“ಕಳೆದ ಮೂರು ತಿಂಗಳುಗಳ ಮಳೆ ಮತ್ತು ಪ್ರವಾಹದಿಂದಾಗಿ ರಾಜ್ಯದ ರೈತರು ಬೆಳೆ-ಮನೆ ಎಲ್ಲವನ್ನೂ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಈ ಬಗ್ಗೆ ವಿಸ್ತೃತವಾಗಿ ಚರ್ಚೆ ನಡೆಸಲು ಸಿಎಂ ಯಡಿಯೂರಪ್ಪ ಅವರು ತಕ್ಷಣ ವಿಧಾನಮಂಡಲದ ವಿಶೇಷ ಅಧಿವೇಶನ ಕರೆಯಬೇಕೆಂದು ಒತ್ತಾಯಿಸುತ್ತಿದ್ದೇನೆ. ರೈತರು ಮುಂಗಾರು ಬೆಳೆಯನ್ನು ಸಂಪೂರ್ಣ ಕಳೆದುಕೊಂಡಿದ್ದಾರೆ, ನೆರೆನೀರಿನ ಶೀತ ಇಳಿಯದೆ ಹಿಂಗಾರು ಬಿತ್ತನೆ ಮಾಡೋ ಹಾಗಿಲ್ಲ. ಎರಡೂ ಬೆಳೆಗಳನ್ನು ಕಳೆದುಕೊಂಡಿರುವ ರೈತರ ಕಷ್ಟಗಳನ್ನು ಕೇಳುವವರೇ ಇಲ್ಲ. ಇದೊಂದು ಪಂಚೇಂದ್ರಿಯವನ್ನು ಕಳೆದುಕೊಂಡು ಮರಗಟ್ಟಿಹೋಗಿರುವ ಸರ್ಕಾರ,” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
ಇಲ್ಲಿಯ ವರೆಗೆ ಸರ್ಕಾರ ಪ್ರವಾಹದ ನಷ್ಟದ ಸಮೀಕ್ಷೆನೇ ಮಾಡಿಲ್ಲ. ಸಿಎಂ ವಿಮಾನದಲ್ಲಿ ನೋಡಿ ಹೋದರು, ಕಂದಾಯ ಸಚಿವರು ಕಾಟಾಚಾರಕ್ಕೆ ಭೇಟಿ ನೀಡಿದರು, ಜಿಲ್ಲಾ ಸಚಿವರಾಗಲಿ, ಅಧಿಕಾರಿಗಳು ಜನರ ಬಳಿ ಹೋಗಿಯೇ ಇಲ್ಲ. ಇಡೀ ಸರ್ಕಾರವೇ ನೆರೆಯಲ್ಲಿ ಕೊಚ್ಚಿಕೊಂಡ ಹೋಗಿರುವಂತಹ ದುಸ್ಥಿತಿ ಇದೆ. ಒಂದೆಡೆ ಕೊರೊನಾ, ಇನ್ನೊಂದೆಡೆ ಪ್ರವಾಹ, ಮತ್ತೊಂದೆಡೆ ಹಾಳಾಗಿ ಹೋಗಿರುವ ಶಾಂತಿ ಮತ್ತು ಸುವ್ಯವಸ್ಥೆ, ಇವೆಲ್ಲದರ ನಡುವೆ ಭ್ರಷ್ಟಾಚಾರದ ಹಗರಣಗಳು. ಈ ಬಗ್ಗೆ ಚರ್ಚೆಗೆ ನಡೆಸಲು ವಿಧಾನಮಂಡಲವೇ ಸೂಕ್ತ ವೇದಿಕೆ. ಆದರೆ ವಿರೋಧ ಪಕ್ಷಗಳನ್ನು ಎದುರಿಸುವ ಧೈರ್ಯವೇ ರಾಜ್ಯ ಸರ್ಕಾರಕ್ಕೆ ಇಲ್ಲ, ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಒಂದೆಡೆ ಕೊರೊನಾ,
ಇನ್ನೊಂದೆಡೆ ಪ್ರವಾಹ, ಮತ್ತೊಂದೆಡೆ ಹಾಳಾಗಿ ಹೋಗಿರುವ ಶಾಂತಿ ಮತ್ತು ಸುವ್ಯವಸ್ಥೆ,
ಇವೆಲ್ಲದರ ನಡುವೆ ಭ್ರಷ್ಟಾಚಾರದ ಹಗರಣಗಳು.
ಈ ಬಗ್ಗೆ ಚರ್ಚೆಗೆ ನಡೆಸಲು ವಿಧಾನಮಂಡಲವೇ ಸೂಕ್ತ ವೇದಿಕೆ.
ಆದರೆ ವಿರೋಧಪಕ್ಷಗಳನ್ನು ಎದುರಿಸುವ ಧೈರ್ಯವೇ ರಾಜ್ಯ ಸರ್ಕಾರಕ್ಕೆ ಇಲ್ಲ.
2/10#ಬಸವಕಲ್ಯಾಣ— Siddaramaiah (@siddaramaiah) October 25, 2020
ಕೇಂದ್ರಸರ್ಕಾರದ ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಿದರೆ ರೈತರ ನಷ್ಟ ಭರಿಸಲಾಗದು. ನಮ್ಮ ಸರ್ಕಾರ ಒಂದು ಹೆಕ್ಟೇರ್ ಗೆ ರೂ. 25,000 ಪರಿಹಾರ ಕೊಟ್ಟಿತ್ತು. ಅದೇ ರೀತಿ ಕೊಡಬೇಕು. ಕಳೆದ ವರ್ಷದ ಪ್ರವಾಹದ ಹಾನಿಗೆ ಇಲ್ಲಿಯ ವರೆಗೆ ಪರಿಹಾರ ನೀಡದ ರಾಜ್ಯ ಸರ್ಕಾರದಿಂದ ಏನು ನಿರೀಕ್ಷಿಸಲು ಸಾಧ್ಯ? ಒಂದು ಅಂದಾಜಿನ ಪ್ರಕಾರ ಸುಮಾರು ಆರುಕಾಲು ಲಕ್ಷ ಎಕರೆಯಲ್ಲಿ ರೈತರು ಬೆಳೆ ಕಳೆದುಕೊಂಡಿದ್ದಾರೆ. ಕೇವಲ ಬೆಳೆಹಾನಿಯಿಂದಲೇ ರೂ. 1,500 ಕೋಟಿ ನಷ್ಟವಾಗಿದೆ.,1700 ಮನೆಗಳು ಬಿದ್ದಿವೆಯಂತೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಇಲ್ಲಿಯ ವರೆಗೆ ಪೈಸೆ ಪರಿಹಾರವನ್ನೂ ಕೊಟ್ಟಿಲ್ಲ, ಎಂದು ಸಿದ್ದರಾಮಯ್ಯ ಟ್ವಿಟರ್ನಲ್ಲಿ ವಾಗ್ದಾಳಿ ನಡೆಸಿದ್ದಾರೆ.
ಇಂದು ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಮುಡಬಿ, ಕಲಖೋರಾ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ, ಪ್ರವಾಹದಿಂದ ಬೆಳೆ ನಷ್ಟಕ್ಕೀಡಾಗಿರುವ ರೈತರೊಂದಿಗೆ ಮಾತುಕತೆ ನಡೆಸಿ ಅವರ ಅಹವಾಲು ಆಲಿಸಿದೆ.#Basavakalyana pic.twitter.com/6Iax2U4H09
— Siddaramaiah (@siddaramaiah) October 25, 2020
ಇದಕ್ಕೂ ಮೊದಲು ಸಿದ್ದರಾಮಯ್ಯ ಅವರು ಪ್ರವಾಹ ಸಂತ್ರಸ್ತರನ್ನು ಭೇಟಿಯಾಗಿ ಅಹವಾಲು ಆಲಿಸಿದ್ದರು. ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದ ಮುಡಬಿ, ಕಲಖೋರಾ ಸೇರಿದಂತೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರವಾಹದಿಂದ ಬೆಳೆ ನಷ್ಟಕ್ಕೀಡಾಗಿರುವ ರೈತರೊಂದಿಗೆ ಮಾತುಕತೆ ನಡೆಸಿ ಅವರ ಅಹವಾಲು ಆಲಿಸಿದ್ದಾರೆ.






