• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವಿದ್ಯುಚಕ್ತಿ ದರವನ್ನು ವೈಜ್ಞಾನಿಕವಾಗಿ ಹೇಗೆ ಇಳಿಸಬಹುದೆಂಬ ಸಲಹೆ ನೀಡಲು ಸಿದ್ಧನಿದ್ದೇನೆ – ಸಿದ್ದರಾಮಯ್ಯ

by
November 7, 2020
in ಕರ್ನಾಟಕ
0
ವಿದ್ಯುಚಕ್ತಿ ದರವನ್ನು ವೈಜ್ಞಾನಿಕವಾಗಿ ಹೇಗೆ ಇಳಿಸಬಹುದೆಂಬ ಸಲಹೆ ನೀಡಲು ಸಿದ್ಧನಿದ್ದೇನೆ - ಸಿದ್ದರಾಮಯ್ಯ
Share on WhatsAppShare on FacebookShare on Telegram

ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಏರಿಕೆ ಮಾಡಿರುವುದನ್ನು ವಿರೋಧಿಸಿರುವ ಸಿದ್ದರಾಮಯ್ಯ, ಕರೋನಾ ಸೋಂಕಿನಿಂದಾಗಿ ಸಂಕಷ್ಟಕ್ಕೀಡಾಗಿರುವ ರಾಜ್ಯದ ಜನರ ಗಾಯದ ಮೇಲೆ ಬರೆ ಎಳೆದಿದೆ. ಉದ್ಯೋಗಗಳನ್ನು ಕಳೆದುಕೊಂಡು ಆದಾಯವಿಲ್ಲದೆ ಜೀವನ ನಿರ್ವಹಣೆಗಾಗಿ ಪರದಾಡುತ್ತಿರುವ ಜನರಿಗೆ ನೆರವಾಗಬೇಕಾಗಿದ್ದ ಸರ್ಕಾರ ವಿದ್ಯುತ್ ದರ ಹೆಚ್ಚಿಸಿ ಅವರನ್ನು ಇನ್ನಷ್ಟು ಕಷ್ಟಕ್ಕೆ ನೂಕಿದೆ ಎಂದು ಹೇಳಿದ್ದಾರೆ.

ADVERTISEMENT

ನಮ್ಮದೇ ವಿದ್ಯುತ್ ಉತ್ಪಾದನಾ ಘಟಕಗಳನ್ನು ಸ್ಥಗಿತಗೊಳಿಸಿ ಕೇಂದ್ರದಿಂದ ಅಧಿಕ ದರದಲ್ಲಿ ವಿದ್ಯುತ್ ಖರೀದಿಸಿ ನಷ್ಟದ ಲೆಕ್ಕ ತೋರಿಸುತ್ತಿರುವ ರಾಜ್ಯ ಸರ್ಕಾರದ ಈ ಕಸರತ್ತಿನ ಹಿಂದೆ ಭ್ರಷ್ಟಾಚಾರದ ವಾಸನೆ ಬರತೊಡಗಿದೆ. ಬಿಜೆಪಿ ಸರ್ಕಾರದ ಹಿಂದಿನ ಅವಧಿಯಲ್ಲಿಯ ವಿದ್ಯುತ್ ಖರೀದಿಯ ಹಗರಣವನ್ನು ಜನ ನೆನಪು ಮಾಡಿಕೊಳ್ಳುವಂತಾಗಿದೆ. ನಮ್ಮ ಸರ್ಕಾರದ ಪ್ರಗತಿಪರ ವಿದ್ಯುತ್ ನೀತಿಯಿಂದಾಗಿ ರಾಜ್ಯ ವಿದ್ಯುತ್ ಉತ್ಪಾದನೆಯಲ್ಲಿ ಸ್ವಾವಲಂಬನೆಯನ್ನು ಸಾಧಿಸಿತ್ತು. ಬೇರೆ ರಾಜ್ಯಗಳು ಮತ್ತು ಕೇಂದ್ರ ಸರ್ಕಾರದ ಬಳಿ ವಿದ್ಯುತ್ ಗಾಗಿ ಮೊರೆ ಇಡುತ್ತಿದ್ದ ನಾವು ಇಂದು ಹೆಚ್ಚುವರಿ ವಿದ್ಯುತನ್ನು ಮಾರಾಟ ಮಾಡುವ ಸುಭದ್ರ ಸ್ಥಿತಿಯಲ್ಲಿದ್ದೇವೆ. ಹೀಗಿದ್ದರೂ ಯಾಕೆ ದರ ಏರಿಕೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ರಾಯಚೂರಿನ ಆರ್ ಟಿಪಿಎಸ್ ನಲ್ಲಿ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ. ಖಾಸಗಿ ಕಂಪೆನಿಗಳು ಕಲ್ಲಿದ್ದಲು ಆಧಾರಿತ ವಿದ್ಯುತ್ ಉತ್ಪಾದನೆ ಹೆಚ್ಚಿಸಿವೆ. ಯಥೇಚ್ಚವಾಗಿ ಸೌರ ಮತ್ತು ಪವನ ವಿದ್ಯುತ್ ಕೂಡಾ ಲಭ್ಯ ಇದೆ. ಹೀಗಿದ್ದರೂ ಯುನಿಟ್ ಗೆ 50 ಪೈಸೆ ಹೆಚ್ಚು ನೀಡಿ ವಿದ್ಯುತ್ ಖರೀದಿಸುತ್ತಿರುವುದು ಯಾಕೆ? ಅನಗತ್ಯ ವಿದ್ಯುತ್ ಖರೀದಿಸಲು ಕೇಂದ್ರಕ್ಕೆ ರಾಜ್ಯ ಸರ್ಕಾರ ವಾರ್ಷಿಕ ಐದರಿಂದ ಆರು ಸಾವಿರ ಕೋಟಿ ನೀಡುತ್ತಿದೆ. ವಿದ್ಯುತ್ ಕೊರತೆ ಇದ್ದರೆ ರಾಯಚೂರಿನ ಆರ್ ಟಿಪಿಎಸ್ ಸ್ಥಾವರದಲ್ಲಿ ಉತ್ಪಾದನೆ ಶುರುಮಾಡಬಹುದಿತ್ತು. ಇದರಿಂದ ಹೆಚ್ಚುವರಿ ವಿದ್ಯುತ್ ಮಾರಾಟ ಮಾಡಲೂ ಅವಕಾಶ ಇತ್ತು. ವಿದ್ಯುತ್ ಖರೀದಿಗೆ ಯಾಕೆ ಇಷ್ಟು ಆಸಕ್ತಿ? ಎಂದು ಸಿದ್ದರಾಮಯ್ಯ ಕೇಳಿದ್ದಾರೆ.

ಕರೋನಾ ಪರಿಣಾಮದಿಂದಾಗಿ ಉದ್ಯಮ-ವ್ಯಾಪಾರಗಳು ನಷ್ಟದಲ್ಲಿರುವಾಗ ವಿದ್ಯುತ್ ದರವನ್ನು ಕಡಿಮೆಗೊಳಿಸಿ ಆರ್ಥಿಕ ಚಟುವಟಿಕೆಗಳಿಗೆ ಉತ್ತೇಜನ ನೀಡಬೇಕಾಗಿದ್ದ ಸರ್ಕಾರ, ವಿವೇಚನಾರಹಿತವಾಗಿ ವಿದ್ಯುತ್ ದರ ಏರಿಸಿರುವುದು ಮೂರ್ಖ ತೀರ್ಮಾನ. ರಾಜ್ಯದಲ್ಲಿ ಸುಮಾರು 150 ರಿಂದ 200 ಮಿಲಿಯನ್ ಯುನಿಟ್‌ಗಳಷ್ಟು ವಿದ್ಯುಚ್ಛಕ್ತಿ ಗೆ ಬೇಡಿಕೆ ಇದೆ. ಇದರ ಎರಡರಷ್ಟು ವಿದ್ಯುತ್ ಉತ್ಪಾದನೆ ಮಾಡುವ ಸಾಮರ್ಥ್ಯ ನಮ್ಮ ರಾಜ್ಯಕ್ಕಿದೆ. ಇದರಲ್ಲಿ ಶೇ.40 ರಿಂದ 50 ರಷ್ಟು ನವೀಕರಿಸಬಹುದಾದ ಇಂಧನ ಮೂಲಗಳಾದ ಸೌರ ಮತ್ತು ಪವನ ವಿದ್ಯುತ್ ಮೂಲಗಳಿಂದ ಉತ್ಪಾದನೆಯಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಜಿ.ಎಸ್.ಟಿ, ನೋಟ್ ಬ್ಯಾನ್ ಮತ್ತು ಕರೋನಾ ಸಂಕಷ್ಟಗಳಿಂದ ನಲುಗಿರುವ ಕೈಗಾರಿಕೆಗಳು, ವಾಣಿಜ್ಯೋದ್ಯಮಗಳು ಮತ್ತು ಜನರ ಮೇಲೆ ವಿದ್ಯುತ್ ದರ ಏರಿಕೆಯ ಹೊರೆಯನ್ನು ಹೊರಿಸದೆ, ಇನ್ನಷ್ಟು ಇಳಿಸಿ ಆರ್ಥಿಕತೆಗೆ ಚೈತನ್ಯ ನೀಡಬೇಕೆಂದು ಆಗ್ರಹಿಸಿದ ಸಿದ್ದರಾಮಯ್ಯ, ವಿದ್ಯುಚಕ್ತಿ ದರವನ್ನು ವೈಜ್ಞಾನಿಕವಾಗಿ ಹೇಗೆ ಇಳಿಸಬಹುದೆಂಬ ಬಗ್ಗೆ ಸರ್ಕಾರ ಬಯಸಿದರೆ ಸಲಹೆ ನೀಡಲು ಸಿದ್ಧನಿದ್ದೇನೆ ಎಂದಿದ್ದಾರೆ.

Tags: siddaramaiahವಿದ್ಯುಚಕ್ತಿ ದರಸಿದ್ದರಾಮಯ್ಯ
Previous Post

ಬಿಹಾರ ಚುನಾವಣೆ: ಮಧ್ಯಾಹ್ನ ಒಂದು ಗಂಟೆಯವರೆಗೆ 34.82% ಮತದಾನ

Next Post

ಸಿದ್ದರಾಮಯ್ಯ ಅವಧಿಯಲ್ಲಿ ನಡೆದ ರೈತರ ಸರಣಿ ಆತ್ಮಹತ್ಯೆ ಪುನರಾವರ್ತನೆಯಾಗಬಾರದು -HDK

Related Posts

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ
ಕರ್ನಾಟಕ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ನಗರದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯ ಪಾಲಿಕೆಗಳ ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ವಂಚನೆ ಯತ್ನ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಈ...

Read moreDetails
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ದಾಖಲೆ ಸಾಧನೆ: ಈ 7 ಮಂದಿಗೆ ಪೂರ್ಣ ಅಂಕ!

April 23, 2026
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಜಿಲ್ಲಾವಾರು ವಿವರ ಇಲ್ಲಿದೆ

April 23, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
Next Post
ಸಿದ್ದರಾಮಯ್ಯ ಅವಧಿಯಲ್ಲಿ ನಡೆದ ರೈತರ ಸರಣಿ ಆತ್ಮಹತ್ಯೆ ಪುನರಾವರ್ತನೆಯಾಗಬಾರದು -HDK

ಸಿದ್ದರಾಮಯ್ಯ ಅವಧಿಯಲ್ಲಿ ನಡೆದ ರೈತರ ಸರಣಿ ಆತ್ಮಹತ್ಯೆ ಪುನರಾವರ್ತನೆಯಾಗಬಾರದು -HDK

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada