• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ವಾಕ್ ಸ್ವಾತಂತ್ರ್ಯವನ್ನು ನಿಗ್ರಹಿಸಲು ಸರ್ಕಾರ ʼಉಕ್ಕಿನ ಹಿಡಿತʼ ಬಳಸುತ್ತಿದೆ: ನ್ಯಾ. ಲೋಕೂರ್ ಕಳವಳ

by
September 14, 2020
in ದೇಶ
0
ವಾಕ್ ಸ್ವಾತಂತ್ರ್ಯವನ್ನು ನಿಗ್ರಹಿಸಲು ಸರ್ಕಾರ ʼಉಕ್ಕಿನ ಹಿಡಿತʼ ಬಳಸುತ್ತಿದೆ: ನ್ಯಾ. ಲೋಕೂರ್ ಕಳವಳ
Share on WhatsAppShare on FacebookShare on Telegram

ದೇಶದ್ರೋಹ ಕಾನೂನುಗಳು, ಕಾನೂನುಬಾಹಿರ ಚಟುವಟಿಕೆಗಳ ತಡೆಗಟ್ಟುವಿಕೆ ಕಾಯ್ದೆ (UAPA) ಮತ್ತು ಭಿನ್ನಾಭಿಪ್ರಾಯವನ್ನು ವ್ಯಕ್ತಪಡಿಸಿದ್ದಕ್ಕಾಗಿ ಬಂಧಿಸುತ್ತಿರು ಕುರಿತು ಗಂಭೀರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮದನ್ ಬಿ ಲೋಕೂರ್, “ಸರ್ಕಾರವು, ವಾಕ್‌ಸ್ವಾತಂತ್ರ್ಯವನ್ನು ನಿಗ್ರಹಿಸಲು ಉಕ್ಕಿನ ಹಿಡಿತ ಬಳಸುತ್ತಿದೆ” ಎಂದಿದ್ದಾರೆ.

ADVERTISEMENT

ಪ್ರಶಾಂತ್ ಭೂಷಣ್ ನ್ಯಾಯಾಂಗ ನಿಂದನೆ ಪ್ರಕರಣದ ಹಿನ್ನೆಲೆಯಲ್ಲಿ ಕ್ಯಾಂಪೇನ್ ಫಾರ್ ಜ್ಯುಡಿಶಿಯಲ್ ಅಕೌಂಟೆಬಿಲಿಟಿ ಅಂಡ್ ರಿಫಾರ್ಮ್ಸ್ (CJAR) ಮತ್ತು ಸ್ವರಾಜ್ ಅಭಿಯಾನ್ ಆಯೋಜಿಸಿದ್ದ “ವಾಕ್ ಸ್ವಾತಂತ್ರ್ಯ ಮತ್ತು ನ್ಯಾಯಾಂಗ” ಕುರಿತು ವರ್ಚುವಲ್ ಸಂವಾದದಲ್ಲಿ ನ್ಯಾಯಾಧೀಶರು ಈ ಮಾತು ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

“ಇದ್ದಕ್ಕಿದ್ದಂತೆ ಜನರ ಮೇಲೆ ನೀವು ದೇಶದ್ರೋಹದ ಅಡಿಯಲ್ಲಿ ಹಲವಾರು ಪ್ರಕರಣಗಳನ್ನು ವಿಧಿಸುತ್ತಿದ್ದೀರಿ. ಏನನ್ನಾದರೂ ಹೇಳುವ ಸಾಮಾನ್ಯ ನಾಗರಿಕರಿಗೆ ದೇಶದ್ರೋಹದ ಆರೋಪ ಹೊರಿಸಲಾಗುತ್ತಿದೆ” ಎಂದು ನ್ಯಾಯಮೂರ್ತಿ ಲೋಕೂರ್ ಹೇಳಿದ್ದಾರೆ. ಈ ವರ್ಷದಲ್ಲಿ ಈಗಾಗಲೇ ಸುಮಾರು 70 ದೇಶದ್ರೋಹ ಪ್ರಕರಣಗಳಿವೆ, ಅಲ್ಲದೆ ಕಳೆದ ವರ್ಷ ಈ ಸಂಖ್ಯೆ ಸುಮಾರು 90 ಆಗಿತ್ತು ಎನ್ನುವುದನ್ನೂ ಅವರು ಉಲ್ಲೇಖಿಸಿದ್ದಾರೆ.

“ಸರ್ಕಾರವು, ವಾಕ್‌ಸ್ವಾತಂತ್ರ್ಯವನ್ನು ನಿಗ್ರಹಿಸಲು ಉಕ್ಕಿನ ಹಿಡಿತ ಬಳಸುತ್ತಿದೆ, ಇದು ಜನರ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅತಿಯಾದ ಪ್ರತಿಕ್ರಿಯೆ ಎಂದು ನಾನು ಭಾವಿಸುತ್ತೇನೆ” ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ದೇಶದ್ರೋಹ ಕಾನೂನಿನ ಬಳಕೆಯ ಹೊರತಾಗಿ, ಸರ್ಕಾರವು ವಾಕ್‌ ಸ್ವಾತಂತ್ರ್ಯವನ್ನು ತಡೆಯಲು ಬಳಸುವ ಮತ್ತೊಂದು ವಿಧಾನವೆಂದರೆ ʼವಿಮರ್ಶಾತ್ಮಕ ಅಭಿಪ್ರಾಯಗಳನ್ನು ನಕಲಿ ಸುದ್ದಿಗಳನ್ನು ಹರಡುತ್ತಿದೆ ಎಂದು ಆರೋಪಿಸುವʼ ಮೂಲಕ ಅವುಗಳನ್ನು ತಳ್ಳಿಹಾಕುವುದು ಎಂದು ನ್ಯಾಯಮೂರ್ತಿ ಲೋಕೂರ್ ಹೇಳಿದ್ದಾರೆ. ಕೋವಿಡ್ ಪ್ರಕರಣಗಳು, ವೆಂಟಿಲೇಟರ್‌ಗಳ ಕೊರತೆ ಇತ್ಯಾದಿಗಳ ಬಗ್ಗೆ ಪತ್ರಕರ್ತರು ವರದಿ ಮಾಡಿರುವುದನ್ನು ನಕಲಿ ಸುದ್ದಿಗಳೆಂದು ತಳ್ಳಿ ಹಾಕಿರುವ ಉದಾಹರಣೆಗಳನ್ನು ಅವರು ಉಲ್ಲೇಖಿಸಿದ್ದಾರೆ.

ಸರ್ಕಾರವು ವಾಕ್‌ ಸ್ವಾತಂತ್ರ್ಯವನ್ನು ತಡೆಯಲು ಬಳಸುವ ಇನ್ನೂ ಒಂದು ವಿಧಾನವೆಂದರೆ ವಿಮರ್ಶೆಯ ಹೇಳಿಕೆಗಳನ್ನು ತಪ್ಪಾಗಿ ಬಿಂಬಿಸುವುದು. ಪ್ರಶಾಂತ್ ಭೂಷಣ್ ಅವರ ಪ್ರಕರಣದಲ್ಲಿ ಇದು ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

“ನ್ಯಾಯಾಂಗ ವ್ಯವಸ್ಥೆಯನ್ನು ಒಡೆಯುವ ಉದ್ದೇಶ ಪ್ರಶಾಂತ್‌ ರಿಗೆ ಇರಲಿಲ್ಲ ಎಂದು ನಾನು ನಂಬುತ್ತೇನೆ. ಆದರೆ ಅವರ ಹೇಳಿಕೆಗಳು ತಪ್ಪಾಗಿ ಓದಲ್ಪಟ್ಟವು. ಅವರು ನ್ಯಾಯಾಂಗದ ಬಗ್ಗೆ ತಮ್ಮ ಅಭಿಪ್ರಾಯವನ್ನು ಮಾತ್ರ ವ್ಯಕ್ತಪಡಿಸಿದ್ದರು” ಎಂದು ಅವರು ಹೇಳಿದ್ದಾರೆ.

ಜನರ ಭಾಷಣ, ಮಾತು, ಉದ್ದೇಶಗಳನ್ನು ತಪ್ಪಾಗಿ ಬಿಂಬಿಸುವ ಮತ್ತು ಆರೋಪಿಸುವ ಮೂಲಕ ಜನರ ಸ್ವಾತಂತ್ರ್ಯವನ್ನು ತಡೆಗಟ್ಟಲಾಗುತ್ತಿದೆ ಎಂದು ಲೋಕೂರ್ ಹೇಳಿದ್ದಾರೆ.

ಈ ನಿಟ್ಟಿನಲ್ಲಿ, 2019 ರ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಮಾಡಿದ ಭಾಷಣದ ಕುರಿತು ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಬಂಧನಕ್ಕೊಳಗಾದವರ (ಡಾ.ಕಫೀಲ್‌ ಖಾನ್) ಭಾಷಣವು ನಿಜವಾಗಿ ರಾಷ್ಟ್ರೀಯ ಏಕೀಕರಣ ಮತ್ತು ಏಕತೆಯನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ ಎಂದು ಗಮನಿಸಿದ ನಂತರ ಅಲಹಾಬಾದ್ ಹೈಕೋರ್ಟ್ ಅವರ ಬಂಧನವನ್ನು ರದ್ದುಪಡಿಸಿತು, ಆದರೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ಭಾಷಣವನ್ನು ತಪ್ಪಾಗಿ ಅರ್ಥೈಸಿದ್ದರಿಂದ ಅವರು ಸುಮಾರು ಆರು ತಿಂಗಳ ಕಾಲ ಬಂಧನದಲ್ಲಿರಬೇಕಾಯಿತು ಎಂದು ನ್ಯಾಯಮೂರ್ತಿ ಲೋಕೂರ್ ಹೇಳಿದ್ದಾರೆ.

ಮಾಜಿ ನ್ಯಾಯಾಧೀಶ ಮದನ್ ಬಿ ಲೋಕೂರ್

ವಿದ್ಯಾರ್ಥಿಗಳು, ಸಾಮಾಜಿಕ ಕಾರ್ಯಕರ್ತರು ಮುಂತಾದವರ ಭಿನ್ನಾಭಿಪ್ರಾಯದ ಧ್ವನಿಯನ್ನು ತಪ್ಪಾಗಿ ಅರ್ಥೈಸುವ ಮೂಲಕ UAPA ಡಿಯಲ್ಲಿ ಬಂಧಿಸಿ ಜೈಲಿಗೆ ಹಾಕಲಾಗುತ್ತದೆ. ಅದೇವೇಳೆ ಹಿಂಸೆಗೆ ಪ್ರಚೋದಿಸುವ, ಜನರನ್ನು ಒಡೆಯುವ ಧ್ವೇಷ ಭಾಷಣ ಮಾಡುವವರ ವಿರುದ್ಧ ಯಾವ ಕ್ರಮಗಳೂ ಕೈಗೊಳ್ಳಲಾಗುತ್ತಿಲ್ಲ ಎಂಬುದರ ಕಡೆಗೆ ಗಮನ ಸೆಳೆದಿದ್ದಾರೆ.

ಸದ್ಯ ದೇಶಾದ್ಯಂತ 3.40 ಕೋಟಿಗೂ ಹೆಚ್ಚು ಪ್ರಕರಣಗಳು ಬಾಕಿ ಉಳಿದಿವೆ ಎಂದು ಎತ್ತಿ ತೋರಿಸಿದ ಅವರು, ನ್ಯಾಯಾಂಗವು “ತನ್ನ ಕಾಳಜಿಗಳಿಗೆ ಆದ್ಯತೆ ನೀಡಬೇಕು” ಎಂದು ಒತ್ತಾಯಿಸಿದ್ದಾರೆ ಮತ್ತು ನ್ಯಾಯಾಂಗದಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುವ ಅವಶ್ಯಕತೆಯಿದೆ ಎಂದು ಒತ್ತಿ ಹೇಳಿದ್ದಾರೆ.

ಕೃಪೆ: Live Law

Tags: ಅಭಿವ್ಯಕ್ತಿ ಸ್ವಾತಂತ್ರ್ಯನಿವೃತ್ತ ನ್ಯಾಯಮೂರ್ತಿ ಮದನ್‌ ಬಿ ಲೋಕೂರುನ್ಯಾಯಾಂಗ ನಿಂದನೆ ಪ್ರಕರಣಪ್ರಶಾಂತ್‌ ಭೂಷನ್
Previous Post

NEET ಪರೀಕ್ಷೆ ಕುರಿತ ಹೇಳಿಕೆ; ನ್ಯಾಯಾಂಗ ನಿಂದನೆ ಪ್ರಕರಣದ ಭೀತಿಯಲ್ಲಿ ಸೂರ್ಯ

Next Post

ವಾರಂಟ್‌ ಇಲ್ಲದೆ ಯಾರನ್ನೂ ಬಂಧಿಸಬಹುದು: ಹೊಸ ಭದ್ರತಾ ಪಡೆ ರಚಿಸಿದ ಯೋಗಿ ಸರ್ಕಾರ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025

Rahul Gandhi: ಚುನಾವಣೆ ಪ್ರಚಾರದ ಬಳಿಕ ನೀರಿಗೆ ಧುಮುಕಿ ಮೀನು ಹಿಡಿದ ರಾಹುಲ್‌..

November 3, 2025
Next Post
ವಾರಂಟ್‌ ಇಲ್ಲದೆ ಯಾರನ್ನೂ ಬಂಧಿಸಬಹುದು: ಹೊಸ ಭದ್ರತಾ ಪಡೆ ರಚಿಸಿದ ಯೋಗಿ ಸರ್ಕಾರ

ವಾರಂಟ್‌ ಇಲ್ಲದೆ ಯಾರನ್ನೂ ಬಂಧಿಸಬಹುದು: ಹೊಸ ಭದ್ರತಾ ಪಡೆ ರಚಿಸಿದ ಯೋಗಿ ಸರ್ಕಾರ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada