• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ರೈತರು ತಿರಸ್ಕರಿಸಿದ ಕರಡು ಪ್ರತಿಯಲ್ಲಿ ಏನಿತ್ತು?

by
December 10, 2020
in ದೇಶ
0
ರೈತರು ತಿರಸ್ಕರಿಸಿದ ಕರಡು ಪ್ರತಿಯಲ್ಲಿ ಏನಿತ್ತು?
Share on WhatsAppShare on FacebookShare on Telegram

ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ನಡೆಸುತ್ತಿರುವ ಹೋರಾಟಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಂಡಿಯೂರಿದೆ. ಹಾಗಾಗಿಯೇ ರೈತರಿಗೆ ಕೇಂದ್ರ ಸರ್ಕಾರ ಕೆಲವು ಪ್ರಸ್ತಾವನೆಗಳ ಕರಡು ತಯಾರಿಸಿ ಕಳಿಸಿಕೊಟ್ಟಿದೆ. ಕೃಷಿ ಕಾಯ್ದೆ ಕುರಿತು ರೈತರಿಗಿರುವ ಆತಂಕಗಳನ್ನು ದೂರ ಮಾಡುವ ನಿಟ್ಟಿನಲ್ಲಿ ಸದ್ಯದ ಕನಿಷ್ಟ ಬೆಂಬಲ ಬೆಲೆ ವ್ಯವಸ್ಥೆ ಮುಂದುವರಿಸುತ್ತೇವೆ. ಇದರ ಜತೆಗೆ ರೈತ ಸಮುದಾಯಕ್ಕೆ ಹಲವು ಪ್ರಸ್ತಾವನೆ ಮತ್ತು ಭರವಸೆಗಳನ್ನು ನೀಡುತ್ತಿದ್ದೇವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ADVERTISEMENT

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂಂದಿಗೆ ನಡೆದ ಮಾತುಕತೆ ವಿಫಲವಾದ ಬೆನ್ನಲ್ಲೇ ಕಳುಹಿಸಿದ ಸರ್ಕಾರದ ಈ ಪ್ರಸ್ತಾವನೆಯನ್ನು ಪ್ರತಿಭಟನಾನಿರತ ರೈತರೀಗ ತಿರಸ್ಕರಿಸಿದ್ದಾರೆ. ಏನೇನೋ ಸಾಬೂಬು ನೀಡಿ ನಮ್ಮ ಬೇಡಿಕೆಗಳಿಂದ ಪರಾರಿಯಾಗಬೇಡಿ ಎಂದು ರೈತರು ಕೇಂದ್ರ ಸರ್ಕಾರದ ಭರವಸೆ ಮತ್ತು ಪ್ರಸ್ತಾವನೆ ಕರಡನ್ನು ನಿರಾಕರಿಸಿದ್ದಾರೆ. ರೈತ ವಿರೋಧಿ ಕಾಯ್ದೆಗಳನ್ನು ಸಂಪೂರ್ಣವಾಗಿ ಹಿಂಪಡೆಯುವುದೊಂದೇ ದಾರಿ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕೇಂದ್ರ ಜಾರಿಗೊಳಿಸಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯಬೇಕು ಎಂಬುದೇ ನಮ್ಮ ಮೊದಲ ಬೇಡಿಕೆ. ಈಗ ಕೇಂದ್ರ ಸರ್ಕಾರ ಕಳುಹಿಸಿರುವ ಲಿಖಿತ ಭರವಸೆ ಮೇಲೆ ಚರ್ಚೆ ಮಾಡಿದ್ದೇವೆ. ನಮಗೆ ಈ ರೀತಿಯ ಭರವಸೆಗಳು ಬೇಡ. ಕೇಂದ್ರ ನಮ್ಮ ಬೇಡಿಕೆ ಈಡೇರಿಸುವತನಕ ರಾಷ್ಟ್ರ ರಾಜಧಾನಿ ಗಡಿಯಲ್ಲಿ ಪ್ರತಿಭಟನೆ ಮುಂದುವರೆಸಲು ನಿರ್ಧರಿಸಿದ್ದೇವೆ ಎಂದು ಕ್ರಾಂತಿಕಾರಿ ಕಿಸಾನ್ ಯೂನಿಯನ್ ಅಧ್ಯಕ್ಷ ದರ್ಶನ್ ಪಾಲ್ ತಿಳಿಸಿದ್ದಾರೆ.

ಕೃಷಿ ಕಾನೂನುಗಳ ವಿರುದ್ಧದ ನಮ್ಮ ಹೋರಾಟ ಮುಂದುವರೆಯಲಿದೆ. ಡಿ.12ರಂದು ದೆಹಲಿ-ಜೈಪುರ ಹೆದ್ದಾರಿ ಬಂದ್ ಮಾಡುತ್ತೇವೆ. ಡಿ.14 ರಂದು ಬಿಜೆಪಿ ಕಚೇರಿಗಳಿಗೆ ಮುತ್ತಿಗೆ ಹಾಕಲಿದ್ದೇವೆ. ಕೇಂದ್ರದ ವಿರುದ್ಧ ದೇಶಾದ್ಯಂತ ಪ್ರತಿಭಟನೆಗಳು ನಡೆಯಲಿವೆ. ದೇಶದ ಇತರ ಭಾಗಗಳ ರೈತರನ್ನು ದೆಹಲಿಗೆ ಬರುವಂತೆ ಕರೆ ನೀಡುತ್ತೇವೆ ಎಂದರು.

ಇತ್ತೀಚೆಗೆ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ನಡೆದ ಮಾತುಕತೆ ವಿಫಲವಾದ ನಂತರ ರೈತ ಮುಖಂಡರು 6ನೇ ಸುತ್ತಿನ ಮಾತುಕತೆಯಲ್ಲಿ ಭಾಗಿಯಾಗಲು ನಿರಾಕರಿಸಿದರು. ಆದ್ದರಿಂದಲೇ ಕೇಂದ್ರ ಸರ್ಕಾರ ವಿಧೇಯಕಕ್ಕೆ ತಿದ್ದುಪಡಿ ಮಾಡಿದ ಕರಡು ಪ್ರಸ್ತಾವನೆಯನ್ನು ರೈತ ಮುಖಂಡರಿಗೆ ಕಳುಹಿಸಿತ್ತು. ಆದರೆ, ರೈತರು ಕರಡು ಪ್ರಸ್ತಾವನೆ ತಿರಸ್ಕರಿಸಿ ತಮ್ಮ ಮೂಲ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರದ ಕರಡು ಪ್ರಸ್ತಾವನೆಗಳು ಹೀಗಿತ್ತು?

*ಎಂಎಸ್ ಪಿ ವ್ಯವಸ್ಥೆ ಹೀಗೆ ಮುಂದುವರೆಯಲಿದೆ ಎಂದು ಲಿಖಿತ ಭರವಸೆ ನೀಡಿದ್ದ ಕೇಂದ್ರ

*ನಿಯಂತ್ರಿತ ಮಂಡಿಗಳ ಹೊರತಾಗಿ ಖಾಸಗಿ ವ್ಯಾಪಾರಸ್ಥರಿಗೆ ಟ್ರೇಡಿಂಗ್‌ ನೋಂದಣಿ ಮಾಡಲು ರಾಜ್ಯ ಸರ್ಕಾರಕ್ಕೆ ಅವಕಾಶ

*ಖಾಸಗಿ ಸಂಸ್ಥೆಗಳು ನೋಂದಣಿ ಮಾಡಿಕೊಂಡ ಮಂಡಿಗಳಲ್ಲಿ ಎಪಿಎಂಸಿಗಳಿಗೆ ಅನ್ವಯ ಆಗುವಂತೆ ಸೆಸ್/ಶುಲ್ಕ ವಿಧಿಸಲು ರಾಜ್ಯ ಸರ್ಕಾರಕ್ಕೆ ಅವಕಾಶ

*ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಸಿವಿಲ್ ನ್ಯಾಯಾಗಳ ಮೊರೆ ಹೋಗಲು ರೈತರಿಗೆ ಆಯ್ಕೆ

*ಗುತ್ತಿಗೆ ನೀಡಿರುವ ಕೃಷಿ ಭೂಮಿಯಲ್ಲಿ ನಿರ್ಮಾಣ ಮಾಡಿರುವ ಯಾವುದೇ ಕಟ್ಟಡ ನಿರ್ಮಾಣದ ಮೇಲೆ ಸಾಲ ನೀಡಲ್ಲ

*ಗುತ್ತಿಗೆ ಅವಧಿ ಮುಕ್ತಾಯಗೊಂಡ ನಂತರ ಗುತ್ತಿಗೆಗೆ ಪಡೆದಿದ್ದವರು ಕಟ್ಟಡವನ್ನು ಅತಿಕ್ರಮಣ ಮಾಡುವ ಆಗಿಲ್ಲ

*ಭೋಗ್ಯ, ಅಡಮಾನ ಅಥವಾ ಕೃಷಿ ಭೂಮಿ ಮಾರಾಟಕ್ಕೆ ನಿರ್ಬಂಧ ವಿಧಿಸುವುದು

*ಸ್ಪಾನ್ಸರ್‌ಗಳು ಕೃಷಿ ಭೂಮಿ ಮೇಲಿನ ಒಡೆತನ ಕಸಿದುಕೊಳ್ಳುವುದಕ್ಕೆ ನಿರ್ಬಂಧ

*ಭೂಮಿಯ ಸ್ವರೂಪ ಬದಲಾವಣೆ ಮಾಡುವುದಕ್ಕೆ ನಿರ್ಬಂಧ ವಿಧಿಸುವುವ ಮೊದಲಾದ ಭರವಸೆ

Previous Post

ಭಾರತದ ಶಾಲೆಗಳಲ್ಲಿ ಸಾಮಾಜಿಕ ಮತ್ತು ಭಾವನಾತ್ಮಕ ಕಲಿಕೆ

Next Post

ರಾಜಸ್ಥಾನ, ಅರುಣಾಚಲ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ; ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್‌ಗೆ ಹಿನ್ನಡೆ

Related Posts

ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 23, 2026
0

ಬೆಂಗಳೂರು: ಬೆಸ್ಕಾಂನ ಹೈ ಟೆನ್ಷನ್ ಗ್ರಾಹಕರಿಗಾಗಿ ಸಂಸ್ಥೆಯ ಇಂಜಿನಿಯರ್‌ಗಳು ಅಭಿವೃದ್ಧಿಪಡಿಸಿರುವ ಸೇವೆ ಕೋರಿಕೆ/ಕುಂದುಕೊರತೆ ಪರಿಹಾರ ಪೋರ್ಟಲ್ 'ಹೆಚ್‌ಟಿ ಮಿತ್ರ'ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಗುರುವಾರ...

Read moreDetails
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

April 22, 2026
Next Post
ರಾಜಸ್ಥಾನ

ರಾಜಸ್ಥಾನ, ಅರುಣಾಚಲ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆ; ಬಿಜೆಪಿಗೆ ಭರ್ಜರಿ ಜಯ, ಕಾಂಗ್ರೆಸ್‌ಗೆ ಹಿನ್ನಡೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada