• Home
  • About Us
  • ಕರ್ನಾಟಕ
Saturday, October 25, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸರಕಾರಿ ಜಾಹಿರಾತು ಹಣವನ್ನು ಕರೋನಾ ವಿರುದ್ದದ ಹೋರಾಟಕ್ಕೆ ಬಳಸಿಕೊಳ್ಳಿ – ಸೋನಿಯಾ ಗಾಂಧಿ ಸಲಹೆ

by
April 9, 2020
in ದೇಶ
0
ಸರಕಾರಿ ಜಾಹಿರಾತು ಹಣವನ್ನು ಕರೋನಾ ವಿರುದ್ದದ ಹೋರಾಟಕ್ಕೆ ಬಳಸಿಕೊಳ್ಳಿ - ಸೋನಿಯಾ ಗಾಂಧಿ ಸಲಹೆ
Share on WhatsAppShare on FacebookShare on Telegram

20,000 ಕೋಟಿ ರೂ.ಗಳ ‘ಕೇಂದ್ರ ವಿಸ್ಟಾ ಬ್ಯುಟಿಫಿಕೇಷನ್’ ಯೋಜನೆಯನ್ನು ತಾತ್ಕಾಲಿಕ ರದ್ದುಗೊಳಿಸುವಂತೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯ ಗಾಂಧಿ ಶಿಫಾರಸು ಮಾಡಿದ್ದಾರೆ. ಮಾಧ್ಯಮ ಜಾಹೀರಾತುಗಳನ್ನು ನಿಲ್ಲಿಸಿ, ಕೋವಿಡ್ -19 ಗಾಗಿ ಶುರು ಮಾಡಿದ ಪಿಎಂ ಕೇರ್ಸ್‌ಗೆ ಆ ನಿಧಿಯನ್ನು ವರ್ಗಾಯಿಸಿ ಎಂದು ಸೋನಿಯಾ ಗಾಂಧಿ ಮೋದಿಗೆ ಬರೆದ ಪತ್ರದಲ್ಲಿ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದು, ಸರ್ಕಾರವು ತನ್ನ ವೆಚ್ಚವನ್ನು ಕಡಿತಗೊಳಿಸಲು ಮತ್ತು ಕರೋನ ವೈರಸ್ ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟಕ್ಕೆ ಹೆಚ್ಚಿನ ಹಣವನ್ನು ವಿನಿಯೋಗಿಸಲು ಐದು ಸಲಹೆಗಳನ್ನು ನೀಡಿದ್ದಾರೆ.

ಕೋವಿಡ್ -19 ರ ಕುರಿತ ಜಾಹಿರಾತುಗಳನ್ನು ಹೊರತುಪಡಿಸಿ ಉಳಿದ ಸರಕಾರಿ ಜಾಹಿರಾತುಗಳನ್ನು ಎರಡು ವರ್ಷಗಳ ಕಾಲ ಸಂಪೂರ್ಣ ನಿಷೇಧಿಸಬೇಕು. ಸರ್ಕಾರವು ಪ್ರಸ್ತುತ ವರ್ಷಕ್ಕೆ 1,250 ಕೋಟಿ ರೂ. ಜಾಹಿರಾತುಗಳಿಗೆ ಖರ್ಚು ಮಾಡುತ್ತದೆ. ಇದು ಕೋವಿಡ್ -19ರ ಸಾಮಾಜಿಕ ಮತ್ತು ಆರ್ಥಿಕ ಸಂಕಷ್ಟದ ಪ್ರಭಾವವನ್ನು ನಿವಾರಿಸಲು ಗಣನೀಯ ಮೊತ್ತವಾಗಬಲ್ಲದು ಎಂದು ಬರೆದಿದ್ದಾರೆ.

Congress President and CPP Chairperson Smt. Sonia Gandhi writes to PM Modi suggesting various measures to fight the COVID-19 pandemic. pic.twitter.com/77MzCYiokl

— Congress (@INCIndia) April 7, 2020


ADVERTISEMENT

ದಕ್ಷತೆ, ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಚಿತಪಡಿಸಿಕೊಳ್ಳಲು ಪಿಎಂ ಕೇರ್ಸ್ ನಿಧಿಗೆ ನೀಡಿದ ದೇಣಿಗೆಗಳನ್ನು ಮೊದಲೇ ಅಸ್ತಿತ್ವದಲ್ಲಿದ್ದ ‘ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಗೆ’ ವರ್ಗಾಯಿಸಬೇಕು. “ದೇಣಿಗೆ ನಿಧಿ ಸಂಗ್ರಹಿಸಲು ಎರಡು ಪ್ರತ್ಯೇಕ ಟ್ರಸ್ಟ್‌ಗಳಿರುವುದು ಮತ್ತು ಸಂಭಾಳಿಸುವುದು ಸಂಪನ್ಮೂಲಗಳ ವ್ಯರ್ಥವಾದಂತೆ ತೋರುತ್ತದೆ” ಎಂದು ಅವರು ಬರೆದಿದ್ದಾರೆ.

20,000 ಕೋಟಿ ರೂ.ಗಳ ಸೆಂಟ್ರಲ್ ವಿಸ್ಟಾ ಬ್ಯುಟಿಫಿಕೇಷನ್ ಮತ್ತು ನಿರ್ಮಾಣ ಯೋಜನೆಯನ್ನು ಸ್ಥಗಿತಗೊಳಿಸುವಂತೆ ಕಾಂಗ್ರೆಸ್ ಅಧ್ಯಕ್ಷೆ ಪ್ರಧಾನಿಯನ್ನು ಒತ್ತಾಯಿಸಿದರು. “ಅಸ್ತಿತ್ವದಲ್ಲಿರುವ ಐತಿಹಾಸಿಕ ಕಟ್ಟಡಗಳಲ್ಲಿ ಸಂಸತ್ತು ಆರಾಮವಾಗಿ ಕಾರ್ಯನಿರ್ವಹಿಸಬಲ್ಲದು ಎಂದು ನನಗೆ ಖಚಿತವಾಗಿದೆ” ಎಂದು ಅವರು ಬರೆದಿದ್ದಾರೆ. ವೇತನ, ಪಿಂಚಣಿ ಮತ್ತು ಕೇಂದ್ರ ವಲಯದ ಯೋಜನೆಗಳನ್ನು ಹೊರತುಪಡಿಸಿ ಉಳಿದ ಬಜೆಟ್ ಖರ್ಚಿನಲ್ಲಿ 30% ಕಡಿತಗೊಳಿಸಿ ಎಂದು ಗಾಂಧಿ ಹೇಳಿದರು. ಹೀಗೆ ಕಡಿತಗೊಳಿಸಿದ 30% ಬಜೆಟ್ ಅಂದರೆ ಅಂದಾಜು 2.5 ಲಕ್ಷ ಕೋಟಿ ರೂಪಾಯಿಗಳನ್ನು ವಲಸೆ ಕಾರ್ಮಿಕರು, ರೈತರು, ಎಂಎಸ್ಎಂಇಗಳು ಮತ್ತು ಅಸಂಘಟಿತ ವಲಯದಲ್ಲಿರುವವರಿಗೆ ಆರ್ಥಿಕ ಸುರಕ್ಷತಾ ಜಾಲವನ್ನು ಸ್ಥಾಪಿಸಲು ವಿನಿಯೋಗಿಸಬಹುದುಎಂದು ಅವರು ಬರೆದಿದ್ದಾರೆ.

ಅಧ್ಯಕ್ಷ, ಪ್ರಧಾನಿ ಸೇರಿದಂತೆ ಕೇಂದ್ರ ಸಚಿವರು, ಮುಖ್ಯಮಂತ್ರಿಗಳು, ರಾಜ್ಯ ಸಚಿವರು ಮತ್ತು ಅಧಿಕಾರಿಗಳ ಎಲ್ಲಾ ವಿದೇಶಿ ಪ್ರಯಾಣಗಳನ್ನು ಸರಕಾರ ತಡೆಹಿಡಿಯಬೇಕು ಎಂದು ಗಾಂಧಿ ತಮ್ಮ ಪತ್ರದಲ್ಲಿ ಸೂಚಿಸಿದ್ದಾರೆ.

ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ತಮ್ಮ ಪಕ್ಷವು ಸರಕಾರದೊಡನೆ ನಿಲ್ಲುವುದಾಗಿಯೂ, ಸರಕಾರಕ್ಕೆ ತಮ್ಮ ಬೆಂಬಲವಿರುವುದಾಗಿ ಪ್ರಧಾನಮಂತ್ರಿಗೆ ಬರೆದ ಪತ್ರದಲ್ಲಿ ಭರವಸೆ ನೀಡಿದ್ದಾರೆ.

ಕರೋನವೈರಸ್ ಸಾಂಕ್ರಾಮಿಕ ಮತ್ತು ಆರ್ಥಿಕತೆಯ ಮೇಲೆ ಅದರ ದುಷ್ಪರಿಣಾಮದ ವಿರುದ್ಧ ಹೋರಾಡಲು ಸರ್ಕಾರಕ್ಕೆ ಸಹಾಯ ಮಾಡಲು ಕ್ಯಾಬಿನೆಟ್ ಮಂತ್ರಿಗಳು ಸೇರಿದಂತೆ ಎಲ್ಲಾ ಸಂಸದರು ಒಂದು ವರ್ಷದವರೆಗೆ ವೇತನದಲ್ಲಿ 30% ಕಡಿತಗೊಳಿಸುವುದಾಗಿ ಕೇಂದ್ರ ಸುಗ್ರೀವಾಜ್ಞೆ ಹೊರಡಿಸಿತ್ತು. ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಎಲ್ಲಾ ರಾಜ್ಯಪಾಲರು ತಮ್ಮ ಸಂಬಳದ 30% ಅನ್ನು ಸ್ವಯಂಪ್ರೇರಣೆಯಿಂದ ಬಿಟ್ಟುಕೊಡುವುದಾಗಿ ತಮ್ಮ ನಿರ್ಧಾರ ತಿಳಿಸಿದ್ದರು.

ಕೃಪೆ: Scroll.in

Tags: ಕರೋನಾಸೋನಿಯಾ ಗಾಂಧಿ
Previous Post

ಬ್ಯಾಂಕ್ ಠೇವಣಿ ಮೇಲಿನ ಬಡ್ಡಿ ನಂಬಿದವರ ಬದುಕು ಅತಂತ್ರ!

Next Post

ಕೋವಿಡ್‌-19 ಪರೀಕ್ಷೆಗಳನ್ನು ಉಚಿತವಾಗಿ ನೀಡಬೇಕು – ಸುಪ್ರಿಂ ಕೋರ್ಟ್‌ 

Related Posts

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ
Top Story

ಸೈದ್ಧಾಂತಿಕ ಸಂಘರ್ಷವೂ ಪರ್ಯಾಯದ ಶೋಧವೂ

by ಪ್ರತಿಧ್ವನಿ
October 23, 2025
0

ಮಿಲೆನಿಯಂ ಸಮೂಹದ ಮುಂದೆ ಪರ್ಯಾಯವೊಂದನ್ನು  ಇಡದಿದ್ದರೆ  ನಮ್ಮ ಶ್ರಮ ನಿರರ್ಥಕವಾಗುತ್ತದೆ ನಾ ದಿವಾಕರ  ಕರ್ನಾಟಕದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರೆಸ್ಸೆಸ್)‌ ರಾಜಕೀಯ ಚಟುವಟಿಕೆಗಳನ್ನು ನಿಯಂತ್ರಿಸುವ ಭರದಲ್ಲಿ...

Read moreDetails
ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

ಪ್ರಭಾಸ್‌ಗೆ ಜನ್ಮದಿನದ ಶುಭಾಶಯಗಳು!

October 22, 2025

ನವೆಂಬರ್‌ ಕ್ರಾಂತಿ ನಡುವೆ ಡಿಕೆಶಿ ಟೆಂಪಲ್‌ ರನ್..!‌ ಗುರು ರಾಘವೇಂದ್ರ ಸ್ವಾಮಿಗಳ ಬೃಂದಾವನಕ್ಕೆ ಪೂಜೆ ಸಲ್ಲಿಸಿದ ಡಿಕೆ ಶಿವಕುಮಾರ್ ಮತ್ತು ಪತ್ನಿ ಉಷಾ

October 22, 2025

ದರ್ಶನ್‌ನ ಟಾರ್ಗೆಟ್‌ ಮಾಡಿದ್ದೇ ಸರ್ಕಾರ..?

October 22, 2025

ದರ್ಶನ್ ಅವರ ತಮ್ಮ ನೋಡಿ ನನ್ನ ಬಾಲಿವುಡ್ ಹೀರೋ ಅನ್ಕೊಂಡ್ರೂ

October 22, 2025
Next Post
ಕೋವಿಡ್‌-19 ಪರೀಕ್ಷೆಗಳನ್ನು ಉಚಿತವಾಗಿ ನೀಡಬೇಕು - ಸುಪ್ರಿಂ ಕೋರ್ಟ್‌ 

ಕೋವಿಡ್‌-19 ಪರೀಕ್ಷೆಗಳನ್ನು ಉಚಿತವಾಗಿ ನೀಡಬೇಕು - ಸುಪ್ರಿಂ ಕೋರ್ಟ್‌ 

Please login to join discussion

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada