ರಾಜ್ಯ ಸರಕಾರ ಈಗಾಗಲೇ 1 ಕೋಟಿ 8 ಲಕ್ಷ ಧ್ವಜಗಳನ್ನು ವಿತರಿಸಿದ್ದು, ರಾಜ್ಯಾದ್ಯಂತ 1 ಕೋಟಿ 25 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜ ಹಾರಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ವಿಧಾನಸೌಧ ಮುಂಭಾಗ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ರಾಜ್ಯದಲ್ಲಿ ಯಶಸ್ವಿಯಾಗಿ ಆಚರಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯದ ಪ್ರತಿ ಮನೆಯ ಮೇಲೂ ರಾಷ್ಟ್ರಧ್ವಜ ಹಾರಾಡಲಿದೆ ಎಂದರು.
ಸ್ವಾತಂತ್ರ್ಯ ಯಾವುದೇ ಒಬ್ಬ ವ್ಯಕ್ತಿ ಅಥವಾ ಕೆಲವರಿಂದ ಬಂದಿಲ್ಲ. ಸಾವಿರಾರು ಜನರ ತ್ಯಾಗ, ಬಲಿದಾನಗಳ ಮೂಲಕ ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ. ಸ್ವಾತಂತ್ರ್ಯೋತ್ಸವ ಪ್ರತಿಯೊಬ್ಬರ ಸ್ವಾತಂತ್ರ್ಯವಾಗಿದೆ. ಇದು ಎಲ್ಲರಿಗೂ ಸಲ್ಲುತ್ತದೆ ಎಂದು ಅವರು ಹೇಳಿದರು.
ನಮ್ಮ ದೇಶ ಯುವಕರ ದೇಶವಾಗಿದೆ. ಯುವಕರ ದೇಶವಾಗಿದೆ. ಜಗತ್ತಿನ ಯಾವುದೇ ದೇಶ ಯುವಕರ ದೇಶ ಆಗಿದ್ದರೆ ಅದು ಭಾರತ. ಆದ್ದರಿಂದ ಯುವಕರು ಅಂಗಾಂಗ ದಾನ ಮಾಡಬೇಕು. ನಾನು ಈಗಾಗಲೇ ಅಂಗಾಂಗ ದಾನ ಬರೆದುಕೊಟ್ಟಿದ್ದೇನೆ ಎಂದು ಬೊಮ್ಮಾಯಿ ಹೇಳಿದರು.