ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಮೇ 31 ರಂದು ಹೊರಡಿಸಿರುವ ಪತ್ರಿಕಾ ಪ್ರಕಟನೆ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 299 ಹೊಸ ಕರೋಣ ಪ್ರಕರಣ ದಾಖಲಾಗಿದೆ. ಇಂದು 221 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದು, ರಾಜ್ಯದಲ್ಲಿ ಇದುವರೆಗೂ 1218 ಮಂದಿ ಕರೋನಾದಿಂದ ಚೇತರಿಕೆಗೊಂಡಿದ್ದಾರೆ.
ಕರ್ನಾಟಕದಲ್ಲಿ 1,950 ಸಕ್ರಿಯ ಪ್ರಕರಣಗಳಿದ್ದು 15 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಇದುವರೆಗೂ ಒಟ್ಟು 51 ಮಂದಿ ಕರೋನಾದಿಂದಾಗಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.
ದೇಶದಲ್ಲಿ 7,964 ಹೊಸ ಪ್ರಕರಣಗಳು ಇಂದು ದಾಖಲಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 1 ಲಕ್ಷದ 82 ಸಾವಿರ ದಾಟಿದೆ. ದೇಶದಲ್ಲಿ ಇದುವರೆಗೂ 86,984 ಮಂದಿ ರೋಗದಿಂದ ಚೇತರಿಸಿಕೊಂಡಿದ್ದಾರೆ. ಕರೋನಾದಿಂದಾಗಿ ದೇಶದಲ್ಲಿ 265 ಮಂದಿ ಇಂದು ಅಸುನೀಗಿದ್ದು ಒಟ್ಟು ಸಾವನ್ನಪ್ಪಿದ್ದವರ ಸಂಖ್ಯೆ 5 ಸಾವಿರ ದಾಟಿದೆ.