• Home
  • About Us
  • ಕರ್ನಾಟಕ
Saturday, November 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಹಥ್ರಾಸ್‌ ಪ್ರಕರಣ: ಸಂತ್ರಸ್ಥೆಯ ಪೋಷಕರನ್ನು ಭೇಟಿಯಾಗಲು ವಕೀಲೆ ಸೀಮಾ ಕುಶ್ವಾಹರಿಗಿಲ್ಲ ಅವಕಾಶ

by
October 2, 2020
in ದೇಶ
0
ಹಥ್ರಾಸ್‌ ಪ್ರಕರಣ: ಸಂತ್ರಸ್ಥೆಯ ಪೋಷಕರನ್ನು ಭೇಟಿಯಾಗಲು ವಕೀಲೆ ಸೀಮಾ ಕುಶ್ವಾಹರಿಗಿಲ್ಲ ಅವಕಾಶ
Share on WhatsAppShare on FacebookShare on Telegram

ನಿರ್ಭಯಾ ಪ್ರಕರಣವನ್ನು ಕೈ ಎತ್ತಿಕೊಂಡು ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ಆಗುವವರೆಗೆ ಹೋರಾಡಿದ್ದ ವಕೀಲೆ ಸೀಮಾ ಕುಶ್ವಾಹಾ ಅವರನ್ನು ಕೂಡಾ ಸಂತ್ರಸ್ಥೆಯ ಪೋಷಕರನ್ನು ಭೇಟಿಯಾಗಲು ಅವಕಾಶ ನೀಡಲಿಲ್ಲ. ಗುರುವಾರವೇ ಹಾಥ್ರಾಸ್‌ಗೆ ಹೊರಟಿದ್ದ ಸೀಮಾ ಅವರನ್ನು ತಡೆಯಲಾಗಿದೆ.

ADVERTISEMENT

“ಸಂತ್ರಸ್ಥೆಯ ಪೋಷಕರನ್ನು ಭೇಟಿಯಾಗದೇ, ನಾನೂ ಹಾಥ್ರಾಸ್‌ ಬಿಟ್ಟು ಕದಲುವುದಿಲ್ಲ. ಕಾನೂನಾತ್ಮಕವಾಗಿ ಸಹಾಯ ಮಾಡಿ ಪೋಷಕರು ನನ್ನ ಬಳಿ ಕೇಳಿಕೊಂಡಿದ್ದಾರೆ. ಆದರೆ, ಆಡಳಿತದಲ್ಲಿರುವವರು ನನ್ನನ್ನು ಭೇಟಿಯಾಗಲು ಬಿಡುತ್ತಿಲ್ಲ,” ಎಂದು ಅವರು ಹೇಳಿದ್ದಾರೆ.

Also Read: ಹಾಥ್ರಾಸ್ ಹೇಯ ಘಟನೆ ಮತ್ತು ʼಉತ್ತರಪ್ರದೇಶʼ ಎಂಬ ಭವಿಷ್ಯದ ಭಾರತದ ಮಾದರಿ!

ಉತ್ತರ ಪ್ರದೇಶ ಸರ್ಕಾರದ ದಮನಕಾರಿ ನೀತಿ ಇಲ್ಲಿಗೇ ನಿಲ್ಲಲಿಲ್ಲ. ಹಾಥ್ರಾಸ್‌ನಲ್ಲಿ ಮಾಧ್ಯಮಗಳಿಗೆ ಕೂಡಾ ನಿರ್ಬಂಧ ಹೇರಲಾಗಿದ್ದು, ಯಾವುದೇ ಮಾಧ್ಯಮಗಳು ಘಟನೆ ನಡೆದ ಸ್ಥಳಕ್ಕೆ ತಲುಪದಂತೆ ತಡೆಯಲಾಗಿದೆ. ಸಂತ್ರಸ್ಥೆಯ ಊರಿನಿಂದ 2 ಕಿ.ಮೀ. ದೂರದಲ್ಲಿಯೇ ಎಲ್ಲಾ ಮಾಧ್ಯಮದ ವರದಿಗಾರರನ್ನು ತಡೆಯಲಾಗಿದೆ. ಈ ಕುರಿತಾಗಿ ಮಾಧ್ಯಮಗಳು ಒಬ್ಬ ಐಎಎಸ್‌ ಅಧಿಕಾರಿಯನ್ನು ಪ್ರಶ್ನಿಸಿದಾಗ ಇದು ʼಮೇಲಿನಿಂದʼ ಬಂದ ಆದೇಶ, ಹಾಗಾಗಿ ಅವರನ್ನೇ ಕೇಳಿ ಎಂಬ ಉತ್ತರ ನೀಡಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಜವಾಬ್ದಾರಿಯುತ ಸ್ಥಾನದಲ್ಲಿದ್ದ ಓರ್ವ ಐಎಎಸ್‌ ಅಧಿಕಾರಿಯೇ, ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿರುವುದು ಸ್ಪಷ್ಟವಾಗಿ ಕಾಣುತ್ತಿದೆ. ಅಥವಾ, ಆ ಅಧಿಕಾರಿ ನಿಜಕ್ಕೂ ಏನೂ ತಿಳಿಯದೇ ಇದ್ದವರಾಗಿದ್ದರೆ, ಮೇಲಧಿಕಾರಿಗಳು ಆರೋಪಿಗಳ ರಕ್ಷಣೆಗೆ ನಿಂತಿದ್ದಾರೆ ಎಂಬ ಅಂಶವೂ ಸ್ಪಷ್ಟವಾಗುತ್ತದೆ.

Also Read: ತಾವು ಹೋಗೊಲ್ಲ, ಹೋಗುವವರನ್ನು ಬಿಡೊಲ್ಲ; ಯೋಗಿ ಮಾಡೆಲ್!

ಈ ಹಿಂದೆಯೂ, ಉತ್ತರ ಪ್ರದೇಶದ ಪೊಲೀಸರು ಮಾಧ್ಯಮದವರನ್ನು ತಡೆದು ವಿಕಾಸ್‌ ದುಬೆಯ ಎನ್‌ಕೌಂಟರ್‌ ಮಾಡಿದ್ದರು. ನಂತರ ಅವರು ಹೇಳಿದ್ದ ಕಥೆಯೇ ನಿಜವೆಂದು ನಂಬುವಂತೆ ಕೇಳಿಕೊಂಡಿದ್ದರು.

ಸೆಕ್ಷನ್‌ 144 ಅಸ್ತ್ರ ಬಳಕೆ:

ಹಾಥ್ರಾಸ್‌ನಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಹಾಗೂ ಕೊಲೆಯ ವಿರುದ್ದ ಉತ್ತರ ಪ್ರದೇಶ ಮತ್ತು ದೆಹಲಿಯಲ್ಲಿ ಭುಗಿಲೆದ್ದ ಪ್ರತಿಭಟನೆಗಳನ್ನು ತಡೆಯಲು ಸರ್ಕಾರವು ಸೆಕ್ಷನ್‌ 144 ಮೊರೆ ಹೋಗುತ್ತಿದೆ. ಹಥ್ರಾಸ್ನಲ್ಲಿ ನಿನ್ನೆಯೇ ಸೆಕ್ಷನ್‌ 144 ಜಾರಿಗೊಳಿಸಿದ್ದರೆ ದೆಹಲಿಯ ಇಂಡಿಯಾ ಗೇಟ್‌ನಲ್ಲಿ ಇಂದು ಜಾರಿಗೊಳಿಸಲಾಗಿದೆ.

ಶುಕ್ರವಾರದಂದು ದೆಹಲಿಯ ಇಂಡಿಯಾ ಗೇಟ್‌ ಬಳಿ ಹಾಥ್ರಾಸ್‌ ಪ್ರಕರಣವನ್ನು ಖಂಡಿಸಿ ಬೃಹತ್‌ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಆ ಕಾರಣದಿಂದ ಇಂಡಿಯಾ ಗೇಟ್‌ ಪ್ರದೇಶದಲ್ಲಿ ಸೆಕ್ಷನ್‌ 144 ಜಾರಿಗೊಳಿಸಲಾಗಿದೆ.

Also Read: ಹಾಥ್ರಾಸ್‌: ಅತ್ಯಾಚಾರವೇ ನಡೆದಿಲ್ಲ ಎಂದ ಪೊಲೀಸರು

ಈ ಕುರಿತಾಗಿ ಟ್ವೀಟ್‌ ಮಾಡಿರುವ ನವ ದೆಹಲಿ ಡಿಸಿಪಿ ಆಗಿರುವ ಐಶ್‌ ಸಿಂಗ್‌, “ದೆಹಲಿಯ ಜಂತರ್‌ ಮಂತರ್‌ನಲ್ಲಿ ನೂರು ಜನಕ್ಕೆ ಮೀರದಂತೆ ಸಾರ್ವಜನಿಕ ಸಭೆಗಳನ್ನು ಆಯೋಜಿಸಬಹುದಾದಿಗೆ. ಅದೂ ಕೂಡಾ ಮುಂಚಿತವಾಗಿ ಅನುಮತಿ ಪಡೆದಿದ್ದರೆ ಮಾತ್ರ. ಇಂಡಿಯಾ ಗೇಟ್‌ ಬಳಿ ಸಿಆರ್‌ಪಿಸಿ ಸೆಕ್ಷನ್‌ 144 ಜಾರಿಗೊಳಿಸಿದ್ದರಿಂದ ಅಲ್ಲಿ ಸಭೆ ನಡೆಸಲು ಅನುಮತಿಯಿರುವುದಿಲ್ಲ,” ಎಂದು ಹೇಳಿದ್ದಾರೆ.

Tags: Hathras Gang-RapeSeema Kushwahaಸೀಮಾ ಕುಶ್ವಾಹಹಥ್ರಾಸ್‌ ಪ್ರಕರಣ
Previous Post

ಬೆಳ್ಳಿ ತೆರೆಯ ಮೇಲೆ ಮಹಾತ್ಮಾ ಗಾಂಧಿ

Next Post

ಕೃಷಿ ಮಸೂದೆ ಪ್ರತಿಭಟಿಸಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಸಂಸದೆ ಬಂಧನ

Related Posts

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
0

ದುಬೈ ಏರ್​​ ಶೋ ಕಾರ್ಯಕ್ರಮದಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಅಪಘಾತಕ್ಕೀಡಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. https://youtu.be/_-ETZQKXvgY?si=HJdmeaIp6arDY5i5 ತೇಜಸ್ ಯುದ್ಧ ವಿಮಾನ ಏರೋಬ್ಯಾಟಿಕ್ಸ್ ಪ್ರದರ್ಶಿಸಿ ನಂತರ ಇದ್ದಕ್ಕಿದ್ದಂತೆ...

Read moreDetails

“ಜಾಗತಿಕ ಸೆಮಿಕಂಡಕ್ಟರ್ ಮಾರುಕಟ್ಟೆ ಮೂರು ವರ್ಷಗಳಲ್ಲಿ ರೂ 88 ಲಕ್ಷ ಕೋಟಿಗೆ ಏರಿಕೆ”

November 20, 2025

ಟೆಕ್ ಮೇಳದಲ್ಲಿ ಭವಿಷ್ಯದ ಇಂಧನ ಕ್ಷೇತ್ರ ಕುರಿತು ಸಂವಾದ ನಡೆಸಿದ ಸಚಿವ ಪ್ರಿಯಾಂಕ ಖರ್ಗೆ..!!

November 20, 2025

ವಿದ್ಯಾರ್ಥಿಗಳೊಂದಿಗೆ ಅಂತರಿಕ್ಷ ಯಾತ್ರಿಕ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲ ಅವರೊಂದಿಗೆ ಸಂವಾದ ಕಾರ್ಯಕ್ರಮ: ಸಚಿವ ಎನ್‌ ಎಸ್‌ ಭೋಸರಾಜು

November 20, 2025

Lakshmi Hebbalkar: ಅಧಿಕಾರ ಎಂಬುದು ಶಾಶ್ವತ ಅಲ್ಲ,‌ ಅದು ಅವಕಾಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 20, 2025
Next Post
ಕೃಷಿ ಮಸೂದೆ ಪ್ರತಿಭಟಿಸಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಸಂಸದೆ ಬಂಧನ

ಕೃಷಿ ಮಸೂದೆ ಪ್ರತಿಭಟಿಸಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದ ಸಂಸದೆ ಬಂಧನ

Please login to join discussion

Recent News

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?
Top Story

Daily Horoscope: ಇಂದಿನ ಲಾಭದಾಯಕ ರಾಶಿಗಳಿವು?

by ಪ್ರತಿಧ್ವನಿ
November 22, 2025
ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್
Top Story

ಜೈಲಿಗೆ ಭೇಟಿ ನೀಡಿ ವಿನಯ್ ಕುಲಕರ್ಣಿ, ವೀರೇಂದ್ರ ಪಪ್ಪಿಗೆ ಧೈರ್ಯ ತುಂಬಿದ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
November 21, 2025
ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ
Top Story

ʼಕಾಂಗ್ರೆಸ್ ಸರ್ಕಾರ ಹೋಳು.. ಜನರಿಗೆ ಗೋಳು.. ರೈತರಿಗೆ ಹೂಳುʼ: ಆರ್‌.ಅಶೋಕ್‌ ವ್ಯಂಗ್ಯ

by ಪ್ರತಿಧ್ವನಿ
November 21, 2025
ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ
Top Story

ದುಬೈನಲ್ಲಿ ಭಾರತದ ತೇಜಸ್ ಯುದ್ಧ ವಿಮಾನ ಪತನ

by ಪ್ರತಿಧ್ವನಿ
November 21, 2025
ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌
Top Story

ಸಿಎಂ ಸಿದ್ದರಾಮಯ್ಯಗೆ ʼAll The Bestʼ ಹೇಳಿದ ಡಿ.ಕೆ ಶಿವಕುಮಾರ್‌

by ಪ್ರತಿಧ್ವನಿ
November 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

7 ಕೋಟಿ ರೂ. ದರೋಡೆ: ಖಾಲಿ ಬಾಕ್ಸ್ ಗಳು ಪತ್ತೆ

7 ಕೋಟಿ ರೂ. ದರೋಡೆ: ಖಾಲಿ ಬಾಕ್ಸ್ ಗಳು ಪತ್ತೆ

November 22, 2025
ಡಿ.ಕೆ ಶಿವಕುಮಾರ್ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆ ಪೂಜೆ

ಡಿ.ಕೆ ಶಿವಕುಮಾರ್ ಮನೆಯಲ್ಲಿ ಜೇನುಕಲ್ ಸಿದ್ದೇಶ್ವರ ಸ್ವಾಮಿ ಪಾದುಕೆ ಪೂಜೆ

November 22, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada