• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಹಿಂದೂ ಭಾವನೆಗಳಿಗೆ ಘಾಸಿ ಆರೋಪ; Netflix ವಿರುದ್ಧ ತನಿಖೆಗೆ ಆದೇಶಿಸಿದ ಮಧ್ಯಪ್ರದೇಶ ಸರ್ಕಾರ

by
November 23, 2020
in ದೇಶ
0
ಹಿಂದೂ ಭಾವನೆಗಳಿಗೆ ಘಾಸಿ ಆರೋಪ; Netflix ವಿರುದ್ಧ ತನಿಖೆಗೆ ಆದೇಶಿಸಿದ ಮಧ್ಯಪ್ರದೇಶ ಸರ್ಕಾರ
Share on WhatsAppShare on FacebookShare on Telegram

ನೆಟ್‌ಫ್ಲಿಕ್ಸ್‌ನಲ್ಲಿ ಪ್ರಸಾರ ಆಗುತ್ತಿರುವ ವೆಬ್‌ ಸರಣಿ ‘ಎ ಸೂಟೇಬಲ್ ಬಾಯ್’ ಯನ್ನು ಪರೀಕ್ಷಿಸಲು ರಾಜ್ಯ ಪೊಲೀಸರಿಗೆ ಸೂಚಿಸಲಾಗಿದೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಭಾನುವಾರ ತಿಳಿಸಿದ್ದಾರೆ. ವೆಬ್‌ ಸರಣಿಯಲ್ಲಿ ಬರುವ ಚುಂಬನ ದೃಶ್ಯಗಳನ್ನು ದೇವಾಲಯವೊಂದರಲ್ಲಿ ಚಿತ್ರೀಕರಿಸಲಾಗಿದೆಯೇ ಮತ್ತು ಅದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತದೆಯೇ ಎಂದು ಪರಿಶೀಲಿಸಲು ಆದೇಶಿಲಾಗಿದೆ ಎಂದು ಅವರು ಹೇಳಿದ್ದಾರೆ. ಒಂದು ವೇಳೆ ಸರಣಿಯ ವಿರುದ್ಧ ಹೊರಸಲಾಗಿರುವ ಆರೋಪ ನಿಜವಾದಲ್ಲಿ ಸರಣಿಯ ತಯಾರಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಸಚಿವರು ಸುಳಿವು ನೀಡಿದ್ದಾರೆ.

ADVERTISEMENT

ಮಹೇಶ್ವರ ಪಟ್ಟಣದ ದೇವಾಲಯವೊಂದರಲ್ಲಿ ಚುಂಬನದ ದೃಶ್ಯಗಳನ್ನು ಚಿತ್ರೀಕರಿಸಲಾಗಿದೆ ಎಂದು ಆಡಳಿತಾರೂಢ ಬಿಜೆಪಿಯ ಯುವ ವಿಭಾಗವಾದ ಭಾರತೀಯ ಜನತಾ ಯುವ ಮೋರ್ಚಾ (BJYM) ಆರೋಪಿಸಿದ್ದು, ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದೆ ಎಂದು ಇದರ ವಿರುದ್ಧ ರೇವಾ ಎಸ್‌ಪಿಗೆ ದೂರನ್ನೂ ಸಹ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

” ಒಟಿಟಿ ಮಾಧ್ಯಮ ವೇದಿಕೆಯಲ್ಲಿ ಬಿಡುಗಡೆ ಮಾಡಲಾಗಿರುವ ಎ ಸೂಟೇಬಲ್ ಬಾಯ್ ಸರಣಿಯಲ್ಲಿ. ದೇವಾಲಯದ ಒಳಗೆ ಚುಂಬನ ದೃಶ್ಯಗಳನ್ನು ಚಿತ್ರೀಕರಿಸಲಾಯಿತು. ಈ ದೃಶ್ಯದ ಹಿನ್ನೆಲೆಯಲ್ಲಿ ಭಜನೆಗಳನ್ನು ಹಾಡಲಾಗಿದೆ. ನಾನು ಅದನ್ನು ಆಕ್ಷೇಪಾರ್ಹವೆಂದು ಪರಿಗಣಿಸುತ್ತೇನೆ. ಇದು ಭಾವನೆಗಳಿಗೆ ದಕ್ಕೆ ತರುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದು ರಾಜ್ಯ ಗೃಹ ಸಚಿವ ಮಿಶ್ರಾ ಭಾನುವಾರ ವೀಡಿಯೊ ಹೇಳಿಕೆಯಲ್ಲಿ ಹೇಳಿದ್ದಾರೆ.

“ಸರಣಿಯನ್ನು ಪರೀಕ್ಷಿಸಲು ಮತ್ತು ಈ ಸರಣಿಯ ನಿರ್ಮಾಪಕ ಮತ್ತು ನಿರ್ದೇಶಕರ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳಬಹುದು ಎಂಬುದನ್ನು ನಿರ್ಧರಿಸಲು ನಾನು ಪೊಲೀಸರಿಗೆ ನಿರ್ದೇಶನ ನೀಡಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

ಏತನ್ಮಧ್ಯೆ, ನೆಟ್‌ಫ್ಲಿಕ್ಸ್‌ ಮತ್ತು ಸರಣಿಯ ತಯಾರಕರು ಕ್ಷಮೆಯಾಚಿಸಬೇಕು ಮತ್ತು “ಆಕ್ಷೇಪಾರ್ಹ ದೃಶ್ಯಗಳನ್ನು” ತೆಗೆದುಹಾಕಬೇಕೆಂದು ಒತ್ತಾಯಿಸಿ ರೇವಾ ಎಸ್ಪಿ ರಾಕೇಶ್ ಕುಮಾರ್ ಸಿಂಗ್ ಅವರಿಗೆ ಶನಿವಾರ ಜ್ಞಾಪಕ ಪತ್ರವನ್ನು ಸಲ್ಲಿಸಿದ್ದೇನೆ ಎಂದು BJYM ರಾಷ್ಟ್ರೀಯ ಕಾರ್ಯದರ್ಶಿ ಗೌರವ್ ತಿವಾರಿ ಪಿಟಿಐಗೆ ತಿಳಿಸಿದ್ದಾರೆ.

Also Read: ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆರೋಪ: #BoycottNetflix ಅಭಿಯಾನ

“ಸರಣಿಯ ಭಾಗಗಳನ್ನು ಮಧ್ಯಪ್ರದೇಶದ ಮಹೇಶ್ವರ ಪಟ್ಟಣದಲ್ಲಿ ಚಿತ್ರೀಕರಿಸಲಾಗಿದೆ. ದೇವಾಲಯದ ಒಳಗೆ ಚುಂಬನ ದೃಶ್ಯವು ನಮ್ಮ ಭಾವನೆಗಳನ್ನು ಘಾಸಿಗೊಳಿಸಿದೆ” ಎಂದು ತಿವಾರಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರೇವಾ ಎಸ್‌ಪಿ, ಗೌರವ್ ತಿವಾರಿ ಅವರಿಂದ ನಾನು ಮನವಿ ಪತ್ರವನ್ನು ಸ್ವೀಕರಿಸಿದ್ದೇನೆ, ಇದರಲ್ಲಿ ಸರಣಿಯ ಆಕ್ಷೇಪಾರ್ಹ ದೃಶ್ಯಗಳನ್ನು ಧಾರ್ಮಿಕ ಸ್ಥಳದಲ್ಲಿ ಚಿತ್ರೀಕರಿಸಲಾಗಿದೆ ಆಕ್ಷೇಪಾರ್ಹ ದೃಶ್ಯಗಳ ದೃಶ್ಯಗಳನ್ನು ನೆಟ್‌ಫ್ಲಿಕ್ಸ್‌ನಿಂದ ಸ್ವೀಕರಿಸಿದ ನಂತರ, ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಆರು ಭಾಗಗಳ ನೆಟ್‌ಫ್ಲಿಕ್ಸ್ ಸರಣಿ ʼಎ ಸೂಟೇಬಲ್‌ ಬಾಯ್‌ʼ ಅನ್ನು ಖ್ಯಾತ ಚಲನಚಿತ್ರ ತಯಾರಕಿ ಮೀರಾ ನಾಯರ್ ನಿರ್ದೇಶಿಸಿದ್ದಾರೆ, “ಸಲಾಮ್ ಬಾಂಬೆ”, “ಮಾನ್ಸೂನ್ ವೆಡ್ಡಿಂಗ್” ಮತ್ತು “ದಿ ನೇಮ್‌ಸೇಕ್” ಅವರ ಹೆಸರುವಾಸಿ ಸಿನೆಮಾಗಳು.

Previous Post

ಮೂರು ದಶಕಗಳ ಅಲ್ಪಾವಧಿಯಲ್ಲಿ ದೇಶದಲ್ಲಿ ಮುಂಚೂಣಿಗೆ ಬಂದಿರುವ SJM ಸ್ವದೇಶೀ ಸಿದ್ದಾಂತ

Next Post

ಬಿಹಾರ: ಯಾವುದೇ ಪಕ್ಷದ ‘ಬಿ’ ಟೀಂ ಆಗದೆ ಗೆಲುವು ಸಾಧಿಸಿರುವ ಓವೈಸಿಯ AIMIM

Related Posts

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
0

ದೇಶದಲ್ಲಿ ಅರಣ್ಯ ಪ್ರದೇಶ ಹೆಚ್ಚಾಗಬೇಕು. ರಸ್ತೆ ಬದಿಯಲ್ಲಿ ಸಸಿ‌ನೆಡುವುದಷ್ಟೇ ಅಲ್ಲದೇ ಅವುಗಳ ರಕ್ಷಣೆ ಮಾಡಬೇಕು. ಸಾರ್ವಜನಿಕರು ಕೂಡಾ ಸರ್ಕಾರದೊಂದಿಗೆ ಕೈ ಜೋಡಿಸಬೇಕು ಎಂದು ರಾಜ್ಯ ಸಭಾ ವಿರೋಧಪಕ್ಷದ...

Read moreDetails
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

July 5, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಬಿಹಾರ: ಯಾವುದೇ ಪಕ್ಷದ ‘ಬಿ’ ಟೀಂ ಆಗದೆ ಗೆಲುವು ಸಾಧಿಸಿರುವ ಓವೈಸಿಯ AIMIM

ಬಿಹಾರ: ಯಾವುದೇ ಪಕ್ಷದ ‘ಬಿ’ ಟೀಂ ಆಗದೆ ಗೆಲುವು ಸಾಧಿಸಿರುವ ಓವೈಸಿಯ AIMIM

Please login to join discussion

Recent News

Top Story

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

by ಪ್ರತಿಧ್ವನಿ
July 5, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಯಾದಗಿರಿ..!

by ಪ್ರತಿಧ್ವನಿ
July 5, 2025
SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!
Top Story

SriLeela: ʼಜೂನಿಯರ್‌ʼ ವೈರಲ್‌ ವಯ್ಯರಿ… ಕಿರೀಟಿ-ಶ್ರೀಲೀಲಾ ಡ್ಯಾನ್ಸ್‌ ಭರ್ಜರಿ..!!

by ಪ್ರತಿಧ್ವನಿ
July 5, 2025
Top Story

Dolly Dananjay: ಹೊಸ ರೆಟ್ರೋ ಲುಕ್‌ನಲ್ಲಿ ಧನಂಜಯ್..

by ಪ್ರತಿಧ್ವನಿ
July 5, 2025
Top Story

Ranya Rao: ಅಕ್ರಮ ಚಿನ್ನ ಸಾಗಾಟಣೆಯ ನಟಿ ರನ್ಯಾ ರಾವ್ ಗೆ ಸೇರಿದ 34 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

by ಪ್ರತಿಧ್ವನಿ
July 5, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Mallikarjuna Kharge: ರಾಜ್ಯದಲ್ಲಿ ಅರಣ್ಯ ಪ್ರದೇಶ ಬೆಳಸಿ ಪರಿಸರ ಉಳಿಸಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಸೆ.

July 5, 2025
ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

ರಾಜೀವ್‌ ಹತ್ಯೆ ಯ ʻThe Hunt ́ ಪ್ರೇಕ್ಷಕರ ಮುಂದೆ/ಮುಂದೇನು?

July 5, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada