• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸೈನಿಕರು ಮತ್ತು ಸೇನಾ ಅಧಿಕಾರಿಗಳ ನಡುವೆ ತಾರತಮ್ಯ: ರಾಹುಲ್ ಗಾಂಧಿ ಆರೋಪವನ್ನು ಒಪ್ಪಿದ ಕೇಂದ್ರ ಸರ್ಕಾರ

by
September 13, 2020
in ದೇಶ
0
ಸೈನಿಕರು ಮತ್ತು ಸೇನಾ ಅಧಿಕಾರಿಗಳ ನಡುವೆ ತಾರತಮ್ಯ: ರಾಹುಲ್ ಗಾಂಧಿ ಆರೋಪವನ್ನು ಒಪ್ಪಿದ ಕೇಂದ್ರ ಸರ್ಕಾರ
Share on WhatsAppShare on FacebookShare on Telegram

ಸೇನೆಯ ಬಗ್ಗೆ ಸಕಾರಣಕ್ಕೆ ಸೊಲ್ಲೆತ್ತಿದರೂ ದೇಶದ್ರೋಹಿಯ ಪಟ್ಟಕಟ್ಟುವ ವಿಷಮ ಕಾಲವಿದು.‌ ಆದರೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಧೈರ್ಯದಿಂದ ಅದಕ್ಕೂ ಮಿಗಿಲಾಗಿ ಮುಕ್ತ ಮನಸ್ಸಿನಿಂದ ಸೇನೆಯಲ್ಲಾಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಿದ್ದಾರೆ.‌ ಅದರಲ್ಲೂ ಉರಿಯುವ ಬಿಸಿಲು, ಕೊರೆಯುವ ಚಳಿ ಎನದೆ ಗಡಿಯಲ್ಲಿ ಶತ್ರುವಿನ ಗುಂಡಿಗೆ ಸದಾ ಎದೆಯೊಡ್ಡಿಕೊಂಡು ನಿಂತಿರುವ ಸೈನಿಕರಿಗೆ ನೀಡಲಾಗುತ್ತಿರುವ ಊಟ ಹಾಗೂ ಭದ್ರತೆ, ಭತ್ಯೆ ಮತ್ತು ಸಂಬಳಗಳನ್ನು ದಂಡಿಯಾಗಿ ಪಡೆಯುತ್ತಿರುವ ಸೇನಾ ಅಧಿಕಾರಿಗಳಿಗೆ ಕೊಡಲಾಗುತ್ತಿರುವ ಊಟದ ನಡುವಿನ ತಾರತಮ್ಯದ ಬಗ್ಗೆ ಪ್ರಶ್ನೆ ಎತ್ತಿದ್ದಾರೆ.

ADVERTISEMENT

ರಾಹುಲ್ ಗಾಂಧಿ ಅವರು ಗಡಿಯಲ್ಲಿ ಚೀನಾ ಸೈನಿಕರು ಭಾರತದ ಭೂಮಿಯನ್ನು ವಶಪಡಿಸಿಕೊಂಡಿರುವ ಬಗ್ಗೆ, ಜೊತೆಗೆ ಈ ವಿಷಯದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ತೆಳೆದಿರುವ ಜಾಣಮೌನದ ಬಗ್ಗೆ ಪ್ರಶ್ನೆ ಕೇಳುತ್ತಿರುವುದು ಇದು ಮೊದಲೇನಲ್ಲ. ಈ ಬಾರಿ ಭಾರತ-ಚೀನಾ ಗಡಿಯಲ್ಲಿ ಮೇ ತಿಂಗಳ 5 ರಿಂದ ಉದ್ವಿಗ್ನತೆ ಉಂಟಾಯಿತು. ಸೇನೆ ಹಾಗೂ ರಾಜತಾಂತ್ರಿಕ ಮಟ್ಟದ ಮಾತುಕತೆಗಳಾದವು. ಸೇನೆ ಹಾಗೂ ರಾಜತಾಂತ್ರಿಕ ಮಟ್ಟದ ಮಾತುಕತೆಗಳು ಭಾರೀ ಯಶಸ್ವಿಯಾದವೆಂದು ಕೇಂದ್ರ ಸರ್ಕಾರ ತನ್ನ ಭಟ್ಟಂಗಿ ಮಾಧ್ಯಮಗಳಲ್ಲಿ ಸುದ್ದಿ ಮಾಡಿಸಿತು. ಅದರ ನಡುವೆಯೇ ಚೀನಾ ಸೇನೆ ಭಾರತದ ಭೂಭಾಗವನ್ನು ಆಕ್ರಮಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ. ಈ ಎಲ್ಲಾ ವಿಷಯಗಳ ಬಗ್ಗೆ ರಾಹುಲ್ ಗಾಂಧಿ ಬಹಳ ಸೂಕ್ಷ್ಮವಾಗಿ, ತೀಕ್ಷ್ಣವಾಗಿ ಜೊತೆಗೆ ನಿರಂತರವಾಗಿ ಕೇಂದ್ರ ಸರ್ಕಾರದ ಮೇಲೆ ಪ್ರಶ್ನೆಗಳ ಮಳೆಗೈಯುತ್ತಲೇ ಇದ್ದಾರೆ.

ಇದಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರದಿಂದ, ಆಡಳಿತ ನಡೆಸುತ್ತಿರುವ ಬಿಜೆಪಿ ನಾಯಕರಿಂದ, ‘ಸುಳ್ಳಿನ ಫ್ಯಾಕ್ಟರಿ’ ಎಂಬ ‘ಖ್ಯಾತಿ’ ಗಳಿಸಿರುವ ಬಿಜೆಪಿಯ ಐಟಿ ಸೆಲ್ ನಿಂದ ರಾಹುಲ್ ಗಾಂಧಿ ಅವರನ್ನು ಅಪಮಾನಿಸುವ, ದೇಶದ್ರೋಹದ ಪಟ್ಟಕಟ್ಟುವ ಕೆಲಸವಾಯಿತು. ಈ ಕುಕೃತ್ಯಕ್ಕೂ ಎದೆಗುಂದದೆ ರಾಹುಲ್ ಗಾಂಧಿ ಪ್ರಶ್ನೆ ಕೇಳುವುದನ್ನು ಮುಂದುವರೆಸಿದಾಗ ‘ರಾಹುಲ್ ಗಾಂಧಿ ರಕ್ಷಣಾ ಇಲಾಖೆಯ ಸಂಸದೀಯ ಸಮಿತಿ ಸಭೆಯಲ್ಲಿ ಪ್ರಶ್ನೆ ಕೇಳಬಹುದು.‌ ಆದರೆ ಕೇಂದ್ರ ಸರ್ಕಾರ ಮತ್ತು ನರೇಂದ್ರ ಮೋದಿಗೆ ಮುಜುಗರ ಉಂಟುಮಾಡಲೆಂದೇ ಹೊರಗಡೆ ಮಾತನಾಡುತ್ತಾರೆ’ ಎಂದು ಆರೋಪಿಸಿದರು.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಈಗ ರಾಹುಲ್ ಗಾಂಧಿ ರಕ್ಷಣಾ ಇಲಾಖೆಯ ಸಂಸದೀಯ ಸಮಿತಿ ಸಭೆಯಲ್ಲಿ ಪ್ರಶ್ನೆ ಕೇಳಲು ಆರಂಭಿಸಿದ್ದಾರೆ. ಮೊದಲ ಪ್ರಶ್ನೆಯೇ ಸೈನಿಕರು ಮತ್ತು ಸೇನಾ ಅಧಿಕಾರಿಗಳಿಗೆ ಬೇರೆ ಬೇರೆ ರೀತಿಯ ಊಟವನ್ನೇಕೆ ನೀಡುತ್ತಿದ್ದೀರಿ? ತಾರತಮ್ಯವನ್ನು ಏಕೆ ಮಾಡುತ್ತಿದ್ದೀರಿ ಎಂದು. ಇಷ್ಟು ದಿನ ರಕ್ಷಣಾ ಸಮಿತಿಯಲ್ಲಿ ರಾಹುಲ್ ಗಾಂಧಿ ಪ್ರಶ್ನೆ ಮಾಡುತ್ತಿಲ್ಲ ಎನ್ನುತ್ತಿದ್ದವರು ಈಗ ಮೊದಲ ಪ್ರಶ್ನೆಗೆ ಸುಸ್ತು ಹೊಡೆದಿದ್ದಾರೆ. ಈ ಅನಿರೀಕ್ಷಿತ ಕ್ಲಿಷ್ಟ ಪ್ರಶ್ನೆ ಸಭೆಯಲ್ಲಿದ್ದ ಚೀಫ್ ಆಫ್ ಡಿಫೆನ್ಸ್ (CDS) ಜನರಲ್ ಬಿಪಿನ್ ರಾವತ್‍ ತಡಬಡಾಯಿಸುವಂತೆ ಮಾಡಿದೆ. ಸುಧಾರಿಸಿಕೊಂಡು ಮಾತನಾಡಿರುವ ಅವರು ಮೊದಲಿಗೆ ‘ಸೈನಿಕರು ಮತ್ತು/ಸೇನಾಧಿಕಾರಿಗಳ ನೀಡಲಾಗುತ್ತಿರುವ ಆಹಾರದಲ್ಲಿ ತಾರತಮ್ಯ ಮಾಡುತ್ತಿಲ್ಲ’ ಎಂದು ಹಾರಿಕೆಯ ಉತ್ತರ ನೀಡಿದ್ದಾರೆ. ರಾಹುಲ್ ಗಾಂಧಿ ಉದಾಹರಣೆಗಳ ಸಮೇತ ತಾರತಮ್ಯದ ಬಗ್ಗೆ ಪ್ರಶ್ನೆ ಮಾಡಿದಾಗ ‘ಸೈನಿಕರು ಹಾಗೂ ಸೇನಾಧಿಕಾರಿಗಳ ಆಹಾರ ಪದ್ಧತಿಯಲ್ಲಿ ಬಹಳ ವ್ಯತ್ಯಾಸ ಇದೆ. ಸೈನಿಕರು ಗ್ರಾಮಾಂತರ ಪ್ರದೇಶದಿಂದ ಬಂದಿರುತ್ತಾರೆ, ಆದುದರಿಂದ ಅವರಿಗೆ ರೊಟ್ಟಿಗಳನ್ನು ನೀಡಲಾಗುತ್ತದೆ. ಸೇನಾಧಿಕಾರಿಗಳು ನಗರ ಪ್ರದೇಶಗಳಿಂದ ಬಂದಿರುತ್ತಾರೆ, ಆದುದರಿಂದ ಅವರು ಬ್ರೆಡ್ ಅನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಸೈನಿಕರು ದೇಸೀ ತುಪ್ಪವನ್ನು ಇಷ್ಟಪಡುತ್ತಾರೆ. ಸೇನಾಧಿಕಾರಿಗಳು ಚೀಜ್ ಇಷ್ಟಪಡುತ್ತಾರೆ,’ ಎಂದು ಉತ್ತರಿಸಿದ್ದಾರೆ.

ಎರಡು ವರುಷಗಳ ಹಿಂದೆ ಗಡಿ ಭದ್ರತಾ ಪಡೆಯ (BSF) ಯೋಧ ತೇಜ್ ಬಹಾದ್ದೂರ್ ಯಾದವ್ ಅವರು ‘ಗಡಿ ಕಾಯುತ್ತಿರುವ ಸೈನಿಕರಿಗೆ ಕಳಪೆ ಗುಣಮಟ್ಟದ ಆಹಾರವನ್ನು ನೀಡಲಾಗುತ್ತಿದೆ’ ಎಂದು ಆಕ್ಷೇಪಿಸಿ ವಿಡಿಯೋ ಬಿಡುಗಡೆ ಮಾಡಿದ್ದರು. ಅದಾದ ಬಳಿಕ ಅವರನ್ನು ‘ಮಾನಸಿಕ ಸ್ಥಿಮಿತತೆ ಇಲ್ಲದವರು’ ಎಂಬ ಪಟ್ಟಕಟ್ಟಿ ಅಮಾನತ್ತುಗೊಳಿಸಲಾಗಿತ್ತು. ಇದಲ್ಲದೆ ಸೇನೆಯಲ್ಲಿ ನಡೆಯುತ್ತಿರುವ ಅನ್ಯಾಯಗಳ ವಿರುದ್ಧ ಮಾತನಾಡಿದವರನ್ನು ಟ್ರೋಲ್ ಮಾಡುವ, ದೇಶದ್ರೋಹಿಗಳ ಪಟ್ಟಕಟ್ಟುವ ಕೆಲಸ ಸಾಂಗವಾಗಿ ನಡೆಯುತ್ತಿದೆ. ಈಗ ಸ್ವತಃ ಚೀಫ್ ಆಫ್ ಡಿಫೆನ್ಸ್ (CDS) ಜನರಲ್ ಬಿಪಿನ್ ರಾವತ್‍ ಅವರು ಸೇನೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ. ಸೈನಿಕರಿಗೆ ಒಂದು ರೀತಿಯ ಊಟ ಸೇನಾ ಅಧಿಕಾರಿಗಳಿಗೆ ಇನ್ನೊಂದು ಬಗೆಯ ಊಟ ನೀಡುತ್ತಿರುವುದನ್ನು ಅಧಿಕೃತವಾಗಿ ಒಪ್ಪಿಕೊಂಡಿದ್ದಾರೆ.

ಇದರಿಂದ ಹಲವು ಸಂಗತಿಗಳನ್ನು ಅರ್ಥ ಮಾಡಿಕೊಳ್ಳಬೇಕಿದೆ. ಸೈನ್ಯ ಮತ್ತು ಸೈನಿಕರ ಹೆಸರಿನಲ್ಲಿ ದೇಶಭಕ್ತಿ ಉಕ್ಕಿಸುವ, ಉನ್ಮಾದ ಉಂಟುಮಾಡುವವರಿದ್ದಾರೆ. ವಾಸ್ತವದಲ್ಲಿ ಸೈನಿಕರಿಗೆ ಸೇನೆಯಿಂದಲೇ ಅನ್ಯಾಯ, ತಾರತಮ್ಯ ಆಗುತ್ತಿದೆ. ಅದರ ಬಗ್ಗೆ ಮುಚ್ಚಿಡಲಾಗುತ್ತಿದೆ. ಬಡತನದ ಹಿನ್ನಲೆಯವರೇ ಹೆಚ್ಚಾಗಿ ಸೈನ್ಯ ಸೇರುತ್ತಾರೆ. ದೇಶಭಕ್ತಿಗಿಂತ ಬಡತನ ಅವರನ್ನು ಸೇನೆಗೆ ಸೇರುವಂತೆ ಪ್ರೇರೇಪಿಸಿರುತ್ತದೆ. ಆದರೆ ದೇಶಭಕ್ತಿಯ ಬಗ್ಗೆ ಭಾಷಣ ಮಾಡುವ ಬಿಜೆಪಿ ಅಥವಾ ಆರ್ ಎಸ್ ಎಸ್ ನಾಯಕರ ಮಕ್ಕಳು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುತ್ತಾರೆ. ವಿದೇಶಿ ಕಂಪನಿಗಳಲ್ಲಿ ಬೆಚ್ಚಗೆ ಕೂತು ಕಂತೆಗಟ್ಟಲೆ ಸಂಬಳ ತೆಗೆದುಕೊಳ್ಳುತ್ತಿರುತ್ತಾರೆ.‌ ಗಡಿಯಲ್ಲಿ ಸಾಯಲು ಬಡವರ ಮಕ್ಕಳು, ದೇಶಭಕ್ತಿಯ ಭಾಷಣ ಮಾಡಿ ಅಧಿಕಾರ ಪಡೆಯುವವರು ರಾಜಕಾರಣಿಗಳು.

‘ಸೈನಿಕರಿಗೆ ಒಂದು ರೀತಿ ಸೇನಾಧಿಕಾರಿಗಳಿಗೆ ಇನ್ನೊಂದು ರೀತಿ’ ಎಂಬ ತಾರತಮ್ಯ ‘ಶ್ರಮ ಸಂಸ್ಕೃತಿ’ಗೆ ವಿರುದ್ಧವಾದುದು. ಭೌದ್ಧಿಕ ಶ್ರಮಕ್ಕೆ ಹೆಚ್ಚು ಗೌರವಾದರಗಳನ್ನು ನೀಡುವ ದೈಹಿಕ ಶ್ರಮವನ್ನು ನಗಣ್ಯ ಮಾಡುವ ಇತರೆ ವರ್ಗ, ಕೆಲಸಗಳಂತೆ ಸೇನೆಯಲ್ಲೂ ಆಗುವುದು ತರವಲ್ಲ‌.‌ ಕ್ರಮೇಣವಾಗಿಯಾದರೂ ಬಡವರೇ ಸೈನ್ಯ ಸೇರುವ, ದೇಶಕ್ಕಾಗಿ ಹುತಾತ್ಮರಾಗುವ, ಆ ಹಾದಿಯಲ್ಲಿ ತಮ್ಮದೇ ಸೇನಾಧಿಕಾರಿಗಳಿಂದ ತಾರತಮ್ಯ ಅನುಭವಿಸುವ ಅನಿಷ್ಟಗಳು ಅಂತ್ಯಗೊಳ್ಳಬೇಕು. ಸೇನಾಧಿಕಾರಿಗಳು ಸುಧಾರಿಸಬೇಕು. ತಮ್ಮದೇ ಸೈನಿಕರ ಬಗ್ಗೆ ಸಹಾನುಭೂತಿಯಿಂದ ನಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ರಾಹುಲ್ ಗಾಂಧಿ ಅವರು ಎತ್ತಿರುವ ಪ್ರಶ್ನೆ ನಿಜವಾಗಿಯೂ ಸೈನಿಕರ ಪರವಾಗಿದೆ.

Tags: bipin rawatCentral GovtIndian ArmyRaul Gandhiಕೇಂದ್ರ ಸರ್ಕಾರರಾಹುಲ್ ಗಾಂಧಿ
Previous Post

ʼದಂಡನಾಯಕʼನಿಲ್ಲದ ಕಾಂಗ್ರೆಸ್‌ನ ʼಸೇನಾಪಡೆʼಯಲ್ಲಿ ಕರ್ನಾಟಕದ ಪಾಲೆಷ್ಟು?

Next Post

ತನ್ನ ಕ್ಷೇತ್ರದ ಜನರಿಗಾಗಿ 11 ಗಂಟೆಗಳಲ್ಲಿ 24 ಕಿ.ಮೀ ನಡೆದ ಮುಖ್ಯಮಂತ್ರಿ..!

Related Posts

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
0

ಬೆಂಗಳೂರು: ದೇಶದಲ್ಲೇ ಸಂಚಲನ ಮೂಡಿಸಿದ್ದ 400 ಕೋಟಿ ರೂಪಾಯಿ ಕಂಟೇನರ್ ದರೋಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಮುಖ ಆರೋಪಿ ಕಿಶೋರ್ ಸಾವ್ಲಾ ನಾಸಿಕ್ ಗ್ರಾಮೀಣ ಪೊಲೀಸರಿಗೆ...

Read moreDetails
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Next Post
ತನ್ನ ಕ್ಷೇತ್ರದ ಜನರಿಗಾಗಿ 11 ಗಂಟೆಗಳಲ್ಲಿ 24 ಕಿ.ಮೀ ನಡೆದ ಮುಖ್ಯಮಂತ್ರಿ..!

ತನ್ನ ಕ್ಷೇತ್ರದ ಜನರಿಗಾಗಿ 11 ಗಂಟೆಗಳಲ್ಲಿ 24 ಕಿ.ಮೀ ನಡೆದ ಮುಖ್ಯಮಂತ್ರಿ..!

Please login to join discussion

Recent News

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada