• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Uncategorized

ಯುವ ಆಟಗಾರರ ಕುರಿತ ಧೋನಿ ಹೇಳಿಕೆಗೆ ಕಿಡಿಕಾರಿದ ಕೆ ಶ್ರೀಕಾಂತ್‌

by
October 20, 2020
in Uncategorized
0
ಯುವ ಆಟಗಾರರ ಕುರಿತ ಧೋನಿ ಹೇಳಿಕೆಗೆ ಕಿಡಿಕಾರಿದ ಕೆ ಶ್ರೀಕಾಂತ್‌
Share on WhatsAppShare on FacebookShare on Telegram

ಸತತ ಸೋಲುಗಳಿಂದ ಕಂಗೆಟ್ಟಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ಐಪಿಎಲ್‌ ಪಂದ್ಯಾವಳಿಯಿಂದಲೇ ಹೊರಬೀಳುವ ಆತಂಕದಲ್ಲಿದೆ. ಸೋಮವಾರ ರಾಜಸ್ಥಾನ ರಾಯಲ್ಸ್‌ ವಿರುದ್ದ ನಡೆದ ಪಂದ್ಯವನ್ನು ಕೂಡಾ ಕೈಚೆಲ್ಲಿ ಕುಳಿತ ಮಹೇಂದ್ರ ಸಿಂಗ್‌ ಧೋನಿ ನೇತೃತ್ವದ ಸಿಎಸ್‌ಕೆ ಪಡೆ ತನ್ನ ಪ್ಲೇ ಆಫ್‌ ಕನಸನ್ನು ಇನ್ನಷ್ಟು ಕಠಿಣವಾಗಿಸಿದೆ.

ADVERTISEMENT

ಈ ಸೋಲಿನ ನಂತರ ಸಿಎಸ್‌ಕೆ ತಂಡದ ಕಪ್ತಾನ ಮಹೇಂದ್ರ ಸಿಂಗ್‌ ಧೋನಿ ಆಡಿರುವ ಮಾತುಗಳಿಗೆ ಈಗ ಬಹಳಷ್ಟು ವಿರೋಧ ವ್ಯಕ್ತವಾಗುತ್ತಿದೆ. ಭಾರತ ತಂಡದ ಹಿಂದಿನ ಕಪ್ತಾನ ಹಾಗೂ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿದ್ದ ಕೃಷ್ಣಮಾಚಾರಿ ಶ್ರೀಕಾಂತ್‌ ಅವರು ಧೋನಿಯವರ ಹೇಳಿಕೆಗೆ ಖಾರವಾಗಿಯೇ ಪ್ರತಿಕ್ರಿಯಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ರಾಜಸ್ಥಾನ ರಾಯಲ್ಸ್‌ ವಿರುದ್ದದ ಸೋಲು ಸಿಎಸ್‌ಕೆ ಈ ಪಂದ್ಯಾವಳಿಯ ಏಳನೇ ಸೋಲು. ಐಪಿಎಲ್‌ ಪ್ರಾರಂಭವಾದಾಗಿಂದ ಈವರೆಗೆ ಪ್ಲೇ ಆಫ್‌ ಪ್ರವೇಶ ಪಡೆಯಲು ವಿಫಲವಾಗದ ತಂಡ ಈ ಬಾರಿ ಐಪಿಎಲ್‌ ಅಂಕಪಟ್ಟಿಯಲ್ಲಿ ಕೊನೇಯ ಸ್ಥಾನದಲ್ಲಿದೆ. ಸೋಲಿನ ನಂತರ ಸ್ಟಾರ್‌ ಸ್ಪೋರ್ಟ್‌ನೊಂದಿಗೆ ಮಾತನಾಡಿದ ಧೋನಿ ಅವರು, “ಯುವ ಕ್ರಿಕೆಟಿಗರಲ್ಲಿ ಪಂದ್ಯವನ್ನು ಗೆಲ್ಲಿಸಿಕೊಡುವ ಕಿಚ್ಚು ಇನ್ನೂ ಬಂದಿಲ್ಲ,” ಎಂದು ಹೇಳಿದ್ದರು.

ಈ ಬಾರಿಯ ಸಿಎಸ್‌ಕೆ ತಂಡದಲ್ಲಿ ಕಿರಿಯ ಆಟಗಾರರಿಗಿಂತ ಹಿರಿಯ ಆಟಗಾರರೇ ಹೆಚ್ಚಾಗಿ ಕಾಣಿಸಿಕೊಂಡಿದ್ದರು. ಆರಂಭಿಕ ಪಂದ್ಯದಿಂದ ಹಿಡಿದು ಇಲ್ಲಿಯವರೆಗೆ ಹೆಚ್ಚಾಗಿ ಹಿರಿಯ ಆಟಗಾರರೇ ತುಂಬಿಕೊಂಡಿದ್ದ ಸಿಎಸ್‌ಕೆ ತಂಡದಲ್ಲಿ ಕಿರಿಯ ಆಟಗಾರರಿಗೆ ಅಷ್ಟು ಪ್ರಾಮುಖ್ಯತೆ ಸಿಕ್ಕಿರಲಿಲ್ಲ.

Also Read: ಧೋನಿ ಮಗುವಿಗೆ ಹೇಯ ಬೆದರಿಕೆ: ನವ ಭಾರತದ ಹೊಸ ವರಸೆಯ ದರ್ಶನ!

ಈಗ ಕಿರಿಯ ಆಟಗಾರರ ಕುರಿತು ಮಾತನಾಡಿದ ಧೋನಿ ವಿರುದ್ದ ಕೆ ಶ್ರೀಕಾಂತ್‌ ಕಿಡಿಕಾರಿದ್ದಾರೆ. “ಧೋನಿಯವರ ಮಾತುಗಳನ್ನು ಒಪ್ಪಿಕೊಳ್ಳಲು ಸಾಧ್ಯವೇ ಇಲ್ಲ. ಅವರು ಯಾವ ಪ್ರಕ್ರಿಯೆ ಕುರಿತು ಮಾತನಾಡುತ್ತಿದ್ದಾರೆ ಅದೇ ತಪ್ಪು. ಸಿಎಸ್‌ಕೆಯು ಆಡುವ ಬಳಗವನ್ನು ಆಯ್ಕೆ ಮಾಡುವಾಗ ಎಡವಿದ್ದೇ ಇಷ್ಟು ಪಂದ್ಯಗಳನ್ನು ಕೈಚೆಲ್ಲಲು ಕಾರಣ,” ಎಂದು ಶ್ರೀಕಾಂತ್‌ ಹೇಳಿದ್ದಾರೆ.

ಐಪಿಎಲ್‌ ಆರಂಭವಾದ ವರ್ಷ ಸಿಎಸ್‌ಕೆ ತಂಡ ರಾಯಭಾರಿಯಾಗಿದ್ದ ಶ್ರೀಕಾಂತ್‌ ಅವರು ಜಗದೀಶನ್‌ ಅವರ ಉದಾಹರಣೆಯನ್ನು ನೀಡಿದ್ದು, ಜಗದೀಶನ್‌ ಈ ಬಾರಿಯ ಐಪಿಎಲ್‌ನಲ್ಲಿ ಒಂದು ಪಂದ್ಯವನ್ನು ಮಾತ್ರ ಆಡಿದ್ದಾರೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ವಿರುದ್ದದ ಪಂದ್ಯದಲ್ಲಿ 33 ರನ್‌ ಹೊಡೆದು ಅವರು ಗಮನ ಸೆಳೆದಿದ್ದಾರೆ. ಇನ್ನೊಂದು ಕಡೆ ಕೇದಾರ್‌ ಜಾಧವ್‌ 8 ಪಂದ್ಯಗಳಲ್ಲಿ ಕೇವಲ 62 ರನ್‌ ಮಾತ್ರ ಗಳಿಸಿದ್ದಾರೆ, ಎಂದು ಹೇಳಿದ್ದಾರೆ.

Also Read: ಐಪಿಎಲ್‌ನಲ್ಲಿ ಮಿಂಚುತ್ತಿರುವ ಭಾರತ ತಂಡದ ಭವಿಷ್ಯದ ವೇಗಿಗಳು

ಪೀಯೂಷ್‌ ಚಾವ್ಲಾ ಹಾಗೂ ಕೇದಾರ್‌ ಜಾಧವ್‌ ಅವರ ಫಿಟ್ನೆಸ್‌ ಕುರಿತಾಗಿಯೂ ಕುಹಕವಾಡಿರುವ ಶ್ರೀಕಾಂತ್‌, ಕ್ರೀಡಾಂಗಣದಲ್ಲಿ ಅಚೀಚೆ ಓಡಾಡಲು ಅವರಿಗೆ ಸ್ಕೂಟರ್‌ನ ಅಗತ್ಯವಿದೆ ಎಂದು ಹೇಳಿದ್ದಾರೆ.

“ಧೋನಿ ಏನು ಲೆಕ್ಕಾಚಾರ ಹಾಕುತ್ತಿದ್ದಾರೆಂದು ತಿಳಿದಿಲ್ಲ. ಜಗದೀಶನ್‌ರಲ್ಲಿ ಪಂದ್ಯ ಗೆಲ್ಲಿಸುವ ಕಿಡಿಯಿರಲಿಲ್ಲವೇ? ʼಸ್ಕೂಟರ್‌ʼ ಜಾಧವ್‌ ಬಳಿ ಆ ಕಿಡಿ ಇತ್ತೇ? ಧೋನಿ ಅವರ ಉತ್ತರವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈಗ ಒತ್ತಡ ಇಲ್ಲದ ಕಾರಣ ಯುವ ಆಟಗಾರರಿಗೆ ಅವಕಾಶ ನೀಡುವುದಾಗಿ ಧೋನಿ ಹೇಳಿದ್ದಾರೆ. ಧೋನಿ ಕ್ರಿಕೆಟ್‌ನ ʼಜೀವಂತ ದಂತಕಥೆʼ ಆಗಿರಬಹುದು, ಆದರೆ ಅವರ ಇಂದಿನ ಮಾತುಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ,” ಎಂದು ಶ್ರೀಕಾಂತ್‌ ಹೇಳಿದ್ದಾರೆ.

Tags: CSKIPLM S Dhoniಐಪಿಎಲ್‌ಕೆ ಶ್ರೀಕಾಂತ್‌ಧೋನಿ
Previous Post

ಉತ್ತರ ಕರ್ನಾಟಕ ನೆರೆ: 174 ಪರಿಹಾರ ಕೇಂದ್ರದಲ್ಲಿ 28 ಸಾವಿರ ಜನರಿಗೆ ಆಶ್ರಯ

Next Post

ಮೋದಿ ಸರ್ಕಾರದ ನೂತನ ಕೃಷಿ ಕಾನೂನುಗಳಿಗೆ ಶೇ.60ರಷ್ಟು ರೈತರ ವಿರೋಧ

Related Posts

ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳ ಜಾರಿ
Uncategorized

ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳ ಜಾರಿ

by ಪ್ರತಿಧ್ವನಿ
October 15, 2025
0

ರಾಯಚೂರು: ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಕಾರ್ಯಕ್ರಮದಲ್ಲಿ ಸಚಿವ ಸಂತೋಷ ಲಾಡ್ ರಾಯಚೂರು ಅಕ್ಟೋಬರ್ 15: ಇ- ಕಾಮರ್ಸ್‌ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್...

Read moreDetails

DK Shivakumar: ಜನ ಸಾಮಾನ್ಯರೊಂದಿಗೆ ಡಿಸಿಎಂ ಹೆಜ್ಜೆ, ನಾಗರಿಕರಿಂದ ಸಲಹೆ, ಅಹವಾಲು ಸ್ವೀಕಾರ

October 11, 2025
ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

ಕರ್ನಾಟಕ ಎಐಸಿಸಿ ಉಸ್ತುವಾರಿ ಸುರ್ಜೆವಾಲರಿಂದ ಕಾಂಗ್ರೆಸ್‌ ಶಾಸಕರಿಗೆ ಕ್ಲಾಸ್‌ !

October 3, 2025
X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

X v/s ಯೂನಿಯನ್ ಆಫ್ ಇಂಡಿಯಾ ಪ್ರಕರಣ – ಇಂದು ಹೈಕೋರ್ಟ್ ನಿಂದ ಹೊರಬೀಳಲಿದೆ ಮಹತ್ವದ ತೀರ್ಪು  

September 24, 2025

ಕಾಂಗ್ರೆಸ್ ಶಾಸಕ ನಂಜೇಗೌಡ ಕ್ರೇಜ್‌ ನೋಡಿ..!

September 23, 2025
Next Post
ಮೋದಿ ಸರ್ಕಾರದ ನೂತನ ಕೃಷಿ ಕಾನೂನುಗಳಿಗೆ ಶೇ.60ರಷ್ಟು ರೈತರ ವಿರೋಧ

ಮೋದಿ ಸರ್ಕಾರದ ನೂತನ ಕೃಷಿ ಕಾನೂನುಗಳಿಗೆ ಶೇ.60ರಷ್ಟು ರೈತರ ವಿರೋಧ

Please login to join discussion

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ
Top Story

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

by ಪ್ರತಿಧ್ವನಿ
October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

ರೇಣುಕಾಸ್ವಾಮಿ ಕೊಲೆ‌ ಆರೋಪಿ ಪ್ರದೋಶ್ ತಂದೆ ನಿಧನ

October 23, 2025
BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada