• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಶಿವಮೊಗ್ಗದಲ್ಲಿ ಮಾಸ್ಕ್, ಅಂತರ ನಿಯಮ ಅಮಾಯಕರಿಗಷ್ಟೆನಾ?

by
June 1, 2020
in ಕರ್ನಾಟಕ
0
ಶಿವಮೊಗ್ಗದಲ್ಲಿ ಮಾಸ್ಕ್
Share on WhatsAppShare on FacebookShare on Telegram

ಕಳೆದ ವಾರ ಕೇಂದ್ರ ಸಚಿವ ಸದಾನಂದ ಗೌಡರು ಕ್ವಾರಂಟೈನ್ ನಿಯಮ ಉಲ್ಲಂಘಿಸಿ ಸುದ್ದಿಯಾಗಿದ್ದರು. ಬಳಿಕ ರಾಜ್ಯ ಸರ್ಕಾರ ಕೋರಂಟೈನ್ ಸಂಬಂಧಿಸಿದ ಕೋವಿಡ್-19 ಮಾರ್ಗದರ್ಶಿ ಸೂತ್ರವನ್ನೇ ತಿದ್ದುಪಡಿ ಮಾಡಿ ಸಚಿವರನ್ನು ಇನ್ನಷ್ಟು ಮುಜುಗರದಿಂದ ಪಾರುಮಾಡುವ ಯತ್ನ ನಡೆಸಿ ಸಾರ್ವಜನಿಕ ಟೀಕೆಗೂ ಗುರಿಯಾಗಿತ್ತು.

ADVERTISEMENT

ಇದೀಗ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರುಗಳು ಸಾಮಾಜಿಕ ಅಂತರ ಮತ್ತು ಮಾಸ್ಕ್ ಬಳಕೆಯ ನಿಯಮಗಳನ್ನು ಗಾಳಿಗೆ ತೂರಿ ಶಿವಮೊಗ್ಗ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವ ಮೂಲಕ ಕೋವಿಡ್-19 ಸಂಬಂಧಿಸಿದ ಕಾನೂನು- ಕಟ್ಟಳೆಗಳು ಜನಸಾಮಾನ್ಯರ ಪಾಲಿಗೆ ಮಾತ್ರವೇ ವಿನಃ ಬಿಜೆಪಿಯ ನಾಯಕರ ಪಾಲಿಗಲ್ಲಎಂಬ ಸಂದೇಶವನ್ನು ರವಾನಿಸಿದ್ದಾರೆ.

ಅಲ್ಲದೆ, ಸೋಮವಾರ ನಡೆದ ಶಿವಮೊಗ್ಗ ಮಹಾನಗರ ಪಾಲಿಕೆಯ ಸರಣಿ ಕಾರ್ಯಕ್ರಮಗಳಲ್ಲಿ ಸಚಿವದ್ವಯರೊಂದಿಗೆ ಪಾಲಿಕೆಯ ಮೇಯರ್, ಉಪಮೇಯರ್, ಪ್ರತಿಪಕ್ಷ ನಾಯಕರು, ಆಯುಕ್ತರಾದಿಯಾಗಿ ಹಲವು ಅಧಿಕಾರಿಗಳು ಹೀಗೆ ಎಲ್ಲರೂ ಮಾಸ್ಕ್ ಧರಿಸುವ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಯಮಗಳಿಗೆ ಯಾವ ಕಿಮ್ಮತ್ತನ್ನೂ ನೀಡದೇ ಸಾರ್ವಜನಿಕವಾಗಿಯೇ ತಾವು ರೂಪಿಸಿದ ನಿಯಮಗಳು ತಮ್ಮನ್ನು ಹೊರತುಪಡಿಸಿ ಅನ್ಯರಿಗೆ ಮಾತ್ರ ಅನ್ವಯ ಎಂದು ಸಾರಿ ಹೇಳಿದ್ದಾರೆ.

ಹಾಗೆ ನೋಡಿದರೆ, ಇದೇ ಶಿವಮೊಗ್ಗ ಮಹಾನಗರ ಪಾಲಿಕೆ ಮಾಸ್ ಧರಿಸಿಲ್ಲ ಎಂಬ ಕಾರಣಕ್ಕೆ ಕರ್ತವ್ಯನಿರತ ಪೊಲೀಸ್ ಅಧಿಕಾರಿಯೊಬ್ಬರಿಗೆ ಕಳೆದ ವಾರವಷ್ಟೇ ದಂಡ ವಿಧಿಸಿತ್ತು. ಜೊತೆಗೆ ದಂಡ ವಿಧಿಸುವ ವೇಳೆ ಸಾಕಷ್ಟು ಮಾತಿನ ಚಕಮಕಿ ನಡೆದು ಸಾರ್ವಜನಿಕ ವಲಯದಲ್ಲಿ ಚರ್ಚೆಗೇ ಗ್ರಾಸವಾಗಿತ್ತು. ಅಲ್ಲದೆ, ನಗರದಲ್ಲಿ ಕಟ್ಟುನಿಟ್ಟಾಗಿ ಮಾಸ್ಕ್ ಧರಿಸುವುದನ್ನು ಖಾತರಿಗೊಳಿಸುವ ಕ್ರಮವಾಗಿ ವ್ಯಾಪಕವಾಗಿ ದಂಡ ವಿಧಿಸಲಾಗುತ್ತಿದೆ. ಖಾಸಗೀ ಕಾರಿನಲ್ಲಿ ಹೋಗುವವರಿಗೂ ಮಾಸ್ಕ್ ಧರಿಸದೇ ಇರುವುದಕ್ಕೆ ದಂಡ ಹಾಕಿರುವ ಘಟನೆಗಳೂ ಇವೆ. ತನ್ನದೇ ಕಾರಿನಲ್ಲಿ ತಾನೊಬ್ಬನೇ ಸಂಚರಿಸುವಾಗ, ಕಾರಿನ ಒಳಗೆ ಕಿಟಕಿ ಗಾಜು ಏರಿಸಿಕೊಂಡಿರುವಾಗಲೂ ಆತ ಮಾಸ್ಕ್ ಧರಿಸದೇ ಇದ್ದರೆ ದಂಡ ವಿಧಿಸಿದ ಉದಾಹರಣೆಗಳೂ ಇವೆ.

ಶಿವಮೊಗ್ಗ ಮಹಾನಗರ ಪಾಲಿಕೆ ಹೀಗೆ ಹಠಕ್ಕೆ ಬಿದ್ದು ಸಾರ್ವಜನಿಕರಿಗೆ ದಂಡ ವಿಧಿಸಿ ವಸೂಲಿ ಮಾಡಿದ ಶುಲ್ಕವೇ ಬರೋಬ್ಬರಿ 1.50 ಲಕ್ಷ ರೂಪಾಯಿ! ಏಪ್ರಿಲ್ 24ರಿಂದ ಜಾರಿಗೆ ಬಂದ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯ ಎಂಬ ನಿಯಮಗಳಿಂದಾಗಿ ನಗರಪಾಲಿಕೆಯ ವ್ಯಾಪ್ತಿಯಲ್ಲಿ ಮಾಸ್ಕ್ ಧರಿಸದ ಸುಮಾರು 800 ಮಂದಿಗೆ ದಂಡ ವಿಧಿಸಲಾಗಿದ್ದು, ಬರೋಬ್ಬರಿ 1.50 ಲಕ್ಷ ಹಣ ವಸೂಲಿ ಮಾಡಲಾಗಿದೆ. ಹಾಗೆಯೇ ಸಾಮಾಜಿಕ ಅಂತರ ಕಾಯ್ದುಕೊಳ್ಳದ 350ಕ್ಕೂ ಅಧಿಕ ಮಂದಿಗೆ ದಂಡ ವಿಧಿಸಲಾಗಿದ್ದು, ಸುಮಾರು 75 ಸಾವಿರ ರೂ. ವಸೂಲಿ ಮಾಡಲಾಗಿದೆ. ಹಾಗೇ ಸಾರ್ವಜನಿಕ ಸ್ಥಳದಲ್ಲಿ ಉಗುಳಿದವರಿಗೂ ತಲಾ ಒಂದು ಸಾವಿರ ರೂ. ದಂಡ ಹಾಕಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಐದಕ್ಕೂ ಹೆಚ್ಚು ತಂಡಗಳು ಹೀಗೆ ದಂಡ ವಿಧಿಸಲೆಂದೇ ನೇಮಕವಾಗಿವೆ.

ಕಟ್ಟುನಿಟ್ಟಿನ ಕ್ರಮದಿಂದಾಗಿ ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್- ಸಾಮಾಜಿಕ ಅಂತರದಂತಹ ಕ್ರಮಗಳು ಪರಿಣಾಮಕಾರಿಯಾಗಿ ಜಾರಿಯೂ ಆಗಿವೆ. ಜನತೆ ಕೂಡ ಬಹುತೇಕ ನಿಯಮ ಪಾಲಿಸುತ್ತಿದ್ದಾರೆ. ಆ ಮೂಲಕ ಸಾರ್ವಜನಿಕ ಆರೋಗ್ಯ ಮತ್ತು ವೈಯಕ್ತಿಕ ಆರೋಗ್ಯದ ಕಡೆ ಜನರ ಗಮನ ಸೆಳೆಯುವಲ್ಲಿ ಪಾಲಿಕೆಯ ಕ್ರಮ ಯಶಸ್ವಿಯೂ ಆಗಿದೆ.

ಆದರೆ, ಈ ಎಲ್ಲಾ ದಂಡನೆಯ ಕ್ರಮಗಳು ಅಮಾಯಕರ ಜನರ ಪಾಲಿಗೆ ಮಾತ್ರ, ಸಚಿವರು, ಅಧಿಕಾರಿಗಳು ಮುಂತಾದ ಪ್ರಭಾವಿಗಳಿಗಲ್ಲ ಎಂಬುದನ್ನು ಸೋಮವಾರದ ಸರಣಿ ಕಾರ್ಯಕ್ರಮಗಳು ಜಗಜ್ಜಾಹೀರುಮಾಡಿವೆ ಎಂಬುದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

Tags: Byrati BasavarajuK S EshwarappaN-95 maskSocial Distancingಕೆ ಎಸ್ ಈಶ್ವರಪ್ಪಭೈರತಿ ಬಸವರಾಜುಶಿವಮೊಗ್ಗಸಾಮಾಜಿಕ ಅಂತರ
Previous Post

ಪ್ರಣಾಳಿಕೆಯ ಆಶ್ವಾಸನೆಗಳನ್ನು ಈಡೇರಿಸದ ಮೋದಿ- ಸುಪ್ರಿಂ ನಿವೃತ್ತ ನ್ಯಾಯಮೂರ್ತಿ ಗೋಪಾಲ ಗೌಡ

Next Post

ರಾಜ್ಯ ಆರ್ಥಿಕ ಬಿಕ್ಕಟ್ಟು: ಗೃಹ ರಕ್ಷಕ ಇಲಾಖೆಯಲ್ಲಿ ಭಾರೀ ಉದ್ಯೋಗ ಕಡಿತ

Related Posts

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು
Top Story

ಅಂಬೇಡ್ಕರ್ ಮತ್ತು ಸಂವಿಧಾನ – ವಾಸ್ತವಗಳು

by ಪ್ರತಿಧ್ವನಿ
April 20, 2026
0

ವಿಶೇಷ ಲೇಖನ : ನಾ ದಿವಾಕರ ( ಸಂವಾದ ಮಾಸಪತ್ರಿಕೆಯ ಏಪ್ರಿಲ್ 2026 ರ ಅಂಬೇಡ್ಕರ್ ವಿಶೇಷ ಸಂಚಿಕೆಗೆ ಬರೆದ ಲೇಖನ ) ಭಾಗ 2 ಹಕ್ಕು...

Read moreDetails
ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

April 19, 2026
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
Next Post
ರಾಜ್ಯ ಆರ್ಥಿಕ ಬಿಕ್ಕಟ್ಟು: ಗೃಹ ರಕ್ಷಕ ಇಲಾಖೆಯಲ್ಲಿ ಭಾರೀ ಉದ್ಯೋಗ ಕಡಿತ

ರಾಜ್ಯ ಆರ್ಥಿಕ ಬಿಕ್ಕಟ್ಟು: ಗೃಹ ರಕ್ಷಕ ಇಲಾಖೆಯಲ್ಲಿ ಭಾರೀ ಉದ್ಯೋಗ ಕಡಿತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada