• Home
  • About Us
  • ಕರ್ನಾಟಕ
Thursday, January 29, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸಿಎಂ ಜಿಲ್ಲೆಯಲ್ಲಿನ ಪ್ರವಾಹ ಸಂತ್ರಸ್ತರು ಟೆಂಟ್‌ಲ್ಲಿ ವಾಸ

by
March 6, 2020
in ಕರ್ನಾಟಕ
0
ಸಿಎಂ ಜಿಲ್ಲೆಯಲ್ಲಿನ ಪ್ರವಾಹ ಸಂತ್ರಸ್ತರು ಟೆಂಟ್‌ಲ್ಲಿ ವಾಸ
Share on WhatsAppShare on FacebookShare on Telegram

ನಾಲ್ಕು ದಿನಗಳ ಹಿಂದೆ ಐವತ್ತು ವರ್ಷದ ರಂಗಪ್ಪ ಕೆಲವು ಫೋಟೋಗಳನ್ನ ಹಿಡಿದುಕೊಂಡು ಶಿವಮೊಗ್ಗ ಮಹಾನಗರ ಪಾಲಿಕೆ ಬಳಿ ಬಂದಿದ್ದರು. ಯಾವುದೋ ಪ್ರತಿಭಟನೆ ಇದ್ದ ಕಾರಣ ಮಾಧ್ಯಮದವರೂ ಅಲ್ಲೇ ಇದ್ದರು. ಬಳಲಿದಂತಿದ್ದ ದೇಹ, ಸ್ವಲ್ಪ ಬಾಗಿದ ದೇಹ, ನಿಸ್ತೇಜ ಕಣ್ಣುಗಳಲ್ಲಿ ಅಸಹಾಯಕತೆ ಇತ್ತು. ಪತ್ರಕರ್ತರ ದೃಷ್ಟಿಯೂ ಅವರ ಮೇಲೆ ನೆಟ್ಟಿತ್ತು. ಹಾಗೆ ಬಂದ ಇಬ್ಬರು ವಯಸ್ಕರಲ್ಲಿ ಅಂಜಿಕೆ, ಸಂಕೋಚ ಇತ್ತು. ಅವರ ಜೊತೆ ಮಾತಿಗಿಳಿದಾಗ ಅವರು ಶಿವಮೊಗ್ಗ ಪ್ರವಾಹ ಸಂತ್ರಸ್ತರು ಎಂದು ಗೊತ್ತಾಯಿತು. ರಂಗಪ್ಪ ಹಾಗೂ ನೆರೆಹೊರೆಯರ ಮನೆಗಳನ್ನ ಹುಡುಕಿ ಹೊರಟಾಗ ಆಶ್ಚರ್ಯ ಎನಿಸಿತು. ಇವರು ಶಿವಮೊಗ್ಗ – ಎನ್‌ಆರ್‌ ಪುರ ರಸ್ತೆಯ ಪಕ್ಕದಲ್ಲೇ ವಡ್ಡಿನಕೊಪ್ಪ ಪ್ರದೇಶದಲ್ಲಿ ವಾಸವಿದ್ದಾರೆ. ಆದರೆ ಅಲ್ಲಿ ಮನೆಗಳಿಲ್ಲ, ಕಳೆದ ಆಗಸ್ಟ್‌ನಲ್ಲಿ ಸುರಿದ ಭೀಕರ ಮಳೆಗೆ ಮನೆಗಳು ಕುಸಿದು ಹೋಗಿದ್ದವು. ದಿನಗೂಲಿ ಕೆಲಸಕ್ಕೆ ಹೋಗುವ ಈ ಜನರೆಲ್ಲಾ ಬಹಳ ವರ್ಷದ ಹಿಂದೆಯೇ ಇಲ್ಲಿ ನೆಲೆಸಿದ್ದಾರೆ. ಆದರೆ, ಅಧಿಕಾರಿಗಳಿಗೆ ಲಂಚ ನೀಡಲು ಸಾಧ್ಯವಾಗದೇ ಮನೆ ಜಾಗವನ್ನ ಪಕ್ಕಾ ಮಾಡಿಕೊಂಡಿಲ್ಲ. ಆದರೂ ಒಂದು ಲಕ್ಷ ರೂಪಾಯಿ ಪರಿಹಾರದ ಹಣದಲ್ಲಿ ಕುಸಿದು ಬಿದ್ದ ಮನೆಯ ಜಾಗದಲ್ಲೇ ಅಡಿಪಾಯ ಮಾಡಿಸಿಕೊಂಡಿದ್ದಾರೆ.

ADVERTISEMENT

ಪ್ರವಾಹ ಪರಿಸ್ಥಿತಿ ಅವಲೋಕನ ಮಾಡಲು ಬಂದ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಇಲ್ಲಿಂದಲೇ ರಾಜ್ಯಕ್ಕೂ ಅನ್ವಯಿಸುವ ಹಾಗೆ ಆದೇಶ ಹೊರಡಿಸಿದ್ದರು. ಮನೆ ಹಾನಿಯಾದವರು ಯಾರೇ ಆಗಲಿ ದಾಖಲೆಗಳನ್ನ ನೋಡುತ್ತಾ ಕುಳಿತುಕೊಳ್ಳಬೇಡಿ, ಪೂರ್ಣ ಪರಿಹಾರವನ್ನ ನೀಡಬೇಕು ಎಂದು ಹೇಳಿದ್ದರು. ಅದರಂತೆ ಪಾಲಿಕೆ ಅಧಿಕಾರಿಗಳು ಫೋಟೋಗಳನ್ನ ತೆಗೆಸಿ ಲಿಸ್ಟ್‌ ಮಾಡಿಕೊಂಡು ಹೋಗಿದ್ದರು, ಆದರೆ ಬಿಡಿಗಾಸೂ ಬಂದಿರಲಿಲ್ಲ. ರಂಗಪ್ಪ ಹೇಳುವಂತೆ ಹಣಕ್ಕಾಗಿ ಕನಿಷ್ಟ ಇಪ್ಪತ್ತು ಬಾರಿ ಅಲೆದು ಅಧಿಕಾರಿಗಳಿಂದ ಹೀನಾಮಾನ ಹೇಳಿಸಿಕೊಂಡು ಒಮ್ಮೆ ಐದು ಸಾವಿರ, ನಂತರ ಹತ್ತು ಸಾವಿರ ಪಡೆದುಕೊಂಡರು. ಮೂರು ತಿಂಗಳ ನಂತರ ಒಂದು ಲಕ್ಷ ಹಣ ಸಿಕ್ಕಿದೆ. ಈ ಮಧ್ಯೆ ಬಾಡಿಗೆ ಮನೆಯಲ್ಲಿದ್ದರೂ ಅದರ ಹಣವನ್ನ ನೀಡಿಲ್ಲ. ಪರಿಹಾರದ ಭರವಸೆ ಸಿಕ್ಕಿತೆಂದು ಹಿಗ್ಗಿದ ಜನರು ನಿವೇಶನ ಸಿದ್ಧಪಡಿಸಿಕೊಂಡು ಉಳಿದ ಹಣದಲ್ಲಿ ಗೋಡೆ ಕಟ್ಟಲು ಸಿದ್ಧರಾದರು. ಆದರೆ ಹಣ ಮಾತ್ರ ಸಿಗಲೇ ಇಲ್ಲ. ಪರಿಹಾರದ ಹಣ ನೀಡಿ ಎಂದು ಕೇಳಿದರೆ ನಿಮ್ಮ ಪಾಲಿಗೆ ಬರುವ ಹಣ ಇಷ್ಟೇ, ಮೊದಲು ದಾಖಲೆ ತಂದು ಕೊಡಿ ನೋಡೋಣ ಎನ್ನುತ್ತಾರಂತೆ..! ಮಾಧ್ಯಮಗಳ ಬಳಿ ಹೋಗದಂತೆ ಪಾಲಿಕೆ ಅಧಿಕಾರಿಗಳು ಧಮ್ಕಿ ಹಾಕುತ್ತಾರೆಂದೂ ಸಂತ್ರಸ್ತರು ದೂರುತ್ತಾರೆ.

“ಮೊದಲನೇ ಹಂತದ ಪರಿಹಾರ ನೀಡಲಾಗಿದೆ, ಉಳಿದ ಹಣ ನೀಡುತ್ತೇವೆ, ದಾಖಲೆ ಪರಿಶೀಲನೆ ಬಗ್ಗೆ ಮಾಹಿತಿ ಇಲ್ಲ,” ಎಂದು ಪಾಲಿಕೆ ಆಯುಕ್ತ ಚಿದಾನಂದ್ ವಟಾರೆ ಹೇಳಿದ್ದಾರೆ.

ಇನ್ನೊಬ್ಬ ಸಂತ್ರಸ್ತೆ ಮಂಜಮ್ಮ ತನ್ನ ಮಗ -ಸೊಸೆ ಹಾಗೂ ಇಬ್ಬರು ಮೊಮ್ಮಕ್ಕಳೊಂದಿಗೆ ಟೆಂಟ್‌ನಲ್ಲಿ ವಾಸವಿದ್ದಾರೆ. ಅವರೂ ಕೂಡ ಅಡಿಪಾಯ ಹಾಕಿಕೊಂಡಿದ್ದಾರೆ ಆದರೆ ಹಣ ಇಲ್ಲ, ಮಗ ಕೂಲಿ ಮಾಡಲು ಹೋಗುತ್ತಾನೆ. ಚಿಕ್ಕ ಟೆಂಟ್‌ಲ್ಲಿ ಐದು ಜನರು ವಾಸ ಮಾಡಲು ಸಾಧ್ಯವಿಲ್ಲ ಹಾಗಾಗಿ ತಾಯಿ ಬೇರೆಯವರ ಮನೆಯಲ್ಲಿಯೂ ಆಶ್ರಯ ಪಡೆಯುತ್ತಾರೆ. ಇಷ್ಟೆಲ್ಲಾ ಆದರೂ ಶಿವಮೊಗ್ಗ ಪಾಲಿಕೆಯ ಅಧಿಕಾರಿಗಳು ಮಾತ್ರ ಈ ಕಡೆ ಸುಳಿದಿಲ್ಲ. ಇದೇ ಪ್ರದೇಶದಲ್ಲಿ ಹತ್ತಾರು ಮನೆಗಳು ಸಂಕಷ್ಟದಲ್ಲಿವೆ. ಪುನಃ ಮಳೆಗಾಲ ಆರಂಭವಾದರೂ ಪರಿಹಾರ ಸಿಗುವ ಭರವಸೆಯೇ ಇಲ್ಲದಂತೆ ಬದುಕುತ್ತಿದ್ದಾರೆ. ಜಿಲ್ಲೆಯಲ್ಲಿ ಬಿಜೆಪಿ, ಪಾಲಿಕೆಯಲ್ಲಿ ಬಿಜೆಪಿ, ರಾಜ್ಯದಲ್ಲೂ ಬಿಜೆಪಿ ಸರ್ಕಾರ ಇದೆ. ಸಿಎಂ ಬಿಎಸ್‌ ಯಡಿಯೂರಪ್ಪ ಇಲ್ಲಿಯವರೇ, ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್‌ ಈಶ್ವರಪ್ಪನವರು ಈ ಭಾಗದ ಶಾಸಕರು ಹಾಗಾದರೆ ಈ ಸಂತ್ರಸ್ತರೇನು ವಿರೋಧ ಪಕ್ಷದವರೇ..!?

ಶಿವಮೊಗ್ಗ ನಗರ ಕಳೆದ ಬಾರಿ ಪ್ರವಾಹದಿಂದ ತತ್ತರಿಸಿ ಹೋಗಿತ್ತು, ನೂರಾರು ಮನೆಗಳು ಕುಸಿದು ಬಿದ್ದಿದ್ದವು, ತುಂಗಾನದಿ ತೀರದಲ್ಲೂ ಅಪಾರ ಪ್ರಮಾಣದ ಹಾನಿಯಾಗಿತ್ತು, ಎಷ್ಟೋ ಮಂದಿ ಮನೆಗಳ ಜೊತೆ ಅಮೂಲ್ಯವಾದ ವಸ್ತುಗಳನ್ನ, ದಾಖಲಾತಿಗಳನ್ನೂ ಕಳೆದುಕೊಂಡಿದ್ದಾರೆ, ಯಾರಿಗೂ ಸಮರ್ಪಕವಾಗಿ ಪರಿಹಾರ ವಿತರಣೆಯಾಗಿಲ್ಲ, ರಂಗಪ್ಪ, ಮಂಜಮ್ಮನಂತವರಿಗೆ ದಾಖಲೆಗಳನ್ನಿಡಿ ಎಂದು ಹೇಳುತ್ತಿದ್ದಾರೆ, ಆದರೆ ಮೂಲಗಳ ಪ್ರಕಾರ ಬಿಜೆಪಿ ಆಪ್ತರಿಗೆ ಪರಿಹಾರ ಹುಡಕಿಕೊಂಡು ಬಂದಿವೆ, ಈ ಬಡ ಜನರೆಲ್ಲಾ ವಿಷದ ಬಾಟೆಲ್‌ ಹಿಡಿದು ಪಾಲಿಕೆ ಅಂಗಳದಲ್ಲಿ ಪ್ರತಿಭಟನೆ ಮಾಡಲು ಸಿದ್ಧರಾಗಿದ್ದಾರೆ.

Tags: CM YeddyurappaFlood VicitimsShivamoggaಪ್ರವಾಹ ಸಂತ್ರಸ್ತರುಸಿಎಂ
Previous Post

ರಾಜಕೀಯ ಟೀಕೆಗೆ ಹೆದರಿ UKPಗೆ ಹಣ ಕೊಟ್ಟರೆ ಸಿಎಂ ಯಡಿಯೂರಪ್ಪ?

Next Post

ಏಕಾಏಕಿ ಕುಸಿದ ಹೂಡಿಕೆದಾರರ ‘ಡಾರ್ಲಿಂಗ್’ ಯೆಸ್ ಬ್ಯಾಂಕ್

Related Posts

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ
ಇದೀಗ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

by ಪ್ರತಿಧ್ವನಿ
January 28, 2026
0

ಬೆಂಗಳೂರು: ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತ್ ಸುಬ್ಬರಾವ್ (85) ಇಂದು ಸಂಜೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸಂಜೆ ವಿಜಯನಗರದ ತಮ್ಮ ಮನೆಯಿಂದ ಹೊರಗಡೆ ಬಂದಿದ್ದ ಸುಬ್ಬರಾವ್ ಗೆ ಹೃದಯಾಘಾತವಾಗಿದ್ದು,...

Read moreDetails
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

ಬಸ್ ಡ್ರೈವಿಂಗ್ ವೇಳೆ ಚಾಲಕರ ಮೊಬೈಲ್ ಬಳಕೆಗೆ ಕಡಿವಾಣ ಹಾಕಿ : ಸರ್ಕಾರಕ್ಕೆ ಜಯ ಕರ್ನಾಟಕ ಸಂಘಟನೆ ಒತ್ತಾಯ..!

January 28, 2026
ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

ಅಜಿತ್‌ ಪವಾರ್‌ NDA ಕೂಟ ಬಿಟ್ಟು, INDIA ಒಕ್ಕೂಟ ಸೇರ್ಪಡೆಯಾಗಬೇಕಿತ್ತು: ವಿಮಾನ ಅಪಘಾತಕ್ಕೆ ದೀದಿ ಸ್ಪೋಟಕ ತಿರುವು..?

January 28, 2026
Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

Siddaramaiah: ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಿಂದ ಬಿಗ್ ರಿಲೀಫ್

January 28, 2026
Next Post
ಏಕಾಏಕಿ ಕುಸಿದ ಹೂಡಿಕೆದಾರರ ‘ಡಾರ್ಲಿಂಗ್’ ಯೆಸ್ ಬ್ಯಾಂಕ್

ಏಕಾಏಕಿ ಕುಸಿದ ಹೂಡಿಕೆದಾರರ ‘ಡಾರ್ಲಿಂಗ್’ ಯೆಸ್ ಬ್ಯಾಂಕ್

Please login to join discussion

Recent News

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?
Top Story

ಸದನದ ನಿಯಾಮವಳಿ ಪುಸ್ತಕ ಹರಿದು ಛಲವಾದಿ ನಾರಾಯಣಸ್ವಾಮಿ ಆಕ್ರೋಶ: ಯಾಕೆ..?

by ಪ್ರತಿಧ್ವನಿ
January 28, 2026
ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌
Top Story

ಕಾರ್ಮಿಕರಿಗಾಗಿ ತಂದ ಯೋಜನೆಯಲ್ಲಿ ಅಕ್ರಮಕ್ಕೆ ಅವಕಾಶವಿಲ್ಲ: ಸಚಿವ ಸಂತೋಷ್‌ ಲಾಡ್‌

by ಪ್ರತಿಧ್ವನಿ
January 28, 2026
‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!
Top Story

‘ಹೇಳಿ ಹೋಗು ಕಾರಣ’ ನಕಲಿ ಪ್ರತಿ ಮಾರಾಟ: 1 ಕೋಟಿ ರೂ ಕೃತಿಚೌರ್ಯ ಕೇಸ್‌ ಹಾಕಲು ನಿರ್ಧಾರ..!

by ಪ್ರತಿಧ್ವನಿ
January 28, 2026
JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?
Top Story

JDS: ಸ್ಥಳೀಯ ಚುನಾವಣೆಯಲ್ಲಿ ಒಂಟಿ ಸ್ಪರ್ಧೆ: ಜೆಡಿಎಸ್ ತಂತ್ರಗಾರಿಕೆ ಯಶಸ್ವಿಯಾದೀತೇ?

by ಪ್ರತಿಧ್ವನಿ
January 28, 2026
ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್
Top Story

ಅಜಿತ್ ಪವಾರ್ ಸಾ**ನ ಸುದ್ದಿ ಕೇಳಿ ನನಗೂ ಗಾಬರಿ..ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು-ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 28, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

ಹಿರಿಯ ಹೋರಾಟಗಾರ ಅನಂತ್ ಸುಬ್ಬರಾವ್ ಇನ್ನಿಲ್ಲ

January 28, 2026
ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

ರಾಜ್ಯಪಾಲರ ಫೋನ್‌ ಕದ್ದಾಲಿಕೆ ಮಾಡ್ತಿದೆಯಾ ಕಾಂಗ್ರೆಸ್‌ ಸರ್ಕಾರ..?

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada