• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಂಪುಟ ಕಗ್ಗಂಟು: ಬಹಿರಂಗ ಹೇಳಿಕೆಗೆ ಬೀಗ ಹಾಕಲು ಕೋರ್ ಕಮಿಟಿ ನಿರ್ಧಾರ

by
December 5, 2020
in ಕರ್ನಾಟಕ
0
ಸಂಪುಟ ಕಗ್ಗಂಟು: ಬಹಿರಂಗ ಹೇಳಿಕೆಗೆ ಬೀಗ ಹಾಕಲು ಕೋರ್ ಕಮಿಟಿ ನಿರ್ಧಾರ
Share on WhatsAppShare on FacebookShare on Telegram

ಸಂಪುಟ ಪುನರ್ ರಚನೆಯ ತಿಕ್ಕಾಟದ ನಡುವೆ ಕುಂದಾ ನಗರಿ ಬೆಳಗಾವಿಯಲ್ಲಿ ಶನಿವಾರ ರಾತ್ರಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆ ಸಚಿವ ಸ್ಥಾನಾಕಾಂಕ್ಷಿಗಳಿಗೆ ನಿರಾಶಾದಾಯಕ ಸಂದೇಶ ನೀಡಿದೆ.

ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ನೇತೃತ್ವದಲ್ಲಿ ನಡೆದ ಮೊಟ್ಟಮೊದಲ ಕೋರ್ ಕಮಿಟಿ ಸಭೆಯಲ್ಲಿ ಪ್ರಮುಖವಾಗಿ ಸಂಪುಟ ಪುನರ್ ರಚನೆ ಬಿಕ್ಕಟ್ಟು, ನಿಗಮ ಮಂಡಳಿ ನೇಮಕದ ಮುಖ್ಯಮಂತ್ರಿಗಳ ಏಕಪಕ್ಷೀಯ ನಿರ್ಧಾರ ಪಕ್ಷದಲ್ಲಿ ಹುಟ್ಟಿಸಿರುವ ಅಸಮಾಧಾನ, ಸರ್ಕಾರ ಮತ್ತು ಸಂಪುಟದ ವಿಷಯದಲ್ಲಿ ಪಕ್ಷದ ನಾಯಕರು ನೀಡುತ್ತಿರುವ ಬಹಿರಂಗ ಹೇಳಿಕೆಗಳಿಂದ ಪಕ್ಷದ ಸಂಘಟನೆಯ ಮೇಲೆ ಆಗುತ್ತಿರುವ ಪರಿಣಾಮಗಳನ್ನು ಚರ್ಚಿಸಲಾಗಿದೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಮುಖ್ಯವಾಗಿ ಸಭೆಗೆ ಮುನ್ನ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದ ಅರುಣ್ ಸಿಂಗ್, ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಯ ವಿಷಯದಲ್ಲಿ ಪಕ್ಷದ ವರಿಷ್ಠರು ಮುಖ್ಯಮಂತ್ರಿಗಳಿಗೆ ನೀಡಿದ ಸಂದೇಶವನ್ನು ಮನವರಿಕೆ ಮಾಡಿದರು. ಆ ಸಂದೇಶದ ಪ್ರಕಾರ ಸದ್ಯ ಗ್ರಾಮ ಪಂಚಾಯ್ತಿ ಚುನಾವಣೆಗೆ ಮುನ್ನ ಯಾವುದೇ ರೀತಿಯಲ್ಲೂ ಸಂಪುಟ ವಿಸ್ತರಣೆ ಅಥವಾ ಪುನರ್ ರಚನೆಯ ಪ್ರಯತ್ನಗಳಿಗೆ ಕೈಹಾಕುವುದು ಬೇಡ. ಚುನಾವಣೆಗಳ ಬಳಿಕ ಕಾದುನೋಡಿ ಪಕ್ಷದ ಸಂಘಟನೆ ಮತ್ತು ಸರ್ಕಾರದ ಕಾರ್ಯನಿರ್ವಹಣೆಯನ್ನು ಗಮನದಲ್ಲಿಟ್ಟುಕೊಂಡು ಯಾರಿಗೆ ಸ್ಥಾನ ನೀಡಬೇಕು ಮತ್ತು ಯಾರನ್ನು ಕೈಬಿಡಬೇಕು ಎಂಬುದನ್ನು ವರಿಷ್ಠರೇ ನಿರ್ಧರಿಸಲಿದ್ದಾರೆ. ಅದು ಸ್ವತಃ ಸಿಎಂ ಅವರ ಹಿತಕಾಯುವ ಉದ್ದೇಶದಿಂದಲೇ ಕೈಗೊಳ್ಳಲಾಗುವ ನಿರ್ಧಾರವಾಗುತ್ತದೆ. ಹಾಗಾಗಿ ಅಲ್ಲಿಯವರೆಗೆ ಸ್ವತಃ ಸಿಎಂ ಮತ್ತು ಸ್ಥಾನಾಕಾಂಕ್ಷಿಗಳು ತಾಳ್ಮೆಯಿಂದ ಇರಬೇಕು. ಇಲ್ಲವಾದಲ್ಲಿ ಗ್ರಾಮಮಟ್ಟದಲ್ಲಿ ಪಕ್ಷವನ್ನು ಬಲಪಡಿಸುವ ಒಂದು ಅಪೂರ್ವ ಅವಕಾಶವಾಗಿರುವ ಪಂಚಾಯ್ತಿ ಚುನಾವಣೆಯ ಮೇಲೆ ಸಂಪುಟ ವಿಷಯ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದೂ ಸೇರಿದಂತೆ ಹಲವು ಸೂಕ್ಷ್ಮಗಳನ್ನು ಅರುಣ್ ಸಿಂಗ್, ಯಡಿಯೂರಪ್ಪ ಅವರಿಗೆ ಮನವರಿಕೆ ಮಾಡಿದರು ಎನ್ನಲಾಗಿದೆ.

ಬಳಿಕ ನಡೆದ ಕೋರ್ ಕಮಿಟಿ ಸಭೆಯಲ್ಲಿ ಸಂಪುಟ ವಿಷಯ ಹೆಚ್ಚು ಚರ್ಚೆಯಾಗಲಿಲ್ಲ. ಬದಲಿಗೆ ಆ ವಿಷಯಕ್ಕೆ ಸಂಬಂಧಿಸಿದಂತೆ ವರಿಷ್ಠರ ಸಂದೇಶವನ್ನು ಸಭೆಗೆ ತಿಳಿಸಿ, ಸಂಪುಟದ ವಿಷಯದಲ್ಲೇ ಆಗಲೀ, ಮುಖ್ಯಮಂತ್ರಿಗಳು ಮತ್ತು ಅವರ ಆಡಳಿತದ ವಿಷಯದಲ್ಲೇ ಆಗಲೀ ಪಕ್ಷದ ಸಚಿವರು, ಶಾಸಕರು ಸೇರಿದಂತೆ ಯಾವುದೇ ನಾಯಕರು ಬಹಿರಂಗ ಹೇಳಿಕೆಗಳನ್ನು ನೀಡಬಾರದು. ಸಂಪುಟ ವಿಸ್ತರಣೆ- ಪುನರ್ ರಚನೆಯಂತಹ ವಿಷಯ ಪಕ್ಷದ ಆಂತರಿಕ ವಿಷಯ. ಹಾಗಾಗಿ ಅಂತಹ ವಿಷಯಗಳನ್ನು ಬಹಿರಂಗವಾಗಿ ಚರ್ಚಿಸುವುದು ಪಕ್ಷದ ವರ್ಚಸ್ಸಿಗೆ ಪೆಟ್ಟು ಕೊಡಲಿದೆ. ಈಗಾಗಲೇ ಸಾಕಷ್ಟು ಹಿರಿಯ ನಾಯಕರು ಇಂತಹ ಹೇಳಿಕೆಗಳ ಮೂಲಕ ಮುಜುಗರ ತಂದಿದ್ದಾರೆ. ಆದರೆ, ಇನ್ನು ಇಂತಹ ಹೇಳಿಕೆಗಳನ್ನು ಪಕ್ಷದ ವರಿಷ್ಠರು ಹಗುರವಾಗಿ ಪರಿಗಣಿಸುವುದಿಲ್ಲ. ಶಿಸ್ತು ಕ್ರಮ ಜರುಗಿಸುವುದು ಅನಿವಾರ್ಯ ಎಂದು ಹೇಳುವ ಮೂಲಕ, ಸಂಪುಟ ವಿಷಯದಲ್ಲಿ ಪಕ್ಷದ ಮುಖಂಡರ ಬಾಯಿಗೆ ಬೀಗ ಹಾಕುವ ಕಟು ಎಚ್ಚರಿಕೆ ನೀಡಲಾಯಿತು.

Welcomed @BJP4India General Secretary & Karnataka in-charge Shri Arun Singh Ji in Belagavi today. Deputy Chief Ministers Shri Govind Karjol and Shri Laxman Savadi, other dignitaries were present. @ArunSinghbjp @BJP4Karnataka pic.twitter.com/wG8ma27Bra

— B.S. Yediyurappa (@BSYBJP) December 4, 2020


ADVERTISEMENT

ಸಭೆಯಲ್ಲಿ ಪ್ರಮುಖವಾಗಿ ನಿಗಮ ಮಂಡಳಿ ನೇಮಕದ ವಿಷಯದಲ್ಲಿ ಮುಖ್ಯಮಂತ್ರಿಗಳ ಏಕಪಕ್ಷೀಯ ವರಸೆಯ ಬಗ್ಗೆ ಕೋರ್ ಕಮಿಟಿ ಸದಸ್ಯರು ತೀವ್ರ ಅಸಮಾಧಾನ ಹೊರಹಾಕಿದರು. ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಬಿಟ್ಟು ತಮ್ಮ ಮನಸ್ಸಿಗೆ ತೋಚಿದವರನ್ನು ನೇಮಕ ಮಾಡುವ ಮೂಲಕ ಸಂಘಟನೆಗೆ ಪೆಟ್ಟು ಬಿದ್ದಿದೆ. ನೇಮಕದ ವೇಳೆ ಹಿರಿಯ ಸಚಿವರ ಮಾತಿಗೇ ಬೆಲೆ ಸಿಕ್ಕಿಲ್ಲ. ಹಾಗಾಗಿ ನಿಗಮ ಮಂಡಳಿ ನೇಮಕದಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸಬೇಕು ಎಂದು ಒಕ್ಕೊರಲಿನಿಂದ ಕೋರ್ ಕಮಿಟಿ ಒತ್ತಾಯಿಸಿತು. ಆಗ ಮಧ್ಯಪ್ರವೇಶಿಸಿದ ಸಿಎಂ, ಕೆಲವು ತಪ್ಪುಗಳಾಗಿರಬಹುದು. ಆದರೆ, ನೇಮಕಾತಿ ಮುಗಿದುಹೋಗಿಲ್ಲ. ಮುಂದಿನ ದಿನಗಳಲ್ಲಿ ಬಾಕಿ ಉಳಿದಿರುವ ಇನ್ನಷ್ಟು ನಿಗಮ-ಮಂಡಳಿ, ವಿವಿಧ ಜಿಲ್ಲಾ ಸಮಿತಿಗಳ ನೇಮಕದ ವೇಳೆ ಎಲ್ಲರ ವಿಶ್ವಾಸ ಪಡೆದು ಮಾಡಲಾಗುವುದು ಎಂದು ಸಮಾಧಾನಪಡಿಸಿದರು ಎನ್ನಲಾಗಿದೆ.

ಹಾಗೇ ಮರಾಠ ಮತ್ತು ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ- ನಿಗಮಗಳ ರಚನೆಯ ವಿಷಯದಲ್ಲಿ ಕೂಡ ಕೋರ್ ಕಮಿಟಿಯಲ್ಲಿ ಬಿರುಸಿನ ಚರ್ಚೆ ನಡೆಯಿತು. ಪಕ್ಷ ಮತ್ತು ಸರ್ಕಾರದ ಮೇಲೆ ಪರಿಣಾಮ ಬೀರುವ ಇಂತಹ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಪಕ್ಷದ ಕೋರ್ ಕಮಿಟಿಯಲ್ಲಿ ಚರ್ಚೆಯಾಗಬೇಕಿತ್ತು. ಅಂತಹ ಮಹತ್ವದ ನಿರ್ಧಾರಗಳ ಸಾಧನ-ಬಾಧಕ ಕುರಿತು ಪಕ್ಷದ ಉನ್ನತ ಸಮಿತಿಯಲ್ಲಿ ಚರ್ಚಿಸದೇ ಮುಖ್ಯಮಂತ್ರಿಗಳು ಏಕ ಪಕ್ಷೀಯವಾಗಿ ನಿರ್ಧಾರ ಕೈಗೊಂಡು ಏಕಾಏಕಿ ಘೋಷಣೆ ಮಾಡುವುದು ಸರಿಯಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಯಿತು ಎಂದು ಮೂಲಗಳು ಖಚಿತಪಡಿಸಿವೆ.

ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ, ಅರುಣ್ ಸಿಂಗ್ ಕೂಡ, ಸಂಪುಟ ವಿಸ್ತರಣೆ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಲಿದ್ದು, ಚರ್ಚೆ ಬಳಿಕ ನಿರ್ಧಾರ ಮಾಡಲಿದ್ದೇವೆ. ಆ ಕುರಿತ ವರಿಷ್ಠರ ಸಂದೇಶದ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಚರ್ಚೆ ನಡೆಸಲಾಗಿದ್ದು, ಏನೆಲ್ಲಾ ಚರ್ಚೆ ನಡೆಯಿತು, ಏನು ತೀರ್ಮಾನವಾಯಿತು ಎಂಬುದು ಪಕ್ಷದ ಆಂತರಿಕ ವಿಷಯ. ಹಾಗಾಗಿ ಅದನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

ಹಾಗೇ, ಬಿಜೆಪಿ ಕೋರ್ ಕಮಿಟಿ ಎರಡು ಪ್ರಮುಖ ನಿರ್ಣಯ ಕೈಗೊಂಡಿದ್ದು, ಲವ್ ಜಿಹಾದ್, ಗೋ ಹತ್ಯೆ ನಿಷೇಧ ಬಲವಾದ ಕಾನೂನು ತರಲು ಚರ್ಚಿಸಲಾಗಿದೆ. ಇನ್ನುಳಿದಂತೆ ಸಂಪುಟದ ಕುರಿತು, ಗ್ರಾಮ ಪಂಚಾಯ್ತಿ ಚುನಾವಣೆ ಕುರಿತು ಚರ್ಚಿಸಲಾಯಿತು ಎಂದು ಕೋರ್ ಕಮಿಟಿ ಸದಸ್ಯರಾದ ಶಾಸಕ ಅರವಿಂದ ಲಿಂಬಾವಳಿ ಹೇಳಿದ್ದಾರೆ.

ಒಟ್ಟಾರೆ, ಶನಿವಾರ ರಾತ್ರಿಯ ಕೋರ್ ಕಮಿಟಿ ಸಭೆಯಲ್ಲಿ ಸಚಿವಾಕಾಂಕ್ಷಿಗಳಿಗೆ ಶುಭ ಸುದ್ದಿ ಸಿಕ್ಕಿಲ್ಲ. ಭಾನುವಾರ ನಡೆಯಲಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ನಡೆಯಲಿರುವ ಚರ್ಚೆಗಳ ಬಗ್ಗೆ ಈಗ ಎಲ್ಲರ ಗಮನ ಕೇಂದ್ರೀಕರಿಸಿದೆ.

Tags: ಅರುಣ್ ಸಿಂಗ್ಕೋರ್ ಕಮಿಟಿ ಸಭೆಬಿ ಎಸ್ ಯಡಿಯೂರಪ್ಪಬಿಜೆಪಿಬಿಜೆಪಿ ಶಾಸಕ ಅರವಿಂದ ಲಿಂಬಾವಳಿಬೆಳಗಾವಿಸಂಪುಟ ಬಿಕ್ಕಟ್ಟು
Previous Post

ಕರ್ನಾಟಕ: 1247 ಹೊಸ ಕರೋನಾ ಪ್ರಕರಣಗಳು ದಾಖಲು

Next Post

ಕರ್ನಾಟಕ ಬಂದ್: ಪ್ರತಿಭಟನಾಕಾರರ ಬಂಧನ, ಹಲವೆಡೆ ಯತ್ನಾಳ್‌ ಪ್ರತಿಕೃತಿ ದಹನ

Related Posts

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
0

ಅಂಕಗಳೊಂದಿಗೆ ಕೌಶಲವಿದ್ದರೆ ಉದ್ಯೋಗಾವಕಾಶ ಬೆಂಗಳೂರು, ಜೂನ್‌ 20: ಯಾವುದೇ ಕೆಲಸದಲ್ಲಿ ಕೌಶಲ್ಯವಿಲ್ಲದಿದ್ದರೆ ಪ್ರಯೋಜನಕ್ಕೆ ಬರುವುದಿಲ್ಲ. ಕಟ್ಟಡ ಕಾರ್ಮಿಕರಿಂದ ಹಿಡಿದು ಎಂಜಿನಿಯರಿಂಗ್‌ ವರೆಗೆ ಎಲ್ಲರಿಗೂ ಕೌಶಲ್ಯ ಅಗತ್ಯ ಎಂದು...

Read moreDetails
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

June 20, 2025
ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

ಯುವ ‘ಎಕ್ಕ’ ಪ್ರಚಾರಕ್ಕೆ ಕಿಕ್ ಸ್ಟಾರ್ಟ್…ಜುಲೈ 18ಕ್ಕೆ ಚಿತ್ರ ರಿಲೀಸ್

June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

June 20, 2025

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

June 20, 2025
Next Post
ಕರ್ನಾಟಕ ಬಂದ್: ಪ್ರತಿಭಟನಾಕಾರರ ಬಂಧನ

ಕರ್ನಾಟಕ ಬಂದ್: ಪ್ರತಿಭಟನಾಕಾರರ ಬಂಧನ, ಹಲವೆಡೆ ಯತ್ನಾಳ್‌ ಪ್ರತಿಕೃತಿ ದಹನ

Please login to join discussion

Recent News

Top Story

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
June 20, 2025
ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್
Top Story

ಕೊತ್ತಲವಾಡಿ ರಿಲೀಸ್ ಡೇಟ್ ಫಿಕ್ಸ್… ಆಗಸ್ಟ್ 1ಕ್ಕೆ ಯಶ್‌ ತಾಯಿ ಬಂಡವಾಳ ಹೂಡಿರುವ ಸಿನಿಮಾ ರಿಲೀಸ್

by ಪ್ರತಿಧ್ವನಿ
June 20, 2025
ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 
Top Story

ಅಮಿತ್ ಶಾ ಅವರೇ ನನ್ನ ನಾಯಕ – ಏನೇ ಸಮಸ್ಯೆಯಿದ್ರೂ ನನ್ನ ಬೆನ್ನಿಗೆ ಅಮಿತ್ ಶಾ ನಿಲ್ತಾರೆ – ಹೆಚ್.ಡಿ.ಕೆ ಅಚ್ಚರಿ ಹೇಳಿಕೆ 

by Chetan
June 20, 2025
Top Story

ಆದಿಚುಂಚನಗಿರಿ ವಿಶ್ವವಿದ್ಯಾಲಯದ ಬೆಂಗಳೂರು ಕ್ಯಾಂಪಸ್ ಉದ್ಘಾಟನಾ ಸಮಾರಂಭ

by ಪ್ರತಿಧ್ವನಿ
June 20, 2025
ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 
Top Story

ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಕಾಂಗ್ರೆಸ್ ಶಾಸಕ – ವಸತಿ ಯೋಜನೆ ಗೋಲ್ಮಾಲ್ ಬಗ್ಗೆ ಬಿ.ಆರ್ ಪಾಟೀಲ್ ಆಡಿಯೋ ವೈರಲ್ ! 

by Chetan
June 20, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಕೌಶಲ್ಯದ ತರಬೇತಿ ಕೇಂದ್ರ ಆರಂಭ , ಕಾರ್ಯಾಗಾರಕ್ಕೆ ಚಾಲನೆ ನೀಡಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌

June 20, 2025
ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ರಾಜ್ಯ ಭ್ರಷ್ಟಾಚಾರ, ಕಮೀಶನ್ ಹಾವಳಿಯಿಂದ ತತ್ತರಿಸುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

June 20, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada