• Home
  • About Us
  • ಕರ್ನಾಟಕ
Monday, January 19, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಲಾಕ್ ಡೌನ್ ತೆರವುಗೊಳಿಸಬೇಕೋ ಬೇಡವೋ ಎಂಬ ಜಿಜ್ಞಾಸೆಗೆ ಸಿಲುಕಿರುವ ಕೇಂದ್ರ ಸರ್ಕಾರ

by
April 8, 2020
in ದೇಶ
0
ಲಾಕ್ ಡೌನ್ ತೆರವುಗೊಳಿಸಬೇಕೋ ಬೇಡವೋ ಎಂಬ ಜಿಜ್ಞಾಸೆಗೆ ಸಿಲುಕಿರುವ ಕೇಂದ್ರ ಸರ್ಕಾರ
Share on WhatsAppShare on FacebookShare on Telegram

ಒಂದು ಕಡೆ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು ಲಾಕ್ ಡೌನ್ ಮುಂದುವರೆಯಲಿ ಎಂದಿದ್ದಾರೆ. ಇನ್ನೊಂದೆಡೆ ಕರೋನಾ ಸೋಂಕು ಹರಡುವಿಕೆ ಸಂಪೂರ್ಣವಾಗಿ ನಿಯಂತ್ರಣಕ್ಕೆ ಸಿಗುತ್ತಿಲ್ಲ. ಮತ್ತೊಂದೆಡೆ ಲಾಕ್ ಡೌನ್ ಮುಂದುವರೆಸಿದರೆ ದೇಶದ ಆರ್ಥಿಕತೆ ಮೇಲೆ ಭಾರೀ ಪೆಟ್ಟುಬೀಳಬಹುದು ಎಂಬ ಆತಂಕ ಕಾಡುತ್ತಿದೆ. ಇದೆಲ್ಲದರ ಪರಿಣಾಮವಾಗಿ ಲಾಕ್ ಡೌನ್ ಅನ್ನು ತೆರವುಗೊಳಿಸಬೇಕೋ ಅಥವಾ ಮುಂದುವರೆಸಬೇಕೋ ಎಂಬ ಬಗ್ಗೆ ಕೇಂದ್ರ ಸರ್ಕಾರ ಜಿಜ್ಞಾಸೆಗೆ ಸಿಲುಕಿದೆ.

ADVERTISEMENT

ಈಗಾಗಲೇ 21 ದಿನ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಲಾಕ್ ಡೌನ್ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿದೆ. ಆದರೂ ಕರೋನಾ ಸೋಂಕು ಹರಡುವಿಕೆ ಮಾತ್ರ ನಿಯಂತ್ರಣ ಆಗುತ್ತಿಲ್ಲ‌. ಬದಲಿಗೆ ದಿನದಿಂದ ದಿನಕ್ಕೆ ತ್ವರಿತಗೊಳ್ಳುತ್ತಿದೆ‌. ಇದರಿಂದಾಗಿ ಸಹಜವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಆತಂಕಕ್ಕೀಡಾಗಿವೆ. ಇದೇ ಹಿನ್ನೆಲೆಯಲ್ಲಿ ಕರೋನಾ ಸೋಂಕು ವೇಗವಾಗಿ ಹರಡುತ್ತಿರುವ ರಾಜ್ಯಗಳಾದ ಮಹಾರಾಷ್ಟ್ರ, ರಾಜಸ್ಥಾನ, ಉತ್ತರ ಪ್ರದೇಶ, ಜಾರ್ಖಂಡ್, ಛತ್ತೀಸ್ಘಡ, ಅಸ್ಸಾಂ ಮತ್ತು ತೆಲಾಂಗಣ ರಾಜ್ಯಗಳು ಲಾಕ್ ಡೌನ್ ವಿಸ್ತರಣೆ ಮಾಡುವುದೇ ಒಳಿತು ಎಂಬ ತೀರ್ಮಾನಕ್ಕೆ ಬಂದಿವೆ.

ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಪ್ರಧಾನಿ ಮೋದಿ ಜೊತೆ ದೂರವಾಣಿಯಲ್ಲಿ ಮಾತನಾಡಿ ಲಾಕ್ ಡೌನ್ ಅನ್ನು ಮುಂದುವರೆಸಿ ಎಂದು ಸ್ಪಷ್ಟದನಿಯಲ್ಲಿ ತಿಳಿಸಿದ್ದಾರೆ. ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಭಗೇಲ್, ‘ಲಾಕ್ ಡೌನ್ ಮುಂದುವರೆಸಿ, ಕಡೆಪಕ್ಷ ಅಂತರ ರಾಜ್ಯ ವಾಹನ ಸಂಚಾರವನ್ನಾದರೂ ನಿಷೇಧಿಸಿ’ ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಲಾಕ್ ಡೌನ್ ಮುಂದುವರೆಸಿ ಅಂತಾ ಬಾಯಿ ಬಿಟ್ಟು ಹೇಳುತ್ತಿರುವವರೆಲ್ಲಾ ಬಿಜೆಪಿಯೇತರ ಪಕ್ಷಗಳ ಆಳ್ವಿಕೆ ಇರುವ ರಾಜ್ಯಗಳ ಮುಖ್ಯಮಂತ್ರಿಗಳು. ಇವರೊಂದಿಗೆ ದೇಶದ ದೊಡ್ಡ ರಾಜ್ಯವಾದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದನಿಗೂಡಿಸಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ‘ಏಪ್ರಿಲ್ 14ರಂದು ಪರಿಸ್ಥಿತಿ ನೋಡಿಕೊಂಡು ಲಾಕ್ ಡೌನ್ ಅನ್ನು ಮುಂದುವರೆಸಬೇಕೋ ಅಥವಾ ಬೇಡವೋ ಎಂಬುದನ್ನು ನಿರ್ಧರಿಸಲಾಗುವುದು’ ಎಂದು ಹೇಳುವ ಮೂಲಕ ಅಡ್ಡಗೋಡೆ ಮೇಲೆ ದೀಪ ಇಟ್ಟಿದ್ದಾರೆ. ಬಿಜೆಪಿ ಆಡಳಿತ ಇರುವ ಇತರೆ ರಾಜ್ಯಗಳ ಮುಖ್ಯಮಂತ್ರಿಗಳೂ ಏನನ್ನೂ ಹೇಳದೆ ತಮ್ಮ ‌ನಿಲುವನ್ನು‌ ಕತ್ತಲಲ್ಲಿ ಇಟ್ಟಿದ್ದಾರೆ. ದಿನದಿಂದ ದಿನಕ್ಕೆ ಸೋಂಕು ಪೀಡಿತರ ಸಂಖ್ಯೆ ವೇಗವಾಗಿ ಬೆಳೆಯುತ್ತಿರುವ ತಮಿಳುನಾಡಿನ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ, ಕ್ವಾರಂಟೈನ್ ಅವಧಿಯನ್ನೇ 14 ದಿನದಿಂದ 28 ದಿನಗಳಿಗೆ ವಿಸ್ತರಿಸಿ ಲಾಕ್ ಡೌನ್ ವಿಸ್ತರಣೆಯ ಸುಳಿವು ನೀಡಿದ್ದಾರೆ. ನಿರ್ದಾಕ್ಷಿಣ್ಯ ನಿಲುವು ಹೊಂದುವ ಛಾತಿಯುಳ್ಳ ಕೇರಳ, ದೆಹಲಿ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿಗಳು ಇನ್ನೂ ಏನನ್ನೂ ಹೇಳಿಲ್ಲ.

ಸ್ಥಳೀಯ ಮಟ್ಟದಲ್ಲಿ ಸಮಸ್ಯೆಯನ್ನು ಹುಟ್ಟಡಗಿಸಬೇಕಿರುವ ಮುಖ್ಯಮಂತ್ರಿಗಳು ಭಿನ್ನ ನಿಲುವು ಹೊಂದಿರುವುದರಿಂದ ಕೇಂದ್ರ ಸರ್ಕಾರ ಏನೊಂದು ತೀರ್ಮಾನಕ್ಕೂ ಬರಲು ಸಾಧ್ಯವಾಗುತ್ತಿಲ್ಲ‌. ಬಿಜೆಪಿ ಆಡಳಿತ ರಾಜ್ಯಗಳ ಮುಖ್ಯಮಂತ್ರಿಗಳನ್ನು ಹೇಗೋ ಮನವೊಲಿಸಬಹುದು, ಅಥವಾ ಬಾಯಿ ಮುಚ್ಚಿಸಬಹುದು. ಆದರೆ ಉಳಿದವರನ್ನು ಈ ಹಂತದಲ್ಲಿ ಏನನ್ನೂ ಮಾಡಲು ಸಾಧ್ಯವಿಲ್ಲ. ರಾಜ್ಯಗಳ ಸಲಹೆ ಪಡೆಯದೆ ಏಕಾಏಕಿ ನಿರ್ಧಾರ ತೆಗೆದುಕೊಳ್ಳುವ ಧೈರ್ಯವನ್ನು ಕೇಂದ್ರ ಸರ್ಕಾರ ತೋರಲಾರದು.

ಕೇಂದ್ರ ಸರ್ಕಾರದ ರಚಿಸಿರುವ ವಿವಿಧ ಕಮಿಟಿಗಳು ಕೂಡ ಲಾಕ್ ಡೌನ್ ಅನ್ನು ಮುಕ್ತಾಯಗೊಳಿಸಬೇಕು ಅಥವಾ ಮುಂದುವರೆಸಬೇಕು ಎಂಬ ಸ್ಪಷ್ಟ ಮಾಹಿತಿ ನೀಡಿಲ್ಲ. ಈ ಕಮಿಟಿಗಳ ಉಸ್ತುವಾರಿ ನೋಡಿಕೊಳ್ಳುತ್ತಿರುವ ಕ್ಯಾಬಿನೆಟ್ ಕಾರ್ಯದರ್ಶಿ ಅಜಯ್ ಭಲ್ಲಾ ನಡೆಸಿದ ಸಭೆಯಲ್ಲಿ ಲಾಕ್ ಡೌನ್ ಬಳಿಕ ಯಾವುದೇ ತೊಂದರೆ ಇಲ್ಲದ, ಸೋಂಕು ಕಾಣಿಸಿಕೊಳ್ಳದ ಪ್ರದೇಶಗಳನ್ನು ಹಸಿರು ವಲಯವೆಂದು, ಕನಿಷ್ಠ ಪ್ರಕರಣಗಳು ದಾಖಲಾಗಿರುವ ಪ್ರದೇಶಗಳನ್ನು ಹಳದಿ ವಲಯವೆಂದು ಮತ್ತು ಗರಿಷ್ಠ ಸಂಖ್ಯೆಯಲ್ಲಿ ಸೋಂಕು ಕಾಣಸಿಕೊಂಡಿರುವ ಪ್ರದೇಶಗಳನ್ನು ಕೆಂಪು ವಲಯ ಎಂದು ಗುರುತಿಸಬೇಕು. ಆಯಾ ವಲಯಗಳಿಗೆ ಅನುಗುಣವಾಗಿ ಲಾಕ್ ಡೌನ್ ತೆರವು ಮಾಡುವ, ನಿಯಮಗಳನ್ನು ಸಡಿಲಿಸುವ, ವಾರದ ಬೇರೆ ಬೇರೆ ದಿನಗಳಲ್ಲಿ ಅಗಂಡಿ ತೆಗೆಯುವ, ಅಥವಾ ದಿನದ ಕೆಲವು ಗಂಟೆ ಮಾತ್ರ ಅಂಗಡಿ ತೆಗೆಯುವ, ಕಾರ್ಮಿಕರ ಓಡಾಟಕ್ಕೆ ಬಸ್ ರೈಲು ಸಂಚಾರ ಆರಂಭಿಸುವ ಪ್ರತ್ಯೇಕ ನಿರ್ಧಾರಗಳನ್ನು ಮಾಡಬೇಕು ಎಂದು ಸಲಹೆ ನೀಡಿದೆ. ಅಂತರಾಷ್ಟ್ರೀಯ ವಿಮಾನಗಳ ಹಾರಾಟ ಮತ್ತಷ್ಟು ದಿನ ನಿಷೇಧಿಸುವಂತೆ ಶಿಫಾರಸು ಮಾಡಿದೆ.

ಇದಲ್ಲದೆ ಲಾಕ್ ಡೌನ್ ಮುಂದುವರೆಸಿದರೆ ದೇಶದ ಆರ್ಥಿಕತೆ ಮೇಲೆ ಭಾರೀ ಹೊಡೆತ ಬೀಳಲಿದೆ ಎಂದು‌ ಆರ್ಥಿಕ ತಜ್ಞರು ಸಲಹೆ ನೀಡಿದ್ದಾರೆ. ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ನೀತಿ ಆಯೋಗಗಳು‌ ಕೂಡ ಕೊರೋನಾ ಸೋಂಕು ಹರಡುವುದನ್ನು ತಡೆಯಲು ಬೇರಾವುದಾದರೂ ರೀತಿಯಲ್ಲಿ ಪ್ರಯತ್ನಿಸಿ, ಲಾಕ್ ಡೌನ್ ಅನ್ನು ಮಾತ್ರ ಹೇರಬೇಡಿ. ಲಾಕ್ ಡೌನ್ ಮತ್ತೂ ಮುಂದುವರೆದರೆ ಆರ್ಥಿಕತೆ ಸದ್ಯಕ್ಕೆ ಚೇತರಿಸಿಕೊಳ್ಳಲಾಗದ ಸ್ಥಿತಿ ತಲುಪಲಿದೆ ಎಂಬ ಮಾತುಗಳನ್ನು ಹೇಳಿವೆ.

ಹೀಗೆ ನಿರ್ಣಾಯಕರಾದವರೆಲ್ಲರೂ ಭಿನ್ನ ಭಿನ್ನ ಅಭಿಪ್ರಾಯ ವ್ಯಕ್ತಪಡಿಸುತ್ತಿರುವುದರಿಂದ ಕೇಂದ್ರ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಸ್ವತಃ ಕೇಂದ್ರ ಸರ್ಕಾರವೇ ಜಿಜ್ಞಾಸೆಯಲ್ಲಿ ಮುಳುಗಿಹೋಗಿರುವುದರಿಂದ ಲಾಕ್ ಡೌನ್ ಮುಂದುವರೆಯುವುದೋ ಮುಕ್ತಾಯವಾಗುವುದೋ ಎಂಬುದನ್ನು ಹೇಳಲು ಸಾಧ್ಯವಿಲ್ಲ. ಅದೇ ರೀತಿ ಲಾಕ್ ಡೌನ್ ಅನ್ನು ಸಂಪೂರ್ಣವಾಗಿ ಅಲ್ಲದಿದ್ದರೂ ಕೆಲವು ಷರತ್ತುಗಳನ್ನು ವಿಧಿಸಿ ತೆರವುಗೊಳಿಸಬಹುದು. ಕೆಲವು ಪ್ರದೇಶಗಳಲ್ಲಿ ಮಾತ್ರ ಮುಂದುವರೆಸಬಹುದು. ಒಟ್ಟಿನಲ್ಲಿ ಈಗ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ನಿರ್ಧಾರ ಅತ್ಯಂತ ಮಹತ್ವವೂ ನಿರ್ಣಾಯಕವೂ ಆಗಿರಲಿದೆ. ಆ ತೀರ್ಮಾನದ ಮೇಲೆ ಕರೋನಾ ಸೋಂಕು ಹರಡುವಿಕೆ ಮತ್ತು ದೇಶದ ಆರ್ಥಿಕತೆ ನಿರ್ಧಾರವಾಗಲಿದೆ.

Tags: coronavirusCovid 19Lock Downಕೇಂದ್ರ ಸರ್ಕಾರಲಾಕ್ ಡೌನ್
Previous Post

ಬಡ ಕಾರ್ಮಿಕ ಮಹಿಳೆಯನ್ನು ಬಲಿ ಪಡೆದ ಲಾಕ್‌ಡೌನ್‌

Next Post

ಕರೋನಾ ಸೋಂಕಿನಿಂದ ಪಾರಾಗಲು ಯಾವ ದೇಶಗಳು ಎಷ್ಟೆಷ್ಟು ಹಣ ಖರ್ಚು ಮಾಡುತ್ತಿದೆ?

Related Posts

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್
ಇದೀಗ

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

by ಪ್ರತಿಧ್ವನಿ
January 18, 2026
0

ಬೆಂಗಳೂರು : ರಾಜ್ಯದ ಅಬಕಾರಿ ಇಲಾಖೆಯಲ್ಲಿ ಕೇಳಿ ಬಂದಿರುವ ಲಂಚ ಹಗರಣದಲ್ಲಿ ಬೆಂಗಳೂರು ನಗರ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು...

Read moreDetails
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Next Post
ಕರೋನಾ ಸೋಂಕಿನಿಂದ ಪಾರಾಗಲು ಯಾವ ದೇಶಗಳು ಎಷ್ಟೆಷ್ಟು ಹಣ ಖರ್ಚು ಮಾಡುತ್ತಿದೆ?

ಕರೋನಾ ಸೋಂಕಿನಿಂದ ಪಾರಾಗಲು ಯಾವ ದೇಶಗಳು ಎಷ್ಟೆಷ್ಟು ಹಣ ಖರ್ಚು ಮಾಡುತ್ತಿದೆ?

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕುಂದಾಪುರ ಇಎಸ್‌ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಕ್ರಮ: ಸಚಿವ ಸಂತೋಷ್‌ ಲಾಡ್‌

ಗಿಗ್‌ ಕಾರ್ಮಿಕರ ಸುರಕ್ಷತೆಯ ಬಗ್ಗೆ ಸಚಿವ ಲಾಡ್‌ ಕಳವಳ : 10 ನಿಮಿಷದ ಡೆಲಿವರಿ ಸ್ಥಗಿತದ ಕಾರ್ಮಿಕರ ಬೇಡಿಕೆಗೆ ಸ್ಪಂದನೆ

January 18, 2026
“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

“ನನ್ನ ಅನುಪಸ್ಥಿಯಲ್ಲಿ ಜನರ ಕಷ್ಟ, ಸುಖಗಳನ್ನು ಆಲಿಸುವವರು ಡಾ.ಯತೀಂದ್ರ”

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada