• Home
  • About Us
  • ಕರ್ನಾಟಕ
Sunday, December 14, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಆದಾಯ ತೆರಿಗೆ ರೀಫಂಡ್‌ ಸೇರಿಸಿದ್ದಕ್ಕೆ ವಿಪಕ್ಷಗಳ ಆಕ್ರೋಶ

by
May 15, 2020
in ದೇಶ
0
20 ಲಕ್ಷ ಕೋಟಿ ಪ್ಯಾಕೇಜ್‌ನಲ್ಲಿ ಆದಾಯ ತೆರಿಗೆ ರೀಫಂಡ್‌ ಸೇರಿಸಿದ್ದಕ್ಕೆ ವಿಪಕ್ಷಗಳ ಆಕ್ರೋಶ
Share on WhatsAppShare on FacebookShare on Telegram

ಕೋವಿಡ್‌-19 ಸೋಂಕಿನ ವಿರುದ್ದ ಹೋರಾಡಲು ಇಡೀ ದೇಶವೇ ಒಂದಾಗಿದೆ. ವಾಣಿಜ್ಯ ವಹಿವಾಟು ನೆಲಕಚ್ಚಿದ್ದು ದೇಶದ ಜಿಡಿಪಿ ಶೂನ್ಯದತ್ತ ಸಾಗುತ್ತಿದೆ. ಇಡೀ ದೇಶದ ಬಡವರು ಮತ್ತು ಮದ್ಯಮ ವರ್ಗದವರು ತೀರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಮಯದಲ್ಲಿ ಸರ್ಕಾರ ಅನಿವಾರ್ಯವಾಗಿ ಜನರ ನೆರವಿಗೆ ಧಾವಿಸಲೇಬೇಕಿತ್ತು. ಅದರಂತೆ ಪ್ರಧಾನ ಮಂತ್ರಿ ನರೇಂಧ್ರ ಮೋದಿ ಅವರು ಒಟ್ಟು 20 ಲಕ್ಷ ರೂಪಾಯಿಗಳ ಪ್ಯಾಕೇಜ್‌ ಘೋಷಿಸಿದ್ದಾರೆ. ಈ ರೀತಿ ಪ್ಯಾಕೇಜ್‌ ಘೋಷಣೆ ಕೇಂದ್ರದ ಎನ್‌ಡಿಎ ಸರ್ಕಾರಕ್ಕೆ ಹೊಸತೇನಲ್ಲ. ಈ ಹಿಂದೆ ಕೂಡ ವರ್ಷಕ್ಕೆ 20 ಲಕ್ಷ ಕೋಟಿ ರೂಪಾಯಿಗಳಂತೆ 5 ವರ್ಷಗಳವರೆಗೆ ಒಟ್ಟು ಒಂದು ಕೋಟಿ ಲಕ್ಷ ರೂಪಾಯಿಗಳ ಪ್ಯಾಕೇಜ್‌ನ್ನೂ ಘೋಷಣೆ ಮಾಡಲಾಗಿತ್ತು. ಆದರೆ ಇದರಲ್ಲಿ ಎಷ್ಟು ಅನುಷ್ಠಾನ ಆಯ್ತೋ ಎಂಬ ಬಗ್ಗೆ ಸರ್ಕಾರ ಮಾಹಿತಿ ಬಿಡುಗಡೆ ಮಾಡಿಲ್ಲ.

ಬುಧವಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಪ್ರಕಟಿಸಿದ 20 ಲಕ್ಷ ಕೋಟಿ ಪ್ಯಾಕೇಜಿನ ವಿವರಗಳಲ್ಲಿ ವಿಸ್ತೃತ ಮಾಹಿತಿ ಇರಲಿಲ್ಲ. ಹಾಗಾಗಿ ಇನ್ನೂ ಹೆಚ್ಚಿನ ಮಾಹಿತಿ ನೀಡುವುದಕ್ಕೆ ಗುರುವಾರ ಸಂಜೆಯೂ ಪತ್ರಿಕಾಗೋಷ್ಠಿ ಕರೆದು ಮಾಹಿತಿ ನೀಡಿದ್ದಾರೆ. ನಿರ್ಮಲಾ ಅವರು ಮಾತನಾಡುತ್ತಾ, ದೇಶಕ್ಕೆ ಲಾಕ್‌ ಡೌನ್‌ ಘೋಷಿಸಿದ ಕೆಲವೇ ಘಂಟೆಗಳಲ್ಲಿ ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ್‌ ಪ್ಯಾಕೇಜನ್ನು ಕೂಡ ಘೋಷಿಸಲಾಯಿತು ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ ಪಡಿತರ ಕಾರ್ಡ್‌ ರಹಿತರಿಗೆ ಪಡಿತರವನ್ನೂ ಸರಬರಾಜು ಮಾಡಲಾಗಿದ್ದು ಉಜ್ವಲ ಅನಿಲ ಯೋಜನೆಯ ಮೂಲಕ ಅನಿಲ ಸಂಪರ್ಕಗಳನ್ನೂ ತ್ವರಿತವಾಗಿ ನೀಡಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ ಜನ ಧನ್‌ ಖಾತೆಗಳಿಗೆ ನೇರ ನಗದು ವರ್ಗಾವಣೆ ಮಾಡಲಾದ ಬಗ್ಗೆಯೂ ಹೇಳಿದ್ದಾರೆ.

ಅಲ್ಲದೆ ಆದಾಯ ತೆರಿಗೆದಾರರಿಗೆ 18 ಸಾವಿರ ಕೋಟಿ ರೂಪಾಯಿ ಹಣವನ್ನು ರೀಫಂಡ್‌ ಮಾಡಿರುವುದರಿಂದ ದೇಶದ 14 ಲಕ್ಷ ತೆರಿಗೆದಾರರು ಲಾಭ ಪಡೆದಿದ್ದಾರೆ ಎಂದು ಅವರು ಒತ್ತಿ ಹೇಳಿದ್ದಾರೆ. ಆದರೆ ಆದಾಯ ತೆರಿಗೆ ರೀಫಂಡ್‌ ಮಾಡಿದ ಹಣವನ್ನೂ ಕೂಡ ಪ್ಯಾಕೇಜ್‌ ನಲ್ಲಿ ಸೇರಿಸಿಕೊಂಡಿರುವುದಕ್ಕೆ ಪ್ರತಿಪಕ್ಷಗಳ ನಾಯಕರು ಮತ್ತು ಸೋಷಿಯಲ್‌ ಮೀಡಿಯಾ ಬಳಕೆದಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏಕೆಂದರೆ ಈ ರೀಫಂಡ್‌ ಹಣವು ವಿಶೇಷ ಪ್ಯಾಕೇಜ್‌ ಘೋಷಣೆ ಮಾಡದೇ ಇದ್ದರೂ ಕೂಡ ತೆರಿಗೆದಾರರಿಗೆ ನೀಡಲೇ ಬೇಕಾಗಿದ್ದ ಹಣವಾಗಿತ್ತು.

ಈ ಕುರಿತು ಟ್ವೀಟ್‌ ಮಾಡಿರುವ ಸಿಪಿಎಂ ನ ನಾಯಕ ಸೀತಾರಾಮ್‌ ಯಚೂರಿ ಅವರು ರೀಫಂಡ್‌ ಮಾಡುತ್ತಿರುವುದು ಜನರ ಸ್ವಂತ ಹಣ . ಅದು ಸರ್ಕಾರದ ಹೊಣೆಯಾಗಿದ್ದು ಬಾಕಿ ಉಳಿಸಿಕೊಂಡಿದ್ದನ್ನು ಪಾವತಿ ಮಾಡಿದರೆ ಅದು ಹೇಗೆ ಪ್ಯಾಕೇಜ್‌ ಆಗುತ್ತದೆ ಎಂದು ಟೀಕಿಸಿದ್ದಾರೆ. ಕೇಂದ್ರದ ನರೇಂದ್ರ ಮೋದಿ ಸರ್ಕಾರದ ‘ಸುಂದರ ಪ್ಯಾಕೇಜ್‌’ ಇದು ಎಂದು ಟೀಕಿಸಿರುವ ಅವರು ರಾಜ್ಯ ಸರ್ಕಾರಗಳು ಇಂದು ಕೋವಿಡ್‌-19 ವಿರುದ್ದ ಹೋರಾಟದಲ್ಲಿ ಮುಂಚೂಣಿಯಲ್ಲಿವೆ. ರಾಜ್ಯ ಸರ್ಕಾರಗಳಿಗೆ ಕೋವಿಡ್‌ ವಿರುದ್ದ ಹೋರಾಟಕ್ಕೆ ಕೇಂದ್ರ ಯಾವುದೇ ಹಣ ನೀಡಿಲ್ಲ , ಜತೆಗೇ ರಾಜ್ಯಗಳಿಗೆ ನೀಡಬೇಕಾದ ಅವುಗಳ ಪಾಲಿನ ಹಣವನ್ನೂ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Will wait to see details of 'package'. We hope this money will go in the pockets of the poor and the hungry, not to help more defaulters. https://t.co/m6N6s3sfwM

— Sitaram Yechury (@SitaramYechury) May 12, 2020


ಸೋಷಿಯಲ್‌ ಮೀಡಿಯಾಗಳಲ್ಲೂ ಬಳಕೆದಾರರು ಸರ್ಕಾರವನ್ನು ಹಿಗ್ಗಾ ಮುಗ್ಗಾ ಜಾಡಿಸಿದ್ದಾರೆ. ಟ್ವಿಟರ್‌ ನಲ್ಲಿ ಜೈವೀರ್‌ ಶೇರ್ಗಿಲ್‌ ಎಂಬ ಬಳಕೆದಾರರು 20 ಲಕ್ಷ ಕೋಟಿ ಪ್ಯಾಕೇಜ್‌ ‘ಸಾಲ ಮಾರುಕಟ್ಟೆಯ ಬ್ರೋಚರ್’‌ ಎಂದು ಕರೆದಿದ್ದು ಇದು ಜನರನ್ನು ಅಪಾಯದಿಂದ ಪಾರು ಮಾಡುವ ರಿಲೀಫ್‌ ಪ್ಯಾಕೇಜ್‌ ಅಲ್ಲ ಎಂದಿದ್ದಾರೆ. ಈ ಪ್ಯಾಕೇಜ್‌ ಸಾಲವನ್ನು ಸೃಷ್ಟಿಸುತ್ತಿದೆಯೇ ಹೊರತು ಬೇಡಿಕೆಯನ್ನು ಸೃಷ್ಟಿಸುತ್ತಿಲ್ಲ , ತೆರಿಗೆ ರೀಫಂಡ್‌ ನ್ನೂ ಪ್ಯಾಕೇಜಿನಲ್ಲಿ ಸೇರಿಸಿಕೊಂಡಿರುವುದು ತಪ್ಪು ದಾರಿಗೆಳೆದಂತಾಗಿದೆ ಎಂದು ಹೇಳಿದ್ದಾರೆ.

₹20Lac Cr Package announced by FM is a “Loans Marketing Brochure” rather than a “Relief Oriented Rescue Plan”; Focus of package is “debt creation” & not “demand creation”-clearing of receivables & tax refunds is not stimulus-Govt misleading by Repackaging loans & dues as Relief

— Jaiveer Shergill (@JaiveerShergill) May 13, 2020


ಅತುಲ್‌ ಎಂಬ ಟ್ವಿಟರ್‌ ಬಳಕೆದಾರರು ತೆರಿಗೆ ರೀಫಂಡ್‌ ನ್ನೂ ಸೇರಿಸಿಕೊಂಡಿರುವುದಕ್ಕೆ ʼಮಾಸ್ಟರ್‌ ಸ್ಟ್ರೋಕ್‌ ʼಎಂದು ವ್ಯಂಗವಾಡಿದ್ದಾರೆ. ಹಿರಿಯ ವಕೀಲ ಪ್ರಶಾಂತ್‌ ಭೂಷಣ್‌ ಅವರು ಟ್ವಿಟರ್‌ ನಲ್ಲಿ ಪ್ರತಿಕ್ರಿಯಿಸಿ ಕಾರ್ಮಿಕರಿಗೆ ಏನೂ ಕೊಟ್ಟಿಲ್ಲ, ಕಾರ್ಮಿಕ ಕಾಯ್ದೆಯ ಸುಧಾರಣೆಯ ನೆಪದಲ್ಲಿ ಗರಿಷ್ಟ ಕೆಲಸ ಮತ್ತು ಕನಿಷ್ಟ ವೇತನ ನೀಡಲು ಸಿದ್ದತೆ ಮಾಡಿದ್ದಾರೆ ಎಂದು ಟೀಕಿಸಿದ್ದಾರೆ.

So PM's 8pm was about a new slogan: 'Self reliant India'. Promises of a 20LCr package& new Lockdown rules. Let us wait& see if there are substantial cash transfers to the poor or if most of the 20LCr is by way of tax holidays to corporates. And if 'Reforms'are to drop Labour laws

— Prashant Bhushan (@pbhushan1) May 12, 2020


ADVERTISEMENT

ಗುರುವಾರವೂ 20 ಲಕ್ಷ ಕೋಟಿ ಪ್ಯಾಕೇಜ್ ಬಗ್ಗೆ ವಿವರ ನೀಡಿದ ನಿರ್ಮಲಾ ಸೀತಾರಾಮನ್ ಅವರು ಸಣ್ಣ , ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ವಲಯಕ್ಕೆ ಯಾವುದೇ ಭದ್ರತೆ ಇಲ್ಲದೆ 3 ಲಕ್ಷ ಕೋಟಿ ರೂಪಾಯಿ ಸಾಲ ನೀಡುವುದಾಗಿ ಪ್ರಕಟಿಸಿದ್ದಾರೆ. ಸಾಲ ಮರು ಪಾವತಿಗೆ ನಾಲ್ಕು ವರ್ಷಗಳ ಅವಧಿ ನೀಡಲಾಗಿದ್ದು ಮೊದಲ 12 ತಿಂಗಳು ಸಾಲ ಮರು ಪಾವತಿ ಕಂತಿಗೆ ವಿನಾಯ್ತಿ ನೀಡಲಾಗಿದೆ ಎಂದರು. ಇದರಿಂದ ದೇಶದ ಎರಡು ಲಕ್ಷ ಎಮ್‍ಎಸ್‍ಎಮ್‍ಇ ಘಟಕಗಳು ಪ್ರಯೋಜನ ಪಡೆಯಲಿವೆ ಎಂದರು. ಸ್ವದೇಶಿ ಕಂಪೆನಿಗಳಿಗೆ ಒತ್ತು ನೀಡಲು 200 ಕೋಟಿ ರೂಪಾಯಿಗಳವರೆಗಿನ ಖರೀದಿ ಪ್ರಕ್ರಿಯೆಯಲ್ಲಿ ಜಾಗತಿಕ ಟೆಂಡರ್ ಕೈಬಿಡುವುದಾಗಿಯೂ ಪ್ರಕಟಿಸಿದರು. ಸುಮಾರು 72.5 ಲಕ್ಷ ಕಾರ್ಮಿಕರಿಗೆ ಜೂನ್ ನಿಂದ ಆಗಸ್ಟ್ ವರೆಗಿನ 3 ತಿಂಗಳ ಭವಿಷ್ಯ ನಿಧಿಯನ್ನು ಕೇಂದ್ರ ಸರ್ಕಾರ ಪಾವತಿಸಲಿದೆ ಎಂದೂ ಅವರು ಹೇಳಿದ್ದಾರೆ. ಹಣಕಾಸು ಸಚಿವರು ಏನೇ ಘೋಷಣೆ ಮಾಡಿದ್ದರೂ ಇವೆಲ್ಲವೂ ಅನುಷ್ಠಾನವಾದಾಗ ಮಾತ್ರ ನಂಬಬಹುದು.

Tags: ‌ ಪ್ರಧಾನಿ ಮೋದಿaatmanirbhar bharathCovid 19income taxPM Modiಆತ್ಮನಿರ್ಭರ ಭಾರತಆದಾಯ ತೆರಿಗೆಕೋವಿಡ್-19
Previous Post

ಶಿವಮೊಗ್ಗದಲ್ಲಿ ಆತಂಕ ಹುಟ್ಟಿಸಿದ ಹೊಸ ಪ್ರಕರಣ: P-995 ಹಿಸ್ಟರಿ ಮಿಸ್ಟರಿ ಏನು?

Next Post

ʼದಿ ವೈರ್ʼ‌ ಸಂಪಾದಕ ಸಿದ್ದಾರ್ಥ್‌ ವರದರಾಜನ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಅಲಹಾಬಾದ್‌ ಕೋರ್ಟ್‌

Related Posts

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ
Top Story

ಮೇಕೆದಾಟು ಯೋಜನೆ ತಡೆಯಿರಿ: ಕ್ಯಾತೆ ತೆಗೆದ ಎಐಎಡಿಎಂಕೆ ಪಳನಿಸ್ವಾಮಿ

by ಪ್ರತಿಧ್ವನಿ
December 13, 2025
0

ಬೆಂಗಳೂರು : ರಾಜ್ಯದ ಮಹತ್ವಾಕಾಂಕ್ಷೆಯ ಮೇಕೆದಾಟು(Mekedatu) ಸಮತೋಲಿತ ಜಲಾನಯನ ಯೋಜನೆಯ ತ್ವರಿತ ಅನುಷ್ಠಾನಕ್ಕಾಗಿ ಕೆಇಆರ್‌ಎಸ್(KERS) ನಿರ್ದೇಶಕರ ನೇತೃತ್ವದಲ್ಲಿ ಹೊಸ ತಂಡ ರಚಿಸಿ, ಯೋಜನೆ ಕಾರ್ಯಾನುಷ್ಠಾನಕ್ಕೆ ರಾಜ್ಯ ಸರ್ಕಾರ...

Read moreDetails
ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

ಲೆಜೆಂಡ್‌ ಮೆಸ್ಸಿ ನೋಡಲು ಬಂದ ಫ್ಯಾನ್ಸ್‌ಗೆ ನಿರಾಸೆ: ಕ್ರೀಡಾಂಗಣಕ್ಕೆ ನುಗ್ಗಿ ಆಕ್ರೋಶ

December 13, 2025

ಆರ್.ಡಿ.ಪಿ.ಆರ್ ಅಧಿಕಾರಿಗಳಿಗೆ ಹೈಕೋರ್ಟಿನಲ್ಲಿ ಐತಿಹಾಸಿಕ ನ್ಯಾಯ: ಪ್ರಿಯಾಂಕ್ ಖರ್ಗೆ

December 12, 2025
ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

ಮತ್ತೆ ಹೋರಾಟ ಘೋಷಿಸಿದ ಅಣ್ಣಾ ಹಜಾರೆ

December 12, 2025

ನಾನು ಯಾವುದೇ ಬಲ ಪ್ರದರ್ಶನ ಮಾಡುತ್ತಿಲ್ಲ, ಅದರ ಅವಶ್ಯಕತೆಯೂ ನನಗಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

December 12, 2025
Next Post
ʼದಿ ವೈರ್ʼ‌ ಸಂಪಾದಕ ಸಿದ್ದಾರ್ಥ್‌ ವರದರಾಜನ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಅಲಹಾಬಾದ್‌ ಕೋರ್ಟ್‌

ʼದಿ ವೈರ್ʼ‌ ಸಂಪಾದಕ ಸಿದ್ದಾರ್ಥ್‌ ವರದರಾಜನ್‌ಗೆ ನಿರೀಕ್ಷಣಾ ಜಾಮೀನು ನೀಡಿದ ಅಲಹಾಬಾದ್‌ ಕೋರ್ಟ್‌

Please login to join discussion

Recent News

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!
Top Story

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

by ಪ್ರತಿಧ್ವನಿ
December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”
Top Story

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

by ಪ್ರತಿಧ್ವನಿ
December 13, 2025
ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato
Top Story

ಸಂಗೀತಗಾರ ರಿಕಿ ಕೇಜ್ ಮನೆಯಲ್ಲಿ ಕಳ್ಳತನ: ತಕ್ಷಣವೇ ಪ್ರತಿಕ್ರಿಯಿಸಿದ Zomato

by ಪ್ರತಿಧ್ವನಿ
December 13, 2025
ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ
Top Story

ಬೆಂಗಳೂರಿಗೆ 2ನೇ ಏರ್‌ಪೋರ್ಟ್‌ ಖಚಿತ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಕರೆದ ಸರ್ಕಾರ

by ಪ್ರತಿಧ್ವನಿ
December 13, 2025
ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ
Top Story

ಯಾರ ಬೆದರಿಕೆಗೂ ಬಗ್ಗಲ್ಲ: ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ ಖಜಾಂಚಿಗೆ ಡಿಕೆಶಿ ಎಚ್ಚರಿಕೆ

by ಪ್ರತಿಧ್ವನಿ
December 13, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

Daily Horoscope: ಇಂದು ಸುಖ-ಸಂಪತ್ತು ಹೆಚ್ಚಾಗುವ ರಾಶಿಗಳಿವು..!

December 14, 2025
“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

“ಯಾವ ಇಕ್ಬಾಲ್ ಹುಸೇನ್ ಮಾತನ್ನು ನಂಬಬೇಡಿ, ಆತ ಚಟಕ್ಕೆ ಮಾತನಾಡುತ್ತಾನೆ”

December 13, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada