ಬುಧವಾರ ಇಡೀ ದಿನ ನಡೆದ ರಾತ್ರಿ ಕರ್ಫ್ಯೂ ಎಂಬ ಪ್ರಹಸನ ಮತ್ತೆ ಗುರುವಾರಕ್ಕೂ ಮುಂದುವರೆದಿದೆ. ಸ್ಪಷ್ಟವಾದ, ದೃಢವಾದ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಾಮರ್ಥ್ಯ ಇಲ್ಲದ ಸರ್ಕಾರವು, ರಾತ್ರಿ ಕರ್ಫ್ಯೂ ಆದೇಶವನ್ನು ವಾಪಾಸ್ ಪಡೆದುಕೊಂಡಿದೆ.
ಗುರುವಾರ ಮಧ್ಯಾಹ್ನದ ವೇಳೆಗೆ ತಕ್ಷಣದಿಂದ ಜಾರಿಗೆ ಬರುವಂತೆ ರಾತ್ರಿ ಕರ್ಫ್ಯೂ ಜಾರಿಗೆ ತರಲಾಗಿದೆ. ರಾತ್ರಿ 10 ಗಂಟೆಯಿಂದ ಮುಂಜಾನೆ 6ರವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದು ಖುದ್ದು ಮುಖ್ಯಮಂತ್ರಿ ಯಡಿಯೂರಪ್ಪನವರು ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದರು. ನಂತರ ಸಂಜೆ ಬಂದಂತಹ ಅಧಿಕೃತ ಆದೇಶದಲ್ಲಿ ಕರ್ಫ್ಯೂವನ್ನು ಒಂದು ದಿನ ಮುಂದೂಡಲಾಗಿತ್ತು ಮತ್ತು ಸಮಯದಲ್ಲಿಯೂ ಬದಲಾವಣೆಯನ್ನು ಮಾಡಲಾಗಿತ್ತು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಈಗ ಮತ್ತೆ ಕರ್ಫ್ಯೂ ನಾಟಕವನ್ನು ರಾಜ್ಯ ಸರ್ಕಾರವು ಮುಂದುವರೆಸಿದ್ದು, ಯಾವುದೇ ಕರ್ಫ್ಯೂ ಇರುವುದಿಲ್ಲ ಎಂದು ಹೇಳಿದೆ. ರಾತ್ರಿ ಕರ್ಫ್ಯೂ ವಿಧಿಸಲು ಕ್ಯಾಬ್ ಮತ್ತು ಆಟೋ ಚಾಲಕರು, ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವವರು ತೀವ್ರವಾಗಿ ವಿರೋಧಿಸಿದ್ದರು. ಇವರ ವಿರೋಧಕ್ಕೆ ಸರ್ಕಾರ ಮಣಿದಿದೆ ಎಂದು ಹೆಳಲಾಗುತ್ತಿದೆ.
ಈಗ ಸಾರ್ವಜನಿಕರೇ ಕಟ್ಟುನಿಟ್ಟಿನ ನಿಯಮಗಳನ್ನು ಪಾಲನೆ ಮಾಡಿ ಕರೋನಾದಿಂದ ದೂರ ಉಳಿಯಬೇಕು ಎಂದು ಸಿಎಂ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.






