• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಹಳಿಗೆ ಬರಲಿವೆ ಖಾಸಗಿ ರೈಲುಗಳು..!

by
July 3, 2020
in ದೇಶ
0
ಹಳಿಗೆ ಬರಲಿವೆ ಖಾಸಗಿ ರೈಲುಗಳು..!
Share on WhatsAppShare on FacebookShare on Telegram

ರೈಲ್ವೆ ಇಲಾಖೆ ಕೇಂದ್ರ ಸರ್ಕಾರದ ಒಡೆತನದಲ್ಲಿದ್ದು, ಕೇಂದ್ರ ಸರ್ಕಾರ ರೈಲ್ವೆಗಾಗಿಯೇ ಪ್ರತ್ಯೇಕ ಇಲಾಖೆ ಹಾಗೂ ಪ್ರತ್ಯೇಕ ಬಜೆಟ್‌ ಮಂಡನೆ ಮಾಡುವ ಹಂತಕ್ಕೆ ಬೆಳೆದು ನಿಂತಿದ್ದ ಇಲಾಖೆ. ಆದರೆ, ಇದೀಗ ರೈಲ್ವೆ ಇಲಾಖೆ ತನ್ನ ಮಹತ್ವವನ್ನು ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಯಾಕಂದರೆ ಹಳಿ ಮೇಲೆ ಖಾಸಗಿ ರೈಲುಗಳ ಸಂಚಾರ ಶುರುವಾಗಲಿದೆ.

ಈ ಬಗ್ಗೆ ಮಾಹಿತಿ ಕೊಟ್ಟಿರುವ ರೈಲ್ವೆ ಬೋರ್ಡ್‌ ಅಧ್ಯಕ್ಷ ವಿನೋದ್‌ ಕುಮಾರ್‌ ಯಾದವ್‌, 2023ರ ಫೆಬ್ರವರಿ, ಮಾರ್ಚ್‌ ವೇಳೆಗೆ ಬಿಡ್ಡಿಂಗ್‌ ಮುಕ್ತಾಯವಾಗಲಿದ್ದು, ಏಪ್ರಿಲ್‌ ವೇಳೆಗೆ ಭಾರತೀಯ ರೈಲ್ವೆಯಲ್ಲಿ ಖಾಸಗಿ ಪ್ಯಾಸೆಂಜರ್‌ ರೈಲುಗಳ ಸಂಚಾರ ಶುರುವಾಗಲಿದೆ ಎಂದು ಘೋಷಣೆ ಮಾಡಿದ್ದಾರೆ. ಪ್ರಾರಂಭಿಕ ಹಂತದಲ್ಲಿ 30 ಸಾವಿರ ಕೋಟಿ ಹಣ ಹೂಡಿಕೆ ಮಾಡುತ್ತಿದ್ದು, ದೇಶದ 109 ಮಾರ್ಗಗಳಲ್ಲಿ 150 ಖಾಸಗಿ ರೈಲುಗಳ ಓಡಾಟಕ್ಕೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದೆ.

ಮೇಕ್‌ ಇನ್ ಇಂಡಿಯಾ ಯೋಜನೆಯಡಿ ರೈಲುಗಳ ಕೋಚ್‌ಗಳು ತಯಾರಾಗಲಿದ್ದು, ಗರಿಷ್ಠ 160 ಕಿಲೋ ಮೀಟರ್‌ ವೇಗದಲ್ಲಿ ಸಂಚಾರ ಮಾಡಲು ಅನುಕೂಲವಾಗುವಂತೆ ನಿರ್ಮಾಣ ಮಾಡಲಾಗಿರುತ್ತದೆ. 35 ವರ್ಷದ ಅವಧಿಗೆ ಗುತ್ತಿಗೆ ನೀಡಲಾಗ್ತಿದ್ದು, ಅಲ್ಲೀವರೆಗೂ ನಿರ್ವಹಣೆ ಸೇರಿದಂತೆ ಎಲ್ಲಾ ಉಸ್ತುವಾರಿಯನ್ನು ಖಾಸಗಿ ರೈಲುಗಳ ಸಂಸ್ಥೆಗಳೇ ನೋಡಿಕೊಳ್ಳಬೇಕು. ವಿದ್ಯುತ್‌ ಬಳಕೆ ಸೇರಿದಂತೆ ಸರ್ಕಾರದ ಸ್ವತ್ತು ಬಳಕೆಗೆ ಹಣ ಪಾವತಿ ಮಾಡಬೇಕು. ಅಂತಿಮವಾಗಿ ಬರುವ ಆದಾಯದಲ್ಲಿ ಸರ್ಕಾರಕ್ಕೂ ಪಾಲು ಕೊಡಬೇಕು ಎನ್ನುವುದು.

ಗ್ರಾಹಕನಿಗೆ ಏನು ಅನುಕೂಲ..? ಅನಾನುಕೂಲ..?

ಭಾರತೀಯ ರೈಲ್ವೆ ಇಲಾಖೆ ಖಾಸಗೀಕರಣ ಆಗುವತ್ತ ಸಾಗುತ್ತಿದೆ. ಪಬ್ಲಿಕ್‌ ಪ್ರೈವೇಟ್‌ ಪಾರ್ಟ್ನರ್‌ಶಿಪ್ ಮೂಲಕ ರೈಲ್ವೆ ಇಲಾಖೆಯನ್ನು ಅಭಿವೃದ್ಧಿ ಮಾಡುತ್ತೇವೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ, ಇದೀಗ ಗ್ರಾಹಕರಿಗೆ ಅನುಕೂಲವಾಗಲಿದೆ ಎನ್ನುವ ಉದ್ದೇಶದಿಂದ ಖಾಸಗಿ ಪ್ಯಾಸೆಂಜರ್‌ ರೈಲಿಗೆ ಅನುಮತಿ ಕೊಟ್ಟಿದ್ದಾರೆ. ಇದರಿಂದ ಗ್ರಾಹಕರಿಗೆ ಏನು ಲಾಭ ಎನ್ನುವ ಪ್ರಶ್ನೆ ಉದ್ಬವ ಆಗಿದೆ. ಲಾಭವಿಷ್ಟೆ, ಐಶಾರಾಮಿ ರೈಲುಗಳಲ್ಲಿ ಕುಳಿತು ಸಂಚಾರ ಮಾಡಬಹುದು. ಜೊತೆಗೆ ಸ್ವಲ್ಪ ಭಾರತೀಯ ರೈಲುಗಳಿಗೆ ಹೋಲಿಕೆ ಮಾಡಿದ್ರೆ ತುಸು ಬೇಗೆ ಗುರಿ ಮುಟ್ಟಬಹುದು.

ಗ್ರಾಹಕರಿಗೆ ಲಾಭಕ್ಕಿಂತ ಸ್ವಲ್ಪ ನಷ್ಟವೇ ಹೆಚ್ಚು. ಕಾರಣವೆಂದರೆ, ಖಾಸಗಿ ರೈಲುಗಳ ಟಿಕೆಟ್‌ ದರವನ್ನು ಖಾಸಗಿ ರೈಲು ಸಂಸ್ಥೆಗಳೇ ನಿಗದಿ ಮಾಡುವುದರಿಂದ ವಿಮಾನಯಾನ ಸಂಸ್ಥೆಗಳಂತೆ ತಮಗೆ ಬೇಕಾದಂತೆ ಟಿಕೆಟ್ ದರ ನಿಗದಿ ಮಾಡಲು ಅವಕಾಶವಿದೆ. ದೇಶದ 12 ಕ್ಲಸ್ಟರ್‌ಗಳು 109 ಜೋಡಿ ಮಾರ್ಗದಲ್ಲಿ ಈ ರೈಲುಗಳು ಸಂಚಾರ ಮಾಡುತ್ತವೆ. ಬೆಂಗಳೂರು, ಚೆನ್ನೈ ದೆಹಲಿ, ಮುಂಬೈ ಸೇರಿದಂತೆ ಪ್ರಮುಖ ನಗರಗಳನ್ನು ಈ ರೈಲು ಮಾರ್ಗ ಸಂಪರ್ಕ ಮಾಡಲಿದೆ.

ಕೇಂದ್ರ ಕ್ರಮದ ವಿರುದ್ಧ ರಾಹುಲ್‌ ಗಾಂಧಿ ಟೀಕೆ..!

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಖಾಸಗಿ ರೈಲುಗಳ ಸಂಚಾರದ ಬಗ್ಗೆಯ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಲಕ್ಷಾಂತರ ಜನರ ಜೀವಸೆಲೆ ಆಗಿರುವ ರೈಲಿನಲ್ಲಿ ಖಾಸಗಿಯವರನ್ನು ತಂದು ಖಾಸಗೀಕರಣ ಮಾಡಲು ಮುಂದಾಗಿದ್ದೀರಿ. ಆದರೆ ನೆನಪಿನಲ್ಲಿ ಇಟ್ಟುಕೊಳ್ಳಿ ಜನರು ಈ ಕ್ರಮಕ್ಕೆ ಸೂಕ್ತ ಪ್ರತ್ಯುತ್ತರ ನೀಡಲಿದ್ದಾರೆ ಎಂದಿದ್ದಾರೆ.

ವಿಶ್ವದಲ್ಲೇ ಅತೀ ಉದ್ದದ ರೈಲ್ವೆ ಹಳಿ ಮಾರ್ಗ ಹೊಂದಿರುವ ಭಾರತೀಯ ರೈಲ್ವೆ 13 ಸಾವಿರ ರೈಲುಗಳ ಸಂಚಾರ ಮಾಡುತ್ತಿದ್ದು 12 ಲಕ್ಷ ರೈಲ್ವೆ ಸಿಬ್ಬಂದಿ ಜೀವನ ರೂಪಿಸಿಕೊಂಡಿದ್ದಾರೆ. ಇದೀಗ ಖಾಸಗಿ ರೈಲುಗಳ ಸಂಚಾರದಿಂದ 12 ಲಕ್ಷ ನೌಕರರ ಜೀವನ ಬೀದಿಗೆ ಬೀಳುವ ಸಾಧ್ಯತೆ ಎದುರಾಗಿದೆ. ಇನ್ನೂ ಖಾಸಗಿ ಪ್ಯಾಸೆಂಜರ್‌ ರೈಲು ಓಡುವುದರಿಂದ ಮಾಸಿಕ ಪಾಸ್‌ ಸೇರಿದಂತೆ ಸರ್ಕಾರ ನೀಡುತ್ತಿದ್ದ ರಿಯಾಯ್ತಿ ಟಿಕೆಟ್‌ಗಳು ಈ ರೈಲುಗಳಲ್ಲಿ ಮಾಯವಾಗಲಿದೆ.

ಕೇಂದ್ರ ರೈಲ್ವೆ ಸಚಿವ ಪೀಯೂಷ್‌ ಗೋಯೆಲ್‌ ಜುಲೈ 1 ಐತಿಹಾಸಿಕ ದಿನ ಎಂದು ಬಣ್ಣಿಸಿ ಟ್ವೀಟ್‌ ಮಾಡಿದ್ದರೆ, ಸಾಮಾಜಿಕ ಕಾರ್ಯಕರ್ತ ಹಾಗೂ ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌, ಭಾರತ ಸರ್ಕಾರ ರೈಲುಗಳನ್ನು ಖಾಸಗಿಗೆ ವಹಿಸಲು ಮುಂದಾಗಿದೆ. ಬಡ ಜನರಿಗೆ ಸಹಕಾರಿ ಆಗಿದ್ದ ಸಾರಿಗೆ ವ್ಯವಸ್ಥೆಗೆ ಬೈ ಬೈ ಎಂದು ಟೀಕಿಸಿದ್ದಾರೆ.

Modi govt begins the privatization of Railways. “Ministry of Railways  invites Request for Qualifications( RFQ) for private participation for operation of passenger train services over 109 Origin Destination(OD) pairs of routes”.Goodbye to Janata transport https://t.co/SYWFlFTvn3

— Prashant Bhushan (@pbhushan1) July 2, 2020


Trains in the Fast Lane: Enhancing services to unprecedented levels, Indian Railways made history on 1st July, 2020 by achieving 100% punctuality rate. pic.twitter.com/zqNXFNx4Z6

— Piyush Goyal (@PiyushGoyal) July 2, 2020


ADVERTISEMENT

ಮೊದಲಿಗೆ ಸಣ್ಣ ಪ್ರಮಾಣದಲ್ಲಿ ಆರಂಭವಾಗಲಿರುವ ಖಾಸಗಿ ರೈಲು ಸಂಚಾರ, ತದನಂತರ ರೈಲ್ವೆ ಇಲಾಖೆಯ ರೂಲುಗಳ ಅಲಭ್ಯತೆ ಸೇರಿದಂತೆ ಸಾಕಷ್ಟು ಸಮಸ್ಯೆಗಳು ಎದುರಾಗಲಿದ್ದು, ಪ್ರಯಾಣಿಕರು ಅನಿವಾರ್ಯವಾಗಿ ಖಾಸಗಿ ರೈಲುಗಳಲ್ಲಿ ಸಂಚಾರ ಮಾಡಬೇಕಾದ ಅನಿವಾರ್ಯತೆ ಎದುರಾಗಲಿದೆ. ಬಹುತೇಕ ಮಾರ್ಗಗಳಿಗೆ ಕೇವಲ ಖಾಸಗಿ ರೈಲುಗಳನ್ನು ಬಿಡುವ ಮೂಲಕವೂ ಪ್ರಯಾಣಿಕರಿಗೆ ಹೊರೆಯಾದರೂ ಖಾಸಗಿ ಬಂಡವಾಳದಾರರಿಗೆ ಅನುಕೂಲ ಮಾಡಿಕೊಡುವ ಉದ್ದೇಶ ಬಂದರೂ ಬರಬಹುದು. ಟಿಕೆಟ್‌ ದರ ನಿಗದಿ ಮಾಡಲು ಸರ್ವ ಸ್ವತಂತ್ರರು ಎಂದು ಈಗಾಗಲೇ ತಿಳಿಸಲಾಗಿದೆ. ಅಂದರೆ ಪೆಟ್ರೋಲ್‌, ಡೀಸೆಲ್‌ ದರ ಏರಿಕೆಯನ್ನು ಒಮ್ಮೆ ಜ್ಞಾಪಕ ಮಾಡಿಕೊಂಡರೆ ಮುಂದಿನ ದಿನಗಳ ಪರಿಸ್ಥಿತಿ ಹೇಗಿರಲಿದೆ ಎನ್ನುವ ಲೆಕ್ಕಾಚಾರ ಕಣ್ಣ ಮುಂದೆ ಹಾದು ಹೋಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಅತ್ಯಾಪ್ತ ಬಳಗದ ಉದ್ಯಮಿಗಳೇ ಈ ಬಿಡ್ಡಿಂಗ್‌ ಪಡೆಯುವ ಎಲ್ಲಾ ಸಾಧ್ಯತೆಗಳಿವೆ ಅಥವಾ ಆ ಬಿಡ್ಡಿಂಗ್‌ನಲ್ಲಿ ಬಿಜೆಪಿಗೆ ಆಪ್ತರಾಗಿರುವ ಉದ್ಯಮಿಗಳು ಷೇರು ಪಡೆಯುವ ಸಾಧ್ಯತೆಯೂ ಇದೆ. ಒಟ್ಟಿನಲ್ಲಿ ನಾನು ರೈಲ್ವೆ ನಿಲ್ದಾಣದಲ್ಲಿ ಟೀ ಮಾರುತ್ತಿದ್ದೆ ಎಂದು ಹೇಳಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿ, ರೈಲ್ವೆಯನ್ನು ಖಾಸಗೀಕರಣ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು, ವಿಶ್ವದರ್ಜೆ ರೈಲಿನಲ್ಲಿ ಸಂಚಾರ ಮಾಡಬಹುದು ಎಂದು ಬೀಗುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ ವಿಮಾನ ಕೂಡ ವಿಶ್ವದರ್ಜೆ ಸಂಚಾರವೇ ಸರಿ. ಆದರೆ, ಬಡ-ಬಗ್ಗರು ವಿಮಾನದಲ್ಲಿ ಸಂಚಾರ ಮಾಡಲು ಸಾಧ್ಯವೇ..?

ರೈಲು ಬಡವರ ಸಂಚಾರಕ್ಕೆ ಹೇಳಿ ಮಾಡಿಸಿದ್ದ ಸಂಚಾರ ವ್ಯವಸ್ಥೆ. ಆದರೆ ಇದೀಗ ಮೋದಿ ಸರ್ಕಾರದ ಕಣ್ಣು ರೈಲಿನ ಮೇಲೆ ಬಿದ್ದು ಆಗಿದೆ. ಮುಂದಿನ ದಿನಗಳಲ್ಲಿ ಮಾಸಿಕ ಪಾಸ್‌ ಅಷ್ಟೇ ಅಲ್ಲ, ಬೇರೆ ಎಲ್ಲಾ ಸೌಲಭ್ಯಗಳಿಗೂ ಕತ್ತರಿ ಬೀಳಲಿದೆ. ಜೊತೆಗ ಖಾಸಗಿ ಬಸ್‌ ಲಾಬಿ ನಡೆಯುವ ರೀತಿಯಲ್ಲೇ ಮುಂದಿನ ದಿನಗಳಲ್ಲಿ ಖಾಸಗಿ ರೈಲು ಕಂಪನಿಗಳ ಲಾಬಿ ನಡೆಯಲಿದೆ. 30 ವರ್ಷದ ತನಕ ಹೆದ್ದಾರಿಯನ್ನು ನಿರ್ವಹಣೆ ಮಾಡಬೇಕು ಎಂದು ಒಪ್ಪಂದ ಮಾಡಿಕೊಂಡು ಜೀವನ ಪರ್ಯಂತ ಟೋಲ್‌ ಸಂಗ್ರಹಿಸುವ ಖಾಸಗಿ ಕಂಪನಿಗಳಂತೆಯೇ ಸುಲಿಗೆ ಮಾಡುವುದು ಶತಸಿದ್ಧ ಎನ್ನಬಹುದು.

Tags: ಖಾಸಗೀಕರಣರೈಲ್ವೆ ಇಲಾಖೆ
Previous Post

ಉತ್ತರ ಪ್ರದೇಶ ಗುಂಡಿನ ದಾಳಿ; ಎಂಟು ಪೋಲಿಸರು ಹತ

Next Post

ಉಳ್ಳವರ ಪ್ರತಿಷ್ಟೆಯ ಆನ್ಲೈನ್ ತರಗತಿಗಳಿಗೆ ಬಡವರ ಮಕ್ಕಳು ಬಲಿಯಾಗಬೇಕೆ..?

Related Posts

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
0

ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ವಿತರಣೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು, ವಿಶೇಷ ಚೇತನರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು. ಬೀದರ್...

Read moreDetails

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

July 5, 2025

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

July 5, 2025

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
Next Post
ಉಳ್ಳವರ ಪ್ರತಿಷ್ಟೆಯ ಆನ್ಲೈನ್ ತರಗತಿಗಳಿಗೆ ಬಡವರ ಮಕ್ಕಳು ಬಲಿಯಾಗಬೇಕೆ..?

ಉಳ್ಳವರ ಪ್ರತಿಷ್ಟೆಯ ಆನ್ಲೈನ್ ತರಗತಿಗಳಿಗೆ ಬಡವರ ಮಕ್ಕಳು ಬಲಿಯಾಗಬೇಕೆ..?

Please login to join discussion

Recent News

Top Story

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 5, 2025
Top Story

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

by ಪ್ರತಿಧ್ವನಿ
July 5, 2025
Top Story

HD Kumarswamy: ಮೇಕೆದಾಟು; ತಮಿಳುನಾಡು ಸರ್ಕಾರವನ್ನು ಒಪ್ಪಿಸುವ ತಾಕತ್ತು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇಲ್ಲ

by ಪ್ರತಿಧ್ವನಿ
July 5, 2025
Top Story

DK Shivakumar: ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕು ನನಗೆ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
July 5, 2025
Top Story

Vijay Raghavendra: ಸಿನಿಮಾ ವಿಭಾಗದಲ್ಲಿ ಪ್ರಕಟಿಸಲು ಕೋರಿಜುಲೈ 25ಕ್ಕೆ ‘ಸ್ವಪ್ನಮಂಟಪ’ ಬಿಡುಗಡೆ

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Lakshmi Hebbalkar: ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 5, 2025

Jockey 42: ನಟ ಕಿರಣ್ ರಾಜ್ ಹುಟ್ಟು ಹಬ್ಬಕ್ಕೆ ಗುಡ್ ನ್ಯೂಸ್ ನಿರ್ದೇಶಕ ಗುರುತೇಜ್ ಶೆಟ್ಟಿ.

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada