• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧ್ಯಕ್ಷರನ್ನು ಹೃದಯಹೀನ ಮತ್ತು ಅಸಮರ್ಥ ಎಂದ ನಿರ್ಮಲಾ ಸೀತಾರಾಮನ್

by
March 16, 2020
in ದೇಶ
0
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಧ್ಯಕ್ಷರನ್ನು ಹೃದಯಹೀನ ಮತ್ತು ಅಸಮರ್ಥ ಎಂದ ನಿರ್ಮಲಾ ಸೀತಾರಾಮನ್
Share on WhatsAppShare on FacebookShare on Telegram

ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಮತ್ತು ಸಾರ್ವಜನಿಕ ವಲಯದ ಬ್ಯಾಂಕುಗಳ ಪೈಕಿ ಲಾಭದಾಯಕವಾಗಿ ನಡೆಯುತ್ತಿರುವ ಮತ್ತು ಖಾಸಗಿ ಬ್ಯಾಂಕುಗಳಿಗಿಂತಲೂ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಅಧ್ಯಕ್ಷ ರಂಜಿತ್ ಕುಮಾರ್ ಅವರನ್ನು ತುಂಬಿದ ಸಭೆಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಕಟುವಾದ ಪದಗಳಿಂದ ನಿಂದಿಸಿದ್ದಾರೆನ್ನಲಾದ ದ್ವನಿಮುದ್ರಿಕೆ ವೈರಲ್ ಆಗಿದೆ.

ನರೇಂದ್ರ ಮೋದಿ ಸರ್ಕಾರದಲ್ಲಿ ವಾಣಿಜ್ಯ ಸಚಿವೆಯಾಗಿ ನಂತರ ರಕ್ಷಣಾ ಸಚಿವೆಯಾಗಿದ್ದ ನಿರ್ಮಲಾ ಸೀತಾರಾಮನ್ ಅಧಿಕಾರಿಗಳ ಜತೆಗೆ ಒರಟಾಗಿ ನಡೆದುಕೊಳ್ಳುವುದರ ಬಗ್ಗೆ ಅಲ್ಲಲ್ಲಿ ಆರೋಪಗಳು ಕೇಳಿ ಬರುತ್ತಿದ್ದವು. ಮೋದಿ ಸರ್ಕಾರದ ಎರಡನೇ ಅವಧಿಯಲ್ಲಿ ವಿತ್ತ ಸಚಿವೆಯಾದ ನಂತರ ಹಣಕಾಸು ಸಚಿವಾಲಯದ ಅಧಿಕಾರಿಗಳು ಮತ್ತು ವಿವಿಧ ಬ್ಯಾಂಕುಗಳ ಮುಖ್ಯಸ್ಥರ ಜತೆಗೆ ಅವರು ಒರಟಾಗಿ ಮಾತನಾಡುತ್ತಿದ್ದರು ಎಂಬ ದೂರುಗಳಿದ್ದವು. ಆದರೀಗ ಅವರ ಒರಟುತನದ ಮಾತುಗಳು ದ್ವನಿಮುದ್ರಿಕೆಯೊಂದಿಗೆ ಬಹಿರಂಗಗೊಂಡಿವೆ.

ದೇಶದ ಅತಿದೊಡ್ಡ ಬ್ಯಾಂಕ್ ಆಗಿರುವ ಸ್ಟೇಟ್ ಬ್ಯಾಂಕ್ ಇಂಡಿಯಾದ ಅಧ್ಯಕ್ಷ ರಂಜಿತ್ ಕುಮಾರ್ ಅತ್ಯಂಕ ಸಮರ್ಥ, ಚಾಣಾಕ್ಷ ಅಧಿಕಾರಿ ಮತ್ತು ಸೌಮ್ಯ ಸ್ವಭಾವದವರು. ಅವರ ವಿರುದ್ಧ ನಿರ್ಮಲಾ ಸೀತಾರಾಮನ್ ಕಟುವಾಗಿ ಮಾತಾನಾಡಿರುವುದು ಬ್ಯಾಂಕಿಂಗ್ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಸೀತಾರಾಮನ್ ದ್ವನಿಮುಂದ್ರಿಕೆ ವೈರಲ್ ಆಗಿದ್ದು, ಟ್ವಿಟ್ಟರ್ ನಲ್ಲಿ ನಿರ್ಮಲಾ ಸೀತಾರಾಮನ್ ಅವರು ರಾಜಿನಾಮೆ ನೀಡಬೇಕು, ಅವರೇ ಅಸಮರ್ಥರಿದ್ದಾರೆ, ದೇಶದಲ್ಲಿ ಆರ್ಥಿಕತೆ ಹದಗೆಡಲು ನಿರ್ಮಲಾ ಸೀತಾರಾಮನ್ ಅವರೇ ಕಾರಣ ಎಂದೂ ಟೀಕಿಸಲಾಗಿದೆ. ಹಲವರು ನಿರ್ಮಲಾ ಸೀತಾರಾಮನ್ ಅವರನ್ನು ಬೆಂಬಲಿಸಿ, ಸಾರ್ವಜನಿಕ ವಲಯದ ಬ್ಯಾಂಕುಗಳ ಕಾರ್ಯಕ್ಷಮತಯೇ ಇಲ್ಲ, ಬ್ಯಾಂಕುಗಳ ಸಿಬ್ಬಂದಿ ಗ್ರಾಹಕರನ್ನು ತುಚ್ಛವಾಗಿ ಕಾಣುತ್ತಾರೆ ಎಂದೂ ಟೀಕಿಸಿದ್ದಾರೆ.

ಅಷ್ಟಕ್ಕೂ ಆಗಿದ್ದೇನು? ಅಸ್ಸಾಂ ಮತ್ತು ಈಶಾನ್ಯ ರಾಜ್ಯಗಳ ಬ್ಯಾಂಕರುಗಳ ಸಭೆ ಗುಹಾವತಿಯಲ್ಲಿ ಫೆಬ್ರವರಿ ಕೊನೆವಾರದಲ್ಲಿ ಏರ್ಪಾಟಾಗಿತ್ತು. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅಧ್ಯಕ್ಷತೆ ವಹಿಸಿದ್ದರು. ಅಸ್ಸಾಂ ರಾಜ್ಯದ ಲೀಡ್ ಬ್ಯಾಂಕ್ SBI ಆಗಿದ್ದರಿಂದಾಗಿ ಮತ್ತು ವಿತ್ತ ಸಚಿವರೇ ಸಭೆ ಅಧ್ಯಕ್ಷತೆ ವಹಿಸಿದ್ದಿರಿಂದಾಗಿ ರಂಜಿತ್ ಕುಮಾರ್ ಅವರೂ ಸಭೆಯಲ್ಲಿ ಪಾಲ್ಗೊಂಡಿದ್ದರು. ಅಸ್ಸಾ ಟೀ ತೋಟದ ಕಾರ್ಮಿಕರ ಎಂಟು ಲಕ್ಷ ಖಾತೆಗಳ ಪೈಕಿ ಕೆವೈಸಿ (Know Your Customer) ಮಾಹಿತಿ ಪೂರ್ಣಗೊಳಿಸದ ಸುಮಾರು 2.5 ಲಕ್ಷ ಖಾತೆಗಳನ್ನು ಸ್ಥಗಿತಗೊಂಡಿದ್ದವು. ಇದರಿಂದಾಗಿ ಕಾರ್ಮಿಕರ ಖಾತೆಗೆ ನೇರವಾಗಿ ಪಾವತಿಯಾಗುವ ಸರ್ಕಾರದ ಸೌಲಭ್ಯಗಳು ತಲುಪಿರಲಿಲ್ಲ.

ಈ ಬಗ್ಗೆ ಪ್ರಸ್ತಾಪಿಸಿದ ನಿರ್ಮಲಾ ಸೀತಾರಾಮನ್ ‘…ಸ್ಟೇಟ್ ಬ್ಯಾಂಕ್ ಇಂಡಿಯಾ… ದೇಶದ ಅತಿದೊಡ್ಡ ಬ್ಯಾಂಕ್ ಅಂತಾ ನಂಗೆ ಹೇಳಿದ್ರೆ ಸಾಲದು… ನೀವು ಹೃದಯಹೀನ ಬ್ಯಾಂಕ್…’ ಎಂದು ರಂಜಿತ್ ಕುಮಾರ್ ವಿರುದ್ಧ ಕಿಡಿಕಾರಿದ್ದಾರೆ. ಕೆವೈಸಿ ನಿಮಯಗಳ ಸಡಿಲಿಸುವ ಬಗ್ಗೆ ಹಣಕಾಸು ಇಲಾಖೆ ಅಧಿಕಾರಿಗಳ ಮೂಲಕ ಆರ್‌ಬಿಐ ಸಂಪರ್ಕಿಸಬೇಕಿತ್ತು ಎಂದು ಹೇಳಿದ್ದಾರೆ. ‘ನಿಮ್ಮ ಅಸಮರ್ಥತೆಯಿಂದ ಇದೆಲ್ಲಾ ಆಗಿದೆ’ ಎಂದ ನಿರ್ಮಲಾ ಸೀತಾರಾಮನ್, ‘ಇದು ಕೆಲಸದಲ್ಲಿನ ನಿಮ್ಮ ಲೋಪ.. ಈ ವೈಫಲ್ಯಕ್ಕೆ ಸಂಪೂರ್ಣವಾಗಿ ನಿಮ್ಮನ್ನು ಹೊಣೆಗಾರರನ್ನಾಗಿ ಮಾಡುತ್ತೇನೆ..’ ಎಂದು ಕಟುವಾಗಿ ಹೇಳಿದ್ದಾರೆ. ಅನಿರೀಕ್ಷಿತವಾಗಿ ಇಡೀ ಸಭೆಯ ಮುಂದೆ ನಿರ್ಮಲಾ ಸೀತಾರಾಮನ್ ಅವರು ದೂಷಿಸಿದ್ದರಿಂದ ತಬ್ಬಿಬ್ಬಾದ ರಂಜಿತ್ ಕುಮಾರ್ ತಪ್ಪಾಯ್ತು ಕ್ಷಮಿಸಿ ಎಂದು ಹೇಳಿದ್ದಾರೆ. ಈ ಸಭೆಯಲ್ಲಿ ಅಸ್ಸಾಂ ಹಣಕಾಸು ಸಚಿವ ಹಿಮಂತ ಬಿಸ್ವ ಶರ್ಮ ಅವರಲ್ಲದೇ ಬ್ಯಾಂಕುಗಳ ಅಧಿಕಾರಿಗಳು, ಹಣಕಾಸು ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು. ಅವರೆಲ್ಲರ ಎದುರು ನಿರ್ಮಲಾ ಸೀತಾರಾಮನ್ ಹೀಗೆ ಒರಟಾಗಿ ಮಾತನಾಡುವ ಅಗತ್ಯ ಇರಲಿಲ್ಲ. ನಿರ್ಮಲಾ ಸೀತಾರಾಮನ್ ಅವರ ನಡವಳಿಕೆಯಿಂದ ಅಸ್ಸಾಂ ಹಣಕಾಸು ಸಚಿವ ಹಿಮಂತ ಬಿಸ್ವ ಶರ್ಮ ಅವರಲ್ಲದೇ ಹಲವು ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ.

ಈ ನಡುವೆ ನಿರ್ಮಲಾ ಸೀತಾರಾಮನ್ ಅವರು SBI ಅಧ್ಯಕ್ಷ ರಂಜಿತ್ ಕುಮಾರ್ ಅವರನ್ನು ನಿಂದಿಸಿರುವ ರೀತಿಯನ್ನು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಮಹಾಮಂಡಳ (ಎಐಬಿಒಸಿ) ಖಂಡಿಸಿದೆ. ಈ ಸಬಂಧ ಪತ್ರಿಕಾ ಹೇಳಿಕೆ ನೀಡಿರುವ ಎಐಬಿಒಸಿ ಪ್ರಧಾನ ಕಾರ್ಯದರ್ಶಿ ಸೌಮ್ಯದತ್ತಾ, ತುಚ್ಛ ರೀತಿಯಲ್ಲಿ ಎಸ್ಬಿಐ ಅಧ್ಯಕ್ಷರ ಮೇಲೆ ವಾಗ್ದಾಳಿ ನಡೆಸಿರುವುದನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದ್ದಾರೆ. ಅಲ್ಲದೇ ಎಸ್ಬಿಐ ಸಾಧನೆಗಳ ಬಗ್ಗೆ ವಿತ್ತ ಸಚಿವರು ತಿಳಿಯಬೇಕು, ಜನಧನ್ ಯೋಜನೆ ಯಶಸ್ವಿಯಾಗಲು ಸಾರ್ವಜನಿಕ ವಲಯದ ಬ್ಯಾಂಕುಗಳು, ಮುಖ್ಯವಾಗಿ ಎಸ್ಬಿಐ ಮುಖ್ಯ ಕಾರಣ ಎಂದೂ ಹೇಳಿದ್ದಾರೆ.

We definitely need a better finance minister.@narendramodi pic.twitter.com/IU6IugW84v

— D.Muthukrishnan (@dmuthuk) March 14, 2020


ನಿರ್ಮಲಾ ಸೀತಾರಾಮನ್ ಅವರು ನಿಂದಿಸಿದ್ದನ್ನು ದ್ವನಿಮುದ್ರಿಸಿ ಸಾಮಾಜಿಕ ತಾಣಗಳಲ್ಲಿ ಪ್ರಸಾರ ಮಾಡಿ ರಂಜಿತ್ ಕುಮಾರ್ ಅವರ ಘನತೆಗೆ ಧಕ್ಕೆ ತಂದವರು ಯಾರೆಂಬ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆಯೂ ಒತ್ತಾಯಿಸಲಾಗಿದೆ. ಸಂವಿಧಾನದ 12ನೇ ವಿಧಿಯಲ್ಲಿ ಪ್ರಸ್ತಾಪಿಸಿ, ವಿಶ್ಲೇಷಿಸಿರುವಂತೆ ಎಸ್ಬಿಐ ನಲ್ಲಿ ಸ್ಟೇಟ್ ಇರುವುದರಿಂದ ಅದಕ್ಕೆ ಹೆಚ್ಚಿನ ಮಾನ್ಯತೆ ಇದೆ. ಮತ್ತು ಅದರ ಮುಖ್ಯಸ್ಥರ ಹುದ್ದೆಗೆ ಘನತೆ ಇರುತ್ತದೆ. ಹೀಗಿರುವ ವಿತ್ತ ಸಚಿವರು ಬ್ಯಾಂಕರುಗಳ ಸಭೆಯಲ್ಲಿ ಎಸ್ಬಿಐ ಅಧ್ಯಕ್ಷರನ್ನು ಅವಮಾನಿಸಿದ್ದು ಸರಿಯಲ್ಲ ಎಂಬ ಅಂಶವನ್ನೂ ಎಐಬಿಒಸಿ ಪ್ರಧಾನ ಕಾರ್ಯದರ್ಶಿ ಸೌಮ್ಯದತ್ತಾ ಪ್ರಸ್ತಾಪಿಸಿದ್ದಾರೆ. ಆದರೆ, ವಿತ್ತ ಸಚವರ ನಡವಳಿಕೆ ಖಂಡಿಸಿ ನೀಡಲಾಗಿದ್ದ ಪತ್ರಿಕಾ ಹೇಳಿಕೆಯನ್ನು ಹಿಂಪಡೆಯಲಾಗಿದೆ.

@aiboc_in @SoumyaDatta7 should give another Press Release for explaining the valid reason of withdrawal of previous Press release condemning FM Scolding SBI Chief. Simply saying erroneously issued is irresponsible & coward statement. That means you support FM N Sitaram statement. pic.twitter.com/pmwIYagRxz

— WeBankers® (@bankers_we) March 15, 2020


ADVERTISEMENT

3,20,000 ಸದಸ್ಯರಿರುವ ಎಐಬಿಒಸಿ ತಿರುಗಿ ಬಿದ್ದರೆ, ಇಡೀ ಬ್ಯಾಂಕಿಂಗ್ ವ್ಯವಸ್ಥೆಯೇ ಸ್ಥಗಿತಗೊಳ್ಳುತ್ತದೆ. ಅಷ್ಟುಪ್ರಬಲವಾದ ಬ್ಯಾಂಕಿಂಗ್ ಸಂಘಟನೆ ಇದಾಗಿದೆ. ಆದರೆ, ಎಐಬಿಒಸಿ ಪ್ರಧಾನ ಕಾರ್ಯದರ್ಶಿ ಸೌಮ್ಯದತ್ತಾ ಅವರು ನೀಡಿದ್ದ ಪತ್ರಿಕಾ ಹೇಳಿಕೆಯನ್ನು ವಾಪಸ್ ಪಡೆದದ್ದರ ಬಗ್ಗೆ ಬ್ಯಾಂಕುಗಳ ಅಧಿಕಾರಿಗಳಲ್ಲೇ ಅಸಮಾಧಾನ ವ್ಯಕ್ತವಾಗಿದೆ.

Tags: Finance Minister Nirmala SitaramanRanjit KumarSBIನಿರ್ಮಲಾ ಸೀತಾರಾಮನ್ರಂಜಿತ್ ಕುಮಾರ್ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
Previous Post

ಜಾಲತಾಣದ ನಕಲಿ ಸುದ್ದಿ, ಪ್ರಚೋದನಾತ್ಮಕ ಸಂದೇಶಗಳಿಗೆ ಕಡಿವಾಣ ಹಾಕಲು ‘ಕೇಂದ್ರ’ ನಿರಾಸಕ್ತಿ!

Next Post

ಕರೋನಾ ವಿರುದ್ದ ಚೀನಾ, ಅಮೇರಿಕಾದಷ್ಟು ಪರಿಣಾಮಕಾರಿಯಾಗಿ ಸಮರ ಸಾರಿದೆಯೇ ಭಾರತ?

Related Posts

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..
Top Story

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

by ಪ್ರತಿಧ್ವನಿ
February 6, 2026
0

ವೈಭವ್ ಸೂರ್ಯವಂಶಿ (Vaibhav Suryavanshi) 14 ವರ್ಷದ ವೈಭವ್ ಸೂರ್ಯವಂಶಿ ಅಂಡರ್-19 ವಿಶ್ವಕಪ್ ಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಕೇವಲ 80 ಎಸೆತಗಳಲ್ಲಿ 175ರನ್‌ಗಳ ಸಿಡಿಲಬ್ಬರದ ಶತಕ ಸಿಡಿಸಿ...

Read moreDetails
WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

WPL 2026: ಕಪ್‌ ಗೆದ್ದ RCB ತಂಡಕ್ಕೆ ಕಿಂಗ್‌ ಕೊಹ್ಲಿ ಅಭಿನಂದನೆ: ಫ್ಯಾನ್ಸ್‌ಗೆ ಎಂಜಾಯ್‌ ಎಂದ ವಿರಾಟ್‌

February 6, 2026
Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

Drugs Case: ತಮಿಳು ಚಿತ್ರರಂಗದಲ್ಲಿ ಡ್ರ** ಘಾಟು: ನಟಿ ಸೇರಿ 8 ಮಂದಿ ಬಂಧನ

February 6, 2026
Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

Oracle Layoffs: ಒರಾಕಲ್‌ನಲ್ಲಿ ಭಾರೀ ಲೇ-ಆಫ್ ಪ್ಲ್ಯಾನ್: 20–30 ಸಾವಿರ ಉದ್ಯೋಗಿಗಳಿಗೆ ಬಿಗ್‌ ಶಾಕ್‌

February 5, 2026
Sabarimala Gold Theft: ʼಶಬರಿಮಲೆ ಚಿನ್ನ ಕಳ್ಳತನ ಕೇಸ್‌ನಿಂದ ಕೇರಳ ಸರ್ಕಾರವೇ ಕುಸಿಯುವ ಭಯʼ

Sabarimala Gold Theft: ʼಶಬರಿಮಲೆ ಚಿನ್ನ ಕಳ್ಳತನ ಕೇಸ್‌ನಿಂದ ಕೇರಳ ಸರ್ಕಾರವೇ ಕುಸಿಯುವ ಭಯʼ

February 5, 2026
Next Post
ಕರೋನಾ ವಿರುದ್ದ ಚೀನಾ

ಕರೋನಾ ವಿರುದ್ದ ಚೀನಾ, ಅಮೇರಿಕಾದಷ್ಟು ಪರಿಣಾಮಕಾರಿಯಾಗಿ ಸಮರ ಸಾರಿದೆಯೇ ಭಾರತ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada