• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಸೈನಿಕರ ಬಲಿದಾನದ ಬಗ್ಗೆಯೂ ಮೋದಿ ಮೌನ, ಪ್ರಶ್ನೆಗಳ ಮಳೆ ಸುರಿಸುತ್ತಿರುವ ರಾಹುಲ್ ಗಾಂಧಿ

by
June 18, 2020
in ದೇಶ
0
ಸೈನಿಕರ ಬಲಿದಾನದ ಬಗ್ಗೆಯೂ ಮೋದಿ ಮೌನ
Share on WhatsAppShare on FacebookShare on Telegram

ಭಾರತ ಮತ್ತು ಚೀನಾ ಗಡಿಯಲ್ಲಿ ಸೈನಿಕರ ನಡುವೆ ಸಂಘರ್ಷ ಆಗಿದ್ದು ಕಳೆದ ಸೋಮವಾರ ರಾತ್ರಿ(ಜೂನ್ 15ರಂದು). ಅದಕ್ಕೂ ಮೊದಲೇ ಎರಡೂ‌ ದೇಶಗಳ ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಜೂನ್‌ 6ರಿಂದ ಎರಡೂ‌ ದೇಶಗಳ ಸೇನಾ ಅಧಿಕಾರಿಗಳ ಮಟ್ಟದಲ್ಲಿ, ವಿದೇಶಾಂಗ ಇಲಾಖೆ ಅಧಿಕಾರಿಗಳ ಮಟ್ಟದಲ್ಲಿ ಮಾತುಕತೆ ನಡೆಯುತ್ತಿತ್ತು. ಆದರೆ ಮಾತುಕತೆ ಎಷ್ಟು ಪರಿಣಾಮಕಾರಿಯಾಗಿದೆ? ಫಲಪ್ರದವಾಗುತ್ತಿದೆ ಎಂಬ ಮಾಹಿತಿಗಳನ್ನು ಕೇಂದ್ರ ಸರ್ಕಾರವಾಗಲೀ, ರಕ್ಷಣಾ ಇಲಾಖೆಯಾಗಲಿ ಅಥವಾ ವಿದೇಶಾಂಗ ಇಲಾಖೆಯಾಗಲಿ ನೀಡಲಿಲ್ಲ. ಜೊತೆಗೆ ಮಾತುಕತೆ ನಡೆಯುತ್ತಿದ್ದರೂ ಗಡಿಯಲ್ಲಿ ಉದ್ವಿಗ್ನತೆ ಉಂಟಾಗಿದ್ದೇಗೆ ಎಂಬುದನ್ನೂ ತಿಳಿಸಲಿಲ್ಲ.

ನಿಜ, ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಕೆಲ ಸಂಗತಿಗಳನ್ನು ಮುಚ್ಚಿಡಬೇಕಾಗುತ್ತದೆ. ಆದರೆ ಎಲ್ಲವನ್ನೂ ಅಲ್ಲ. ‘ರಾಷ್ಟ್ರೀಯ ಭದ್ರತೆ ವಿಚಾರದಲ್ಲಿ ಕೆಲ ಸಂಗತಿಗಳನ್ನು ಮುಚ್ಚಿಡಬೇಕಾಗುತ್ತದೆ’ ಎಂಬುದನ್ನೇ ನೆಪ ಮಾಡಿಕೊಂಡು ಮಗುಮ್ಮಾಗಿದೆ. ನೆಪಮಾತ್ರಕ್ಕೆ ಆಗೊಮ್ಮೆ ಈಗೊಮ್ಮೆ ಕೆಲ ಮಾಹಿತಿ ಹಂಚಿಕೊಳ್ಳುತ್ತಿದೆ. ಆ ಮಾಹಿತಿಗಳು ಎಂಥವು ಎಂದರೆ ‘ಇಂದು ಎರಡೂ ದೇಶಗಳ ಸೇನಾ ಮಟ್ಟದ ಮಾತುಕತೆ ಮಾಹಿತಿ ತಿಳಿಸಲಾಗುತ್ತೆ’ ಎಂಬಂಥವು. ಆದರೆ ಮಾತುಕತೆ ಯಾವ ವಿಷಯದ ಬಗ್ಗೆ ಎಂಬುದನ್ನು ತಿಳಿಸುವುದಿಲ್ಲ. ಮಾತುಕತೆ ಮುಗಿದ ಬಳಿಕ ‘ಔಟ್ ಕಮ್’ ಏನು ಎಂಬುದನ್ನೂ ತಿಳಿಸುವುದಿಲ್ಲ.

ಈ ನಡುವೆ ದೇಶದಲ್ಲಿ ವಿರೋಧ ಪಕ್ಷಗಳು ಸತ್ತು‌ ಹೋಗಿರುವುದು ಮತ್ತು ಮಾಧ್ಯಮಗಳು ಸರ್ಕಾರದ ತುತ್ತೂರಿ ಆಗಿರುವುದು ಆಡಳಿತ ಪಕ್ಷಕ್ಕೆ ಅನುಕೂಲವಾಗಿದೆ.‌ ಆದರೆ ಭಾರತ ಮತ್ತು ಚೀನಾ ಗಡಿಯಲ್ಲಿ ಉದ್ವಿಗ್ನತೆ ಉಂಟಾದ ಮೊದಲ ದಿನದಿಂದಲೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾತ್ರ ನಿರಂತರವಾಗಿ ಕೇಂದ್ರ ಸರ್ಕಾರವನ್ನು ಪ್ರಶ್ನೆ ಮಾಡುತ್ತಾ ಬಂದಿದ್ದಾರೆ. ‘ಏನಾಗುತ್ತಿದೆ?’ ಎಂಬುದನ್ನು ತಿಳಿಸಿ ಎಂದು ಒತ್ತಾಯಿಸುತ್ತಿದ್ದಾರೆ. ಗಡಿಯಲ್ಲಿ ಇಷ್ಟೆಲ್ಲಾ ಆಗುತ್ತಿದ್ದರೂ ‘ಏನೂ ಆಗೇ ಇಲ್ಲ’ ಎನ್ನುವಂತೆ ಜಾಣಮೌನ ವಹಿಸಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಕೇಳುತ್ತಿದ್ದಾರೆ.

ಈಗಲೂ ಭಾರತ ಮತ್ತು ಚೀನಾ ಗಡಿಯಲ್ಲಿ ಸೈನಿಕರ ನಡುವೆ ಸಂಘರ್ಷ ಉಂಟಾದ ಬಳಿಕ ನಿರಂತರವಾಗಿ ಕೇಂದ್ರ ಸರ್ಕಾರವನ್ನು ‘ಏನಾಯಿತು ಹೇಳಿ?’ ಎಂದು ರಾಹುಲ್ ಗಾಂಧಿ ಪ್ರಶ್ನೆ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಅವರು ಪ್ರಧಾನಿ ಮೋದಿ ಅವರನ್ನು ಹಾಗೂ ಕೇಂದ್ರ ಸರ್ಕಾರವನ್ನು ಕೇಳಿದ ಪ್ರಶ್ನೆಗಳು ಈ‌ ಕೆಳಕಂಡಂತಿವೆ.

ಗುರುವಾರ ರಾಹುಲ್ ಗಾಂಧಿ ಕೇಳಿದ ಪ್ರಶ್ನೆಗಳು;

* ನಮ್ಮ ನಿಶಸ್ತ್ರ ಸೈನಿಕರನ್ನು ಕೊಲ್ಲಲು ಚೀನಾಗೆ ಎಷ್ಟು ಧೈರ್ಯ?

* ನಮ್ಮ ಸೈನಿಕರನ್ನು ನಿಶಸ್ತ್ರವಾಗಿ ಹುತಾತ್ಮರಾಗಲು ಕಳುಹಿಸಿದ್ದೇಕೆ?

ಬುಧವಾರ ರಾಹುಲ್ ಗಾಂಧಿ ಕೇಳಿದ ಪ್ರಶ್ನೆಗಳು;

* ಪ್ರಧಾನಿ ನರೇಂದ್ರ ಮೋದಿ ಮೌನವಾಗಿರುವುದು ಏಕೆ?

* ಮೋದಿ ವಸ್ತುಸ್ಥಿತಿಯನ್ನು ಏಕೆ ಮುಚ್ಚಿಡುತ್ತಿದ್ದಾರೆ?

* ಆಗಿದ್ದು ಆಯ್ತು, ಈಗ ಏನಾಗುತ್ತಿದೆ ಹೇಳಿ

* ನಮ್ಮ ಸೈನಿಕರನ್ನು ಹತ್ಯೆ ಮಾಡಲು ಚೀನಾಕ್ಕೆ ಎಷ್ಟು ಧೈರ್ಯ?

* ನಮ್ಮ ಜಾಗವನ್ನು ವಶಪಡಿಸಿಕೊಳ್ಳಲು ಚೀನಾಕ್ಕೆ ಎಷ್ಟು ಧೈರ್ಯ?

ಎಂದಿನಂತೆ ರಾಹುಲ್ ಗಾಂಧಿ ಅವರ ಪ್ರಶ್ನೆಗಳಿಗೆ ಕೇಂದ್ರ ‌ಸರ್ಕಾರ ಮತ್ತು ಬಿಜೆಪಿ ನಾಯಕರಿಂದ ಬಂದಿರುವುದು ಕುಹಕಗಳು ಮಾತ್ರ.‌

20 ಸೈನಿಕರು ಹುತಾತ್ಮರಾದ ಸುದ್ದಿ‌ ತಿಳಿದೂ ಅವರಿಗೆ ಸಂತಾಪ ಸೂಚಿಸಲು 15ಗಂಟೆ ಸಮಯ ತೆಗೆದುಕೊಂಡ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೂ ರಾಹುಲ್ ಗಾಂಧಿ ಕೆಲ ಪ್ರಶ್ನೆ ಕೇಳಿದ್ದಾರೆ. ರಾಜನಾಥ್ ಸಿಂಗ್ ಸೈನಿಕರ ಸಾವಿನಿಂದ ತುಂಬಾ ನೋವಾಗಿದೆ ಎಂದಷ್ಟೇ ಹೇಳಿದ್ದರಿಂದ ರಾಹುಲ್ ಗಾಂಧಿ ಪ್ರಶ್ನೆಗಳು ಸ್ವಲ್ಪ ಖಡಕ್ ಆಗಿವೆ. ದೇಶ ಸಂಕಟದಲ್ಲಿದ್ದಾಗಲೂ ಚುನಾವಣಾ ಪ್ರಚಾರದಲ್ಲಿ ನಿರತತಾಗಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನೂ ಪ್ರಶ್ನಿಸಿದ್ದಾರೆ. ಜೊತೆಗೆ ರಾಹುಲ್ ಗಾಂಧಿ ಮಾಧ್ಯಮಗಳ ನಿಲುವನ್ನೂ ಚುಚ್ಚಿದ್ದಾರೆ.

* ಸೈನಿಕರ ಸಾವಿನಿಂದ ನೀವು ತುಂಬಾ ನೋವಿನಿಂದ ಕೂಡಿದ್ದರೆ, ನಿಮ್ಮ ಟ್ವೀಟ್‌ನಲ್ಲಿ ಚೀನಾ ಹೆಸರಿಡದೆ ಭಾರತೀಯ ಸೇನೆಯನ್ನು ಏಕೆ ಅವಮಾನಿಸುತ್ತೀರಿ?

* ಕಾಂಡೋಲ್ ಮಾಡಲು 2 ದಿನಗಳನ್ನು ಏಕೆ ತೆಗೆದುಕೊಳ್ಳಬೇಕು?

* ಸೈನಿಕರು ಸಾಯುತ್ತಿರುವ ಸಂದರ್ಭದಲ್ಲೂ ಚುನಾವಣಾ ಸಮಾವೇಶಗಳನ್ನು ಏಕೆ ಮಾಡುತ್ತಿದ್ದೀರಿ?

* ಕ್ರೋನಿ ಮಾಧ್ಯಮದಿಂದ ಸೈನ್ಯವನ್ನು ಏಕೆ ಮರೆಮಾಚಬೇಕು?

* ಕೇಂದ್ರ ಸರ್ಕಾರದಿಂದ ಹಣ ಪಡೆದಿರುವ ಮಾಧ್ಯಮಗಳು ಸೈನ್ಯವನ್ನು ದೂಷಿಸುವುದು ಏಕೆ?

If it was so painful:

1. Why insult Indian Army by not naming China in your tweet?
2. Why take 2 days to condole?
3. Why address rallies as soldiers were being martyred?
4. Why hide and get the Army blamed by the crony media?
5. Why make paid-media blame Army instead of GOI? https://t.co/mpLpMRxwS7

— Rahul Gandhi (@RahulGandhi) June 17, 2020


ಇದಲ್ಲದೆ ರಾಹುಲ್ ಗಾಂಧಿ ಅವರ ಸಹೋದರಿ ಹಾಗೂ ಎಐಸಿಸಿ‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಅವರು ಪ್ರಶ್ನೆಸಹಿತ ಒತ್ತಾಯ ಮಾಡಿದ್ದಾರೆ.‌ “ನಮ್ಮ ಭೂಮಿ, ನಮ್ಮ ಸಾರ್ವಭೌಮತ್ವಕ್ಕೆ ಬೆದರಿಕೆ ಇದೆ. ನಮ್ಮ ಸೈನಿಕರು ಮತ್ತು ಅಧಿಕಾರಿಗಳು ಹುತಾತ್ಮರಾಗಿದ್ದಾರೆ. ಇಂಥ ಪರಿಸ್ಥಿತಿಯಲ್ಲಿ ನಾವು ಸುಮ್ಮನಿರಲು ಸಾಧ್ಯವೇ?” ಎಂದು ಪ್ರಶ್ನಿಸಿದ್ದಾರೆ. ಪ್ರಶ್ನೆಯ ಬೆನ್ನಲ್ಲೇ “ನಮ್ಮ ಭೂಮಿ ವಾಪಸ್ ಪಡೆಯಲು ಭಾರತದ ನಾಯಕತ್ವ ಇಚ್ಛಾಶಕ್ತಿಯನ್ನು ತೋರಬೇಕು. ಅಂಥ‌ ಇಚ್ಛಾಶಕ್ತಿ ತೋರಿಸಿ ನರೇಂದ್ರ ಮೋದಿ” ಎಂದು‌ ಪ್ರಿಯಾಂಕಾ ಗಾಂಧಿ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.

हमारी धरती मां, हमारी संप्रभुता खतरे में है। हमारे जवान शहीद हो रहे हैं। क्या हम चुप बैठे रहेंगे?

भारत की जनता सच की हकदार है, उसे ऐसे नेतृत्व की दरकार है जो हमारी जमीन छिनने से पहले अपनी जान देने के लिए तैयार हो।

सामने आइए @narendramodi जी, चीन का सामना करने का वक्त आ गया है।

— Priyanka Gandhi Vadra (@priyankagandhi) June 17, 2020


ADVERTISEMENT

ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಈ ಬಿಕ್ಕಟ್ಟಿನ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಸರ್ಕಾರ ಹಾಗೂ ಸೇನೆಯ ಜೊತೆ ನಿಲ್ಲುತ್ತದೆ ಎಂದು ಬೆಂಬಲ‌ ಸೂಚಿಸಿದ್ದಾರೆ. ಜೊತೆಗೆ ಗಲ್ವಾನ್ ಕಣಿವೆ ಬಳಿ ಚೀನಾದ ಸೈನಿಕರು ಭಾರತದ 20 ಭಾರತೀಯ ಯೋಧರನ್ನು ಬಲಿ ತೆಗೆದುಕೊಂಡಿರುವುದು ದೇಶದ ಸಾಕ್ಷಿಪ್ರಜ್ಞೆಯನ್ನು ಅಲುಗಾಡಿಸಿದೆ. ಒಂದೂವರೆ ತಿಂಗಳಿನಿಂದ ಚೀನಾದ ಸೇನೆ ಭಾರತದ ಭೂಭಾಗವನ್ನು ಅತಿಕ್ರಮಿಸಿಕೊಂಡಿದೆ. ನಮ್ಮ ನೆಲವನ್ನು ವಶಪಡಿಸಿಕೊಳ್ಳಲು ಹಾಗೂ 20 ಯೋಧರನ್ನು ಬಲಿ ತೆಗೆದುಕೊಳ್ಳಲು ಹೇಗೆ ಸಾಧ್ಯವಾಯಿತು? ಎಂಬುದನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶದ ಜನರಿಗೆ ತಿಳಿಸಬೇಕು ಎಂದು ಸವಾಲು ಹಾಕಿದ್ದಾರೆ.

ಕಾಣೆಯಾಗಿರುವ ಭಾರತದ ಯೋಧರು ಎಲ್ಲಿದ್ದಾರೆ? ಗಂಭೀರ ಸ್ವರೂಪದಲ್ಲಿ ಗಾಯಗೊಂಡಿರುವ ಯೋಧರು ಹಾಗೂ ಸೇನಾಧಿಕಾರಿಗಳ ಸಂಖ್ಯೆ ಎಷ್ಟು? ಚೀನಾ ಈವರೆಗೆ ಭಾರತದ ಎಷ್ಟು ಭೂಮಿಯನ್ನು ವಶಪಡಿಸಿಕೊಂಡಿದೆ? ಇದರ ಬಗ್ಗೆ ಸರ್ಕಾರ ಏನು ಕ್ರಮ ಕೈಗೊಳ್ಳಲಿದೆ? ಸೋನಿಯಾ ಗಾಂಧಿ ಅವರು ಪ್ರಶ್ನೆ ಮಾಡಿದ್ದಾರೆ. ಕೇಂದ್ರ ಸರ್ಕಾರದ್ದು ಮಾತ್ರ ದಿವ್ಯ ಮೌನ…

Tags: India-china stand offIndian ArmyPM ModiRahul Gandhiಪ್ರಧಾನಿ ಮೋದಿಭಾರತ-ಚೀನಾ ಸಂಘರ್ಷಭಾರತೀಯ ಸೇನೆರಾಹುಲ್ ಗಾಂಧಿ
Previous Post

ಶಾಂತಿ ಮಂತ್ರವೇ..? ಯುದ್ಧ ತಂತ್ರವೇ..? ಚೀನಾದ ವಿರುದ್ಧ ತೆಗೆದುಕೊಳ್ಳಬೇಕಿದೆ ಐತಿಹಾಸಿಕ ನಿರ್ಧಾರ!

Next Post

ರಾಜ್ಯದಲ್ಲಿ 7,944 ಕರೋನಾ ಪ್ರಕರಣಗಳು ಪತ್ತೆ

Related Posts

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
0

ನಾವು ಆಗಾಗ್ಗೆ ಊಟಕ್ಕೆ ಸೇರುತ್ತೇವೆ. ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಪ್ರಶ್ನಿಸಿದರು. ಅವರು ಇಂದು ಹುಬ್ಬಳ್ಳಿಗೆ ತೆರಳುವ ಮುನ್ನ ಕಿತ್ತೂರು...

Read moreDetails
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025
Next Post
ರಾಜ್ಯದಲ್ಲಿ 7

ರಾಜ್ಯದಲ್ಲಿ 7,944 ಕರೋನಾ ಪ್ರಕರಣಗಳು ಪತ್ತೆ

Please login to join discussion

Recent News

Top Story

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

by ಪ್ರತಿಧ್ವನಿ
October 13, 2025
Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Siddaramaiah: ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ

October 13, 2025
ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada