• Home
  • About Us
  • ಕರ್ನಾಟಕ
Friday, June 20, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಹಿಂದುತ್ವದ ಧ್ವೇಷವನ್ನು ಫೇಸ್ಬುಕ್ ಬೆಂಬಲಿಸುತ್ತಿದೆ- ವಾಲ್ ಸ್ಟ್ರೀಟ್ ಜರ್ನಲ್ ವರದಿ

by
August 16, 2020
in ದೇಶ
0
ಹಿಂದುತ್ವದ ಧ್ವೇಷವನ್ನು ಫೇಸ್ಬುಕ್ ಬೆಂಬಲಿಸುತ್ತಿದೆ- ವಾಲ್ ಸ್ಟ್ರೀಟ್ ಜರ್ನಲ್ ವರದಿ
Share on WhatsAppShare on FacebookShare on Telegram

ಭಾರತದಲ್ಲಿ ಬಿಜೆಪಿಯೊಂದಿಗೆ ಫೇಸ್‌ಬುಕ್‌ ಸಖ್ಯ ಹೊಂದಿದೆಯೆಂಬ ಆರೋಪಕ್ಕೆ ಮತ್ತಷ್ಟು ಪುರಾವೆಗಳು ಸಿಗುತ್ತಿವೆ. ಫೇಸ್‌ಬುಕ್‌ ಕಮ್ಯುನಿಟಿ ಸ್ಟಾಂಡರ್ಡ್‌ ಅಡಿಯಲ್ಲಿ ಬಿಜೆಪಿ ಹಾಗೂ ಹಿಂದುತ್ವ ಕಾರ್ಯಕರ್ತರು ಹರಡುವ ಧ್ವೇಷ ಪೋಸ್ಟ್‌ಗಳನ್ನು ನಿಯಂತ್ರಿಸುತ್ತಿಲ್ಲ ಎಂದು ಅಮೇರಿಕಾದ ಹೆಸರಾಂತ ನಿಯತಕಾಲಿಕೆ ವಾಲ್‌ ಸ್ಟ್ರೀಟ್‌ ಜರ್ನಲ್‌ ವರದಿ ಮಾಡಿದೆ.

Also Read: ದೇಶದ ಹಿತಾಸಕ್ತಿ ಬಲಿಕೊಟ್ಟು ರಿಲಯನ್ಸ್ ಬೆಳೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ!

ಸಾಮಾಜಿಕ ಜಾಲತಾಣದ ಮೂಲಕ ಸಮಾಜದ ಸ್ವಾಸ್ಥ್ಯ ಹಾಳು ಮಾಡುವಂತಹ ಬಿಜೆಪಿಯವರ ಹಾಗೂ ಹಿಂದೂ ರಾಷ್ಟ್ರೀಯವಾದಿಗಳ ಧ್ವೇಷ ಭಾಷಣಗಳಿಗೆ ಫೇಸ್‌ಬುಕ್‌ ತಡೆ ನೀಡುತ್ತಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ.

Hate-Speech Rules Collide With Indian Politics ಎಂಬ ಹೆಸರಲ್ಲಿ ಆಗಸ್ಟ್‌ 14 ರಂದು ವಾಲ್‌ ಸ್ಟ್ರೀಟ್‌ ಜರ್ನಲ್ ಪ್ರಕಟಿಸಿದ ವರದಿಯಲ್ಲಿ ಹೇಗೆ ಫೇಸ್‌ಬುಕ್‌ ಹಿಂದೂ ರಾಷ್ಟ್ರೀಯವಾದ ಹೆಸರಲ್ಲಿ ಹಿಂದುತ್ವ ಭಯೋತ್ಪಾದಕರು ಹರಡುವ ಧ್ವೇಷ ಭಾಷಣಗಳನ್ನು ಅನುವು ಮಾಡಿಕೊಡುತ್ತಿದೆ ಹಾಗೂ ಅದನ್ನು ಹಂಚುವ ಅಕೌಂಟ್‌ಗಳನ್ನು ನಿಷೇಧಿಸದೆ ಉಳಿಸುತ್ತದೆ ಎಂಬುದನ್ನು ಸವಿವರವಾಗಿ ಹೇಳಿದೆ.

Also Read: ಜಿಯೋ ಮೇಲೆ ಫೇಸ್‌ಬುಕ್‌ನ ಬಂಡವಾಳವೂ ಮತ್ತು ಟಿಕ್‌ಟಾಕ್ ಮೇಲಿನ ಕೇಂದ್ರದ ನಿಷೇಧವೂ..

ಮುಸ್ಲಿಮರ ವಿರುದ್ಧ ಸತತ ಧ್ವೇಷ ಕಾರುವ ಪೋಸ್ಟ್‌ ಹಂಚುವ ತೆಲಂಗಾಣ ಬಿಜೆಪಿ ಶಾಸಕ ಟಿ ರಾಜಾ ಸಿಂಗ್‌, ಸೇರಿದಂತೆ ಹಲವು ಹಿಂದುತ್ವ ನಾಯಕರ ಖಾತೆಯ ವಿರುದ್ಧ ಫೇಸ್‌ಬುಕ್‌ ಗಂಭೀರ ನಿರ್ಣಯ ತೆಗೆದುಕೊಳ್ಳುತ್ತಿಲ್ಲ. ನರೇಂದ್ರ ಮೋದಿ ಸರ್ಕಾರದ ಕಡೆಗೆ ಫೇಸ್‌ಬುಕ್‌ ಒಲವು ತೋರಿಸುತ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಆಗಾಗ್ಗೆ ಪ್ರಚೋದನಕಾರಿ ಟೀಕೆಗಳಿಗೆ ಹೆಸರುವಾಸಿಯಾಗಿರುವ ಇತರ ಇಬ್ಬರು ವಿವಾದಾತ್ಮಕ ಬಿಜೆಪಿ ನಾಯಕರಾದ ಕಪಿಲ್ ಮಿಶ್ರಾ ಮತ್ತು ಸಂಸದ ಅನಂತ್‌ಕುಮಾರ್ ಹೆಗ್ಡೆ ಅವರ ಪೋಸ್ಟ್‌ಗಳ ಬಗ್ಗೆ ಇದೇ ರೀತಿಯ ಆರೋಪಗಳನ್ನು ಮಾಡಲಾಗಿದೆ.

ಈ ಕುರಿತಂತೆ ರಾಹುಲ್‌ ಗಾಂಧಿ ಕೂಡಾ ಟ್ವೀಟ್‌ ಮಾಡಿದ್ದು, ಫೇಸ್‌ಬುಕ್‌, ವಾಟ್ಸಪ್‌ನ್ನು ಬಿಜಪಿ ಹಾಗೂ ಆರೆಸ್ಸಸ್‌ ನಿಯಂತ್ರಿಸುತ್ತಿದೆ ಎಂದಿದ್ದಾರೆ.

भाजपा-RSS भारत में फेसबुक और व्हाट्सएप का नियंत्रण करती हैं।

इस माध्यम से ये झूठी खबरें व नफ़रत फैलाकर वोटरों को फुसलाते हैं।

आख़िरकार, अमेरिकी मीडिया ने फेसबुक का सच सामने लाया है। pic.twitter.com/PAT6zRamEb

— Rahul Gandhi (@RahulGandhi) August 16, 2020


ADVERTISEMENT

ಫೆಬ್ರವರಿಯಲ್ಲಿ ದೆಹಲಿಯಲ್ಲಿ ನಡೆದ ಗಲಭೆಗೆ ಕಾರಣವಾದ ಮಿಶ್ರಾ ʼಗೋಲಿ ಮಾರೋ ಸಾಲೊ ಕಿʼ ಭಾಷಣದ ಕುರಿತಂತೆಯೂ ಫೇಸ್‌ಬುಕ್‌ ಇದೇ ಆರೋಪಗಳನ್ನು ಎದುರಿಸಿತ್ತು. ಅಲ್ಲದೆ ಲೋಕಸಭೆ ಚುನಾವಣೆಗಳಲ್ಲಿ ಬಿಜೆಪಿ ಪರವಾದ ವಿಚಾರಗಳನ್ನು ಹೆಚ್ಚು ಜನರನ್ನು ತಲುಪುವಂತೆ ಫೇಸ್‌ಬುಕ್‌ ಮಾಡಿತ್ತು ಎಂದೂ 2018 ರಲ್ಲಿ ಕೆಲವು ಅಂತರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದ್ದವು.

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಉದ್ಯಮಿ ಗೆಳೆಯ ಮುಕೇಶ್‌ ಅಂಬಾನಿ ಕಂಪೆನಿಗೆ ಫೇಸ್‌ಬುಕ್‌ ಬಂಡವಾಳ ಹೂಡಿರುವುದೂ ಈ ವರದಿಗಳನ್ನೆಲ್ಲಾ ಪುಷ್ಟೀಕರಿಸುವಂತಿದೆ.

Also Read: ರಿಲಯನ್ಸ್ ಜಿಯೋ ಪಾಲು ಪಡೆದ ಫೇಸ್‌ಬುಕ್‌; ಗ್ರಾಹಕರಾದ ನಿಮಗಾಗುವ ಲಾಭ- ನಷ್ಟ ಎಷ್ಟು?

Tags: ಫೇಸ್ಬುಕ್ಹಿಂದುತ್ವ
Previous Post

ಉತ್ತರ ಪ್ರದೇಶದ ಇನ್ನೋರ್ವ ಸಚಿವ ಕರೋನಾದಿಂದ ಸಾವು..!

Next Post

ಕಮಲಾ ಹ್ಯಾರೀಸ್ ಪ್ರಕರಣ: ಭಾರತ ವಿರೋಧಿ ಡೊನಾಲ್ಡ್ ಟ್ರಂಪ್‌ರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

Related Posts

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
0

ದೇಶದ ರಕ್ಷಣೆಗೆ ಶ್ರಮಿಸುತ್ತಿರುವ ರಾಹುಲ್ ಗಾಂಧಿ ಅವರಿಗೆ ಆರೋಗ್ಯ, ಸಂತೋಷ ಸಿಗಲಿ: ಜನ್ಮದಿನ ಹಿನ್ನೆಲೆಯಲ್ಲಿ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್ ಬಿ.ವಿ ಶ್ರೀನಿವಾಸ್ ನೇತೃತ್ವದಲ್ಲಿ ಕಾರ್ಯಕರ್ತರಿಂದ...

Read moreDetails
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

ಹೋರಾಟ ಚಳುವಳಿ ಮತ್ತು ನಾಯಕತ್ವದ ಸ್ವರೂಪ

June 18, 2025
ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

ವಿಮಾನ ದುರಂತ; ಅಹಮದಾಬಾದ್ ಜನರಲ್ ಆಸ್ಪತ್ರೆಯಲ್ಲಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಕಾಂಗ್ರೆಸ್ ನಾಯಕರು

June 15, 2025
Next Post
ಕಮಲಾ ಹ್ಯಾರೀಸ್ ಪ್ರಕರಣ: ಭಾರತ ವಿರೋಧಿ ಡೊನಾಲ್ಡ್ ಟ್ರಂಪ್‌ರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

ಕಮಲಾ ಹ್ಯಾರೀಸ್ ಪ್ರಕರಣ: ಭಾರತ ವಿರೋಧಿ ಡೊನಾಲ್ಡ್ ಟ್ರಂಪ್‌ರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada