• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ರಾಜ್ಯ ಬಿಜೆಪಿಯೊಳಗೆ ಭಿನ್ನಮತದ ಸುಳಿ: ಅನುಮಾನಸ್ಪದ ಭೇಟಿಯಲ್ಲಿ ರಾಜ್ಯ ನಾಯಕರು

by
September 15, 2020
in ಕರ್ನಾಟಕ
0
ರಾಜ್ಯ ಬಿಜೆಪಿಯೊಳಗೆ ಭಿನ್ನಮತದ ಸುಳಿ: ಅನುಮಾನಸ್ಪದ ಭೇಟಿಯಲ್ಲಿ ರಾಜ್ಯ ನಾಯಕರು
Share on WhatsAppShare on FacebookShare on Telegram

ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಮಾತು ಕಳೆದ ಕೆಲವು ತಿಂಗಳುಗಳಿಂದ ಕೇಳಿ ಬರುತ್ತಿದೆ. ಮುಖ್ಯಮಂತ್ರಿ ಬಿ. ಎಸ್‌ ಯಡಿಯೂರಪ್ಪರನ್ನು ಬದಲಾವಣೆ ಮಾಡಿ ಬೇರೆ ನಾಯಕರನ್ನು ಆಯ್ಕೆ ಮಾಡಬೇಕು ಎನ್ನುವ ಬೇಡಿಕೆ ಇದೆ. ಕಾರಣ, ಬಿ.ಎಸ್‌ ಯಡಿಯೂರಪ್ಪರಿಗೆ 75 ವರ್ಷ ದಾಟಿದ್ದು ಆಡಳಿತ ನಡೆಸುವ ಕಾರ್ಯಕ್ಷಮತೆ ಇಲ್ಲ ಎಂದು ಹೈಕಮಾಂಡ್‌ಗೆ ದೂರು ಹೋಗುತ್ತಿದೆ. ಇದರ ಜೊತೆಗೆ ಬಿ.ಎಸ್‌. ಯಡಿಯೂರಪ್ಪ ಅವರ ಕಿರಿಯ ಪುತ್ರ ಬಿ.ವೈ ವಿಜಯೇಂದ್ರ ಸರ್ಕಾರದ ಆಡಳಿತದಲ್ಲಿ ಮೂಗು ತೂರಿಸುತ್ತಾರೆ. ಪ್ರಮುಖ ವರ್ಗಾವಣೆಗಳನ್ನು ತಾವೇ ನೋಡಿಕೊಳ್ಳುತ್ತಾರೆ ಎನ್ನುವ ದೂರು ಕೂಡಾ ಸರ್ಕಾರದ ಒಳಗೆ ಇದೆ. ಇದನ್ನು ಸಾಕಷ್ಟು ಬಾರಿ ಪಕ್ಷದ ನಾಯಕರೂ ಕೂಡ ಎಚ್ಚರಿಸಿದ್ದಾರೆ.

ADVERTISEMENT

ಬೆಳಗಾವಿ ಅಥಣಿ ಕ್ಷೇತ್ರದಲ್ಲಿ ಸೋಲನ್ನಪ್ಪಿದ್ದರೂ ಕರೆದು ಉಪಮುಖ್ಯಮಂತ್ರಿ ಸ್ಥಾನ ಕೊಟ್ಟಿರುವ ಬಿಜೆಪಿ ಹೈಕಮಾಂಡ್‌, ಬಿಜೆಪಿ ಪಕ್ಷಕ್ಕೆ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಪರ್ಯಾಯವಾಗಿ ಲಿಂಗಾಯತ ಸಮುದಾಯದ ನಾಯಕನನ್ನು ಬೆಳೆಸುವ ಉದ್ದೇಶವಿದೆ ಎನ್ನಲಾಗಿತ್ತು. ಇದೀಗ ಕಳೆದ ಒಂದೂವರೆ ತಿಂಗಳ ಹಿಂದೆ ದೆಹಲಿಗೆ ಹೋಗಿದ್ದ ಲಕ್ಷ್ಮಣ ಸವದಿ ಸಾಕಷ್ಟು ನಾಯಕರನ್ನು ಭೇಟಿ ಮಾಡಿದ್ದರು. ರಾಷ್ಟ್ರೀಯ ಸಂಘಟನಾ ಪ್ರದಾನ ಕಾರ್ಯದರ್ಶಿಯೂ ಆಗಿರುವ ಸಂತೋಷ್‌ರನ್ನು ಭೇಟಿ ಮಾಡಿದ್ದರು. ಅದಾದ ಬಳಿಕ ಸಂಘ ಪರಿವಾರಕ್ಕೆ ಆಪ್ತವಾಗಿರುವ ಮತ್ತೋರ್ವ ನಾಯಕ ಸಚಿವ ಸಿ.ಟಿ ರವಿ ಅವರು ಹೈಕಮಾಂಡ್‌ ನಾಯಕರನ್ನು ಭೇಟಿ ಮಾಡಿದ್ದರು. ಇದೀಗ ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಬೃಹತ್‌ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಬಿಜೆಪಿ ಒಳಗೆ ಏನೋ ಸಂಚಲನ ಶುರುವಾಗುತ್ತಿದೆ ಎಂದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇತ್ತ ದಾವಣಗೆರೆಯಲ್ಲಿ ಪಂಚಮಸಾಲಿ ಮಠದ ಪೀಠಾಧಿಪತಿ ವಚನಾನಂದ ಶ್ರೀಗಳನ್ನು ಡಿಸಿಎಂ ಅಶ್ವತ್ಥ ನಾರಾಯಣ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಪಂಚಮಸಾಲಿ ಪೀಠಕ್ಕೆ ಭೇಟಿ ನೀಡಿ ವಚನಾನಂದ ಶ್ರೀ ಜೊತೆ ಮಾತುಕತೆ ನಡೆಸಿದ್ದಾರೆ. ಕಳೆದ ಜನವರಿಯಲ್ಲಿ ಪಂಚಮಸಾಲಿ ಸಮುದಾಯದಿಂದ ಆಯ್ಕೆಯಾಗಿರುವ ಮುರುಗೇಶ್‌ ನಿರಾಣಿ ಅವರಿಗೆ ಸಚಿವ ಸ್ಥಾನ ಕೊಡುವಂತೆ ತುಂಬಿದ ಸಭೆಯಲ್ಲಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಹೇಳಿದ್ದರು. ಇದು ದೊಡ್ಡ ಸುದ್ದಿಯಾಗಿತ್ತು. ಸಿಎಂ ಬಿ.ಎಸ್‌. ಯಡಿಯೂರಪ್ಪ ಸಿಡಿಮಿಡಿಗೊಂಡಿದ್ದರು. ಇದೀಗ ಅದೇ ವಚನಾನಂದ ಸ್ವಾಮೀಜಿ ಅವರನ್ನು ಅವರದೇ ಪಂಚಮಸಾಲಿ‌ಪೀಠದಲ್ಲಿ ಭೇಟಿ ನಡೆದಿದೆ. ಡಿಸಿಎಂ ಗೋವಿಂದ ಕಾರಜೋಳ, ಸಂಸದ ಸಿದ್ದೇಶ್ವರ್, ಶಾಸಕ ಪ್ರೊ. ಲಿಂಗಣ್ಣ ಜೊತೆ ಶನಿವಾರ ಬೆಳಗ್ಗೆ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.

ಒಂದೇ ದಿನ ಎರಡು ಭೇಟಿ: ಕುತೂಹಲಕ್ಕೆ ಕಾರಣವಾದ ಅಶ್ವತ್ಥ ನಾರಾಯಣ ನಡೆ..!

ಬೆಳಗ್ಗೆ ಬಿಜೆಪಿ ಜನಪ್ರತಿನಿಧಿಗಳ ಜೊತೆಗೆ ಭೇಟಿ ಮಾಡಿದ್ದ ಡಿಸಿಎಂ ಅಶ್ವತ್ಥ ನಾರಾಯಣ ಅವರು ಸಂಜೆ ಒಂಟಿಯಾಗಿ ಬಂದು ಶ್ರೀಗಳ ಜೊತೆಗೆ ಬರೋಬ್ಬರಿ ಎರಡೂವರೆ ಗಂಟೆಗಳ ಕಾಲ ರಹಸ್ಯವಾಗಿ ಚರ್ಚೆ ನಡೆಸಿದ್ದಾರೆ. ಆದರೂ ಬೆನ್ನುಬಿದ್ದ ಮಾಧ್ಯಮಗಳಿಗೆ ಕೈ ಮುಗಿದು, 2 ಬಾರಿ ಭೇಟಿಯಾಗಿದ್ದೇನೆ. ಆದರೆ ಯಾವುದೇ ರಾಜಕೀಯ ಮಾತುಕತೆ ನಡೆದಿಲ್ಲ. ಮೊದಲಿನಿಂದಲೂ ವಚನಾನಂದ ಸ್ವಾಮೀಜಿ ಪರಿಚಯ. ಯೋಗ ಗುರುಗಳನ್ನು ಹಲವು ಬಾರಿ ಭೇಟಿ ಮಾಡಿದ್ದೇನೆ. ಇಲ್ಲಿ ಪ್ರವಾಸಕ್ಕೆ ಬಂದಿದ್ದೆ, ಶ್ರೀಗಳ ಜೊತೆ ಔಪಚಾರಿಕ ಭೇಟಿ ಅಷ್ಟೇ, ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದಿದ್ದಾರೆ.

ಒಗಟಿನಂತೆ ಉತ್ತರಿಸಿದ ವಚನಾನಂದ ಶ್ರೀಗಳು..!

ಹನಗವಾಡಿಯ ಪಂಚಮಸಾಲಿ ಮಠದಲ್ಲಿ ವಚನಾನಂದ ಶ್ರೀಗಳು ಮಾತನಾಡಿ, ಎರಡು ಬಾರಿ ನಿನ್ನೆ ಮಠಕ್ಕೆ ಬಂದು ಚರ್ಚೆ ಮಾಡಿದ್ದಾರೆ. ಒಂದು ಗಂಟೆ ಕಾಲ ಡಿಸಿಎಂ ಜೊತೆ ಮಾತನಾಡಿದ್ದು ಸತ್ಯ. ಸಂಜೆ 4 ಗಂಟೆಗೆ ಬಂದು ಆರೂವರೆ ತನಕ ಮಠದಲ್ಲಿದ್ದರು ಎಂದಿದ್ದಾರೆ. ಸಚಿವ ಸಂಪುಟ ವಿಸ್ತರಣೆ ವೇಳೆ ಪಂಚಮಸಾಲಿ ಸಮಾಜಕ್ಕೆ ಆದ್ಯತೆ ಕೊಡುವ ಬಗ್ಗೆ ಮಾತಾಡಲು ಇದು ಸೂಕ್ತ ವೇದಿಕೆ ಅಲ್ಲ. ಆ ಬಗ್ಗೆ ಹೆಚ್ಚು ಮಾತನಾಡಲ್ಲ. ಮುಂದಿನ ದಿನಗಳಲ್ಲಿ ಸೂಕ್ತ ವೇದಿಕೆಯಲ್ಲಿ ಈ ಬಗ್ಗೆ ಮಾತನಾಡುತ್ತೇನೆ. ಜಗದೀಶ್ ಶೆಟ್ಟರ್ ದೆಹಲಿ ಪ್ರವಾಸ, ಮಠಕ್ಕೆ ಬಿಜೆಪಿ ಸಚಿವರು, ಶಾಸಕರ ಭೇಟಿ ವಿಚಾರಕ್ಕೆ ಸಂಬಂಧ ಇದೆಯೇ ಎಂದಿದ್ದಕ್ಕೆ ಶ್ರೀಗಳು ನಗುವಿನ ಮೂಲಕವೇ ಉತ್ತರ ಕೊಟ್ಟಿದ್ದು, ಈಗ ಎಲ್ಲವನ್ನೂ ಮಾತನಾಡಲ್ಲ ಎಂದಿದ್ದಾರೆ. ಸ್ವಾಮೀಜಿ ಸ್ಪಷ್ಟನೆಯೇ ತೀವ್ರ ಕುತೂಹಲ ಕೆರಳಿಸಿದೆ.

ಬಿಜೆಪಿ ಒಳಗಿನ ಈ ಎಲ್ಲಾ ಬೆಳವಣಿಗೆಗಳನ್ನು ನೋಡುತ್ತಿದ್ದರೆ ಸಂಚಲನ ಸೃಷ್ಟಿಯಾಗಿದೆ ಎನ್ನುವುದು ಬಹುತೇಕ ಖಚಿತ. ಇನ್ನೂ ಸೆಪ್ಟೆಂಬರ್‌ 21 ರಿಂದ ವಿಧಾನಸಭಾ ಅಧಿವೇಶನ ಶುರುವಾಗುತ್ತಿದ್ದು, ಅಷ್ಟೊರೊಳಗೆ ಮಂತ್ರಿಗಳಾಗುತ್ತೇವೆ ಎಂದಿದ್ದವರು ಮಂತ್ರಿ ಆಗುವುದು ಅನುಮಾನ ಎನ್ನಲಾಗಿದೆ. ಒಂದು ವೇಳೆ ಮಂತ್ರಿಗಳನ್ನಾಗಿ ಕೆಲವರನ್ನು ಆಯ್ಕೆ ಮಾಡಿದರೂ ಪಕ್ಷದೊಳಗಿನ ಭಿನ್ನಮತ ಭುಗಿಲೇಳುವ ಸಾಧ್ಯತೆ ಇದೆ. ಭಿನ್ನಮತೀಯರನ್ನು ಸಮಾಧಾನ ಮಾಡುವುದು ಕಷ್ಟ ಎನ್ನುವ ಕಾರಣಕ್ಕೆ ಸಂಪುಟ ವಿಸ್ತರಣೆಯನ್ನೇ ಮುಂದೂಡುವ ಚಿಂತನೆಯೂ ಶುರುವಾಗಿದೆ. ಅದರ ನಡುವೆ ನಾಯಕತ್ವ ಬದಲಾವಣೆ ಎನ್ನುವುದು ಕೂಡಾ ರಾಜ್ಯ ಬಿಜೆಪಿಯ ನಡೆಯಲ್ಲಿ ಕುತೂಹಲ ಮೂಡಿಸಿದೆ.

Tags: ಬಿ ಎಲ್ ಸಂತೋಷ್ಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ವಿಶ್ವಸಂಸ್ಥೆಯ ಆಯೋಗ ಸದಸ್ಯ ಸ್ಥಾನಕ್ಕೆ ಚೀನಾವನ್ನು ಹಿಂದಿಕ್ಕಿ ಆಯ್ಕೆಯಾದ ಭಾರತ

Next Post

ಶಿರಾ: ಉಪಚುನಾವಣೆ ಘೋಷಣೆಗೂ ಮುನ್ನ ಕಾಂಗ್ರೆಸ್‌ ಒಳಗೆ ಭಿನ್ನಮತದ ಹೊಗೆ..!

Related Posts

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ
Top Story

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

by ಪ್ರತಿಧ್ವನಿ
April 20, 2026
0

ಬೆಂಗಳೂರು : ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರ ಮಾಜಿ ಸಂಸದ ಡಾ. ಚೆಲ್ಲ ಕುಮಾರ್ ಡಿ.ಎಂ.ಕೆ. ನೇತೃತ್ವದ ಮೈತ್ರಿಕೂಟದಲ್ಲಿ ಕೃಷ್ಣಗಿರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ...

Read moreDetails
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

April 20, 2026
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
Next Post
ಶಿರಾ: ಉಪಚುನಾವಣೆ ಘೋಷಣೆಗೂ ಮುನ್ನ ಕಾಂಗ್ರೆಸ್‌ ಒಳಗೆ ಭಿನ್ನಮತದ ಹೊಗೆ..!

ಶಿರಾ: ಉಪಚುನಾವಣೆ ಘೋಷಣೆಗೂ ಮುನ್ನ ಕಾಂಗ್ರೆಸ್‌ ಒಳಗೆ ಭಿನ್ನಮತದ ಹೊಗೆ..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada