• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ವಿಕ್ರಂ ಲ್ಯಾಂಡರ್ ನ ಅವಶೇಷದ ಸುಳಿವು ನೀಡಿದ ಚೆನ್ನೈ ಇಂಜಿನಿಯರ್ !

by
December 3, 2019
in ದೇಶ
0
ವಿಕ್ರಂ ಲ್ಯಾಂಡರ್ ನ ಅವಶೇಷದ ಸುಳಿವು ನೀಡಿದ ಚೆನ್ನೈ ಇಂಜಿನಿಯರ್ !
Share on WhatsAppShare on FacebookShare on Telegram

ಭಾರತದವರಷ್ಟೇ ಅಲ್ಲ ನಾಸಾದ ಖಗೋಳ ಶಾಸ್ತ್ರಜ್ಞರಿಗೂ ಯಕ್ಷ ಪ್ರಶ್ನೆಯಾಗಿ ಕಾಡಿದ್ದ ಚಂದ್ರಯಾನ-2 ವಿಕ್ರಂ ಲ್ಯಾಂಡರ್ ನ ಅವಶೇಷಗಳನ್ನು ಭಾರತೀಯ ಹವ್ಯಾಸಿ ಖಗೋಳ ಶಾಸ್ತ್ರಜ್ಞ ಷಣ್ಮುಖ ಸುಬ್ರಮಣ್ಯನ್ ಪತ್ತೆ ಮಾಡಿದ್ದಾರೆ.

ADVERTISEMENT

ಭಾರತದ ಬಹುನಿರೀಕ್ಷೆಯ ವಿಕ್ರಂ ಲ್ಯಾಂಡರ್ ಸಂಪರ್ಕ ತಪ್ಪಿ ಚಂದ್ರನಂಗಳದಲ್ಲಿ ಕಳೆದುಹೋಗಿತ್ತು. ಅದರ ಅವಶೇಷಗಳ ಪತ್ತೆಗೆ ಭಾರತ ಮತ್ತು ನಾಸಾದ ವಿಜ್ಞಾನಿಗಳು ಕಳೆದೆರಡು ತಿಂಗಳಿಂದ ಹಗಲಿರುಳೂ ಶ್ರಮಿಸುತ್ತಿದ್ದರು.

ಈ ಮಧ್ಯೆ, ನಾಸಾ ಕಳೆದ ಸೆಪ್ಟಂಬರ್ 26 ರಂದು ಚಂದ್ರನ ಚಿತ್ರವನ್ನು ಬಿಡುಗಡೆ ಮಾಡಿತ್ತು. ಈ ಚಿತ್ರವನ್ನು ಪಡೆದುಕೊಂಡ ತಮಿಳುನಾಡಿನ ಸುಬ್ರಮಣ್ಯನ್ ಅವರು ಅಂದಿನಿಂದ ಸಂಪರ್ಕ ಕಳೆದುಕೊಂಡಿದ್ದ ವಿಕ್ರಂ ಲ್ಯಾಂಡರ್ ನ ಇರುವಿಕೆಯ ಬಗ್ಗೆ ಅಧ್ಯಯನ ನಡೆಸಿದ್ದರು. ಹೀಗೆ ಅಧ್ಯಯನ ಮಾಡುವ ಸಂದರ್ಭದಲ್ಲಿ ಸುಬ್ರಮಣ್ಯನ್ ಅವರು ವಿಕ್ರಂ ಇರುವಿಕೆಯ ಕುರುಹನ್ನು ಪತ್ತೆ ಮಾಡಿದ್ದರು. ಅಕ್ಟೋಬರ್ 14 ಮತ್ತು ನವೆಂಬರ್ 11 ರಂದು ನಾಸಾ ಬಿಡುಗಡೆ ಮಾಡಿದ ಕೆಲವು ಚಿತ್ರಗಳಲ್ಲಿಯೂ ಸುಬ್ರಮಣ್ಯನ್ ವಿಕ್ರಂ ಅವಶೇಷಗಳನ್ನು ಗುರುತು ಮಾಡಿದ್ದರು.

ಈ ಖಗೋಳ ಶಾಸ್ತ್ರಜ್ಞ ಷಣ್ಮುಖ ಸುಬ್ರಮಣ್ಯನ್ ಅವರು ಅವಶೇಷಗಳನ್ನು ಪತ್ತೆ ಮಾಡಲು ಐದಾರು ರಾತ್ರಿಗಳ ಕಾಲ ಚಂದ್ರನ ಮೇಲೆ ಕಣ್ಣಿಟ್ಟಿದ್ದರು. ಅದೂ ಅಲ್ಲದೇ ಪ್ರತಿ ದಿನ ರಾತ್ರಿ ಸುಮಾರು ಏಳೆಂಟು ಗಂಟೆಗಳ ಕಾಲ ಅವರ ಕಣ್ಣು ಚಂದ್ರನ ಮೇಲೆಯೇ ಇತ್ತು.

ಹೀಗೆ ನಿರಂತರವಾಗಿ ಚಂದ್ರನ ಮೇಲೆ ಕಣ್ಣಿಟುತ್ತಾ ಬಂದಾಗ ಚಂದ್ರನ ಮೇಲ್ಮೈನ ಒಂದು ಭಾಗದಲ್ಲಿ ಕುತೂಹಲಕಾರಿ ವಸ್ತುವೊಂದು ಕಂಡಿದೆ. ಈ ಬಗ್ಗೆ ಕುತೂಹಲ ಮತ್ತು ಸಂದೇಹ ಉಂಟಾಗಿ ಇನ್ನೂ ಒಳಹೊಕ್ಕು ಹೋದಾಗ ಷಣ್ಮುಖ ಅವರಿಗೆ ವಸ್ತುವಿನ ಆಜುಬಾಜಿನಲ್ಲಿ ಇನ್ನೂ ಕೆಲವು ಚೂರುಗಳು ಕಾಣಿಸಿವೆ. ಈ ಬಗ್ಗೆ ಅಧ್ಯಯನ ನಡೆಸಿದ ಅವರಿಗೆ ಇದು ವಿಕ್ರಂ ಲ್ಯಾಂಡರ್ ನ ಅವಶೇಷ ಎಂಬುದು ಖಾತರಿಯಾಗಿದೆ.

ಸುಬ್ರಮಣ್ಯನ್ ಅವರು ಈ ಬಗ್ಗೆ ನಾಸಾ ವಿಜ್ಞಾನಿಗಳಿಗೆ ಸುಳಿವು ನೀಡಿದ ಆಧಾರದ ಮೇಲೆ ಮತ್ತಷ್ಟು ಅಧ್ಯಯನ ನಡೆಸಿದ ವಿಜ್ಞಾನಿಗಳು ಇದು ವಿಕ್ರಂನ ಅವಶೇಷ ಎಂಬುದನ್ನು ದೃಢಪಡಿಸಿದ್ದು, ಇದಕ್ಕೆ ಸಂಬಂಧಿಸಿದ ಫೋಟೋಗಳನ್ನು ನಾಸಾದ ವೆಬ್ ಸೈಟ್ ನಲ್ಲಿ ಹಾಕಿದ್ದಾರೆ.

ಚಂದ್ರನ ಮೇಲೆ ನೀಲಿ ಮತ್ತು ಹಸಿರು ಬಣ್ಣದ ಚುಕ್ಕೆಗಳನ್ನು ತೋರಿಸಲಾಗಿದೆ. ವಿಕ್ರಂ ಲ್ಯಾಂಡರ್ ಅವಶೇಷ ಬಿದ್ದುದರಿಂದ ಈ ಪರಿಣಾಮ ಉಂಟಾಗಿದೆ ಎಂದು ನಾಸಾ ತಿಳಿಸಿದೆ.

Tags: Chandraayan 2ChennaiengineerIndian Space Research Organisationlander VikramShanmuga Subramanianಇಂಜಿನಿಯರ್ಚಂದ್ರಚಂದ್ರಯಾನ-2ಚೆನ್ನೈಭಾರತೀಯ ಬಾಹ್ಯಾಕಾಶ ಸಂಸ್ಥೆವಿಕ್ರಂ ಲ್ಯಾಂಡರ್ಷಣ್ಮುಖ ಸುಬ್ರಮಣ್ಯನ್
Previous Post

ಏರುದಾರಿಯಲ್ಲಿ ಲಾಲೂ ಪಕ್ಷ- `ಮೇಲ್ಜಾತಿ’ಗೆ ಮಣೆ

Next Post

ಸಿದ್ದು ದೂರವಿಟ್ಟು ಜೆಡಿಎಸ್ ಜತೆ ಮೈತ್ರಿಯಾದರೆ ಕಾಂಗ್ರೆಸ್ ಉಳಿಯುವುದೇ?

Related Posts

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
0

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

Read moreDetails

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Neeraj Chopra: ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಬೇಟಿ ಮಾಡಿದ ನೀರಜ್‌ ಚೋಪ್ರ..!!

July 3, 2025
Next Post
ಸಿದ್ದು ದೂರವಿಟ್ಟು ಜೆಡಿಎಸ್ ಜತೆ ಮೈತ್ರಿಯಾದರೆ ಕಾಂಗ್ರೆಸ್ ಉಳಿಯುವುದೇ?

ಸಿದ್ದು ದೂರವಿಟ್ಟು ಜೆಡಿಎಸ್ ಜತೆ ಮೈತ್ರಿಯಾದರೆ ಕಾಂಗ್ರೆಸ್ ಉಳಿಯುವುದೇ?

Please login to join discussion

Recent News

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada