• Home
  • About Us
  • ಕರ್ನಾಟಕ
Tuesday, July 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಲಾಕ್‌ಡೌನ್‌ ಸಮಯದಲ್ಲಿ BSY ತೋರಿದ ಕಾಳಜಿ ಮತ್ತು ಬದ್ಧತೆ ಎಂತಹದ್ದು?

by
April 15, 2020
in ಕರ್ನಾಟಕ
0
ಲಾಕ್‌ಡೌನ್‌ ಸಮಯದಲ್ಲಿ BSY ತೋರಿದ ಕಾಳಜಿ ಮತ್ತು ಬದ್ಧತೆ ಎಂತಹದ್ದು?
Share on WhatsAppShare on FacebookShare on Telegram

ಇಡೀ ದೇಶದಲ್ಲೇ ಮಾರಣಾಂತಿಕ ಕರೋನಾ ವೈರಸ್ ಗೆ ಮೊದಲ ಬಲಿ ದಾಖಲಾಗಿದ್ದು ಕರ್ನಾಟಕದಲ್ಲೇ. ಮಾರ್ಚ್ 12 ಗುರುವಾರ ಕಲಬುರ್ಗಿಯ ವೃದ್ಧರೊಬ್ಬರು ಕರೋನಾಗೆ ಮೃತಪಟ್ಟಿದ್ದರು. ಈ ಘಟನೆ ದಾಖಲಾದ ನಂತರ ಇಡೀ ರಾಜ್ಯದ ಜನ ಭೀತಿಗೆ ಸಿಲುಕಿದ್ದರು. ದಿನವಿಡೀ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ವರದಿ ಜನರನ್ನು ಮತ್ತಷ್ಟು ಭಯಕ್ಕೆ ದೂಡಿತ್ತು. ಆದರೆ, ಇಂತಹ ಪರಿಸ್ಥಿತಿಯನ್ನು ನಿಭಾಯಿಸುವುದು ರಾಜ್ಯ ಸರ್ಕಾರಕ್ಕೆ ಅಷ್ಟು ಸುಲಭದ ಕೆಲಸವಾಗಿರಲಿಲ್ಲ.

ADVERTISEMENT

ಮಾರ್ಚ್ 24ರ ವೇಳೆಗಾಗಲೇ ಭಾರತದಾದ್ಯಂತ ಕರೋನಾ ತನ್ನ ಕಬಂಧಬಾಹುವನ್ನು ಚಾಚಿತ್ತು. 250ಕ್ಕೂ ಹೆಚ್ಚು ಜನರಲ್ಲಿ ಈ ಸೋಂಕು ಕಾಣಿಸಿಕೊಂಡಿತ್ತು. 9 ಜನ ಬಲಿಯಾಗಿದ್ದರು. ಸುರಕ್ಷತೆಯ ದೃಷ್ಟಿಯಿಂದ ಮತ್ತು ಕರೋನಾಸಾಮೂದಾಯಿಕವಾಗಿ ಹರಡುವುದನ್ನು ತಡೆಯುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ದೇಶದಾದ್ಯಂತ 21 ದಿನಗಳ ಲಾಕ್ಡೌನ್ ಘೋಷಿಸಿದ್ದರು.

ದೇಶಕ್ಕೆ ರಾಜ್ಯಕ್ಕೆ ಮತ್ತು ಸಾರ್ವಜನಿಕರಿಗೆ ಈ ಲಾಕ್ಡೌನ್ ಎಂಬ ಸನ್ನಿವೇಶ ನಿಜಕ್ಕೂ ಹೊಸದು. ದಿಢೀರೆಂದು ಜನ ರಸ್ತೆಗೆ ಇಳಿಯಬಾರದು, 21 ದಿನ ಮನೆಯಲ್ಲೇ ಇರಬೇಕು ಎಂದು ಆದೇಶಿಸುವುದು ಸುಲಭ. ಆದರೆ, ಅದನ್ನು ಕಾರ್ಯರೂಪಕ್ಕೆ ತರುವುದು ಮತ್ತು ಅದರ ಜೊತೆ ಜೊತೆ ಕರೋನಾ ಹರಡದಂತೆ ತಡೆಯುವುದು ಇದೆಯಲ್ಲ ಅದು ಸಾಧಾರಣ ಮಾತಲ್ಲ. ಆದರೆ, ಈ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅದನ್ನು ಸಾಧಿಸಿ ತೋರಿಸಿದ್ದರು. ರಾಜಕೀಯವಾಗಿ ಹತ್ತಾರು ವಿರೋದಾಭಾಸಗಳು ಇದ್ದಾಗ್ಯೂ ಈ ವಿಚಾರದಲ್ಲಿ ಬಿಎಸ್ವೈ ನಡೆ ನಿಜಕ್ಕೂ ಶ್ಲಾಘನೀಯ.

ಒತ್ತಡದಲ್ಲೇ ಮುಗಿದ ಈ 33 ದಿನ:

ಕಲಬುರ್ಗಿಯ ವೃದ್ಧ ಕರೋನಾಗೆ ಬಲಿಯಾಗಿ ಇಂದಿಗೆ 33 ದಿನಗಳಾಗಿವೆ. ಆದರೆ, ಇಷ್ಟು ದಿನಗಳಲ್ಲಿ ಕೇಂದ್ರ ಸರ್ಕಾರಕ್ಕಿಂತ ಹೆಚ್ಚು ಒತ್ತಡದಲ್ಲಿ ಕೆಲಸ ಮಾಡಿದ್ದು ರಾಜ್ಯ ಸರ್ಕಾರಗಳೇ. ಏಕೆಂದರೆ ಒಂದಡೆ ಜನರನ್ನು ಮನೆಯಲ್ಲಿ ಕೂರಿಸಬೇಕು ಮತ್ತೊಂದೆಡೆ ಕರೋನಾ ವಿರುದ್ಧ ಹೋರಾಟಕ್ಕೆ ಇಡೀ ಆರೋಗ್ಯ ಇಲಾಖೆಯನ್ನು ಸಜ್ಜುಗೊಳಿಸಬೇಕು. ರಾಜ್ಯ ಸರ್ಕಾರ ಈ ಎರಡೂ ಕೆಲಸದಲ್ಲಿ ಯಶಸ್ವಿಯಾಗಿದೆ.

ಲಾಕ್ಡೌನ್ ಘೋಷಿಸಲಾಗುತ್ತಿದ್ದಂತೆ ಪೊಲೀಸ್, ರಿಸರ್ವ್ ಪೊಲೀಸ್, ಗೃಹ ರಕ್ಷಕ ದಳ ಹಾಗೂ ಸ್ವಯಂ ಕಾರ್ಯಕರ್ತರು ಸೇರಿದಂತೆ ಸಾವಿರಾರು ಜನರನ್ನು ರಾಜ್ಯ ಸರ್ಕಾರ ಬೀದಿಗೆ ಇಳಿಸಿತ್ತು. ಕರೋನಾಪಾಸಿಟಿವ್ ಇರುವ ಪ್ರದೇಶಗಳ ಸುತ್ತ ಪೊಲೀಸ್ ಬಂದೋಬಸ್ತ್ ಬಿಗಿಗೊಳಿಸಲಾಗಿತ್ತು. ಪ್ರಮುಖ ನಗರಗಳ ರಸ್ತೆಗಳ ಸುತ್ತ ಪೊಲೀಸ್ ಕಣ್ಗಾವಲು ಬಿಗಿ ಮಾಡಲಾಗಿತ್ತು.

ಇದಲ್ಲದೆ ಅಂತಾರಾಜ್ಯ ಮತ್ತು ಜಿಲ್ಲಾ ಗಡಿಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿತ್ತು. ಈ ಮೂಲಕ ಕರೋನಾತಡೆಗೆ ರಾಜ್ಯ ಸರ್ಕಾರ ಕೇಂದ್ರದ ಮಹತ್ವದ ಆಶಯವನ್ನು ನನಸಾಗಿದೆ. ಕರೋನಾಸಾಮೂದಾಯಿಕವಾಗಿ ಹರಡುವುದನ್ನು ತಪ್ಪಿಸಿದೆ.

ಸುಧಾರಿಸಿದ ಆರೋಗ್ಯ ವ್ಯವಸ್ಥೆ:

ಕರೋನಾಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿದ್ದಂತೆ ಕಠಿಣ ಕ್ರಮಗಳಿಗೆ ಮುಂದಾದ ರಾಜ್ಯ ಸರ್ಕಾರ ಸರ್ಕಾರಿ ಆಸ್ಪತ್ರೆಗಳು ಮಾತ್ರವಲ್ಲ ರಾಜ್ಯದಾದ್ಯಂತ ಸುಮಾರು 1768ಕ್ಕೂ ಅಧಿಕ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್ ತುರ್ತು ಚಿಕಿತ್ಸಾ ಘಟಕ ಸ್ಥಾಪಿಸಲು ಆದೇಶ ಹೊರಡಿಸಿತ್ತು. ರಾಜ್ಯದ ಹಲವೆಡೆ ಕರೋನಾ ಪತ್ತೆ ಹಚ್ಚುವ ಲ್ಯಾಬ್ ಸ್ಥಾಪನೆಗೆ ಮುಂದಾಯಿತು. ಕಲಬುರ್ಗಿಯಲ್ಲಿ ಪ್ರಸ್ತುತ ಕರೋನಾ ಲ್ಯಾಬ್ ಸ್ಥಾಪಿಸಲಾಗಿದೆ.

ಇದಲ್ಲದೆ ಮಿಂಚಿನ ವೇಗದಲ್ಲಿ ಕೆಲಸ ಮಾಡುತ್ತಿರುವ ಸಚಿವದ್ವಯರಾದ ಶ್ರೀರಾಮುಲು ಹಾಗೂ ಡಾ|ಕೆ. ಸುಧಾಕರ್ ರಾಜ್ಯದಾದ್ಯಂತ ಮಿಂಚಿನ ಸಂಚಾರ ನಡೆಸಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಆರೋಗ್ಯಾಧಿಕಾರಿಗಳ ಜೊತೆಗೆ ಸರಣಿ ಸಭೆ ನಡೆಸಿರುವ ಸಚಿವರು ಕರೋನಾ ತಡೆಗೆ ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳಲು ಸೂಚಿಸಿದ್ದಾರೆ.

ಅಲ್ಲದೆ, ರಾಜ್ಯಕ್ಕೆ ಅಗತ್ಯವಾದ ವೆಂಟಿಲೇಟರ್ ಸೇರಿದಂತೆ ಎಲ್ಲಾ ಆರೋಗ್ಯ ಸಂಬಂಧಿತ ಸಲಕರಣೆಗಳ ಖರೀದಿಗೆ ಮುಂದಾಗುವ ಮೂಲಕ ಭವಿಷ್ಯದಲ್ಲಿ ಎದುರಾಗಬಹುದಾದ ಎಲ್ಲಾ ಸಂದಿಗ್ಧ ಪರಿಸ್ಥಿತಿಗೆ ರಾಜ್ಯವನ್ನು ಅಣಿಗೊಳಿಸಿದ್ದಾರೆ.

ಹಸಿದವರಿಗೆ ಅನ್ನ ನೀಡಲು ವಿಶಿಷ್ಠ ಯೋಜನೆ:

ಲಾಕ್ಡೌನ್ ಸಂದರ್ಭದಲ್ಲಿ ದಿನನಿತ್ಯದ ಕೂಲಿ ಹಾಗೂ ಕಟ್ಟಡ ಕಾರ್ಮಿಕರು, ಬೀದಿ ಬದಿಯ ಸಣ್ಣ ವ್ಯಾಪಾರಿಗಳು ಒಪ್ಪೊತ್ತಿನ ಊಟಕ್ಕೂ ಕಷ್ಟಪಡಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಆದರೆ, ಇದನ್ನು ಮನಗಂಡಿರುವ ರಾಜ್ಯ ಸರ್ಕಾರ ಹಸಿದವರ ಹಸಿವು ನೀಗಿಸಲು ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಯೋಜನೆಗಳಲ್ಲದೆ ಅನೇಕ ಉಪಯುಕ್ತ ಯೋಜನೆಗಳನ್ನು ಜಾರಿಗೊಳಿಸಿದೆ.

ಹಸಿದವರಿಗೆ ಅವರ ಸ್ಥಳಕ್ಕೆ ತೆರಳಿ ಆಹಾರ ನೀಡಲಾಗಿದೆ. ಅಲ್ಲದೆ, ಬೆಂಗಳೂರು ನಗರದಲ್ಲಿ ವಾಸಿಸುತ್ತಿರುವ ಕಾರ್ಮಿಕರಿಗೆ ಹಂಚಲು ಮಾತ್ರ ಸುಮಾರು 1 ಲಕ್ಷ ಆಹಾರ ಕಿಟ್ಗಳನ್ನು ತಯಾರಿಸಲು ಇಸ್ಕಾನ್ ಅಕ್ಷಯ ಪಾತ್ರೆಗೆ ಆದೇಶಿಸಿರುವ ರಾಜ್ಯ ಸರ್ಕಾರ ಈ ಕಿಟ್ಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಬಡವರ ಹಸಿವು ನೀಗಿಸುವ ಕೆಲಸಕ್ಕೆ ಮುಂದಾಗಿದೆ. ಅಲ್ಲದೆ, ಮೂರು ತಿಂಗಳ ಪಡಿತರವನ್ನು ಒಟ್ಟಿಗೆ ನೀಡುವ ಮೂಲಕ ಗ್ರಾಮೀಣ ಭಾಗದ ಬಡವರ ಪರವಾಗಿ ಕೆಲಸ ನಿರ್ವಹಿಸುತ್ತಿದೆ.

ಒಟ್ಟಾರೆ ಕರೋನಾದಿಂದಾಗಿ ಕಠಿಣತೆಗೆ ಸಿಲುಕಬಹುದಾಗಿದ್ದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಜೊತೆಗೆ ಹಸಿದವರಿಗೆ ಅನ್ನವನ್ನೂ ನೀಡುವ ಮೂಲಕ ಹಸಿವು ಮುಕ್ತ ಕರ್ನಾಟಕ ಎಂಬ ತನ್ನ ಘೋಷವಾಕ್ಯವನ್ನು ಉಳಿಸಿಕೊಂಡಿರುವ ಸಿಎಂ ಯಡಿಯೂರಪ್ಪ ಸರ್ಕಾರದ ಕಾರ್ಯ ನಿಜಕ್ಕೂ ಶ್ಲಾಘನೀಯ.

Tags: BSYCovid 19ISCKONkarnataka lockdownಇಸ್ಕಾನ್‌ಕೋವಿಡ್-19ಬಿಎಸ್ ಯಡಿಯೂರಪ್ಪಲಾಕ್‌ಡೌನ್‌
Previous Post

ಕರ್ನಾಟಕದಲ್ಲಿ ಕೋವಿಡ್‌-19ನಿಂದ ಗುಣಮುಖರಾದ 80 ಜನ

Next Post

ಮೋದಿ ಪ್ರಣೀತ ಅಪನಗದೀಕರಣದ ವೈಫಲ್ಯಕ್ಕೆ ಸಾಕ್ಷಿಯಾದ ಮಿತಿಮೀರಿದ ನಗದು ಹರಿವು

Related Posts

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
0

ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಿ: ಸಚಿವ ಸಂತೋಷ್‌ ಲಾಡ್ ಧಾರವಾಡ ಜುಲೈ.1: ರಾಜಕೀಯ ಬಿಟ್ಟು, ಸರಿಯಾಗಿ ಕೆಲಸ ಮಾಡಬೇಕು ಅಂದಾಗ ಶಾಲೆಗಳು ಉತ್ತಮ ಫಲಿತಾಂಶ ಪಡೆಯಲು...

Read moreDetails
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

July 1, 2025

Bangalore Stampede: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣ

July 1, 2025
Next Post
ಮೋದಿ ಪ್ರಣೀತ ಅಪನಗದೀಕರಣದ ವೈಫಲ್ಯಕ್ಕೆ ಸಾಕ್ಷಿಯಾದ ಮಿತಿಮೀರಿದ ನಗದು ಹರಿವು

ಮೋದಿ ಪ್ರಣೀತ ಅಪನಗದೀಕರಣದ ವೈಫಲ್ಯಕ್ಕೆ ಸಾಕ್ಷಿಯಾದ ಮಿತಿಮೀರಿದ ನಗದು ಹರಿವು

Please login to join discussion

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ
Top Story

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

by ಪ್ರತಿಧ್ವನಿ
July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌
Top Story

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
July 1, 2025
ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 
Top Story

ಸಿದ್ದರಾಮಯ್ಯ ಲಕ್ಕಿ ಲಾಟರಿ ಹೊಡೆದುಬಿಟ್ಟ.. ಅವನನ್ನು ಸೋನಿಯಾಗೆ ಭೇಟಿ ಮಾಡಿದಿದ್ದೇ ನಾನು : ಬಿ.ಆರ್ ಪಾಟೀಲ್ 

by Chetan
July 1, 2025
ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ
Top Story

ಸ್ಮಾರ್ಟ್‌ ಸಿಟಿ ಎಂಬ ಕನಸು ಮತ್ತು ವಾಸ್ತವ

by ನಾ ದಿವಾಕರ
July 1, 2025
ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ
Top Story

ದುಬೈನಲ್ಲಿ ರಾಸ್ ಅಲ್ ಖೈಮಾಹ್‌ʼದ ಆಡಳಿತಗಾರರನ್ನು ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
July 1, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಮತ್ತು ಶೈಕ್ಷಣಿಕ ಗುಣಮಟ್ಟ ಸುಧಾರಣೆಗೆ ಅಗತ್ಯ ಕ್ರಮ

July 1, 2025
ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

July 1, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada