ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಅವರ ಹತ್ಯೆಗೈದ ಇಬ್ಬರು ಆರೋಪಿಗಳಿಗೆ ಹುಬ್ಬಳ್ಳಿಯ 1ನೇ ಜೆಎಂಎಫ್ ಸಿ ನ್ಯಾಯಾಲಯ ೬ ದಿನ ಪೊಲೀಸ್ ವಶಕ್ಕೆ ನೀಡಿದೆ.
ಮಂಗಳವಾರ ಮಧ್ಯಾಹ್ನ ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಚಂದ್ರಶೇಖರ್ ಗುರೂಜಿ ಅವರನ್ನು ಇರಿದು ಅವರ ಮಾಜಿ ಉದ್ಯೋಗಿಗಳಾಗಿದ್ದ ಮಹಾಂತೇಶ್ ಮತ್ತು ಮಂಜುನಾಥ್ ಹತ್ಯೆಗೈದಿದ್ದರು.
ಹತ್ಯೆಗೈದ 4 ಗಂಟೆಯಲ್ಲಿ ಬೆಳಗಾವಿ ರಸ್ತೆಯಲ್ಲಿ ಬಂಧನಕ್ಕೊಳಗಾಗಿದ್ದ ಮಹಾಂತೇಶ್ ಮತ್ತು ಮಂಜುನಾಥ್ ಅವರನ್ನು ಗುರುವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, 6 ದಿನಗಳ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.