ಶಬರಿಮಲೆ ಯಾತ್ರೆಗೆ ಮಾಲೆಧರಿಸಿ ತೆರಳಿದ್ದ ಬಾಲಕಿಯೊಬ್ಬಳು ಸಾವನ್ನಪ್ಪಿದ್ದಾಳೆ. ತಮಿಳುನಾಡಿನ ಪದ್ಮಶ್ರೀ(೧೨) ಮೃತಪಟ್ಟ ಬಾಲಕಿಯಾಗಿದ್ದು, ಈಕೆ ತನ್ನ ಕುಟುಂಬಸ್ಥರೊಂದಿಗೆ ಅಯ್ಯಪ್ಪ ಮಾಲೆ ಧರಿಸಿ ಯಾತ್ರೆಗೆ ತೆರಳಿದ್ದಳು. ಆದರೆ ನಿನ್ನೆ ಅಪ್ಪಚ್ಚಿಮೇಡು ತಲುಪಿದ್ದಾಗ ಆಕೆ ಅಲ್ಲಿಯೇ ಕುಸಿದುಬಿದ್ದಿದ್ದಾಳೆ.
ತೀವ್ರ ಉಸಿರಾಟದ ತೊಂದರೆಯಿಂದಾಗಿ ಅಸ್ವಸ್ಥಳಾಗಿದ್ದ ಆಕೆಯನ್ನು ಅಪ್ಪಚ್ಚಿಮೇಡು ಹೃದ್ರೋಗ ಚಿಕಿತ್ಸಾ ಕೇಂದ್ರಕ್ಕೆ ಕರೆದೊಯ್ಯಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾಳೆ.