• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ವಿಧಾನಮಂಡಲ ಅಧಿವೇಶನವನ್ನು ವಿಸ್ತರಿಸುವಂತೆ ಸಿದ್ದರಾಮಯ್ಯ ಆಗ್ರಹ

by
September 10, 2020
in ಕರ್ನಾಟಕ
0
ವಿಧಾನಮಂಡಲ ಅಧಿವೇಶನವನ್ನು ವಿಸ್ತರಿಸುವಂತೆ ಸಿದ್ದರಾಮಯ್ಯ ಆಗ್ರಹ
Share on WhatsAppShare on FacebookShare on Telegram

ವಿಧಾನಮಂಡಲದ ಅಧಿವೇಶನವನ್ನು ಮೂರು ವಾರಗಳ ಕಾಲ ಅಂದರೆ ಅ.15ರ ವರೆಗೆ ವಿಸ್ತರಿಸಬೇಕೆಂದು ವಿಧಾನಸಭಾ ಅಧ್ಯಕ್ಷರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಈ ಅಧಿವೇಶನದಲ್ಲಿ 35ಕ್ಕಿಂತ ಹೆಚ್ಚು ಮಸೂದೆ ಮಂಡನೆಯಾಗಲಿದೆ, ಇದರ ಜೊತೆಗೆ ಕರೋನಾ, ಅತಿವೃಷ್ಟಿ, ಹದಗೆಟ್ಟಿರುವ ಆರ್ಥಿಕ ಸ್ಥಿತಿ, ಡ್ರಗ್ಸ್ ಹಗರಣ ಹೀಗೆ ವಿಸ್ತೃತ ಚರ್ಚೆಗೆ ಸಾಕಷ್ಟು ವಿಷಯಗಳಿವೆ. ಕರ್ನಾಟಕ ರಾಜ್ಯ ವಿಧಾನಮಂಡಲದ ಸರ್ಕಾರಿ ಕಾರ್ಯಕಲಾಪಗಳ ನಿರ್ವಹಣೆ ಅಧಿನಿಯಮ 2005ರ ಸೆಕ್ಷನ್ 3ರಂತೆ ವರ್ಷದಲ್ಲಿ ಕಡ್ಡಾಯವಾಗಿ ಕನಿಷ್ಠ 60 ದಿನಗಳ ಕಾಲ ಅಧಿವೇಶನ ನಡೆಸಬೇಕೆಂದಿದೆ. ಆದರೆ ರಾಜ್ಯ ಬಿಜೆಪಿ ಸರ್ಕಾರ ಈ ನಿಯಮವನ್ನು ಗಾಳಿಗೆ ತೂರಿ ಅಧಿವೇಶನದ ಅವಧಿಯನ್ನು ಮೊಟಕುಗೊಳಿಸಿರುವುದು ಸಂಸದೀಯ ವ್ಯವಸ್ಥೆಗೆ ಮಾಡುತ್ತಿರುವ ಅಪಚಾರ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸೆಪ್ಟೆಂಬರ್ 21 ರಿಂದ 30 ರವರೆಗೆ 15ನೇ ವಿಧಾನಸಭೆಯ 7ನೇ ಅಧಿವೇಶನದ ಕಾರ್ಯಕಲಾಪಗಳನ್ನು ನಡೆಸಲು ಪ್ರಕಟಣೆ ಹೊರಡಿಸಲಾಗಿದೆ. ಈ ಪ್ರಕಟಣೆಯಂತೆ 21, 22, 23, 24, 25, 28, 29 ಮತ್ತು 30 ರವರೆಗೆ ಅಧಿವೇಶನವನ್ನು ನಡೆಸಲು ಉದ್ದೇಶಿಸಲಾಗಿದೆ. ಸದರಿ ಅಧಿವೇಶನದಲ್ಲಿ ಸುಮಾರು 20 ಕ್ಕಿಂತ ಹೆಚ್ಚು ಸುಗ್ರೀವಾಜ್ಞೆಗಳನ್ನು ಒಳಗೊಂಡಂತೆ 35 ಕ್ಕಿಂತ ಹೆಚ್ಚು ಮಸೂದೆಗಳನ್ನು ಮಂಡಿಸಲಾಗುತ್ತಿದೆ ಎಂಬ ಮಾಹಿತಿ ತಿಳಿದು ಬಂದಿದೆ.

ಕರ್ನಾಟಕ ರಾಜ್ಯದ ಜನರು ಹಿಂದೆಂದೂ ಕಂಡರಿಯದ ರೀತಿಯಲ್ಲಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಪದೇ ಪದೇ ಪ್ರವಾಹಗಳು ಬಂದೆರಗುತ್ತಿದೆ. ಕಳೆದ ಮಾರ್ಚ್‌ನಿಂದ ಕೋವಿಡ್-19 ಸಾಂಕ್ರಾಮಿಕವು ಮಾರಣಾಂತಿಕವಾಗಿ ವ್ಯಾಪಿಸಿಕೊಂಡು ರಾಜ್ಯದ ಜನರ ಬದುಕನ್ನು ಹೈರಾಣಾಗಿಸಿದೆ ಮತ್ತು ಸುಮಾರು 6,500 ಕ್ಕಿಂತ ಹೆಚ್ಚು ಜನ ಈ ಸೋಂಕಿನಿಂದಾಗಿ ಮೃತಪಡುವಂತೆ ಮಾಡಿದೆ. ಪದೇ ಪದೇ ಕಾನೂನು ಸುವ್ಯವಸ್ಥೆಯ ಸಮಸ್ಯೆಗಳು ಉಂಟಾಗುತ್ತಿವೆ, ಜೊತೆಯಲ್ಲಿ ಡ್ರಗ್ಸ್‌ನಂತಹ ಅಪಾಯಕಾರಿ ಚಟುವಟಿಕೆಗಳು ರಾಜ್ಯವನ್ನು ಆವರಿಸಿಕೊಂಡಿವೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಇಂತಹ ಸನ್ನಿವೇಶದಲ್ಲಿ ಅಧಿವೇಶನವನ್ನು ನಡೆಸಲಾಗುತ್ತಿದೆ. ಆದರೆ ಅಧಿವೇಶನದ ಸಮಯ ಮಾತ್ರ ಯಾವುದಕ್ಕೂ ಸಾಕಾಗುವುದಿಲ್ಲ. ಜನರ ಮೇಲೆ ಕಾಳಜಿ ಇಲ್ಲದೆ ನೆಪ ಮಾತ್ರಕ್ಕೆ ಅಧಿವೇಶನ ನಡೆಸಲು ಉದ್ದೇಶಿಸುವಂತೆ ಕಾಣಿಸುತ್ತಿದೆ. ಹಲವು ಜನ ವಿರೋಧಿಯಾದ ಸುಗ್ರೀವಾಜ್ಞೆಗಳನ್ನು ಚರ್ಚೆಯನ್ನೇ ನಡೆಸದೆ ಅಂಗೀಕಾರ ಪಡೆಯಲು ಯತ್ನಿಸುತ್ತಿರುವುದು ಅತ್ಯಂತ ಜನ ದ್ರೋಹಿಯಾದ, ಬೇಜವಾಬ್ದಾರಿಯುತವಾದ ಮತ್ತು ದುಷ್ಟತನದ ಪರಮಾವಧಿಯಂತೆ ಕಾಣುತ್ತಿದೆ. ಸರ್ಕಾರ ಈ ವಿಚಾರದಲ್ಲಿ ಅತ್ಯಂತ ಅಸಂವಿಧಾನಿಕವಾಗಿ ನಡೆದುಕೊಳ್ಳುತ್ತಿದೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ಬರೆದಿದ್ದಾರೆ.

ವಿಧಾನಮಂಡಲದ ಅಧಿವೇಶನವನ್ನು ಮೂರು ವಾರಗಳ ಕಾಲ ಅಂದರೆ ಅ.15ರ ವರೆಗೆ ವಿಸ್ತರಿಸಬೇಕೆಂದು ವಿಧಾನಸಭಾ ಅಧ್ಯಕ್ಷರಿಗೆ ಪತ್ರ ಬರೆದಿದ್ದೇನೆ.

ಈ ಅಧಿವೇಶನದಲ್ಲಿ 35ಕ್ಕಿಂತ ಹೆಚ್ಚು ಮಸೂದೆ ಮಂಡನೆಯಾಗಲಿದೆ, ಇದರ ಜೊತೆಗೆ ಕೊರೊನಾ, ಅತಿವೃಷ್ಟಿ, ಹದಗೆಟ್ಟಿರುವ ಆರ್ಥಿಕ ಸ್ಥಿತಿ, ಡ್ರಗ್ಸ್ ಹಗರಣ ಹೀಗೆ ವಿಸ್ತೃತ ಚರ್ಚೆಗೆ ಸಾಕಷ್ಟು ವಿಷಯಗಳಿವೆ.
1/2 pic.twitter.com/WbNKo3tdwT

— Siddaramaiah (@siddaramaiah) September 9, 2020


ADVERTISEMENT

‘ಕರ್ನಾಟಕ ರಾಜ್ಯ ವಿಧಾನಮಂಡಲದ ಸರ್ಕಾರಿ ಕಾರ್ಯಕಲಾಪಗಳ ನಿರ್ವಹಣೆ ಅಧಿನಿಯಮ 2005ರ ಸೆಕ್ಷನ್ 3 ರಂತೆ ಕಡ್ಡಾಯವಾಗಿ 60 ದಿನಗಳಿಗೆ ಕಡಿಮೆ ಇಲ್ಲದಂತೆ ಪ್ರತಿ ವರ್ಷ ಅಧಿವೇಶನಗಳನ್ನು ನಡೆಸಬೇಕು ಎಂದಿದೆ. ಸೆಕ್ಷನ್ 4 ರ ಪ್ರಕಾರ ವರ್ಷದಲ್ಲಿ ಒಟ್ಟು 4 ಅಧಿವೇಶನವನ್ನು ನಡೆಸಬೇಕು. ಜನವರಿಯಲ್ಲಿ 15, ಮಾರ್ಚ್ ತಿಂಗಳಲ್ಲಿ 20, ಜುಲೈ ತಿಂಗಳಲ್ಲಿ 15 ಮತ್ತು ನವೆಂಬರ್ ತಿಂಗಳಿನಲ್ಲಿ ಕನಿಷ್ಠ 10 ದಿನಗಳಷ್ಟು ಸೇರಿ ಒಟ್ಟು ಕನಿಷ್ಠ 60 ದಿನಗಳಷ್ಟು ಅಧಿವೇಶನವನ್ನು ನಡೆಸಬೇಕಾಗುತ್ತದೆ. ಆದರೆ ಬಿ.ಜೆ.ಪಿ ಆಡಳಿತದ ಸರ್ಕಾರವು ಸಂಸದೀಯ ವ್ಯವಸ್ಥೆಯನ್ನು ನಿರಂತರವಾಗಿ ಹಾಳುಗೆಡವುತ್ತಿದೆ. ಅಧಿವೇಶನಗಳನ್ನು ಕರೆದು ಚರ್ಚೆ ನಡೆಸುವುದನ್ನು ನಾಮಕಾವಸ್ಥೆ ಕೆಲಸವೆಂದು ಭಾವಿಸಿ ವರ್ತಿಸುತ್ತಿದೆ.

ಕೇವಲ 8 ದಿನಗಳಲ್ಲಿ ಇಷ್ಟೊಂದು ಮಹತ್ವದ ವಿಚಾರಗಳನ್ನು ಚರ್ಚಿಸಲು ಸಾಧ್ಯವಿಲ್ಲ. ಹಾಗಾಗಿ ಈ ಅಧಿವೇಶನವನ್ನು ಕನಿಷ್ಠ 3 ವಾರಗಳ ಕಾಲ ಅಂದರೆ ಅಕ್ಟೋಬರ್ 15 ರವರೆಗೆ ವಿಸ್ತರಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ.

Tags: siddaramaiahvidhanasabha sessionಕರ್ನಾಟಕ ವಿಧಾನಮಂಡಲಸಿದ್ದರಾಮಯ್ಯ
Previous Post

ಯುದ್ಧದ ಸಂದರ್ಭದಲ್ಲಿ ವಾಯುಸೇನೆ ನಿರ್ಣಾಯಕ ಪಾತ್ರ ವಹಿಸಲಿದೆ- ರಾಜನಾಥ್ ಸಿಂಗ್

Next Post

ʼಐಎಎಸ್ ಅಧಿಕಾರಿಗಳ ದುರಾಡಳಿತದಿಂದ ನೊಂದʼ ವೈದ್ಯಾಧಿಕಾರಿಗೆ ಸಿಹಿಸುದ್ದಿ ನೀಡಿದ ರಾಮುಲು

Related Posts

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
0

ಶಾಸಕರ ಅಭಿಪ್ರಾಯ ಪಕ್ಷದ ವರಿಷ್ಠರ ತೀರ್ಮಾನವಲ್ಲ, ನಾವಿಬ್ಬರೂ ವರಿಷ್ಠರ ತೀರ್ಮಾನಕ್ಕೆ ಬದ್ಧ ಮುಖ್ಯಮಂತ್ರಿಗಳ ಬದಲಾವಣೆ ಮಾಧ್ಯಮಗಳ ಸೃಷ್ಠಿ - ಊಹಾಪೋಹಗಳಿಗೆ ಆಸ್ಪದವಿಲ್ಲ-ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ,ಜುಲೈ 10 :...

Read moreDetails

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

July 10, 2025
Next Post
ʼಐಎಎಸ್ ಅಧಿಕಾರಿಗಳ ದುರಾಡಳಿತದಿಂದ ನೊಂದʼ ವೈದ್ಯಾಧಿಕಾರಿಗೆ ಸಿಹಿಸುದ್ದಿ ನೀಡಿದ ರಾಮುಲು

ʼಐಎಎಸ್ ಅಧಿಕಾರಿಗಳ ದುರಾಡಳಿತದಿಂದ ನೊಂದʼ ವೈದ್ಯಾಧಿಕಾರಿಗೆ ಸಿಹಿಸುದ್ದಿ ನೀಡಿದ ರಾಮುಲು

Please login to join discussion

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
Top Story

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

by ಪ್ರತಿಧ್ವನಿ
July 10, 2025
Top Story

ಗೃಹ ಸಚಿವರು ಏನೇ ಕೇಳಿದ್ರೂ I Dont No ಅಂತಾರೇ..!

by ಪ್ರತಿಧ್ವನಿ
July 10, 2025
5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 
Top Story

5 ವರ್ಷವೂ ನಾನೇ ಮುಖ್ಯಮಂತ್ರಿ..!! ದೆಹಲಿಯಲ್ಲೇ ಕುಳಿತು ಸಿಎಂ ಸಿದ್ದು ಮಾಸ್ಟರ್ ಸ್ಟ್ರೋಕ್ ! 

by Chetan
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada