• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಲಾಕ್‌ಡೌನ್ ಇಲ್ಲದೆ ಕೋವಿಡ್ ವಿರುದ್ದ ಹೋರಾಟ ಯಶಸ್ವಿ ಆಗಲಿದೆಯೇ?

by
July 22, 2020
in ಕರ್ನಾಟಕ
0
ಲಾಕ್‌ಡೌನ್ ಇಲ್ಲದೆ ಕೋವಿಡ್ ವಿರುದ್ದ ಹೋರಾಟ ಯಶಸ್ವಿ ಆಗಲಿದೆಯೇ?
Share on WhatsAppShare on FacebookShare on Telegram

ಕರೋನಾ ಸೋಂಕಿನಿಂದ ರಕ್ಷಿಸಿಕೊಳ್ಳಲು ಇಂದು ವಿಶ್ವಾದ್ಯಂತ ದೊಡ್ಡ ಹೋರಾಟವೇ ನಡೆಯುತ್ತಿದೆ. ನಿತ್ಯ ಟಿವಿಗಳಲ್ಲಿ ಇದನ್ನು ಮಹಾಮಾರಿ, ಭೀಕರ ಎಂದೆಲ್ಲ ಬಣ್ಣಿಸುತ್ತಿರುವುದರಿಂದ ಜನರ ಆತಂಕ ಮತ್ತಷ್ಟು ಹೆಚ್ಚಿದೆ. ಎಲ್ಲಕ್ಕಿಂತ ಹೆಚ್ಚಾಗಿ ಸೋಂಕಿತರ ಸಂಖ್ಯೆ ದೇಶಾದ್ಯಂತ ದಿನೇ ದಿನೇ ಹೆಚ್ಚಾಗುತ್ತಿದೆ. ಕಳೆದ ಮಾರ್ಚ್ 22 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ದೇಶಾದ್ಯಂತ ದಿಢೀರ್ ಲಾಕ್ ಡೌನ್ ಘೋಷಿಸಿದರು. ಇದರಿಂದ ಲಕ್ಷಾಂತರ ಜನ ಬಡವರು ಮತ್ತು ವಲಸೆ ಕಾರ್ಮಿಕರು ಸಂಕಷ್ಟಕ್ಕೀಡಾದರು. ನಂತರ ಲಾಕ್ ಡೌನ್ ತೆರವುಗೊಳಿಸಲಾಯಿತು. ನಂತರ ಅಂತರ ಜಿಲ್ಲಾ ಮತ್ತು ರಾಜ್ಯಗಳಲ್ಲಿ ಸಂಚರಿಸದಂತೆ ನಿರ್ಬಂಧವನ್ನೂ ಹೇರಲಾಯಿತು. ಕೊನೆಗೆ ಎಲ್ಲೆಡೆ ಲಾಕ್ ಡೌನ್ ತೆಗೆದು ಹಾಕಲಾಯಿತು.

ADVERTISEMENT

ನಮ್ಮ ರಾಜ್ಯದಲ್ಲಿ ಅತ್ಯಂತ ಹೆಚ್ಚು ಕರೋನಾ ಪ್ರಕರಣಗಳು ಈಗಲೂ ವರದಿ ಆಗುತ್ತಿರುವುದು ರಾಜಧಾನಿ ಬೆಂಗಳೂರಿನಿಂದ. ಈಗಲೂ ನಿತ್ಯ 1,500 ರಿಂದ 2,000 ದಷ್ಟು ಪಾಸಿಟಿವ್ ಪ್ರಕರಣಗಳು ವರದಿ ಆಗುತ್ತಿವೆ. ರಾಜಧಾನಿಯಲ್ಲಿ ಕರೋನಾ ಸೋಂಕು ಹೆಚ್ಚಾಗುತಿದ್ದಂತೆ ಲಾಕ್ ಡೌನ್ ಮಾಡಲು ಜನತೆಯ ಒತ್ತಾಯ ಇದ್ದರೂ ಸರ್ಕಾರ ಲಾಕ್ ಡೌನ್ ಮಾಡಲೇ ಇಲ್ಲ. ರಾಜ್ಯ ಸರ್ಕಾರ ಕಳೆದ ವಾರ ಬೆಂಗಳೂರಿನಲ್ಲಿ ಒಂದು ವಾರದ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದು ಇದಕ್ಕೆ ತಜ್ಞರ ಸಲಹೆ ಕಾರಣ ಎಂದೂ ಷರಾ ಹಾಕಿತ್ತು. ಅದು ಬುಧವಾರ ಬೆಳಿಗ್ಗೆ ಮುಕ್ತಾಯವಾಗಿದೆ. ಕರೋನಾ ಸೋಂಕಿನ ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ತಜ್ಞರ ಸಲಹೆಯಂತೆ ಲಾಕ್ ಡೌನ್ ನ್ನು ಇನ್ನೂ ಒಂದು ವಾರ ಮುಂದುವರಿಸುವುದು ಸೂಕ್ತವಾಗಿತ್ತು.

ಮುಖ್ಯಮಂತ್ರಿ ಬಿ ಯಸ್ ಯಡಿಯೂರಪ್ಪ ಅವರು ಯಾವುದೇ ಕಾರಣಕ್ಕೂ ಬುಧವಾರದಿಂದ ಲಾಕ್ ಡೌನ್ ಮುಂದುವರಿಸುವುದಿಲ್ಲ ಎಂದು ಖಡಕ್ ಆಗಿ ಹೇಳಿಬಿಟ್ಟಿದ್ದಾರೆ. ಅಷ್ಟೇ ಅಲ್ಲ ರಾಜ್ಯದ ಯಾವ ಜಿಲ್ಲೆಯಲ್ಲೂ ಲಾಕ್‌ ಡೌನ್‌ ಮಾಡೋದಿಲ್ಲ ಎಂದು ಘೋಷಿಸಿದ್ದಾರೆ. ಮೂರು ದಿನದ ಹಿಂದೆ ಮುಖ್ಯ ಮಂತ್ರಿಗಳು ಲಾಕ್ ಡೌನ್ ಮಾಡುವುದಿಲ್ಲ ಎಂದು ಹೇಳಿದ ಬೆನ್ನಲ್ಲೇ ಸಚಿವ ಸಂಪುಟದ ಮಂತ್ರಿಗಳು ಅದೇ ದಾಟಿಯಲ್ಲಿ ಲಾಕ್ ಡೌನ್ ಪರಿಹಾರವಲ್ಲ, ಲಾಕ್ ಡೌನ್ ಮಾಡುವುದಿಲ್ಲ ಎಂದು ಹೇಳುತಿದ್ದಾರೆ. ಕೇವಲ 3-4 ದಿನಗಳ ಹಿಂದೆ ಇದೇ ಮಂತ್ರಿಗಳು ಲಾಕ್ ಡೌನ್ ಮುಂದುವರೆಸುವ ಬಗ್ಗೆಯೂ ಮಾತಾಡಿದ್ದುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು.

ಬೆಂಗಳೂರಿನಲ್ಲಿ ಲಾಕ್ ಡೌನ್ ಮುಂದುವರೆಸಬೇಕೆಂದು ಪ್ರತಿಪಾದಿಸಿದುದಕ್ಕೆ ಬಿಬಿಎಂಪಿ ಅಯುಕ್ತ ಬಿ ಹೆಚ್ ಅನಿಲ್ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಹಿಂದಿದ್ದ ಆಯುಕ್ತ ಮಂಜುನಾಥ್ ಪ್ರಸಾದ್ ಅವರನ್ನೇ ತಂದು ಅಲ್ಲಿ ಕೂರಿಸಲಾಗಿದೆ. ಇಷ್ಟಕ್ಕೂ ಬೆಂಗಳೂರಿನಲ್ಲಿ ಲಾಕ್ ಡೌನ್ ಮಾಡುವುದಿಲ್ಲ ಎಂದು ಯಡಿಯೂರಪ್ಪ ಹಠ ಹಿಡಿದಿರುವುದು ಏಕೆ ಗೊತ್ತಾ? ಈಗಾಗಲೇ ಕೊರೋನ ಭೀತಿಯಿಂದಾಗಿ ಲಕ್ಷಾಂತರ ಮಂದಿ ತಮ್ಮ ತವರಿಗೆ ಹೊರಟು ಹೋಗಿದ್ದಾರೆ. ವ್ಯಾಪಾರ ವಹಿವಾಟು ನೆಲಕಚ್ಚಿದೆ. ಮನೆಗಳು, ಅಂಗಡಿಗಳ ಮುಂದೆ ಟು ಲೆಟ್ ಬೋರ್ಡು ಹೆಚ್ಚು ಹೆಚ್ಚು ಕಂಡು ಬರುತ್ತಿದೆ. ರಾಜ್ಯ ಸರ್ಕಾರ ನಡೆಸಲು ಒಂದು ತಿಂಗಳಿಗೆ ಬರೋಬ್ಬರಿ 6,500 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಹಣ ಬೇಕಾಗಿದೆ. ಇದರಲ್ಲಿ ರಾಜ್ಯ ಸರ್ಕಾರದ ಸಾಲದ ಕಂತು, ಸಾಲದ ಬಡ್ಡಿ ಏನೂ ಸೇರಿಲ್ಲ. ಇದು ಬರೇ ಮಂತ್ರಿಗಳ , ಸರ್ಕಾರಿ ನೌಕರರ ಸಂಬಳ ಮತ್ತು ಕಟ್ಟಡ ನಿರ್ವಹಣೆಗೆ ಮಾತ್ರ ಸಾಕಾಗುತ್ತದೆ. ರಾಜ್ಯ ಸರ್ಕಾರಕ್ಕೆ ತೆರಿಗೆ ಮೂಲಕ ಬರುವ ಒಟ್ಟು ಆದಾಯದಲ್ಲಿ ಬೆಂಗಳೂರಿನ ಪಾಲು ಶೇಕಡಾ 60 ರಷ್ಟಿದೆ. ಸರ್ಕಾರಕ್ಕೆ ವಿವಿಧ ತೆರಿಗೆಗಳ ಮೂಲಕ ಹರಿದು ಬರುತ್ತಿದ್ದ ಹಣ ಈಗ ಬರುತ್ತಿಲ್ಲ. ಹಾಗಾಗಿ ಯಡಿಯೂರಪ್ಪ ಲಾಕ್ ಡೌನ್ ಮಾಡುವುದಿಲ್ಲ ಎಂದೇ ಘೋಷಿಸಿಬಿಟಿದ್ದಾರೆ.

ಪ್ರತಿಧ್ವನಿಗೆ ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇದರಿಂದಾಗಿ ಜನರ ಆರೋಗ್ಯ ರಿಸ್ಕ್ ಅಪರಿಮಿತವಾಗಿದೆ. ಸೋಂಕನ್ನು ತಡೆಗಟ್ಟಬೇಕಾದರೆ ಮೊದಲು ಸೋಂಕು ಹರಡುವಿಕೆಯನ್ನು ತಡೆಗಟ್ಟಬೇಕಿದೆ. ಅಂತರ ರಾಜ್ಯ ಮತ್ತು ಅಂತರ ಜಿಲ್ಲೆಗಳ ಗಡಿಗಳಲ್ಲಿ ಜನರ ಸರಾಗ ಓಡಾಟಕ್ಕೆ ನಿರ್ಬಂದ ಹೇರಬೇಕಾಗಿದೆ. ಹೊರಗಿನಿಂದ ಬರುವವರ ಕೈಗೆ ಕಡ್ಡಾಯ ಕ್ವಾರಂಟೈನ್ ಸೀಲ್ ಹಾಕಬೇಕಿದೆ. ನಿತ್ಯ ಓಡಾಡುವವರಿಗೆ ಪಾಸ್ ನೀಡಬೇಕಾಗಿದೆ. ಗೂಡ್ಸ್ ವಾಹನಗಳು ಮತ್ತು ಅದರೊಳಗಿರುವವರಿಗೆ ಪಾಸ್ ನೀಡಬೇಕಾಗಿದೆ. ಇಂದು ಎಲ್ಲ ಜಿಲ್ಲೆಗಳಲ್ಲೂ ಕೊರೋನ ಸೋಂಕು ಹೆಚ್ಚಾಗುತ್ತಿರುವುದು ಹೊರಗಿನಿಂದ ಬಂದವರಿಂದಾಗಿ ಮಾತ್ರ ಎಂದು ನಾವು ಮರೆಯಬಾರದು. ಆದರೆ ಸರ್ಕಾರ ಈ ದಿಸೆಯಲ್ಲಿ ಯೋಚನೆಯನ್ನೇ ಮಾಡುತ್ತಿಲ್ಲ . ಜತೆಗೇ ಲಾಕ್ ಡೌನ್ ಮಾಡೋದಿಲ್ಲ ಎಂದೂ ಹೇಳುತ್ತಿದೆ. ನಮ್ಮ ನೆರೆಯ ಕೇರಳ ರಾಜ್ಯವೂ ಕೂಡ ತಮ್ಮ ಅಂತರರಾಜ್ಯ ಗಡಿಗಳನ್ನು ಬಂದ್ ಮಾಡಿ ಸೋಂಕು ಹರಡುವುದನ್ನು ತಡೆಗಟ್ಟಿದೆ. ಈ ವಿಧಾನವನ್ನು ರಾಜ್ಯವೂ ಅನುಸರಿಸಬೇಕು. ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಭಾಗಗಳಲ್ಲೂ ಕಂಟೇನ್ಮೆಂಟ್ ಝೋನ್ ಗಳ ಸಂಖ್ಯೆ ಜಾಸ್ತಿಯೇ ಆಗುತ್ತಿದೆ. ಮಂಗಳವಾರ ಸಂಜೆ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಯಡಿಯೂರಪ್ಪ ತಮ್ಮ ನೀರಸ ಭಾಷಣದಲ್ಲಿ ಸೋಂಕು ತಡೆಗೆ 5 ಸೂತ್ರ ಕೊಟ್ಟಿದ್ದಾರೆ. ಇದರಲ್ಲಿ ಹೊಸತೇನೂ ಇಲ್ಲ ಮೊದಲಿನಿಂದ ಕೇಂದ್ರ ಸರ್ಕಾರದ ಅರೋಗ್ಯ ಇಲಾಖೆ ನೀಡಿದ ಸೂಚನೆಗಳೇ ಇವು.

ಆರ್ಥಿಕ ಸಂಪನ್ಮೂಲ ಕ್ರೋಢೀಕರಣಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಯಡಿಯೂರಪ್ಪ ಅವರ ಮಾತಿನಲ್ಲೇ ಸ್ಪಷ್ಟವಾಗಿದೆ. ಕನಿಷ್ಟ ಪಕ್ಷ 15 ದಿನ ಸತತವಾಗಿ ಲಾಕ್ ಡೌನ್ ಮಾಡಿದರೆ ಮಾತ್ರ ಕರೋನ ಸೋಂಕು ಹರಡುವ ಸರಪಳಿಯನ್ನು ತುಂಡರಿಸಬಹುದೆಂದು ತಜ್ಞರ ಅಭಿಮತವಾಗಿದೆ. ಈಗಾಗಲೇ ರಾಜ್ಯಾದ್ಯಂತ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದ್ದರೂ ಜನರ ಓಡಾಟ ಮಾತ್ರ ನಿಂತಿಲ್ಲ. ಸರ್ಕಾರದಿಂದ ಪೆಟ್ರೋಲ್ ದರ ಏರಿಸಿಟ್ಟಿದ್ದರೂ ಜನರ ಓಡಾಟಕ್ಕೆ ಕಡಿವಾಣ ಬಿದ್ದಿಲ್ಲ. ಕೇಂದ್ರ ಆರೋಗ್ಯ ಇಲಾಖೆಯ ಕಾರ್ಯದರ್ಶಿಯವರು ಇಂದು ಹೊರಡಿಸಿದ ಸುತ್ತೋಲೆ ಪ್ರಕಾರ ಕವಾಟವುಳ್ಳ N95 ಮುಖ ಗವಸಿನಿಂದ ಕೊರೋನ ಸೋಂಕು ತಡೆ ಸಾದ್ಯವಾಗದು ಮತ್ತು ಎಲ್ಲರೂ ಹತ್ತಿ ಬಟ್ಟೆಯ ಮಾಸ್ಕ್ ಧರಿಸುವ ಮೂಲಕ ಸೋಂಕು ತಡೆಗಟ್ಟಲು ಸೂಚಿಸಿದ್ದಾರೆ. ಈ ನಡುವೆ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯಿಂದಾಗಿ ಆಸ್ಪತ್ರೆಗಳಲ್ಲಿ ಬೆಡ್ ಖಾಲಿ ಸಿಗದೆ ರೋಗಿಗಳು ಸಾವನ್ನಪ್ಪುತ್ತಿರುವ ವರದಿಗಳು ಬರುತ್ತಿವೆ. ಆದರೆ ದೆಹಲಿಯಲ್ಲಿ ಕೋವಿಡ್ ಸೋಂಕಿತರಿಗಾಗಿ ಮೀಸಲಿರಿಸಿದ್ದ ಬೆಡ್ ಗಳಲ್ಲಿ ಶೇಕಡಾ 70 ಖಾಲಿ ಇವೆ ಎಂಬ ವರದಿ ಬಂದಿದೆ.

ಈ ನಡುವೆ ಕರೋನಾ ಸೋಂಕಿಗೆ ಸದ್ಯ ಕೆಲವೆಡೆಗಳಲ್ಲಿ ಬಳಸುತ್ತಿರುವ ರೆಮ್ಡೆಸಿವಿರ್ ಲಸಿಕೆ ಕಾಳಸಂತೆಯಲ್ಲಿ 30-40 ಸಾವಿರ ರೂಪಾಯಿಗಳಿಗೆ ಮಾರಾಟ ಆಗುತ್ತಿರುವ ಸುದ್ದಿ ಬಂದಿದೆ. ಫೈಜರ್, ಮೊಡೆರ್ನಾ, ಆಕ್ಸ್ಫರ್ಡ್ ಅಸ್ಟ್ರಾ ಜೆನೆಕಾ ಮುಂತಾದ ಪ್ರಮುಖ ಸಂಶೋಧಾನಾಲಯಗಳು ಕರೋನಾ ಲಸಿಕೆ ಕಂಡು ಹಿಡಿದಿದ್ದು ಟ್ರಯಲ್ ಅಂತಿಮ ಹಂತದಲ್ಲಿದೆ. ಬಹುತೇಕ ದೇಶಗಳಲ್ಲಿ ಲಸಿಕೆ ಕಂಡು ಹಿಡಿಯಲಾಗುತ್ತಿದೆ. ಬಹುಶಃ ಸೆಪ್ಟೆಂಬರ್ ತಿಂಗಳಿನಲ್ಲಿ ಕರೋನ ನಿರೋಧಿಸುವ ಲಸಿಕೆ ಮಾರುಕಟ್ಟೆಗೆ ಬರಬಹುದು. ಆಗ ಈಗಿರುವ ಸಾರ್ಸ್, ಹೆಚ್1ಎನ್1, ಡೆಂಗ್ಯು ರೀತಿಯಲ್ಲೇ ಕರೋನಾ ಕೂಡ ಒಂದು ಖಾಯಿಲೆಯಾಗಿ ಉಳಿದುಕೊಳ್ಳಬಹುದು. ಅಲ್ಲಿಯವರೆಗೆ ರಾಜ್ಯ ಸರ್ಕಾರ ಜನಹಿತ ಕಾಪಾಡಲೇಬೇಕಿದೆ.

Tags: ಕರೋನಾಕರ್ನಾಟಕಬಿ ಎಸ್ ಯಡಿಯೂರಪ್ಪಲಾಕ್‌ಡೌನ್‌
Previous Post

ರಾಜಸ್ಥಾನ: ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಮೊರೆ ಹೋಗಲಿರುವ ಸರ್ಕಾರ

Next Post

IT, BPO ಉದ್ಯೋಗಿಗಳಿಗೆ ವರ್ಷಾಂತ್ಯದವರೆಗೆ ʼಮನೆಯಿಂದಲೇ ಕೆಲಸʼ

Related Posts

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
0

ಭಾರತೀಯ ಚಿತ್ರರಂಗವನ್ನು ಕನ್ನಡದತ್ತ ತಿರುಗಿ ನೋಡುವಂತೆ ಮಾಡಿರುವವರ ಪೈಕಿ ನಟ ರಾಕಿಂಗ್‌ ಸ್ಟಾರ್‌ ಯಶ್‌ ಕೂಡ ಒಬ್ಬರು. ಅವರ ತಾಯಿ ಪುಷ್ಪ ಅರುಣ್ ಕುಮಾರ್ ತಮ್ಮದೇ ಪಿಎ...

Read moreDetails
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

June 20, 2025
Next Post
IT

IT, BPO ಉದ್ಯೋಗಿಗಳಿಗೆ ವರ್ಷಾಂತ್ಯದವರೆಗೆ ʼಮನೆಯಿಂದಲೇ ಕೆಲಸʼ

Please login to join discussion

Recent News

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 
Top Story

ಡಿಕೆಶಿ ಬಳಿ ಬಟ್ಟೆ ಕೊಡಿಸಿಕೊಳ್ಳುವ ದಾರಿದ್ರ್ಯ ನಂಗಿಲ್ಲ – ಅವನ ಕೊಳ್ಳೆ ಹೊಡೆದ ದುಡ್ಡು ಯಾರಿಗೆ ಬೇಕು..? : ಹೆಚ್.ಡಿ.ಕೆ 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada