• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಂಪುಟ ಪುನರ್ ರಚನೆ ನೆಪದಲ್ಲಿ ಕುರ್ಚಿ ಮತ್ತು ಪುತ್ರನ ಉಳಿವಿಗಾಗಿ BSY ದೆಹಲಿ ಯಾತ್ರೆ

by
November 18, 2020
in ಕರ್ನಾಟಕ
0
ಸಂಪುಟ ಪುನರ್ ರಚನೆ ನೆಪದಲ್ಲಿ ಕುರ್ಚಿ ಮತ್ತು ಪುತ್ರನ ಉಳಿವಿಗಾಗಿ BSY ದೆಹಲಿ ಯಾತ್ರೆ
Share on WhatsAppShare on FacebookShare on Telegram

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಪಕ್ಷದ ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿ ದಂಡಯಾತ್ರೆ ಹಮ್ಮಿಕೊಂಡಿದ್ದಾರೆ. ದೆಹಲಿ ಯಾತ್ರೆಗೆ ಅವರು ಅಧಿಕೃತವಾಗಿ ತಿಳಿಸಿರುವುದು ‘ಕೇಂದ್ರ ಸಚಿವರ ಭೇಟಿಗಾಗಿ’ ಅಂತಾ. ಇದನ್ನು ಅವರ ಪ್ರವಾಸ ಕಾರ್ಯಕ್ರಮಗಳ ಪಟ್ಟಿಯಲ್ಲಿ ಉಲ್ಲೇಖ ಮಾಡಲಾಗಿದೆ. ಇದಲ್ಲದೆ ಮಾಧ್ಯಮಗಳಿಗೆ ‘ಸಚಿವ ಸಂಪುಟ ಪುನರ್ ರಚನೆಗೆ ಅನುಮತಿ ಪಡೆಯಲು’ ಎಂದು ಹೇಳಿದ್ದಾರೆ. ಎರಡೂ ನೂರಕ್ಕೆ ನೂರರಷ್ಟು ಸತ್ಯವಲ್ಲ. ಯಡಿಯೂರಪ್ಪ ಅವರ ಉದ್ದೇಶವೇ ಬೇರೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ದೆಹಲಿಗೆ ಬಂದ ಕಾರಣಕ್ಕೆ ಕೇಂದ್ರ ಸಚಿವರನ್ನು ಭೇಟಿಯಾಗಬಹುದು. ರಾಜ್ಯದ ವಿಷಯಗಳ ಬಗ್ಗೆ ಚರ್ಚಿಸಲೂ ಬಹುದು. ಅದೇ ರೀತಿ ಬಿಜೆಪಿ ಹೈಕಮಾಂಡ್ ನಾಯಕರನ್ನು ಭೇಟಿಯಾದಾಗ ಸಚಿವ ಸಂಪುಟ ಪುನರ್ ರಚನೆಗೆ, ಕಡೆಪಕ್ಷ ವಿಸ್ತರಣೆಗೆ ಅವಕಾಶವನ್ನೂ ಕೇಳಬಹುದು. ಆದರೆ ಇವೆರಡು ಅವರು ನಾಮಕಾವಸ್ತೆಗೆ ಮಾಡುವ ಕೆಲಸಗಳಷ್ಟೇ. ‘ಮೀಡಿಯಾ ಕನ್ಸಂಷನ್’ಗೋಸ್ಕರ ನಡೆಸುವ ಕಸರತ್ತುಗಳಷ್ಟೇ. ಅಸಲಿ ವಿಷಯ ಬೇರೆಯದೇ ಇದೆ.

Also Read: ಮರಮಕಲ್ ನೇಮಕ ರದ್ದು: ವಿಜಯೇಂದ್ರ ದಿಗ್ವಿಜಯಕ್ಕೆ ಮತ್ತೊಂದು ಗರಿ!

ಎಲ್ಲಾ‌ ಚುನಾವಣೋತ್ತರ ಸಮೀಕ್ಷೆಗಳು ಬಿಹಾರದಲ್ಲಿ ಎನ್ ಡಿಎ ಸೋಲುತ್ತದೆ ಎಂದು ಹೇಳಿದ್ದವು. ಅಂತಿಮವಾಗಿ ಸಾಕಷ್ಟು ತಿಣುಕಾಡಿ ಬಿಹಾರದಲ್ಲಿ ಅಧಿಕಾರ ಹಿಡಿದಿದೆ. ಸಹಜವಾಗಿ ‌ಬಿಜೆಪಿಯ ನಾಯಕರು ಆ ಖುಷಿಯಲ್ಲಿದ್ದಾರೆ. ಇದೇ ವೇಳೆ ರಾಜ್ಯದಲ್ಲಿ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಎರಡಕ್ಕೆ ಎರಡೂ ಕ್ಷೇತ್ರವನ್ನು ತನ್ನದಾಗಿಸಿಕೊಂಡಿದೆ. ಹಿಂದೆಂದೂ ಬಿಜೆಪಿ ಗೆಲ್ಲದೇ ಇದ್ದಂತಹ ಶಿರಾ ವಿಧಾನಸಭಾ ಕ್ಷೇತ್ರದಲ್ಲೂ ಗೆಲುವು ದಾಖಲಿಸಿದೆ. ರಾಜರಾಜೇಶ್ವರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದಿಂದ ಬಂದಿದ್ದ ಮುನಿರತ್ನ ನಾಯ್ಡು ಸ್ವಸಾಮರ್ಥ್ಯದಿಂದ ಗೆದ್ದಿದ್ದರೂ ಶಿರಾ ಕ್ಷೇತ್ರದ ಗೆಲುವಿಗೆ ತಮ್ಮ ಪುತ್ರ ಬಿ.ವೈ. ವಿಜಯೇಂದ್ರನ ತಂತ್ರಗಾರಿಕೆಯೇ ಕಾರಣ. ಹಿಂದೆ ಕೂಡ ಎಂದೂ ಗೆದ್ದಿಲ್ಲದ ಕೆ.ಆರ್. ಪೇಟೆಯಲ್ಲಿ ವಿಜಯೇಂದ್ರ ತಂತ್ರಗಾರಿಕೆಯಿಂದ ಗೆಲುವು ಸಿಕ್ಕಿತ್ತು. ವಿಜಯೇಂದ್ರ ಮುಟ್ಟಿದ್ದೆಲ್ಲವೂ ಚಿನ್ನವಾಗುತ್ತಿದೆ ಎಂಬುದನ್ನು ಹೈಕಮಾಂಡ್ ನಾಯಕರಿಗೆ ಮನವರಿಕೆ ಮಾಡಿಕೊಡುವುದು ಯಡಿಯೂರಪ್ಪ ಅವರ ಪ್ರಮುಖ ಉದ್ದೇಶ.

Also Read: ವಿಜಯೇಂದ್ರರನ್ನು ಅನಗತ್ಯ ವೈಭವೀಕರಿಸಲಾಗುತ್ತಿದೆ- ಅಸಮಾಧಾನ ಹೊರ ಹಾಕಿದ ಈಶ್ವರಪ್ಪ

ಈ ಮೂಲಕ ವಿಜಯೇಂದ್ರ ವಿರುದ್ಧ ಹೈಕಮಾಂಡಿಗೆ ಸಲ್ಲಿಕೆಯಾಗಿರುವ ದೂರಿನಲ್ಲಿ ಅಸಲಿಯತ್ತಿಲ್ಲ ಎಂದು ಸಾಬೀತುಪಡಿಸುವುದು ಯಡಿಯೂರಪ್ಪ ಅವರ ಲೆಕ್ಕಾಚಾರ. ಸರ್ಕಾರದಲ್ಲಿ ವಿಜಯೇಂದ್ರನ ಹಸ್ತಕ್ಷೇಪ ಹೆಚ್ಚಾಗಿದೆ ಎಂಬ ದೂರುಗಳು ಕೇಳಿಬರುತ್ತಿರುವುದರಿಂದ ಅವೆಲ್ಲವೂ ಸುಳ್ಳು, ಸರ್ಕಾರದಲ್ಲಿ ಯಾವುದೇ ಸಮಸ್ಯೆಗಳಿಲ್ಲ, ಸಚಿವರು, ನಾಯಕರು ಮತ್ತು ಕಾರ್ಯಕರ್ತರಲ್ಲಿ ಯಾವುದೇ ಗೊಂದಲ ಇಲ್ಲ. ವಿಜಯೇಂದ್ರ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತಿರುವುದಕ್ಕೆ ಶಿರಾ ಫಲಿತಾಂಶವೇ ಉದಾಹರಣೆ ಎಂದು ಮನವರಿಕೆ ಮಾಡಿಕೊಡಲು ಪ್ರಯತ್ನಿಸಲಿದ್ದಾರೆ ಎನ್ನಲಾಗಿದೆ.

ಕುರ್ಚಿ ಉಳಿಸಿಕೊಳ್ಳುವ ಕಸರತ್ತು

ಯಾರಿಗೆ ಮಂತ್ರಿ ಸ್ಥಾನ ಸಿಗುತ್ತೋ ಬಿಡುತ್ತೋ… ಯಡಿಯೂರಪ್ಪ ಮೊದಲಿಗೆ ತಮ್ಮ ಕುರ್ಚಿಯನ್ನು ಉಳಿಸಿಕೊಂಡರೆ ಸಾಕು ಎನ್ನುವ ಲೆಕ್ಕಾಚಾರದಲ್ಲಿದ್ದಾರೆ. ಈಗ ಉಪ ಚುನಾವಣೆ ಮೂಲಕ ಬೀಸುವ ದೊಣ್ಣೆಯಿಂದ ಪಾರಾಗಿದ್ದರು. ಮುಂದೆ ಬಸವಕಲ್ಯಾಣ, ಮಸ್ಕಿ ವಿಧಾನಸಭೆ ಮತ್ತು ಬೆಳಗಾವಿ ಲೋಕಸಭೆ ಉಪಚುನಾವಣೆ ಹಾಗೂ ಗ್ರಾಮ ಪಂಚಾಯತಿ ಚುನಾವಣೆಗಳನ್ನು ಎದುರು ನೋಡುತ್ತಿದ್ದಾರೆ. ಅಲ್ಲಿಯವರೆಗೆ ಕಾಲ ತಳ್ಳಬೇಕು. ಸಚಿವಾಕಾಂಕ್ಷಿಗಳ ಮೂಗಿಗೆ ತುಪ್ಪ ಸವರಬೇಕು. ಅದನ್ನು ಅವರು ಮಾಡುತ್ತಿದ್ದಾರೆ. ಇನ್ನೊಂದೆಡೆ ಸರ್ಕಾರದಲ್ಲಿ ವಿಜಯೇಂದ್ರನ ಹಸ್ತಕ್ಷೇಪ ಮತ್ತು ಭ್ರಷ್ಟಾಚಾರ ದಿನೇ‌ ದಿನೇ ಹೆಚ್ಚಾಗುತ್ತಿದೆ ಎನ್ನುವ ಕಾರಣದಿಂದಲೇ ಯಡಿಯೂರಪ್ಪ ಅವರನ್ನು ಕೆಳಗಿಳಿಸುವ ಪ್ರಯತ್ನ ನಡೆಯುತ್ತಿದೆ.

Also Read: ಭವಿಷ್ಯದಲ್ಲಿ ಕೆ.ಆರ್.ಪೇಟೆ ಮೇಲೆ ಕಣ್ಣಿಟ್ಟೇ ಬಿಜೆಪಿ ಗೆಲ್ಲಿಸಿದ ವಿಜಯೇಂದ್ರ

ತಮ್ಮ ಕುರ್ಚಿ ಅಲುಗಾಡುತ್ತಿದೆ ಎಂಬ‌ ಅರಿವಿರುವುದರಿಂದಲೇ ಪ್ರವಾಹ ಪರಿಹಾರಕ್ಕೆ ಕೊಡಲು ಹಣ ಇಲ್ಲದಿದ್ದರೂ ಅವಸವಸರವಾಗಿ ಮಠಗಳಿಗೆ ಯಡಿಯೂರಪ್ಪ ಹಣ ಬಿಡುಗಡೆ ಮಾಡಿದ್ದಾರೆ. ಲಿಂಗಾಯತ ಕಾರ್ಡ್ ಬಳಸಲು ವೀರಶೈವ-ಲಿಂಗಾಯತ ಅಭಿವೃದ್ಧಿ ನಿಗಮವನ್ನೂ ಸ್ಥಾಪಿಸಿದ್ದಾರೆ. ಇವು ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನಗಳಾದರೆ ಲಿಂಗಾಯತರು ಮತ್ತು ವಿವಿಧ ಜಾತಿಯ ಸ್ವಾಮೀಜಿಗಳು ದನಿ ಎತ್ತಲಿ ಎಂದು ಮಾಡಿರುವ ಕಸರತ್ತುಗಳು.‌ ರಾಜ್ಯದಲ್ಲಿ ಈ‌ ರೀತಿಯ ಭೂಮಿಕೆ ಸಿದ್ದಪಡಿಸಿರುವ ಯಡಿಯೂರಪ್ಪ ಈಗ ಹೈಕಮಾಂಡ್ ನಾಯಕರ ಮನಗೆಲ್ಲಲು ಪ್ರಯತ್ನಿಸುತ್ತಿದ್ದಾರೆ.

Also Read: ಹಳೇ ಮೈಸೂರು ಭಾಗದ ಹಿಡಿತಕ್ಕೆ BY ವಿಜಯೇಂದ್ರ ತಯಾರಿ..!

ಮೊದಲಿಗೆ ಬಿಹಾರ ಗೆಲುವಿನ ಖುಷಿಯಲ್ಲಿರುವ ಹೈಕಮಾಂಡ್ ನಾಯಕರಲ್ಲಿ ವಿಜಯೇಂದ್ರನ ಬಗ್ಗೆ ಸದಾಭಿಪ್ರಾಯ ಬರುವಂತೆ ಮಾಡಬೇಕು. ಇದರಿಂದ ವಿಜಯೇಂದ್ರಗೆ ಸದ್ಯಕ್ಕೆ ಮತ್ತು ಭವಿಷ್ಯಕ್ಕೆ ಒಳ್ಳೆಯದಾಗುತ್ತೆ. ಅದಕ್ಕಿಂತ ಹೆಚ್ಚಾಗಿ ‘ವಿಜಯೇಂದ್ರ ಹಸ್ತಕ್ಷೇಪ ಮತ್ತು ಭ್ರಷ್ಟಾಚಾರ ಹೆಚ್ಚಾಯಿತು’ ಎಂಬ ಕಾರಣದಿಂದ ತಮ್ಮ ಕುರ್ಚಿಗೆ ಬಂದಿರುವ ಸಂಚಕಾರವನ್ನು ತಪ್ಪಿಸಿಕೊಳ್ಳಬೇಕೆಂದು ದೆಹಲಿ ದಂಡಯಾತ್ರೆ ಹಮ್ಮಿಕೊಂಡಿದ್ದಾರೆ. ಇದಕ್ಕೆ ಮುಖ್ಯವಾಗಿ ಸಂಪುಟ ಪುನರ್ ರಚನೆಯ ಕಾರಣಕೊಟ್ಟಿದ್ದಾರೆ.‌ ಯಡಿಯೂರಪ್ಪ ಅವರಿಗೆ ಎರಡನೇ ಆದ್ಯತೆಯಾಗಿರುವ ಸಚಿವ ಸಂಪುಟ ಪುನರ್ ರಚನೆ ಅಥವಾ ವಿಸ್ತರಣೆ ಆಗಬಹುದು ಅಥವಾ ಆಗದಿರಬಹುದು. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಹೈಕಮಾಂಡ್ ನಾಯಕರನ್ನು ತಮ್ಮ ಕುರ್ಚಿ ಮತ್ತು ಪುತ್ರನ ಪಾತ್ರದ ಬಗ್ಗೆ ಮನವರಿಕೆ ಮಾಡಿಕೊಡುವರೇ ಎಂಬುದೇ ನಿಜವಾದ ಕುತೂಹಲ.

Also Read: ಬಿಜೆಪಿ ಗೆಲುವು: ವಿಜಯೇಂದ್ರರನ್ನು ಹೊತ್ತು ಸಂಭ್ರಮಾಚರಿಸಿದ ಕಾರ್ಯಕರ್ತರು

Tags: BS YeddyurappaBY Vijayendra
Previous Post

ಕೋವಿಡಾತಂಕದ ಮಧ್ಯೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಬೇಕಾಗಿತ್ತಾ? – ತೋಂಟದ ಸಿದ್ಧರಾಮ ಸ್ವಾಮಿ ಪ್ರಶ್ನೆ

Next Post

RCEP ಒಪ್ಪಂದದಿಂದ ಹೊರಗುಳಿದರೆ ಭಾರತಕ್ಕೆ ನಷ್ಟವೇ ?

Related Posts

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
0

ಬೆಂಗಳೂರು: ಕರ್ನಾಟಕದ ರಾಜಭವನಕ್ಕೆ ಹೆಸರು ಬದಲಾಯಿಸಿ ಕೇಂದ್ರ ಗೃಹ ಇಲಾಖೆ ಆದೇಶ ಹೊರಡಿಸಿದೆ. ಬೆಂಗಳೂರಿನಲ್ಲಿರುವ ರಾಜ ಭವನಕ್ಕೆ ಲೋಕ ಭವನ ಕರ್ನಾಟಕ ಎಂದು ಮರು ನಾಮಕರಣ ಮಾಡುವಂತೆ...

Read moreDetails
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಹೈಕೋರ್ಟ್ ಶಾಕ್

December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

December 3, 2025
ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

ಮಹಿಳಾ ನೌಕರರಿಗೆ ಋತುಚಕ್ರ ರಜೆ ಆದೇಶ ಈ ತಕ್ಷಣದಿಂದಲೇ ಜಾರಿ..!

December 3, 2025
Next Post
RCEP ಒಪ್ಪಂದದಿಂದ ಹೊರಗುಳಿದರೆ ಭಾರತಕ್ಕೆ ನಷ್ಟವೇ ?

RCEP ಒಪ್ಪಂದದಿಂದ ಹೊರಗುಳಿದರೆ ಭಾರತಕ್ಕೆ ನಷ್ಟವೇ ?

Please login to join discussion

Recent News

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!
Top Story

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

by ಪ್ರತಿಧ್ವನಿ
December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
Top Story

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
December 3, 2025
ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!
Top Story

ರೋಹಿತ್- ಕೊಹ್ಲಿ ಅಬ್ಬರಕ್ಕೆ ಬಾಡಿದ ಗಂಭೀರ್ ಮುಖ: ಡ್ರೆಸ್ಸಿಂಗ್ ಕೋಣೆ ಒಳಗಿನ ವಿಡಿಯೋ ಲೀಕ್..!

by ಪ್ರತಿಧ್ವನಿ
December 3, 2025
ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌
Top Story

ಕಿಚ್ಚ ಸುದೀಪ್‌ ಮನೆಯಲ್ಲಿ ಮದುವೆ ಸಂಭ್ರಮ..! ಹಳದಿ ಶಾಸ್ತ್ರದ ಫೋಟೋ ವೈರಲ್‌

by ಪ್ರತಿಧ್ವನಿ
December 3, 2025
ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**
Top Story

ಬಾಗಲಕೋಟೆಯಲ್ಲಿ ಭೀಕರ ರಸ್ತೆ ಅಪಘಾತ: ನಾಲ್ವರು ಯುವಕರು ಸ್ಥಳದಲ್ಲೇ ಸಾ**

by ಪ್ರತಿಧ್ವನಿ
December 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

Raj Bhavan: ಕರ್ನಾಟಕದ ರಾಜ ಭವನದ ಹೆಸರು ದಿಢೀರ್‌ ಬದಲಾವಣೆ..!!

December 3, 2025
ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ವೇದಿಕೆಯಲ್ಲೇ ಕೆ.ಸಿ ವೇಣುಗೋಪಾಲ್ ಜೊತೆ ಗುಸು ಗುಸು- ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

December 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada