• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ವ್ಯಾಪಕ ಖಂಡನೆಗೆ ಒಳಗಾಗುತ್ತಿರುವ ʼವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮʼ

by
November 18, 2020
in ಕರ್ನಾಟಕ
0
ವ್ಯಾಪಕ ಖಂಡನೆಗೆ ಒಳಗಾಗುತ್ತಿರುವ ʼವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮʼ
Share on WhatsAppShare on FacebookShare on Telegram

ವೀರಶೈವ ಲಿಂಗಾಯಿತ ಅಭಿವೃದ್ದಿ ನಿಗಮ ರಚನೆಗೆ ಮುಂದಾಗಿರುವ ಬಿ. ಎಸ್ ಯಡಿಯೂರಪ್ಪ ರವರ ನಿರ್ಧಾರದ ವಿರುದ್ಧ ಹಿಂದುಳಿದ ವರ್ಗಗಳ ಸಂಘಟನೆಗಳಿಂದ, ಸಾಮಾಜಿಕ ಜಾಲತಾಣ ಬಳಕೆದಾರರಿಂದ ವ್ಯಾಪಕ ಖಂಡನೆ ಎದುರಾಗಿದೆ.

ADVERTISEMENT

ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಜನರಿಗಿಂತಲೂ ಅತಿ ಹೆಚ್ಚು ಹಿಂದೆ ಉಳಿದಿರುವ ಸಮುದಾಯಗಳೂ ಇವೆ. ಅಂತಹ ಸಮುದಾಯಗಳನ್ನು ಗುರುತಿಸಿ ಅವರಿಗೆ ಅಭಿವೃದ್ಧಿ ನಿಗಮ ರಚನೆ ಮೀಸಲಾತಿ ಹಲವಾರು ಮೂಲ ಸೌಕರ್ಯಗಳನ್ನು ಒದಗಿಸದೆ ಮೇಲ್ವರ್ಗದ ಜನರ ಓಲೈಕೆಗೆ ಮುಂದಾಗುತ್ತಿರುವುದು ರಾಜ್ಯದ ಹಿಂದುಳಿದ ವರ್ಗದ ಜನರ ಕೆಂಗಣ್ಣಿಗೆ ಗುರಿಯಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈಗಾಗಲೇ ಒಕ್ಕಲಿಗ ಸಮುದಾಯದ ಜನರು ನಮಗೂ ಅಭಿವೃದ್ದಿ ನಿಗಮ ರಚನೆ ಮಾಡಬೇಕು ಎಂದು ರಾಜ್ಯದಲ್ಲಿ ಬಿ .ಎಸ್ ಯಡಿಯೂರಪ್ಪ ರಿಗೆ ಒತ್ತಡವನ್ನು ಹೇರುತ್ತಿದ್ದಾರೆ. ಸಿದ್ಧಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರು ಸಹ ಯಡಿಯೂರಪ್ಪರ ನಡೆಗೆ ವಿರೋಧ ವ್ಯಕ್ತಪಡಿಸಿದ್ದು, ಜಾತಿಗೊಂದು ಅಭಿವದ್ಧಿ ನಿಗಮ ಮಾಡಿದರೆ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ಕುರುಬ ಸಮುದಾಯ, ಹಾಲುಮತ ಕುರುಬ ಸಮುದಾಯ ಹೀಗೆ ಹಲವಾರು ಹಿಂದುಳಿದ ವರ್ಗಗಳ ಸಮುದಾಯದ ಜನರು ನಮಗೂ ಅಭಿವೃದ್ದಿ ನಿಗಮ ರಚನೆ ಮಾಡಬೇಕು ಬಿಗಿಪಟ್ಟು ಹಿಡಿದಿವೆ. ಹಿಂದುಳಿದ ರಾಜ್ಯದ ಹಿಂದುಳಿದ ಜನರಿಗೆ ಯಡಿಯೂರಪ್ಪ ಯಾವ ರೀತಿ ಉತ್ತರಿಸಲಿದ್ದಾರೆ ಎಂದು ಕಾದು ನೋಡಬೇಕಾಗಿದೆ. ಯಡಿಯೂರಪ್ಪರವರು ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ವ್ಯಕ್ತಿಯಾಗಿದ್ದು ಆ ಜನಾಂಗದ ವರ್ಗದ ಜನರಿಗೆ ಅಭಿವೃದ್ಧಿ ನಿಗಮ ರಚನೆ ಮಾಡಿದ್ದಾರೆ ರಾಜ್ಯದಲ್ಲಿ ಎಲ್ಲಾ ಸಮುದಾಯದವರು ಇವರಿಗೆ ಮತ ಹಾಕಿ ಈ ರಾಜ್ಯದ ಮುಖ್ಯಮಂತ್ರಿ ಮಾಡಿಲ್ಲವೇ ? ಇದನ್ನು ಅರ್ಥ ಮಾಡಿಕೊಳ್ಳದೆ ಕೇವಲ ಒಂದು ಸಮುದಾಯದ ಜನರ ಒಲೈಕೆಗಾಗಿ ಮುಖ್ಯಮಂತ್ರಿಗಳು ಇಂತಹ ನಿರ್ಧಾರ ಮಾಡಿರುವುದು ರಾಜ್ಯದ ಹಿಂದುಳಿದ ಜನರಿಗೆ ದೊಡ್ಡ ಮೋಸವನ್ನು ಎಸಗಿದ್ದಾರೆ ಎಂದು ಹಿಂದುಳಿದ ಸಮುದಾಯದ ಸಂಘಟನೆಗಳ ಮುಖ್ಯ ಆರೋಪ.

ಈ ಹಿಂದೆಯೂ ಯಡಿಯೂರಪ್ಪ ರಾಜ್ಯದ ಮಠ ಮಾನ್ಯಗಳಿಗೆ ಸಾಕಷ್ಟು ಅನುದಾನ ಹರಿಸಿ ರಾಜ್ಯದ ಜನರ ಕೆಂಗಣ್ಣಿಗೆ ಗುರಿಯಾಗಿದ್ದರು. ಯಡಿಯೂರಪ್ಪರಿಗೆ ಮಠಗಳನ್ನು ಬಿಟ್ಟು ಬೇರೆ ವರ್ಗದ ಜನರು ಕಣ್ಣಿಗೆ ಕಾಣುತ್ತಿಲ್ಲ ಎಂಬ ಆರೋಪದ ಕೂಗುಗಳು ಸಾಕಷ್ಟು ಕೇಳಿಬಂದಿದ್ದವು. ಈಗಲೂ ಕೂಡಾ ಅಂತಹ ತಪ್ಪುಗಳನ್ನೇ ಬಿ.ಎಸ್.ಯಡಿಯೂರಪ್ಪರವರು ಮಾಡುತ್ತಿರುವುದು ಜಾತಿಯ ರಾಜಕಾರಣವೆಂಬ ಆಪಾದನೆಗಳು ಕೇಳಿಬರುತ್ತಿವೆ .

ಈಗಾಗಲೇ ಜಾತಿಗೊಂದು ನಿಗಮ ರಚನೆಯ ಕುರಿತು ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ಹಲವಾರು ರಾಜಕೀಯ ನಾಯಕರು, ಸಾಮಾಜಿಕ ಕಾರ್ಯಕರ್ತರು ಖಂಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ವ್ಯಂಗ್ಯ, ಟೀಕೆಗೆ ಯಡಿಯೂರಪ್ಪ ಸರ್ಕಾರದ ನೂತನ ನಿರ್ಧಾರ ಗುರಿಯಾಗಿದೆ.

ಜಾತಿಯಾಧಾರಿತ ನಿಗಮಗಳ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತವಾದ ಕೆಲವು ಅನಿಸಿಕೆಗಳು

Previous Post

ಕುಸಿದ ಲಕ್ಷ್ಮಿ ವಿಲಾಸ ಬ್ಯಾಂಕಿನ ಅಕ್ರಮಗಳ ವಿಲಾಸಕ್ಕೆ ಕೊನೆಯೇ ಇಲ್ಲ!

Next Post

ಮರಾಠಾ ನಿಗಮ ಘೋಷಣೆ ಬೆನ್ನಲ್ಲೇ ಬೆಳಗಾವಿ ನಮ್ಮದು ಎಂದ ಮಹಾರಾಷ್ಟ್ರ!

Related Posts

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”
Top Story

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

by ಪ್ರತಿಧ್ವನಿ
April 21, 2026
0

 ಬೆಂಗಳೂರು : ದಾವಣಗೆರೆ ಉಪಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ ಪಾಳಯದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್‌ ಜಬ್ಬಾರ್‌ ರಾಜೀನಾಮೆಯಿಂದ ಆರಂಭವಾದ...

Read moreDetails
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

ತಮಿಳುನಾಡಿಗೆ ಡಿಎಂಕೆ ಮೈತ್ರಿಕೂಟದಿಂದಲೇ ಭವಿಷ್ಯ: ಡಿಸಿಎಂ ಡಿ.ಕೆ. ಶಿವಕುಮಾರ್‌

April 21, 2026
ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

ಕುಮಾರಸ್ವಾಮಿ ದೊಡ್ಡ ವ್ಯಕ್ತಿ ಇರಬಹುದು, ಆದ್ರೆ ನನಗೂ ಸಣ್ಣ ಅನುಭವವಿದೆ : ಹೆಚ್‌ಡಿಕೆಗೆ ಡಿಕೆಶಿ ಡಿಚ್ಚಿ..

April 21, 2026
ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

April 21, 2026
Next Post
ಮರಾಠಾ ನಿಗಮ ಘೋಷಣೆ ಬೆನ್ನಲ್ಲೇ ಬೆಳಗಾವಿ ನಮ್ಮದು ಎಂದ ಮಹಾರಾಷ್ಟ್ರ!

ಮರಾಠಾ ನಿಗಮ ಘೋಷಣೆ ಬೆನ್ನಲ್ಲೇ ಬೆಳಗಾವಿ ನಮ್ಮದು ಎಂದ ಮಹಾರಾಷ್ಟ್ರ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada