• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ವಿಜಯ್ ಮಲ್ಯ ಹಸ್ತಾಂತರ: ವರದಿ ನೀಡಲು ಕೇಂದ್ರಕ್ಕೆ ಆರು ವಾರಗಳ ಕಾಲಾವಕಾಶ ನೀಡಿದ ಸುಪ್ರಿಂ

by
November 3, 2020
in ದೇಶ
0
ವಿಜಯ್ ಮಲ್ಯ ಹಸ್ತಾಂತರ: ವರದಿ ನೀಡಲು ಕೇಂದ್ರಕ್ಕೆ ಆರು ವಾರಗಳ ಕಾಲಾವಕಾಶ ನೀಡಿದ ಸುಪ್ರಿಂ
Share on WhatsAppShare on FacebookShare on Telegram

ವಿಜಯ್‌ ಮಲ್ಯ ಹಸ್ತಾಂತರಕ್ಕೆ ಸಂಬಂದಪಟ್ಟಂತೆ ಕೇಂದ್ರ ಸರ್ಕಾರಕ್ಕೆ ಸುಪ್ರಿಂ ಕೋರ್ಟ್‌ ವರದಿ ನೀಡಲು ಸೂಚಿಸಿದೆ. ವರದಿಯನ್ನು ಸಲ್ಲಿಸಲು ಆರು ವಾರಗಳ ಕಾಲಾವಕಾಶವನ್ನು ನೀಡಿದೆ.

ADVERTISEMENT

ಭಾರತದ ಬ್ಯಾಂಕುಗಳಿಗೆ ವಂಚಿಸಿ ಲಂಡನ್‌ನಲ್ಲಿ ವಾಸವಾಗಿರುವ ವಿಜಯ್‌ ಮಲ್ಯ ಅವರನ್ನು ಭಾರತಕ್ಕೆ ಕರೆತರಲು ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಈ ಕುರಿತಾಗಿ ಯುಕೆಯ ನ್ಯಾಯಾಲಯದಲ್ಲಿ ಗೌಪ್ಯ ವಿಚಾರಣೆ ನಡೆಯುತ್ತಿದೆ ಕೇಂದ್ರ ಸರ್ಕಾರ ಕಳೆದ ತಿಂಗಳು ಸುಪ್ರಿಂ ಕೋರ್ಟ್‌ಗೆ ಮಾಹಿತಿ ನೀಡಿತ್ತು. ಅದರ ನಂತರ ಯಾವುದೇ ಮಾಹಿತಿಯನ್ನು ಕೇಂದ್ರ ಸರ್ಕಾರವು ನೀಡಿರಲಿಲ್ಲ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಕಳೆದ ಬಾರಿ ಸುಪ್ರಿಂ ಕೋರ್ಟ್‌ಗೆ ವರದಿ ಸಲ್ಲಿಸಿದ್ದ ಕೇಂದ್ರ ಗೃಹ ಇಲಾಖೆಯು, ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಹಸ್ತಾಂತರಿಸುವದರ ಪ್ರಕ್ರಿಯೆಯನ್ನು ಫೆಬ್ರವರಿ 9, 2017ರಂದು ಯುಕೆ ನ್ಯಾಯಾಲಯದಲ್ಲಿ ಆರಂಭಿಸಲಾಗಿತ್ತು. ಡಿಸೆಂಬರ್‌ 2018ರಲ್ಲಿ ಮಲ್ಯರನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಯುಕೆ ವೆಸ್ಟ್‌ಮಿನ್ಸ್ಟರ್‌ ನ್ಯಾಯಾಲಯದ ಹಿರಿಯ ನ್ಯಾಯಾಧೀಶರು ನಿರ್ದೇಶನ ನೀಡಿದ್ದರು. ಈ ಆದೇಶವನ್ನು ಲಂಡನ್‌ ಹೈಕೋರ್ಟ್‌ನಲ್ಲಿ ವಿಜಯ್‌ ಮಲ್ಯ ಪ್ರಶ್ನಿಸಿದ್ದರು. ಈ ಅರ್ಜಿಯನ್ನು ಏಪ್ರಿಲ್‌ 20, 2020ರಂದು ಹೈಕೋರ್ಟ್‌ ತಳ್ಳಿಹಾಕಿತ್ತು.

Also Read: ರಹಸ್ಯ ವಿಚಾರಣಾ ಪ್ರಕ್ರಿಯೆಯಿಂದ ಮಲ್ಯ ಹಸ್ತಾಂತರ ವಿಳಂಬ -ವಿದೇಶಾಂಗ ಸಚಿವಾಲಯ

ನಂತರ ಯುಕೆಯ ಸುಪ್ರಿಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಅನುಮತಿಯನ್ನು ಕೋರಿ ಮತ್ತೆ ಲಂಡನ್‌ ಹೈಕೋರ್ಟ್‌ ಮೊರೆ ಹೋಗಿದ್ದರು. ಈ ಅರ್ಜಿಯನ್ನು ಕೂಡಾ ಮೇ 14, 2020ರಂದು ಲಂಡನ್‌ ಹೈಕೋರ್ಟ್‌ ತಳ್ಳಿ ಹಾಕಿತ್ತು.

ಇದರ ನಂತರ ಯಾವುದೇ ವರದಿಯನ್ನು ಕೇಂದ್ರ ಸರ್ಕಾರವು ನೀಡಿರಲಿಲ್ಲ. ಹೀಗಾಗಿ, ಬ್ರಿಟನ್‌ನಲ್ಲಿ ನಡೆಯುತ್ತಿರುವ ವಿಚಾರಣೆ ನಡೆಯಲು ಎಷ್ಟು ಸಮಯ ಬೇಕಾಗಬಹುದು ಎಂದು ಸಾಲಿಸಿಟರ್‌ ಜನರಲ್‌ ತುಷಾರ್ ಮೆಹ್ತಾ ಅವರನ್ನು ನ್ಯಾಯಮೂರ್ತಿಗಳಾದ ಯು.ಯು.ಲಲಿತ್‌ ಹಾಗೂ ಅಶೋಕ್‌ ಭೂಷಣ್‌ ಅವರಿದ್ದ ಪೀಠವು ಕೇಳಿತ್ತು.

Also Read: ದಯವಿಟ್ಟು ಹಣ ಸ್ವೀಕರಿಸಿ ಎನ್ನುವ ಮಲ್ಯ, ಜೈಲಿಗೆ ಕಳಿಸಿಯೇ ಸಿದ್ದ ಎನ್ನುತ್ತಿರುವ ಸರ್ಕಾರ!

ಕೇಂದ್ರ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲು ಆರು ವಾರಗಳ ಕಾಲಾವಕಾಶವನ್ನು ನೀಡಿ ಎಂದು ತುಷಾರ್‌ ಮೆಹ್ತಾ ಅವರು ಕೇಳಿಕೊಂಡಿದ್ದರು. ಇವರ ಮನವಿಯನ್ನು ಈಗ ಸುಪ್ರಿಂಕೋರ್ಟ್‌ ಪುರಸ್ಕರಿಸಿ, ಆರು ವಾರಗಳ ಕಾಲಾವಕಾಶ ನೀಡಿದೆ.

Tags: ‌ supreme court‌ vijay mallyaತುಷಾರ್‌ ಮೆಹ್ತಾವಿಜಯ್ ಮಲ್ಯ
Previous Post

ಕರ್ನಾಟಕ: 2576 ಹೊಸ ಕರೋನಾ ಪ್ರಕರಣಗಳು ದಾಖಲು

Next Post

ಬಿಹಾರದಲ್ಲಿ ನಿತೀಶ್‌ರನ್ನು ಸೋಲಿಸಲು ಸಜ್ಜಾಗಿರುವ ಮೇಲ್ವರ್ಗದ ಮತದಾರರು

Related Posts

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?
Top Story

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

by ಪ್ರತಿಧ್ವನಿ
May 27, 2026
0

ಬೆಂಗಳೂರು : ಕಾಂಗ್ರೆಸ್ ನಾಯಕತ್ವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ನಡುವಿನ ದೀರ್ಘಕಾಲದ ಶೀತಲ ಸಮರ ಪರಿಹರಿಸುವಲ್ಲಿ ಯಶಸ್ವಿಯಾದಂತೆ ಕಂಡು ಬರುತ್ತಿದೆ. ಈ ಮೂಲಕ ಸಿದ್ದರಾಮಯ್ಯ ವಿದಾಯಕ್ಕೆ...

Read moreDetails
BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

BREAKING NEWS : ಗುಜರಾತ್‌ ತಂಡವನ್ನು ಬಗ್ಗು ಬಡಿದ RCB : 5ನೇ ಬಾರಿಗೆ ಫೈನಲ್‌ ಪ್ರವೇಶ..

May 26, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

May 26, 2026
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

May 26, 2026
Next Post
ಬಿಹಾರದಲ್ಲಿ ನಿತೀಶ್‌ರನ್ನು ಸೋಲಿಸಲು ಸಜ್ಜಾಗಿರುವ ಮೇಲ್ವರ್ಗದ ಮತದಾರರು

ಬಿಹಾರದಲ್ಲಿ ನಿತೀಶ್‌ರನ್ನು ಸೋಲಿಸಲು ಸಜ್ಜಾಗಿರುವ ಮೇಲ್ವರ್ಗದ ಮತದಾರರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada