• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರಾಷ್ಟ್ರದ ಹಿತಾಸಕ್ತಿಯನ್ನು ಗಮನದಲ್ಲಿಡುವಂತೆ ರೈತರಿಗೆ ಕೇಂದ್ರದ ಸಲಹೆ

by
January 8, 2021
in ದೇಶ
0
ರಾಷ್ಟ್ರದ ಹಿತಾಸಕ್ತಿಯನ್ನು ಗಮನದಲ್ಲಿಡುವಂತೆ ರೈತರಿಗೆ ಕೇಂದ್ರದ ಸಲಹೆ
Share on WhatsAppShare on FacebookShare on Telegram

ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವವರೆಗೆ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಅಚಲವಾಗಿ ನಿಂತಿರುವ ರೈತರು, ʼಕಾನೂನು ವಾಪ್ಸಿʼ ಆದರೆ ಮಾತ್ರ ನಮ್ಮ ʼಘರ್‌ ವಾಪ್ಸಿʼ ಆಗುವುದೆಂದು ಸರ್ಕಾರಕ್ಕೆ ತಿಳಿಸಿದ್ದಾರೆ.

ADVERTISEMENT

ಸರ್ಕಾರದೊಂದಿಗೆ ನಡೆದ ಹಲವು ಸುತ್ತಿನ ಮಾತುಕತೆ ಬಳಿಕವೂ ರೈತರ ಸಮಸ್ಯೆಗಳಿಗೆ ಒಂದು ಒಮ್ಮತದ ತೀರ್ಮಾನ ಕೈಗೊಳ್ಳಲು ಸಾಧ್ಯವಾಗದ್ದರಿಂದ ಶುಕ್ರವಾರ ಎಂಟನೇ ಸುತ್ತಿನ ಮಾತುಕತೆ ನಡೆದಿದೆ. ಈ ಮಾತುಕತೆಯೂ ತಾರ್ಕಿಕ ಅಂತ್ಯಕ್ಕೆ ಬರುವ ಲಕ್ಷಣಗಳು ತೋರುತ್ತಿಲ್ಲ.

ಕೃಷಿ ಕಾನೂನುಗಳನ್ನು ಹಿಂಪಡೆದೇ ತೀರಬೇಕೆಂದು ಒತ್ತಾಯಿಸಿ ಕುಳಿತಿರುವ ರೈತರೊಡನೆ, ಸರ್ಕಾರ ರಾಷ್ಟ್ರೀಯ ಹಿತಾಸಕ್ತಿ ಗಮನದಲ್ಲಿಟ್ಟುಕೊಳ್ಳುವಂತೆ ಸಲಹೆ ನೀಡಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ದೇಶದ ವಿವಿಧ ರಾಜ್ಯಗಳ ಬಹುತೇಕ ರೈತರು ಕೃಷಿ ಸುಧಾರಣಾ ಕಾನೂನುಗಳನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸಿದ್ದಾರೆ. ನೀವು ರಾಷ್ಟ್ರೀಯ ಹಿತಾಸಕ್ತಿ ಗಮನದಲ್ಲಿಟ್ಟು ಪ್ರತಿಭಟನೆಯಿಂದ ಹಿಂದೆ ಸರಿಯುವಂತೆ ಮಾತುಕತೆಯಲ್ಲಿ ಭಾಗವಹಿಸಿದ 41 ರೈತ ಪ್ರತಿನಿಧಿಗಳಿಗೆ ಸರ್ಕಾರ ಹೇಳಿದೆ.

ಆದರೆ, ತಮ್ಮ ಬೇಡಿಕೆಗಳಿಂದ ಹಿಂದೆ ಸರಿಯಲು ರೈತರು ಒಪ್ಪಿಲ್ಲ. ಹಾಗೂ ವಿವಾದಾತ್ಮಕ ಕಾನೂನುಗಳನ್ನು ಹಿಂಪಡೆಯಲು ಸರ್ಕಾರವೂ ಒಪ್ಪದ ಕಾರಣ ಮುಂದಿನ ಮಾತುಕತೆಯನ್ನು ಜನವರಿ 15 ಕ್ಕೆ ಮುಂದೂಡಲಾಗಿದೆ.

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರೈಲ್ವೆ, ವಾಣಿಜ್ಯ ಮತ್ತು ಆಹಾರ ಸಚಿವ ಪಿಯೂಷ್ ಗೋಯಲ್ ಮತ್ತು ರಾಜ್ಯ ವಾಣಿಜ್ಯ ಸಚಿವ ಹಾಗೂ ಪಂಜಾಬ್ ಸಂಸದರೂ ಆಗಿರುವ ಸೋಮ್ ಪ್ರಕಾಶ್ ಅವರು ದೆಹಲಿಯ ವಿಜ್ಞಾನ ಭವನದಲ್ಲಿ ರೈತ ಒಕ್ಕೂಟಗಳೊಂದಿಗೆ ಮಾತುಕತೆ ನಡೆಸಿದ್ದಾರೆ.

ಆರಂಭದಲ್ಲಿ, ತೋಮರ್ ಕಾನೂನುಗಳ ಕುರಿತು ಚರ್ಚಿಸಲು ರೈತ ಸಂಘಟನೆಗಳಿಗೆ ಮನವಿ ಮಾಡಿದರೆ, ಹೊಸ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೇಕು ಎಂಬ ಬೇಡಿಕೆಯನ್ನು ರೈತ ಮುಖಂಡರು ಪುನರುಚ್ಚರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ, ಕೃಷಿ ಸಚಿವರು ಕೃಷಿ ಸುಧಾರಣಾ ಕಾನೂನು ಇಡೀ ದೇಶದ ರೈತರ ಹಿತಾಸಕ್ತಿಯನ್ನು ಕಾಪಾಡುವ ಬಗ್ಗೆ ಒತ್ತಿ ಹೇಳಿದ್ದಾರೆ. ಆದರೆ, ಈ ಕಾನೂನುಗಳು ಬಂಡವಾಳಶಾಹಿಗಳ ಪರವಿದೆ ಹಾಗೂ ಮಂಡಿ ಮತ್ತು ಕನಿಷ್ಟ ಬೆಂಬಲ ಬೆಲೆಗೆ ವಿರುದ್ಧವಾಗಿದೆ ಎಂದು ವಾದಿಸುವ ರೈತರು ತಮ್ಮ ವಾದದ ಮೇಲೆ ಗಟ್ಟಿಯಾಗಿ ನಿಂತಿದ್ದಾರೆ.

ನಾವು ಘರ್‌ ವಾಪ್ಸಿ (ಮನೆಗೆ ಮರಳುವುದು) ಮಾಡುವುದು, ನೀವು ʼಕಾನೂನು ವಾಪ್ಸಿʼ (ಕಾನೂನು ಹಿಂಪಡೆಯುವುದು) ಮಾಡಿದರೆ ಮಾತ್ರ ಎಂದು ಸರ್ಕಾರವನ್ನು ರೈತರು ಎಚ್ಚರಿಸಿದ್ದಾರೆ.

“ತಾತ್ತ್ವಿಕವಾಗಿ, ವಿವಿಧ ಸುಪ್ರೀಂ ಕೋರ್ಟ್ ಆದೇಶಗಳು ಕೃಷಿಯನ್ನು ರಾಜ್ಯ ವಿಷಯವೆಂದು ಘೋಷಿಸಿರುವುದರಿಂದ ಕೇಂದ್ರವು ಕೃಷಿ ವಿಷಯಗಳಲ್ಲಿ ಹಸ್ತಕ್ಷೇಪ ಮಾಡಬಾರದು. ಇಷ್ಟು ದಿನಗಳಿಂದ ಮಾತುಕತೆ ನಡೆಯುತ್ತಿರುವುದರಿಂದ ನೀವು (ಸರ್ಕಾರ) ಸಮಸ್ಯೆಯನ್ನು ಪರಿಹರಿಸಲು ಬಯಸುವುದಿಲ್ಲ ಎಂದು ತೋರುತ್ತದೆ. ದಯವಿಟ್ಟು ನಮಗೆ ಸ್ಪಷ್ಟ ಉತ್ತರವನ್ನು ನೀಡಿ ನಾವು ಹೋಗುತ್ತೇವೆ. ಎಲ್ಲರ ಸಮಯವನ್ನು ಏಕೆ ವ್ಯರ್ಥಮಾಡುತ್ತೇವೆ ” ಎಂದು ಮತ್ತೊಬ್ಬ ರೈತ ಮುಖಂಡರು ಸಭೆಯಲ್ಲಿ ಹೇಳಿದ್ದಾರೆ.

ಆದರೆ ಯಾವುದೇ ಕಾರಣಕ್ಕೂ ಕಾನೂನುಗಳನ್ನು ಹಿಂಪಡೆಯುವುದಿಲ್ಲವೆಂದು ಸರ್ಕಾರ ಹೇಳಿದೆ. ಊಟದ ವಿರಾಮವನ್ನೂ ಪಡೆಯಲು ನಿರಾಕರಿಸಿದ ರೈತ ಮುಖಂಡರು ಸಭೆ ನಡೆದ ಸಭಾಂಗಣದಲ್ಲೇ ಕುಳಿತು ತಮ್‌ಮ ಅಸಮಾಧಾನವನ್ನು ಪ್ರಕಟಿಸಿದ್ದಾರೆ.

ಚರ್ಚೆ ಬಳಿಕ ಸಭಾಂಗಣದಿಂದ ಹೊರಬಂದ ರೈತ ಮುಖಂಡರು, ʼನಾವು ಒಂದೋ ಗೆಲ್ಲುತ್ತೇವೆ ಅಥವಾ ಸಾಯುತ್ತೇವೆ, ಆದರೆ ಹಿಂದಿರುಗುವ ಪ್ರಶ್ನೆಯೇ ಇಲ್ಲʼ ಎಂದು ಹೇಳಿದ್ದಾರೆ.

Previous Post

ಅಮೆರಿಕ ಸಂಸತ್ತು ದಾಳಿ; ತರುಣ್‌ vs ತರೂರ್‌ ಟ್ವೀಟ್‌ ಸಮರಕ್ಕೆ ಕಾರಣವಾದ ತ್ರಿವರ್ಣ ಪತಾಕೆ

Next Post

ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿಯಿದ್ದರೂ ಕೋಳಿ ಉದ್ಯಮಕ್ಕಿಲ್ಲ ತೊಂದರೆ

Related Posts

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
0

ಇನ್ಮುಂದೆ ಮತದಾರರ ಪಟ್ಟಿ (Voters list) ಪರಿಷ್ಕರಣೆಗಾಗಿ ಮತದಾರರ ಆಧಾರ್ ಕಾರ್ಡ್ (Adhar card), ಮತದಾರರ ಗುರುತಿನ (Voter I’d ) ಚೀಟಿ ಮತ್ತು ಪಡಿತರ ಚೀಟಿಗಳನ್ನು...

Read moreDetails
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

July 9, 2025

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025
Next Post
ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿಯಿದ್ದರೂ ಕೋಳಿ ಉದ್ಯಮಕ್ಕಿಲ್ಲ ತೊಂದರೆ

ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿಯಿದ್ದರೂ ಕೋಳಿ ಉದ್ಯಮಕ್ಕಿಲ್ಲ ತೊಂದರೆ

Please login to join discussion

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada