ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕಾಂಗ್ರೆಸ್ನ ಮಾಜಿ ಸಂಸದ ಸಜ್ಜನ್ ಕುಮಾರ್ (80) ಗುರುವಾರ ದೆಹಲಿಯಲ್ಲಿ ನಿಧನರಾದರು.

ತಿಹಾರ್ ಜೈಲಿನಲ್ಲಿದ್ದ ಅವರಿಗೆ ಆರೋಗ್ಯ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

1984ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಹತ್ಯೆಯ ಬಳಿಕ ದೇಶದ ಹಲವು ಭಾಗಗಳಲ್ಲಿ ಸಿಖ್ ವಿರೋಧಿ ದಂಗೆ ನಡೆದಿತ್ತು. ಈ ವೇಳೆ ದೆಹಲಿಯ ಪಾಲಂ ಕಾಲೋನಿ ಪ್ರದೇಶದಲ್ಲಿ ಐವರು ಸಾವನ್ನಪ್ಪಿದ ಪ್ರಕರಣದಲ್ಲಿ ಸಜ್ಜನ್ ಕುಮಾರ್ ತಪ್ಪಿತಸ್ಥರೆಂದು ನ್ಯಾಯಾಲಯ ತೀರ್ಪು ನೀಡಿತ್ತು. ಈ ಪ್ರಕರಣದಲ್ಲಿ ದೆಹಲಿ ಹೈಕೋರ್ಟ್ 2018ರ ಡಿಸೆಂಬರ್ 17ರಂದು ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದರ ಬಳಿಕ ಅವರು ತಿಹಾರ್ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದರು.







