೆಲ್ಲಿಸಿಕೊಡುವ ಕಿಚ್ಚು ಇನ್ನೂ ಬಂದಿಲ್ಲ,” ಎಂದು ಹೇಳಿದ್ದರು.

ಈ ಬಾರಿಯ ಸಿಎಸ್‌ಕೆ ತಂಡದಲ್ಲಿ ಕಿರಿಯ ಆಟಗಾರರಿಗಿಂತ ಹಿರಿಯ ಆಟಗಾರರೇ ಹೆಚ್ಚಾಗಿ ಕಾಣಿಸಿಕೊಂಡಿದ್ದರು. ಆರಂಭಿಕ ಪಂದ್ಯದಿಂದ ಹಿಡಿದು ಇಲ್ಲಿಯವರೆಗೆ ಹೆಚ್ಚಾಗಿ ಹಿರಿಯ ಆಟಗಾರರೇ ತುಂಬಿಕೊಂಡಿದ್ದ ಸಿಎಸ್‌ಕೆ ತಂಡದಲ್ಲಿ ಕಿರಿಯ ಆಟಗಾರರಿಗೆ ಅಷ್ಟು ಪ್ರಾಮುಖ್ಯತೆ ಸಿಕ್ಕಿರಲಿಲ್ಲ.

Also Read: ಧೋನಿ ಮಗುವಿಗೆ ಹೇಯ ಬೆದರಿಕೆ: ನವ ಭಾರತದ ಹೊಸ ವರಸೆಯ ದರ್ಶನ!

ಈಗ ಕಿರಿಯ ಆಟಗಾರರ ಕುರಿತು ಮಾತನಾಡಿದ ಧೋನಿ ವಿರುದ್ದ ಕೆ ಶ್ರೀಕಾಂತ್‌ ಕಿಡಿಕಾರಿದ್ದಾರೆ. “ಧೋನಿಯವರ ಮಾತುಗಳನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಅವರು ಯಾವ ಪ್ರಕ್ರಿಯೆ ಕುರಿತು ಮಾತನಾಡುತ್ತಿದ್ದಾರೆ ಅದೇ ತಪ್ಪು. ಸಿಎಸ್‌ಕೆಯು ಆಡುವ ಬಳಗವನ್ನು ಆಯ್ಕೆ ಮಾಡುವಾಗ ಎಡವಿದ್ದೇ ಇಷ್ಟು ಪಂದ್ಯಗಳನ್ನು ಕೈಚೆಲ್ಲಲು ಕಾರಣ,” ಎಂದು ಶ್ರೀಕಾಂತ್‌ ಹೇಳಿದ್ದಾರೆ.

ಐಪಿಎಲ್‌ ಆರಂಭವಾದ ವರ್ಷ ಸಿಎಸ್‌ಕೆ ತಂಡ ರಾಯಭಾರಿಯಾಗಿದ್ದ ಶ್ರೀಕಾಂತ್‌ ಅವರು ಜಗದೀಶನ್‌ ಅವರ ಉದಾಹರಣೆಯನ್ನು ನೀಡಿದ್ದು, ಜಗದೀಶನ್‌ ಈ ಬಾರಿಯ ಐಪಿಎಲ್‌ನಲ್ಲಿ ಒಂದು ಪಂದ್ಯವನ್ನು ಮಾತ್ರ ಆಡಿದ್ದಾರೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ದದ ಪಂದ್ಯದಲ್ಲಿ 33 ರನ್‌ ಹೊಡೆದು ಅವರು ಗಮನ ಸೆಳೆದಿದ್ದಾರೆ. ಇನ್ನೊಂದು ಕಡೆ ಕೇದಾರ್‌ ಜಾಧವ್‌ 8 ಪಂದ್ಯಗಳಲ್ಲಿ ಕೇವಲ 62 ರನ್‌ ಮಾತ್ರ ಗಳಿಸಿದ್ದಾರೆ, ಎಂದು ಹೇಳಿದ್ದಾರೆ.

Also Read: ಐಪಿಎಲ್‌ನಲ್ಲಿ ಮಿಂಚುತ್ತಿರುವ ಭಾರತ ತಂಡದ ಭವಿಷ್ಯದ ವೇಗಿಗಳು

ಪೀಯೂಷ್‌ ಚಾವ್ಲಾ ಹಾಗೂ ಕೇದಾರ್‌ ಜಾಧವ್‌ ಅವರ ಫಿಟ್ನೆಸ್‌ ಕುರಿತಾಗಿಯೂ ಕುಹಕವಾಡಿರುವ ಶ್ರೀಕಾಂತ್‌, ಕ್ರೀಡಾಂಗಣದಲ್ಲಿ ಅಚೀಚೆ ಓಡಾಡಲು ಅವರಿಗೆ ಸ್ಕೂಟರ್‌ನ ಅಗತ್ಯವಿದೆ ಎಂದು ಹೇಳಿದ್ದಾರೆ.

“ಧೋನಿ ಏನು ಲೆಕ್ಕಾಚಾರ ಹಾಕುತ್ತಿದ್ದಾರೆಂದು ತಿಳಿದಿಲ್ಲ. ಜಗದೀಶನ್‌ರಲ್ಲಿ ಪಂದ್ಯ ಗೆಲ್ಲಿಸುವ ಕಿಡಿಯಿರಲಿಲ್ಲವೇ? ʼಸ್ಕೂಟರ್‌ʼ ಜಾಧವ್‌ ಬಳಿ ಆ ಕಿಡಿ ಇತ್ತೇ? ಧೋನಿ ಅವರ ಉತ್ತರವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈಗ ಒತ್ತಡ ಇಲ್ಲದ ಕಾರಣ ಯುವ ಆಟಗಾರರಿಗೆ ಅವಕಾಶ ನೀಡುವುದಾಗಿ ಧೋನಿ ಹೇಳಿದ್ದಾರೆ. ಧೋನಿ ಕ್ರಿಕೆಟ್‌ನ ʼಜೀವಂತ ದಂತಕಥೆʼ ಆಗಿರಬಹುದು, ಆದರೆ ಅವರ ಇಂದಿನ ಮಾತುಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ,” ಎಂದು ಶ್ರೀಕಾಂತ್‌ ಹೇಳಿದ್ದಾರೆ.

Tags: CSKIPLM S Dhoniಐಪಿಎಲ್‌ಕೆ ಶ್ರೀಕಾಂತ್‌ಧೋನಿ
Previous Post

ಉತ್ತರ ಕರ್ನಾಟಕ ನೆರೆ: 174 ಪರಿಹಾರ ಕೇಂದ್ರದಲ್ಲಿ 28 ಸಾವಿರ ಜನರಿಗೆ ಆಶ್ರಯ

Next Post

ಮೋದಿ ಸರ್ಕಾರದ ನೂತನ ಕೃಷಿ ಕಾನೂನುಗಳಿಗೆ ಶೇ.60ರಷ್ಟು ರೈತರ ವಿರೋಧ

Related Posts

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!
Uncategorized

ಐಪಿಎಲ್ 2026ಕ್ಕೆ ಬಿಸಿಸಿಐ ಹೊಸ ರೂಲ್ಸ್: ಸಮಯ ವ್ಯರ್ಥಕ್ಕೆ ಬ್ರೇಕ್, ಆಟದ ವೇಗ ಹೆಚ್ಚಿಸಲು ಈ ಕ್ರಮ!

by ಪ್ರತಿಧ್ವನಿ
April 9, 2026
0

Indian Premier League (IPL) ಪಂದ್ಯಗಳ ಅವಧಿ ಹೆಚ್ಚುತ್ತಿರುವ ಹಿನ್ನೆಲೆ, Board of Control for Cricket in India 2026ರ ಆವೃತ್ತಿಯಿಂದ ಕಟ್ಟುನಿಟ್ಟಿನ ಹೊಸ ನಿಯಮಗಳನ್ನು...

Read moreDetails
ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

ಸುಪ್ರೀಂ ಕೋರ್ಟ್ ಗರಂ: ಆದೇಶ ಉಲ್ಲಂಘನೆ ಆರೋಪದ ಮೇಲೆ ಐಎಎಸ್ ಅಧಿಕಾರಿಗೆ ತರಾಟೆ

April 9, 2026
ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

ಅಮೆರಿಕ–ಇರಾನ್ ಕದನ ವಿರಾಮಕ್ಕೆ ಭಾರತದ ಫಸ್ಟ್ ರಿಯಾಕ್ಶನ್ ಇಲ್ಲಿದೆ

April 9, 2026
ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

ನಾಳೆ 2ನೇ ಪಿಯುಸಿ ಫಲಿತಾಂಶ ಪ್ರಕಟ: ಆನ್‌ಲೈನ್ ನಲ್ಲಿ ರಿಸಲ್ಟ್ ನೋಡುವುದು ಹೇಗೆ ?

April 8, 2026
ಉಪಚುನಾವಣೆ ಕದನ ಅಂತಿಮ ಘಟ್ಟಕ್ಕೆ: ದಾವಣಗೆರೆ ದಕ್ಷಿಣ–ಬಾಗಲಕೋಟೆ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

ಉಪಚುನಾವಣೆ ಕದನ ಅಂತಿಮ ಘಟ್ಟಕ್ಕೆ: ದಾವಣಗೆರೆ ದಕ್ಷಿಣ–ಬಾಗಲಕೋಟೆ ಕ್ಷೇತ್ರಗಳಲ್ಲಿ ಮತದಾನಕ್ಕೆ ಸಕಲ ಸಿದ್ಧತೆ

April 8, 2026
Next Post
ಮೋದಿ ಸರ್ಕಾರದ ನೂತನ ಕೃಷಿ ಕಾನೂನುಗಳಿಗೆ ಶೇ.60ರಷ್ಟು ರೈತರ ವಿರೋಧ

ಮೋದಿ ಸರ್ಕಾರದ ನೂತನ ಕೃಷಿ ಕಾನೂನುಗಳಿಗೆ ಶೇ.60ರಷ್ಟು ರೈತರ ವಿರೋಧ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada