• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ರೈತರ ಜತೆಗೆ ಶನಿವಾರ ಮತ್ತೊಂದು ಸುತ್ತಿನ ಮಾತುಕತೆಗೆ ಮುಂದಾದ ಕೇಂದ್ರ

by
December 4, 2020
in ದೇಶ
0
ರೈತರ ಜತೆಗೆ ಶನಿವಾರ ಮತ್ತೊಂದು ಸುತ್ತಿನ ಮಾತುಕತೆಗೆ ಮುಂದಾದ ಕೇಂದ್ರ
Share on WhatsAppShare on FacebookShare on Telegram

ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ನೇತೃತ್ವದಲ್ಲಿ ಪ್ರತಿಭಟನಾ ನಿರತ ರೈತರೊಂದಿಗೆ ನಡೆದ ಎರಡನೇ ಸುತ್ತಿನ ಸಭೆಯೂ ವಿಫಲವಾಗಿದೆ. ಡಿಸೆಂಬರ್‌ ಮೂರನೇ ತಾರೀಕಿನಂದು ಕೃಷಿ ಕಾನೂನುಗಳ ಪೂರ್ವಾಪರ ಚರ್ಚಿಸಲು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ದೇಶದ ಹಲವು ರೈತ ಸಂಘಟನೆಗಳು ಸೇರಿದ್ದವು. ಈ ಎರಡನೇ ಸುತ್ತಿನ ಸಭೆಯಲ್ಲೂ ಕೇಂದ್ರ ಸರ್ಕಾರ ಮತ್ತು ರೈತ ಸಂಘಟನೆ ಮುಖಂಡರು ತಮ್ಮ ಸಮಸ್ಯೆಗಳ ಕುರಿತಾಗಿ ಒಮ್ಮತದ ತೀರ್ಮಾನಕ್ಕೆ ಬರುವಲ್ಲಿ ವಿಫಲರಾಗಿದ್ದಾರೆ. ಹಾಗಾಗಿ ಸರ್ಕಾರ ಮೂರನೇ ಸುತ್ತಿನ ಸಭೆಯನ್ನು ನಾಳೆ ಅಂದರೆ ಡಿ.5ರಂದು ನಡೆಸಲು ತೀರ್ಮಾನಿಸಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಗುರುವಾರ ನಡೆದ ಎರಡನೇ ಸುತ್ತಿನ ಸಭೆಯಲ್ಲಿ ರೈತ ಸಂಘಟನೆಗಳು ನೂತನ ಕೃಷಿ ಕಾನೂನುಗಳನ್ನು ಪಟ್ಟು ಹಿಡಿದಿದ್ದವು. ಕೃಷಿ ನೀತಿಗಳ ಒಳಿತು-ಕೆಡಕುಗಳ ಕುರಿತು ಚರ್ಚಿಸಲು ತಜ್ಞ ಸಲಹಾ ಸಮಿತಿ ರಚನೆಯ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದವು. ಮುಂದಿನ ಸಭೆಯಲ್ಲಿ ನಮ್ಮ ಬೇಡಿಕೆಗಳನ್ನು ಈಡೇರಿಸಿ ಸರ್ವಸಮ್ಮತ ನಿರ್ಧಾರಕ್ಕೆ ಸರ್ಕಾರ ಬರದೇ ಹೋದಲ್ಲಿ ತಮ್ಮ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದವು.

ಇನ್ನು, ರೈತ ಸಂಘಟನೆಗಳ ಜತೆಗಿನ ಸಭೆ ಬಳಿಕ ಮಾತಾಡಿದ ತೋಮರ್‌ ಅವರು, ನೂತನ ಕೃಷಿ ಕಾನೂನುಗಳ ಪೂರ್ವಾಪರ ಕುರಿತು ಚರ್ಚಿಸಲು ಕೇಂದ್ರ ಸರ್ಕಾರಕ್ಕೆ ಯಾವುದೇ ಅಹಂ ಇಲ್ಲ. ರೈತರೊಂದಿಗೆ ತಮ್ಮ ಸಮಸ್ಯೆಗಳ ಕುರಿತು ಚರ್ಚಿಸಿ ಅವರಿಗಿರುವ ಎಲ್ಲಾ ಆತಂಕಗಳನ್ನು ದೂರ ಮಾಡಲಾಗುವುದು ಎಂದರು.

ಪ್ರತಿಭಟನಾ ನಿರತ ರೈತ ಸಂಘಟನೆಗಳೊಂದಿಗಿನ ಎರಡನೇ ಸುತ್ತಿನ ಸಭೆಯೂ ಆಶಾದಾಯಕ ಎಂದು ಬಣ್ಣಿಸಿದ ತೋಮರ್‌, ಎಂಎಸ್‌ಪಿ ಕುರಿತ ಪ್ರತಿಭಟನಾಕಾರರ ಆತಂಕ ದೂರ ಮಾಡಲಿದ್ದೇವೆ. ಈ ಹಿಂದಿನ ವ್ಯವಸ್ಥೆ ಕೇಂದ್ರ ಸರ್ಕಾರ ಮುಂದುವರಿಸಲಿದೆ ಎಂಬ ಭರವಸೆ ನೀಡಿದರು.

Also Read: ಪದ್ಮ ವಿಭೂಷಣ ಪ್ರಶಸ್ತಿ ಮರಳಿಸಿದ ಪಂಜಾಬ್ ಮಾಜಿ ಸಿಎಂ ಪರಕಾಶ್ ಸಿಂಗ್ ಬಾದಲ್

ಕೃಷಿ ಮಾರುಕಟ್ಟೆಗಳು ಬಂದ್ ಆಗಲಿವೆ ಎಂಬ ರೈತರ ಆತಂಕ ಸತ್ಯಕ್ಕೆ ದೂರವಾದುದು. ಕೇಂದ್ರ ಸರ್ಕಾರ ಎಪಿಎಎಂಸಿಗಳನ್ನು ಮತ್ತಷ್ಟು ಸಧೃಡಗೊಳಿಸಲಿದೆಯೇ ಹೊರತು ಯಾವುದೇ ಕಾರಣಕ್ಕೂ ನಾಶ ಮಾಡುವ ಉದ್ದೇಶ ಹೊಂದಿಲ್ಲ ಎಂದರು ತೋಮರ್.

ರೈತರೊಂದಿಗಿನ ಎರಡನೇ ಸಭೆಯಲ್ಲಿ ನಿಕಟತೆ ಸಾಧಿಸಿದ್ದೇವೆ ಎಂದು ತೋಮರ್‌ ಹೇಳುತ್ತಿದ್ದಾರಾದರೂ ಪ್ರತಿಭಟನಾ ನಿರತ ಹೋರಾಟಗಾರರು ಇಷ್ಟು ಸುಲಭವಾಗಿ ಬಗ್ಗುವಂತೆ ಕಾಣುತ್ತಿಲ್ಲ. ಆದ್ದರಿಂದಲೇ ಡಿ.5ರಂದು ಶನಿವಾರ ಇನ್ನೊಂದು ಸುತ್ತಿನ ಸಭೆ ನಡೆಸಲು ನಿರ್ಧರಿಸಲಾಗಿದೆ.

Also Read: ಇಂದಾದರೂ ರೈತರ ಬೇಡಿಕೆಗಳನ್ನು ಈಡೇರಿಸಲು ಕೇಂದ್ರ ಸರ್ಕಾರ ಒಪ್ಪುತ್ತಾ?

ಎಂಎಸ್‌ಪಿ ಹಾಗೂ ಎಪಿಎಂಸಿ ವ್ಯವಸ್ಥೆಗಳನ್ನು ದುರ್ಬಲಗೊಳಿಸುವ ನಿರ್ಧಾರ ಸರ್ಕಾರ ಬದಲಿಸಬೇಕು. ಹಾಗೆಯೇ ಹೊಸ ಕೃಷಿ ಕಾನೂನನ್ನು ರದ್ದುಗೊಳಿಸಬೇಕು ಎನ್ನುವುದು ರೈತ ಸಂಘಟನೆಗಳ ಆಗ್ರಹ.

Previous Post

ಹೈದರಾಬಾದ್‌ಗೂ ಕಾಲಿಟ್ಟ ಬಿಜೆಪಿಯ ʼಮರುನಾಮಕರಣʼ ತಂತ್ರ

Next Post

ರೈತರು ಬೇಡ ಎನ್ನುತ್ತಿರುವ ಆ ಮೂರು ಮರಣಶಾಸನಗಳ ವಿವರ

Related Posts

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
0

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...

Read moreDetails
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025
Next Post
ರೈತರು ಬೇಡ ಎನ್ನುತ್ತಿರುವ ಆ ಮೂರು ಮರಣಶಾಸನಗಳ ವಿವರ

ರೈತರು ಬೇಡ ಎನ್ನುತ್ತಿರುವ ಆ ಮೂರು ಮರಣಶಾಸನಗಳ ವಿವರ

Please login to join discussion

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada