• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ರಾಜಕೀಯ

ರಾಜ್ಯ ರಾಜಕೀಯದಲ್ಲಿ ಅʻಸಂತೋಷʼ ಸಂಚಲನ..!

by
August 24, 2020
in ರಾಜಕೀಯ
0
ರಾಜ್ಯ ರಾಜಕೀಯದಲ್ಲಿ ಅʻಸಂತೋಷʼ ಸಂಚಲನ..!
Share on WhatsAppShare on FacebookShare on Telegram

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್‌ ಸಂತೋಷ್‌ ರಾಜ್ಯದಲ್ಲಿ ಬೀಡು ಬಿಟ್ಟಿದ್ದಾರೆ. ದೆಹಲಿಯಲ್ಲೇ ಸಾಕಷ್ಟು ಹೆಚ್ಚು ಕಾಲ ಕಳೆಯುವ ಬಿ ಎಲ್‌ ಸಂತೋಷ್‌ ರಾಜ್ಯಕ್ಕೆ ಬಂದಿದ್ದಾರೆ ಎಂದರೆ ಏನೋ ಬದಲಾವಣೆ ಆಗುತ್ತಿದೆ ಎಂದೇ ಅರ್ಥ. ಬಿ ಎಲ್‌ ಸಂತೋಷ್‌ರಾಜ್ಯ ರಾಜಧಾನಿಯಲ್ಲಿ ಬೀಡು ಬಿಟ್ಟು ಸಾಕಷ್ಟು ಮಂತ್ರಿಗಳನ್ನು ನಾಯಕರನ್ನು, ಬಿಜೆಪಿ ರಾಜ್ಯಾಧ್ಯಕ್ಷನ್ನ ಭೇಟಿ ಮಾಡುತ್ತಿರುವುದು ಸಾಕಷ್ಟು ಜನರಿಗೆ ಸಂತಸವನ್ನು ಉಂಟು ಮಾಡಿದರೆ, ಇನ್ನಷ್ಟು ಜನರಿಗೆ ಸಂತೋಷ್‌ ಸಂಚಾರ ಅಸಂತೋಷವನ್ನು ಉಂಟು ಮಾಡಿದೆ.

ADVERTISEMENT

Also Read: BL ಸಂತೋಷ್ ದೆಹಲಿಯಲ್ಲಿ ಕಡೆಗಣನೆಯಾಗಿದ್ದಾರಾ? ಅಥವಾ ರಾಜ್ಯ ಬಿಜೆಪಿಯಲ್ಲಿ ಕಟೀಲ್‌ಗೆ ಕಿಮ್ಮತ್ತಿಲ್ಲವೇ?

ಶುಕ್ರವಾರ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ್ದ ಬಿ.ಎಲ್. ಸಂತೋಷ್ ಬಿಜೆಪಿ ಕಚೇರಿಗೆ ಸಚಿವರಾದ ಬೊಮ್ಮಾಯಿ ಮತ್ತು ಸುಧಾಕರ್ ಅವರನ್ನು ಕರೆಸಿಕೊಂಡು ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಹಾಗೂ ಕೋವಿಡ್‌ನಿಯಂತ್ರಣದ ಬಗ್ಗೆ ಚರ್ಚಿಸಿದ್ದರು. ರಾಜ್ಯದಲ್ಲಿ ವಿಪರೀತವಾಗಿ ಹೆಚ್ಚುತ್ತಿರುವ ಕರೋನಾ ಸೋಂಕಿನ ಬಗ್ಗೆ ಸ್ವತಃ ವೈದ್ಯರಾಗಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ ಸುಧಾಕರ್‌ ಮಾಹಿತಿ ನೀಡಿದ್ದರು. ಇನ್ನೂ ಪೊಲೀಸ್‌ ಠಾಣೆ ಧ್ವಂಸ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಿದ ಬಳಿಕ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿವರಣೆ ಕೊಟ್ಟಿದ್ದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಸಂಪುಟ ವಿಸ್ತರಣೆಯೋ..? ಪುನರ್‌ರಚನೆಯೋ..?

ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದ್ದು, ಸಂಪುಟ ವಿಸ್ತರಣೆ ಬದಲಿಗೆ ಪುನರ್‌ರಚನೆ ಮಾಡುವಂತೆ ಒತ್ತಡ ಇದೆ ಎನ್ನಲಾಗಿದೆ. ಪೂರ್ಣ ಪ್ರಮಾಣದ 5 ವರ್ಷಗಳ ಕಾಲ ಒಬ್ಬರೇ ಮಂತ್ರಿಗಳಾಗಿದ್ದರೆ ಬೇರೆಯವರಿಗೆ ಅಸಮಾಧಾನ ಆಗಬಹುದು ಎನ್ನುವ ಕಾರಣಕ್ಕೆ ಕೆಲವರನ್ನು ಕೈಬಿಟ್ಟು ಉಳಿಒದವರಿಗೆ ಅವಕಾಶ ಕೊಡಬೇಕು ಎನ್ನುವ ಚರ್ಚೆ ಆಗಿದೆ ಎನ್ನುವುದು ಬಲ್ಲ ಮೂಲಗಳ ಮಾಹಿತಿ. ಈ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲು ಜೊತೆಗೂ ಸಹ ಚರ್ಚಿಸಿದ್ದು, ಪಕ್ಷದ ವತಿಯಿಂದ ಹಾಗೂ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಕಡೆಯಿಂದ ಯಾರನ್ನು ಕೈಬಿಡಬಹುದು ಎನ್ನುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

Also Read: ಸಂತೋಷ್ ತಂತ್ರ, BSY ಅತಂತ್ರ!

ಅಚ್ಚರಿ ಮೂಡಿಸಿದ ಸಚಿವ ಸೋಮಣ್ಣ ಭೇಟಿ..!

ಸಂಪುಟ ಪುನರ್‌ರಚನೆ ಚರ್ಚೆ ನಡೆದಿದೆ ಎನ್ನುವಾಗಲೇ ಸಚಿವ ವಿ. ಸೋಮಣ್ಣ, ಬಿ.ಎಲ್. ಸಂತೋಷ್‌ ಅವರನ್ನು ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚೆ ನಡೆಸಿದ್ದು ಅಚ್ಚರಿಗೆ ಕಾರಣವಾಗಿದೆ. ನೇರನುಡಿಯ ವಿ. ಸೋಮಣ್ಣ, ಅನಂತ್‌ ಕುಮಾರ್‌ ಬಣದಲ್ಲಿ ಗುರುತಿಸಿಕೊಂಡಿದ್ದ ನಾಯಕ. ಬಿ.ಎಸ್‌. ಯಡಿಯೂರಪ್ಪ ಅವರ ಜೊತೆಗಿನ ಸಂಬಂಧವೂ ಅಷ್ಟಕಷ್ಟೆ ಎನ್ನುವಂತಿದೆ. ಹಾಗಾಗಿ ಬಿ.ಎಸ್‌. ಯಡಿಯೂರಪ್ಪ, ಸೋಮಣ್ಣ ಹೆಸರನ್ನು ತನ್ನ ಬಣದಿಂದ ಸೂಚಿಸಿದ್ದಾರೆಯೇ..? ಎನ್ನುವ ಅನುಮಾನಗಳು ಮೂಡುತ್ತಿವೆ. ಸಂತೋಷ್ ಭೇಟಿ ಬಳಿಕ ಮಾತನಾಡಿದ್ದ ಸಚಿವ ಸೋಮಣ್ಣ, ಸಂತೋಷ್‌ ಭೇಟಿ ಮಾಡಿ ಹೆಚ್ಚು ದಿನಗಳಾಗಿದ್ದವು, ಹಾಗಾಗಿ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದೆ ಎಂದಿದ್ದರು.

ಸೋಮಣ್ಣ ಮಾತ್ರವಲ್ಲ, ಕೋಟಾ ಶ್ರೀನಿವಾಸ ಪೂಜಾರಿ, ಶಶಿಕಲಾ ಜೊಲ್ಲೆ, ಐದಾರು ಮಂದಿಯಿಂದ ರಾಜೀನಾಮೆ ಪಡೆದು, ಸಚಿವ ಸ್ಥಾನ ಸಿಗದೆ ಅಸಮಾಧಾನ ಹೊಂದಿರುವ ಉಳಿದ ನಾಯಕರಿಗೆ ಸಚಿವ ಸ್ಥಾನ ಕೊಡುವುದು ಬಹುತೇಕ ಖಚಿವಾಗಿದೆ. ಸಚಿವ ಸ್ಥಾನ ವಾಪಸ್‌ ಕೊಟ್ಟವರು ಬಂಡಾಯ ಹೇಳಬಾರದು ಹಾಗೂ ಸಚಿವ ಸ್ಥಾನ ಮತ್ತೆ ಸಿಗದವರಿಗೆ ನಿಗಮ ಮಂಡಳಿ ಸೇರಿದಂತೆ ಪಕ್ಷದ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಭಾರತೀಯ ಜನತಾ ಪಕ್ಷ ನಿರ್ಧಾರ ಮಾಡಿದೆ ಎನ್ನುವ ಸುದ್ದಿ ರಾಜಕೀಯ ಪಡಸಾಲೆಯಿಂದ ಕೇಳಿ ಬರುತ್ತಿದೆ. ಅಂತಿಮವಾಗಿ ಸಚಿವ ಸ್ಥಾನ ಕಳೆದುಕೊಳ್ಳುವವರ ಪಾಲಿಗೆ ಸಂತೋಷ್‌ ರಾಜ್ಯ ಸಂಚಾರ ಅಸಂತೋಷ ಮೂಡಿಸಿದೆ.

Previous Post

ಮಹತ್ವದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ, ನೂತನ ಅಧ್ಯಕ್ಷರ ಆಯ್ಕೆ ಬಗ್ಗೆ ಚರ್ಚೆ

Next Post

ರಾಜ್ಯ ಸರ್ಕಾರ ಕ್ವಾರಂಟೈನ್‌ನಲ್ಲಿದೆಯೇ?

Related Posts

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”
ಕರ್ನಾಟಕ

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

by ಪ್ರತಿಧ್ವನಿ
January 18, 2026
0

ಮೈಸೂರು: ವರುಣಾ ಕ್ಷೇತ್ರವನ್ನು ಮೇಲ್ಮನೆ ಸದಸ್ಯರು ಸಂಪೂರ್ಣವಾಗಿ ನೋಡಿಕೊಳ್ಳುತ್ತಿದ್ದು, ನನ್ನ ಗೈರು ಹಾಜರಿಯಲ್ಲಿ ಕ್ಷೇತ್ರದ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದರು....

Read moreDetails
“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

ತನ್ನ ಮಾತು ವಿರೋಧಿಸುವರಿಗೆ ಟ್ರಂಪ್ ಮತ್ತೆ ಶಾಕ್

January 18, 2026
“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

January 18, 2026
Next Post
ರಾಜ್ಯ ಸರ್ಕಾರ ಕ್ವಾರಂಟೈನ್‌ನಲ್ಲಿದೆಯೇ?

ರಾಜ್ಯ ಸರ್ಕಾರ ಕ್ವಾರಂಟೈನ್‌ನಲ್ಲಿದೆಯೇ?

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada