• Home
  • About Us
  • ಕರ್ನಾಟಕ
Saturday, January 17, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಸ್ಟಾರ್ಟ್ಅಪ್  ಕೇಂದ್ರವಾಗಿ ಬೆಳೆಯುತ್ತಿರುವ ಮಂಗಳೂರು

by
October 20, 2019
in ಕರ್ನಾಟಕ
0
ಸ್ಟಾರ್ಟ್ಅಪ್  ಕೇಂದ್ರವಾಗಿ ಬೆಳೆಯುತ್ತಿರುವ ಮಂಗಳೂರು
Share on WhatsAppShare on FacebookShare on Telegram

ಬೆಂಗಳೂರು ದೇಶದ ಸ್ಟಾರ್ಟ್ ಅಪ್ ರಾಜಧಾನಿಯಾಗಿ ಹೆಗ್ಗಳಿಕೆ ಪಡೆದುಕೊಂಡಿದ್ದರೆ, ಇದೀಗ ಕರ್ನಾಟಕ ಕರಾವಳಿಯ ಮಂಗಳೂರು ಸ್ಟಾರ್ಟ್ ಅಪ್ ಚಟುವಟಿಕೆಯಲ್ಲಿ ರಾಜ್ಯದ ಎರಡನೇ ನಗರವಾಗಿ ಗುರುತಿಸಿಕೊಳ್ಳುವತ್ತ ಸಾಗುತ್ತಿದೆ. ಕೇಂದ್ರ ಸರಕಾರ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯನ್ನು ಸ್ಟಾರ್ಟ್ ಅಪ್ ಜಿಲ್ಲೆ ಎಂದು ಘೋಷಣೆ ಮಾಡಿದ್ದು, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಅವರ ಸಂಸದರ ನಿಧಿಯಿಂದ ಇಂಕ್ಯುಬೇಷನ್ ಸೆಂಟರ್ ಯಶಸ್ವಿಯಾಗಿ ಕಾರ್ಯಾಚರಿಸುತ್ತಿದೆ.

ADVERTISEMENT

ಮಂಗಳೂರಿನಲ್ಲಿ 25 ವರ್ಷಗಳ ಹಿಂದಿಯೇ ಇಂತಹ ನವೋದ್ಯಮ ಕೇಂದ್ರವೊಂದು ಸುರತ್ಕಲ್ ನ್ಯಾಶನಲ್ ಇನ್ಸಿಟ್ಯೂಟ್ ಆಫ್ ಟೆಕ್ನಲಾಜಿ – ಕರ್ನಾಟಕದಲ್ಲಿ NITK – STEP (Science & Technology Entrepreneurs Park) ಆರಂಭ ಆಗಿತ್ತು. ಇದೀಗ Technology Business Incubator (TBI) ಕೂಡ ಇದೆ. ಅನಂತರ ಸಾಫ್ಟ್ ವೇರ್ ಟೆಕ್ನಲಾಜಿ ಪಾರ್ಕ್ ಆಫ್ ಇಂಡಿಯ STPI ಮಂಗಳೂರಿನ ಬ್ಲೂಬೆರಿ ಹಿಲ್ ನಲ್ಲಿ ಹೈ ಟೆಕ್ ಇಂಕ್ಯುಬೇಷನ್ ಸೆಂಟರ್ ಆರಂಭಿಸಿ ಮಾಹಿತಿ ತಂತ್ರಜ್ಞಾನ ಮತ್ತು ಐಟಿ ಆಧಾರಿತ ಸಣ್ಣ ಉದ್ಯಮಿಗಳಿಗೆ ಸೌಲಭ್ಯ ಒದಗಿಸಿತ್ತು.

ಇದೀಗ ಸರಕಾರಿ ಪ್ರಾಯೋಜಕತ್ವದ, ಶೈಕ್ಷಣಿಕ ಸಹಭಾಗಿತ್ವ ಮತ್ತು ಖಾಸಗಿ ವಲಯದಲ್ಲಿ ಎಂಟಕ್ಕೂ ಹೆಚ್ಚು ಇಂಕ್ಯುಬೇಷನ್ ಸೆಂಟರುಗಳು ಮಂಗಳೂರು ಸುತ್ತಮುತ್ತ ಇವೆ. ಒಂದೂವರೆ ವರ್ಷಗಳ ಹಿಂದೆ ಆರಂಭಗೊಂಡ ಮಂಗಳೂರಿನ ಮಲ್ಲಿಕಟ್ಟೆ – ಶಿವಭಾಗ್ ನಗರಪಾಲಿಕೆ ಕಟ್ಟಡದಲ್ಲಿ Centre for Entrepreneurship Opportunities & Learning ಇಂಕ್ಯುಬೇಷನ್ ಸೆಂಟರ್ ಆರು ಸೀಟುಗಳ ಸಾಮರ್ಥ್ಯ ಹೊಂದಿದೆ. ಇದು ಕೂಡ ಮಾಹಿತಿ ತಂತ್ರಜ್ಞಾನ ಆಧಾರಿತ ಸ್ಟಾರ್ಟ್ ಅಪ್ ಐಡಿಯಗಳನ್ನು ಅಭಿವೃದ್ಧಿಪಡಿಸುವ ವೇದಿಕೆಯಾಗಿದೆ.

ಕಳೆದ ಒಂದು ವರ್ಷದಿಂದ ಕೆ- ಟೆಕ್ ಇನೊವೇಶನ್ ಹಬ್ ಇಂಕ್ಯುಬೇಷನ್ ಸೆಂಟರ್ ಮಂಗಳೂರು ಬಿಜೈ – ಕಾಪಿಕಾಡ್ ರಸ್ತೆಯಲ್ಲಿ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಐಕೆಪಿ- ನಾಲೆಡ್ಜ್ ಪಾರ್ಕ್ ಸಹಭಾಗಿತ್ವದಲ್ಲಿ ಕರ್ನಾಟಕ ರಾಜ್ಯ ಸರಕಾರ ಈ ಕೇಂದ್ರವನ್ನು ಸ್ಥಾಪಿಸಿದೆ. ಇಲ್ಲಿ ಕೇವಲ ಮಾಹಿತಿ ತಂತ್ರಜ್ಞಾನ ಮಾತ್ರವಲ್ಲದೆ ಇತರ ತಾಂತ್ರಿಕ, ಬಯೋ ಟೆಕ್ನಿಕಲ್ ನವೋದ್ಯಮಗಳ ಆರಂಭಿಸಲು ಎಲ್ಲ ರೀತಿಯ ವ್ಯವಸ್ಥೆ ಇದೆ.

ಆರಕ್ಕೂ ಹೆಚ್ಚು ತಾಂತ್ರಿಕ ಕಾಲೇಜುಗಳಲ್ಲಿ ಇಂಕ್ಯುಬೇಷನ್ ಮತ್ತು ಟಿಂಕರಿಂಗ್ ಕೇಂದ್ರಗಳು ವಿದ್ಯಾರ್ಥಿಗಳು ಮತ್ತು ಇತರರಿಗೆ ನವೋದ್ಯಮ ಸ್ಥಾಪಿಸಲು ಪೂರಕವಾದ ಸೌಲಭ್ಯಗಳನ್ನು ಒದಗಿಸಿಕೊಡುತ್ತಿದೆ. ಇವಲ್ಲದೆ ಮೂರಕ್ಕೂ ಹೆಚ್ಚು ಖಾಸಗಿ ಸಂಸ್ಥೆಗಳು ಇಂಕ್ಯುಬೇಷನ್ ಸೆಂಟರ್ ಸೌಲಭ್ಯಗಳನ್ನು ನೀಡುತ್ತಿವೆ. ಎನ್ಐಟಿಕೆ ವಿದ್ಯಾರ್ಥಿ ಇ-ಸೆಲ್ ಎಂಬ ಪ್ರತ್ಯೇಕ ನವೋದ್ಯಮ ಉತ್ತೇಜನ ನೀಡುವ ಘಟಕ ಆರಂಭಿಸಿದ್ದಾರೆ.

ಇಂತಹ ಸರಕಾರಿ ಪ್ರಾಯೋಜಕತ್ವದ ಇಂಕ್ಯುಬೇಷನ್ ಸೆಂಟರುಗಳು ದಿನದ 24 ಗಂಟೆಗಳು ತೆರೆದಿರುತ್ತವೆ. ಮಾತ್ರವಲ್ಲದೆ, ಪ್ರತಿಯೊಂದು ಸೀಟಿಗೆ ಕೇವಲ ತಲಾ 2,500 ರಿಂದ 3,500 ರೂಪಾಯಿ ಮಾಸಿಕ ವೆಚ್ಚ ಭರಿಸಬೇಕಾಗುತ್ತದೆ. ನವೋದ್ಯಮಕ್ಕೆ ಬೇಕಾಗುವ ಉದ್ಯೋಗಿಯ ಆಧಾರದಲ್ಲಿ ಸೀಟು ಸೌಲಭ್ಯ ಪಡೆಯಬೇಕಾಗುತ್ತದೆ. ದಿನವಿಡೀ ಲೀಸ್ಡ್ ಲೈನ್ ಇಂಟರನೆಟ್ ಸೌಲಭ್ಯ, ಕಾನ್ಫರೆನ್ಸ್ ಹಾಲ್, ಕೆಫೆಟೇರಿಯ, ಮೆಂಟರಿಂಗ್, ಫಂಡಿಂಗ್ ಇತ್ಯಾದಿ ಸೌಲಭ್ಯಗಳನ್ನು ನೀಡಲಾಗುತ್ತದೆ.

ನವೋದ್ಯಮ ಸ್ಥಾಪಿಸಲು ಐಡಿಯ ಹೊಂದಿರುವ ಯುವಕರಿಗೆ ಕೇವಲ ಇಂತಹ ಆಫೀಸ್ ಸ್ಪೇಸ್ ನೀಡಿದರೆ ಸಾಲದು. ಬಹುಮುಖ್ಯವಾಗಿ ಅಗತ್ಯ ಬಂಡವಾಳ ಹೂಡಿಕೆಗೆ ವ್ಯವಸ್ಥೆ ಮಾಡಿಕೊಡಬೇಕು ಎನ್ನುತ್ತಾರೆ ಸ್ಟಾರ್ಟ್ಅಪ್ ಆರಂಭಿಸಿ ಅನುಭವ ಇರುವ exams24x7.com ಮುಖ್ಯಸ್ಥ ಆಂಡೊ ಪೌಲ್.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎ. ಬಿ. ಇಬ್ರಾಹಿಂ ಜಿಲ್ಲಾಧಿಕಾರಿ ಆಗಿದ್ದಾಗ ನವೋದ್ಯಮ ಸಲಹಾ ಸಮಿತಿಯೊಂದನ್ನು ರಚಿಸಿದ್ದರು. ಸ್ಟಾರ್ಟ್ ಅಪ್ ಪರಿಕಲ್ಪನೆ ಬಗ್ಗೆ ಪರಿಜ್ಞಾನ ಇಲ್ಲದ ಅಧಿಕಾರಿಗಳಿಂದಾಗಿ ಯಾವುದೇ ರಚನಾತ್ಮಕ ಪ್ರಯೋಜನ ಆಗಿರಲಿಲ್ಲ. ಕೆನರಾ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರೀಸ್ – ಕೆಸಿಸಿಐ ಸ್ಥಳೀಯ ಉತ್ಪನ್ನಗಳ ಆಧಾರಿತ ನೇಟಿವ್ ಸ್ಟಾರ್ಟ್ಅಪ್ ಪ್ರಯತ್ನಗಳಿಗೆ ಬಂಡವಾಳ ಮತ್ತು ಇತರ ಉತ್ತೇಜನ ನೀಡುವುದಾಗಿ ಪ್ರಕಟಿಸಿದೆ. ಮಾಹಿತಿ ತಂತ್ರಜ್ಞಾನ ಸ್ಟಾರ್ಟ್ಅಪ್ ಗಳಿಗೆ ಸರಕಾರ ವತಿಯಿಂದ ಉತ್ತೇಜನ ನೀಡಲಾಗುತ್ತಿದೆ. ಕರಾವಳಿಯ ಕೃಷಿ, ಉದ್ಯಮಗಳಿಗೆ ಪೂರಕವಾದ ನವೋದ್ಯಮ ಸ್ಥಾಪನೆಗೆ ಉತ್ತೇಜನ ನೀಡಲಾಗುವುದು ಎನ್ನುತ್ತಾರೆ ಕೆಸಿಸಿಐ ನೂತನ ಅಧ್ಯಕ್ಷ ಐಸಾಕ್ ವಾಸ್.

ನವೋದ್ಯಮಗಳಿಗೆ ಹೂಡಿಕೆ ಒದಗಿಸಿಕೊಡಬೇಕು. ಯುವಕರಲ್ಲಿ ಉತ್ತಮ ಐಡಿಯಗಳಿವೆ. ಬೆಂಗಳೂರಿನಲ್ಲಿ ಸಾಕಷ್ಟು ಮಂದಿ ಏಂಜೆಲ್ ಇನ್ವೆಸ್ಟರ್ಸ್, ಸೀಡ್ ಫಂಡ್, ವೆಂಚರ್ ಕ್ಯಾಪಿಟಲ್, ಸಹಯೋಗಿ ಹೂಡಿಕೆ ಮಾಡುವವರು ಇದ್ದಾರೆ. ಮಂಗಳೂರಿನಲ್ಲಿ ಈ ಕೊರತೆ ಇದೆ. ನಾವು ಆಸ್ತಿವಂತರನ್ನು ಪತ್ತೆ ಮಾಡಿ ಇಂತಹ ಸ್ಟಾರ್ಟ್ಅಪ್ ನಲ್ಲಿ ಹೂಡಿಕೆ ಮಾಡಲು ಉತ್ತೇಜಿಸುವ ಯೋಜನೆ ಇದೆ ಎನ್ನುತ್ತಾರೆ ಕೆಸಿಸಿಐ ಸ್ಟಾರ್ಟ್ಅಪ್ ಸಮಿತಿಯ ಲಿಯೊನಲ್ ಆರಾನ್ಹ.

ಯಶಸ್ವಿ ನವೋದ್ಯಮ ದೇಶಗಳ ಪಟ್ಟಿಯಲ್ಲಿ ಭಾರತ ಮೂರನೇ ಸ್ಥಾನದಲ್ಲಿ ಇದೆ. 10,000 ನವೋದ್ಯಮಗಳು ಕರ್ನಾಟಕದಲ್ಲಿದ್ದು, ಬೆಂಗಳೂರು ಸಿಂಹಪಾಲು ಪಡೆದುಕೊಂಡಿದೆ. ಮಂಗಳೂರಿನಲ್ಲಿ 300-400 ನವೋದ್ಯಮ ಇರಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಸ್ಪಷ್ಟ ಅಂಕಿ ಅಂಶಗಳು ಲಭ್ಯವಿಲ್ಲ. ಉತ್ಪಾದನಾ ವಲಯ, ಕೃಷಿ, ಕೃಷಿ ತಂತ್ರಜ್ಞಾನ, ಆರೋಗ್ಯ, ವೈದ್ಯಕೀಯ ತಂತ್ರಜ್ಞಾನ, ವೈಮಾನಿಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸ್ಟಾರ್ಟ್ಅಪ್ ಆರಂಭ ಆಗುತ್ತಿದೆ. ರಾಜ್ಯದ ನಗರಗಳಲ್ಲಿ ನವೋದ್ಯಮ ಸ್ಥಾಪನೆಗೆ ಉತ್ತೇಜನ ನೀಡಲಾಗುತ್ತಿದೆ. ರಾಜ್ಯ ಸರಕಾರ ಸ್ಟಾರ್ಟ್ಅಪ್ ಕ್ಷೇತ್ರಕ್ಕೆ ಉತ್ತೇಜನ ನೀಡಲು ವಿಶನ್ ಗ್ರೂಪ್ ರಚಿಸಿದೆ. ಮಂಗಳೂರು, ಮೈಸೂರು, ಬೆಳಗಾವಿ, ಹುಬ್ಬಳ್ಳಿ, ಶಿವಮೊಗ್ಗ ನಗರಗಳಿಗೆ ಸರಕಾರ ಆದ್ಯತೆ ನೀಡಲಿದೆ.

Tags: Government of IndiaMangaluru CityNITK-SuratkalStartupsUnion Finance Ministryಕೇಂದ್ರ ಹಣಕಾಸು ಸಚಿವಾಲಯನ್ಯಾಶನಲ್ ಇನ್ಸಿಟ್ಯೂಟ್ ಆಫ್ ಟೆಕ್ನಲಾಜಿ ಸುರತ್ಕಲ್ಭಾರತ ಸರ್ಕಾರಮಂಗಳೂರು ನಗರಸ್ಟಾರ್ಟ್ ಅಪ್ ಇಂಡಿಯ
Previous Post

ಪಿ.ಎಂ.ಸಿ. ಬ್ಯಾಂಕ್: ಜನರ ನಂಬಿಕೆಯನ್ನು ನೆಲಕ್ಕಪ್ಪಳಿಸಿದ  ಹಗರಣ

Next Post

ಪ್ರತ್ಯೇಕ ರಾಜ್ಯದ ಕೂಗಿನ ಹಿಂದೆ ರಾಜಕೀಯವಲ್ಲದ ಕಾರಣಗಳಿವೆಯೇ?

Related Posts

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್
ಇದೀಗ

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

by ಪ್ರತಿಧ್ವನಿ
January 17, 2026
0

ಬೆಂಗಳೂರು: ಅಬಕಾರಿ ಲೈಸೆನ್ಸ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಬಕಾರಿ ಡಿಸಿ, ಸೂಪರಿಂಟೆಂಡೆಂಟ್, ಡ್ರೈವರ್ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಲಕ್ಷ್ಮಿ ನಾರಾಯಣ್ ಎಂಬುವರು ತಮ್ಮ ಮಗನಿಗಾಗಿ ಬಾರ್...

Read moreDetails
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

January 17, 2026
Next Post
ಪ್ರತ್ಯೇಕ ರಾಜ್ಯದ ಕೂಗಿನ ಹಿಂದೆ ರಾಜಕೀಯವಲ್ಲದ ಕಾರಣಗಳಿವೆಯೇ?

ಪ್ರತ್ಯೇಕ ರಾಜ್ಯದ ಕೂಗಿನ ಹಿಂದೆ ರಾಜಕೀಯವಲ್ಲದ ಕಾರಣಗಳಿವೆಯೇ?

Please login to join discussion

Recent News

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?
Top Story

Mangaluru: ʼವಾಟ್ಸಾಪ್ ಯೂನಿವರ್ಸಿಟಿʼ ಸುಳ್ಳು ಸುದ್ದಿಗೆ ಹಿರಿಯರೇ ಬಲಿ: ಮಂಗಳೂರಿನಲ್ಲಿ ಆಗಿದ್ದೇನು..?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada