ಕೃಷಿ ಕಾನೂನು ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ದಿನಕಳೆದಂತೆ ತೀವ್ರ ಕಾವು ಹೆಚ್ಚುತ್ತಿದೆ. ದೇಶದಾದ್ಯಂತ ಪ್ರತಿಪಕ್ಷಗಳು ಹಾಗೂ ಕಾರ್ಮಿಕ ಸಂಘಟನೆಗಳು ರೈತ ಹೋರಾಟವನ್ನು ಬೆಂಬಲಿಸುತ್ತಿದ್ದಾರೆ. ಕರ್ನಾಟಕ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪ್ರತಿಭಟನಾಕಾರರ ಸಮಸ್ಯೆ ಆಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.
Also Read: ಐದನೇ ದಿನಕ್ಕೆ ಕಾಲಿಟ್ಟ ಕೃಷಿ ಕಾನೂನು ವಿರೋಧಿ ಹೋರಾಟ
ಸಾಮಾಜಿಕ ಜಾಲತಾಣದ ಮೂಲಕ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಹೊರವಲಯದಲ್ಲಿ ರೈತರು ನಡೆಸುತ್ತಿರುವ ಹೋರಾಟ 5ನೇ ದಿನ ತಲುಪಿದೆ. ರೈತರ ಹಿತಕ್ಕಾಗಿ ಕಾಯ್ದೆ ತಂದಿರುವುದಾಗಿ ಹೇಳಿರುವ ಕೇಂದ್ರ ಕೂಡಲೇ ಪ್ರತಿಭಟನಾಕಾರರೊಂದಿಗೆ ಮಾತನಾಡಿ ಅವರ ಅನುಮಾನಗಳನ್ನು ನಿವಾರಿಸುವ ಪ್ರಯತ್ನ ಮಾಡುವುದು ಸೂಕ್ತ. ಇಲ್ಲವಾದರೆ, ರೈತರು, ಜನರ ಅನುಮಾನಗಳು ಬೆಳೆಯುತ್ತಾ ಹೋಗುತ್ತದೆ ಎಂದು ಎಚ್ಚರಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ರೈತರ ಸಮಸ್ಯೆ ಆಲಿಸಬೇಕಿದ್ದರೆ ಬುರಾಡಿ ಉದ್ಯಾನಕ್ಕೆ ಬರಬೇಕು ಎಂದು ಕೇಂದ್ರ ರೈತರಲ್ಲಿ ಮನವಿ ಮಾಡಿದೆ. ಇದನ್ನು ರೈತರು ಒಪ್ಪಿಲ್ಲ. ಇದು ತಮಗೆ ಒಡ್ಡಿರುವ ಷರತ್ತು ಎಂದು ರೈತರು ಭಾವಿಸಿದ್ದಾರೆ. ಅದ್ದರಿಂದ ಈ ಷರತ್ತು ಹಿಂದಕ್ಕೆ ಪಡೆಯುವುದೇ ಸೂಕ್ತ. ರೈತರು ಇರುವಲ್ಲಿಯೇ, ಅವರು ಇಚ್ಛಿಸಿದಲ್ಲಿಯೇ ಸಮಸ್ಯೆಗಳನ್ನು ಆಲಿಸಿ ಎಂದು ಸಲಹೆ ನೀಡಿದ್ದಾರೆ.
Also Read: ರೈತರನ್ನು ಗೌರವದಿಂದ ನೋಡಿಕೊಳ್ಳಿ: ಕೇಂದ್ರಕ್ಕೆ ಮಾಜಿ ಪ್ರಧಾನಿ ದೇವೇಗೌಡ ಸಲಹೆ
5 ದಿನಗಳಿಂದ ರೈತರು ಸಿಂಗು ಗಡಿಯಲ್ಲೇ ಧರಣಿ ಕುಳಿತಿದ್ದಾರೆ. ಇದು ಚಳಿಗಾಲ. ದೆಹಲಿ ಚಳಿ ಯಾರಿಗಾದರೂ ಮೈ ನಡುಗಿಸುತ್ತದೆ. ಕೋವಿಡ್ ಕಾಲದಲ್ಲಿ ರೈತರನ್ನು ಹಾಗೆ ಅಲ್ಲಿ ಬಿಡುವುದು ಆರೋಗ್ಯದ ದೃಷ್ಟಿಯಿಂದ ಸೂಕ್ತವಲ್ಲ. ಅಲ್ಲಿರುವ ಯಾರಿಗಾದರೂ ಅಪಾಯವಾದರೆ ಅದು ಕೇಂದ್ರ ಸರ್ಕಾರದ ಬಾಧ್ಯತೆಯಾಗುತ್ತದೆ. ಹೀಗಾಗಿ ಕೂಡಲೇ ಮನವಿ ಆಲಿಸುವುದು ಸಮಂಜಸ ಎಂದು ಅವರು ಹೇಳಿದ್ದಾರೆ.
Also Read: ರೈತ ಪ್ರತಿಭಟನೆ ಸುತ್ತ ಸುಳ್ಳು ಮಾಹಿತಿ ಬಿತ್ತರಿಸಿದ ಬಿಜೆಪಿ ಐಟಿ ಸೆಲ್