• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

1,040 ಕೋಟಿ ಬಂಡವಾಳ ಹೂಡಿಕೆಯ 2 ಒಪ್ಪಂದಗಳಿಗೆ ಸಹಿ..

ಪ್ರತಿಧ್ವನಿ by ಪ್ರತಿಧ್ವನಿ
July 2, 2024
in ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ
0
Share on WhatsAppShare on FacebookShare on Telegram

ಮಷಿನ್‌ಟೂಲ್ಸ್‌ ಮತ್ತು ಕೈಗಾರಿಕಾ ಯಂತ್ರೋಪಕರಣ ತಯಾರಿಕಾ ಕಂಪನಿ ಡಿಎನ್‌ ಸೊಲುಷನ್ಸ್‌ ಕಂಪನಿಯ ಅಧ್ಯಕ್ಷ ಸಂಘುನ್‌ ಕಿಮ್‌ ಮತ್ತು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಒಪ್ಪಂದದ ದಾಖಲೆಗಳನ್ನು ಪರಸ್ಪರ ವಿನಿಮಯ ಮಾಡಿಕೊಂಡರು. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್‌. ಸೆಲ್ವಕುಮಾರ್‌, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತರಾದ ಗುಂಜನ್‌ ಕೃಷ್ಣ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಅವರು ಉಪಸ್ಥಿತರಿದ್ದರು,
ದಕ್ಷಿಣ ಕೊರಿಯಾದ ರಾಜಧಾನಿ ಸೋಲ್‌ನಲ್ಲಿ ಯಶಸ್ವಿ ರೋಡ್‌ಷೋ
ರೋಡ್‌ಷೋನಲ್ಲಿ ಪಾಲ್ಗೊಂಡ ಕಂಪನಿಗಳ ಸಂಖ್ಯೆ 45ಕ್ಕೂ ಹೆಚ್ಚು

ADVERTISEMENT
  • ಕರ್ನಾಟಕದ ಕೈಗಾರಿಕಾ ಅಭಿವೃದ್ಧಿಗೆ ಕೈಜೋಡಿಸಿದ ಪ್ರಮುಖ ಉದ್ಯಮಗಳು
  • ರಾಜ್ಯದಲ್ಲಿ ತಯಾರಿಕಾ ಘಟಕ ಸ್ಥಾಪಿಸಲು ₹1,000 ಕೋಟಿ ಹೂಡಿಕೆ ಮಾಡಲಿರುವ ಡಿಎನ್‌ ಸೊಲುಷನ್ಸ್‌
  • ಇಎಂಎನ್‌ಐ ಕಂಪನಿಯ ₹ 40 ಕೋಟಿ ಹೂಡಿಕೆ

ಬೆಂಗಳೂರು: ಮುಂದಿನ ವರ್ಷದ ಫೆಬ್ರುವರಿಯಲ್ಲಿ ನಗರದಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸುವುದಕ್ಕೆ ದಕ್ಷಿಣ ಕೊರಿಯಾದ ಉದ್ಯಮಿಗಳನ್ನು ಆಹ್ವಾನಿಸಲು ಕರ್ನಾಟಕ ರಾಜ್ಯ ಸರ್ಕಾರವು ಮಂಗಳವಾರ ಸೋಲ್‌ನಲ್ಲಿ ಯಶಸ್ವಿಯಾಗಿ ರೋಡ್‌ಷೋ ನಡೆಸಿತು.
ರೋಡ್‌ಷೋನಲ್ಲಿ ಮಾತನಾಡಿದ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು, ವಿದ್ಯುತ್‌ಚಾಲಿತ ವಾಹನಗಳ ಭವಿಷ್ಯ, ಅತ್ಯಾಧುನಿಕ ಯಂತ್ರೋಪಕರಣ, ಬಾಹ್ಯಾಕಾಶ ತಂತ್ರಜ್ಞಾನ ಸೇರಿದಂತೆ ವಿವಿಧ ಉದ್ದಿಮೆ ವಲಯಗಳಲ್ಲಿ ರಾಜ್ಯದಲ್ಲಿ ಇರುವ ವಿಪುಲ ಅವಕಾಶಗಳ ಬಗ್ಗೆ ಮಾಹಿತಿ ನೀಡಿದರು.
ʼಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ರಾಜ್ಯ ಸರ್ಕಾರ ನೀಡಿದ ಆಹ್ವಾನ ಮನ್ನಿಸಿ ಕೆಲ ಕಂಪನಿಗಳು ಒಪ್ಪಂದಕ್ಕೆ ಸಹಿ ಹಾಕಿ, ಕರ್ನಾಟಕದ ಕೈಗಾರಿಕಾ ಅಭಿವೃದ್ಧಿಗೆ ಕೈಜೋಡಿಸಿರುವುದು ಸ್ವಾಗತಾರ್ಹ ಬೆಳವಣಿಗೆ ಆಗಿದೆʼ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕೈಗಾರಿಕೆಗಳ ಸ್ಥಾಪನೆಗೆ ಕರ್ನಾಟಕದಲ್ಲಿ ಇರುವ ಪೂರಕ ಪರಿಸರ ಹಾಗೂ ಬಂಡವಾಳ ಹೂಡಿಕೆಗೆ ಕರ್ನಾಟಕವು ಅಚ್ಚುಮೆಚ್ಚಿನ ತಾಣವಾಗಿರುವುದನ್ನು ರೋಡ್‌ಷೋನಲ್ಲಿ ಮನವರಿಕೆ ಮಾಡಿಕೊಡಲಾಯಿತು. ಭಾರತದಲ್ಲಿ ಪ್ರಮುಖ ಆವಿಷ್ಕಾರ ಕೇಂದ್ರವಾಗಿರುವ ಕರ್ನಾಟಕವು ರೋಡ್‌ಷೋದಲ್ಲಿ ಕೊರಿಯಾದ ಉದ್ಯಮಿಗಳ ಗಮನ ಸೆಳೆಯುವಲ್ಲಿ ಸಫಲವಾಯಿತು.
ದಕ್ಷಿಣ ಕೊರಿಯಾದಲ್ಲಿನ ಭಾರತೀಯ ವಾಣಿಜ್ಯೋದ್ಯಮ ಮಹಾಸಂಘದ (ಐಸಿಸಿಕೆ) ಸಹಯೋಗದಲ್ಲಿ ಈ ರೋಡ್‌ಷೋ ಏರ್ಪಡಿಸಲಾಗಿತ್ತು. ಸಚಿವರ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗವು, ಬಂಡವಾಳ ಹೂಡಿಕೆ ಮತ್ತು ಕೈಗಾರಿಕೆಗಳ ವಿಸ್ತರಣೆಗೆ ಕೊರಿಯಾದ ಕಂಪನಿಗಳಿಗೆ ಕರ್ನಾಟಕದಲ್ಲಿ ಇರುವ ಅವಕಾಶಗಳನ್ನು ಮನವರಿಕೆ ಮಾಡಿಕೊಟ್ಟಿತು. ರಾಜ್ಯಕ್ಕೆ ಬಂಡವಾಳ ಆಕರ್ಷಿಸಲು ಉನ್ನತ ಮಟ್ಟದ ನಿಯೋಗವು ದಕ್ಷಿಣ ಕೊರಿಯಾಕ್ಕೆ 5 ದಿನಗಳ ಭೇಟಿ ನೀಡುತ್ತಿದೆ.
ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಆಯುಕ್ತರಾದ ಶ್ರೀಮತಿ ಗುಂಜನ್‌ ಕೃಷ್ಣ ಅವರು ರೋಡ್‌ಷೋನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶದ ಬಗ್ಗೆ ಮಾಹಿತಿ ನೀಡಿದರು. ಈ ರೋಡ್‌ಷೋನಲ್ಲಿ ದಕ್ಷಿಣ ಕೊರಿಯಾದ 45ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಂಡಿದ್ದವು. ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸುವ ಬಗ್ಗೆ ಆಸಕ್ತಿ ಪ್ರದರ್ಶಿಸಿದವು.

ಒಪ್ಪಂದಗಳಿಗೆ ಅಂಕಿತ: ಮಷಿನ್‌ಟೂಲ್ಸ್‌ ಮತ್ತು ಕೈಗಾರಿಕಾ ಯಂತ್ರೋಪಕರಣ ತಯಾರಿಕಾ ಕಂಪನಿ ಡಿಎನ್‌ ಸೊಲುಷನ್ಸ್‌, ರಾಜ್ಯದಲ್ಲಿ ತನ್ನ ತಯಾರಿಕಾ ಘಟಕ ಸ್ಥಾಪಿಸಲು ₹ 1,000 ಕೋಟಿ ಮೊತ್ತದ ಬಂಡವಾಳ ಹೂಡಿಕೆಗೆ ರಾಜ್ಯ ಸರ್ಕಾರದ ಜೊತೆ ಒಪ್ಪಂದಕ್ಕೆ ಸಹಿ ಹಾಕಿತು. ಕಂಪನಿಯ ಅಧ್ಯಕ್ಷ ಸಂಘುನ್‌ ಕಿಮ್‌ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್‌. ಸೆಲ್ವಕುಮಾರ್‌ ಅವರು ಒಪ್ಪಂದಕ್ಕೆ ಸಹಿ ಹಾಕಿದರು.
ಬೆಂಗಳೂರು ಬಳಿಯ ಮಾಹಿತಿ ತಂತ್ರಜ್ಞಾನ ಹೂಡಿಕೆ ಪ್ರದೇಶದಲ್ಲಿ (ಐಟಿಐಆರ್‌) ಈ ತಯಾರಿಕಾ ಘಟಕ ಅಸ್ತಿತ್ವಕ್ಕೆ ಬರಲಿದೆ.
ಅತ್ಯಾಧುನಿಕ ಎಲೆಕ್ಟ್ರಾನಿಕ್ಸ್‌ ಮತ್ತು ಮೆಕ್ಯಾನಿಕಲ್‌ ಬಿಡಿಭಾಗಗಳನ್ನು ತಯಾರಿಸುವ ಇಎಂಎನ್‌ಐ ಕಂಪನಿಯು ಬ್ಯಾಟರಿಕೋಶಗಳ ದಾಸ್ತಾನು ಹಾಗೂ ಬ್ಯಾಟರಿಕೋಶಗಳ ಮರುಬಳಕೆ ಸಂಗ್ರಹಣಾ ಕೇಂದ್ರವನ್ನು ₹ 40 ಕೋಟಿ ವೆಚ್ಚದಲ್ಲಿ ನಿರ್ಮಿಸುವ ಒಪ್ಪಂದಕ್ಕೆ ರಾಜ್ಯ ಸರ್ಕಾರದ ಜೊತೆ ಸಹಿ ಹಾಕಿತು.
ಕೊರಿಯಾ ವಾಣಿಜ್ಯೋದ್ಯಮ ಮಹಾಸಂಘದ (ಕೆಸಿಸಿಐ) ಪದಾಧಿಕಾರಿಗಳ ಜೊತೆಗೂ ನಿಯೋಗವು ಸಮಾಲೋಚನೆ ನಡೆಸಿತು.

Tags: BJPCongress Partymbpatilಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

MUDA ಹಗರಣಕ್ಕೂ ನನಗೂ ಸಂಬಂಧ ಇಲ್ಲ : ಸಿಎಂ ಪುತ್ರ ಯತೀಂದ್ರ ಸ್ಪಷ್ಟನೆ

Next Post

ಗೋಪಿನಾಥ ಬೆಟ್ಟದಲ್ಲಿ ನೆರವೇರಿತು ಧರ್ಮ ಕೀರ್ತಿರಾಜ್ ಅಭಿನಯದ ನೂತನ ಚಿತ್ರದ ಮುಹೂರ್ತ .

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ .

June 18, 2025
Next Post
ಗೋಪಿನಾಥ ಬೆಟ್ಟದಲ್ಲಿ ನೆರವೇರಿತು ಧರ್ಮ ಕೀರ್ತಿರಾಜ್ ಅಭಿನಯದ ನೂತನ ಚಿತ್ರದ ಮುಹೂರ್ತ .

ಗೋಪಿನಾಥ ಬೆಟ್ಟದಲ್ಲಿ ನೆರವೇರಿತು ಧರ್ಮ ಕೀರ್ತಿರಾಜ್ ಅಭಿನಯದ ನೂತನ ಚಿತ್ರದ ಮುಹೂರ್ತ .

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada