• Home
  • About Us
  • ಕರ್ನಾಟಕ
Tuesday, December 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

MB Patil: ಕೇನ್ಸ್ ಟೆಕ್ನಾಲಜೀಸ್ ವಿಸ್ತರಣೆಗೆ ಚಾಮರಾಜನಗರದಲ್ಲಿ 20 ಎಕರೆ ಭೂಮಿ: ಎಂ ಬಿ ಪಾಟೀಲ

ವಿಜಯಪುರದ ಮುಳವಾಡದಲ್ಲಿ ಪಿಸಿಬಿ ಘಟಕ ಸ್ಥಾಪಿಸಲು ಕೇನ್ಸ್ ಕಂಪನಿಗೆ ಮನವಿ ಮಾಡಿದ ಸಚಿವರು

ಪ್ರತಿಧ್ವನಿ by ಪ್ರತಿಧ್ವನಿ
October 29, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ADVERTISEMENT

ಇಲ್ಲಿನ ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಕೇನ್ಸ್ ಟೆಕ್ನಾಲಜೀಸ್ ಮತ್ತು ಸೈಯಂಟ್ ಡಿ.ಎಲ್.ಎಂ ಕಂಪನಿಗಳಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರು, ಕರ್ನಾಟಕದಲ್ಲಿ ಹೂಡಿಕೆ ವಿಸ್ತರಣೆ ಮಾಡುವಂತೆ ಕೋರಿದರಲ್ಲದೆ, ಇದಕ್ಕೆ ಬೇಕಾದ ಭೂಮಿ ಮತ್ತಿತರ ಸೌಲಭ್ಯಗಳನ್ನು ಕ್ಷಿಪ್ರಗತಿಯಲ್ಲಿ ಒದಗಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, `ಎಲೆಕ್ಟ್ರಾನಿಕ್ಸ್ ಉತ್ಪನ್ನಗಳ ಉತ್ಪಾದನೆಗೆ ಹೆಸರಾಗಿರುವ ಕೇನ್ಸ್ ಟೆಕ್ನಾಲಜೀಸ್ ಕಂಪನಿಯು ಚಾಮರಾಜನಗರದಲ್ಲಿ ತನ್ನ ಘಟಕವನ್ನು ವಿಸ್ತರಿಸಲು 20 ಎಕರೆ ಭೂಮಿ ಕೇಳಿದೆ. ಈಗ ಅಲ್ಲಿ ಕಂಪನಿಗೆ ಹೊಂದಿಕೊಂಡಿರುವ ಭೂಮಿಯು ಕೃಷಿಯೇತರ ಉದ್ದೇಶಕ್ಕೆ ಮೀಸಲಾಗಿದೆ. ಇದನ್ನು ಬಗೆಹರಿಸಿ ಕಂಪನಿಗೆ ಭೂಮಿ ಕೊಡಲಾಗುವುದು. ಏಳು ರಾಜ್ಯಗಳಲ್ಲಿ ಅಸ್ತಿತ್ವ ಹೊಂದಿರುವ ಕಂಪನಿಯು ಕರ್ನಾಟಕದಲ್ಲಿ ಮತ್ತಷ್ಟು ಹೂಡಿಕೆ ಮಾಡಬೇಕು. ಚಾಮರಾಜನಗರದಲ್ಲಿ ಕಂಪನಿಯು ಮುಂದಿನ ವರ್ಷದ ವೇಳೆಗೆ ಒಟ್ಟು 1,500 ಕೋಟಿ ರೂ. ಹೂಡಿಕೆಯಾದಂತಾಗಲಿದೆ. ಜತೆಗೆ 3 ಸಾವಿರ ಜನ ಉಳಿದುಕೊಳ್ಳುವಂಥ ಹಾಸ್ವೆಲ್ ನಿರ್ಮಿಸಲಿದೆ’ ಎಂದಿದ್ದಾರೆ.

ಕೇನ್ಸ್ ಕಂಪನಿಯು 1988ರಲ್ಲಿ ಸ್ಥಾಪನೆಯಾದ ದಿನದಿಂದಲೂ ಮೈಸೂರನ್ನು ಕೇಂದ್ರ ಕಚೇರಿಯಾಗಿ ಹೊಂದಿದೆ. 70 ಜನರಿಂದ ಆರಂಭವಾದ ಚಾಮರಾಜನಗರ ಘಟಕದಲ್ಲಿ ಈಗ 700 ಉದ್ಯೋಗಿಗಳಾಗಿದ್ದಾರೆ. ಕಂಪನಿಯು ತನ್ನ ಉತ್ಪನ್ನಗಳನ್ನು ರೈಲ್ವೇಸ್, ಐಒಟಿ, ಐಟಿ, ವೈದ್ಯಕೀಯ, ಆಟೋಮೋಟೀವ್, ಏರೋಸ್ಪೇಸ್ ಮತ್ತು ರಕ್ಷಣಾ ವಲಯಗಳಿಗೆ ಸಮರ್ಥವಾಗಿ ಪೂರೈಸುತ್ತಿದೆ. ಕಂಪನಿಯು ಒಟ್ಟಾರೆಯಾಗಿ 1,500 ಉದ್ಯೋಗಿಗಳನ್ನು ಹೊಂದಿದ್ದು, 3 ಖಂಡಗಳ 26 ದೇಶಗಳಲ್ಲಿ 250ಕ್ಕೂ ಹೆಚ್ಚು ಗ್ರಾಹಕ ಸಂಸ್ಥೆಗಳ ಜಾಲವನ್ನು ಹೊಂದಿದೆ ಎಂದು ಅವರು ತಿಳಿಸಿದ್ದಾರೆ.

ಮುಳುವಾಡದಲ್ಲೂ ಸ್ಥಾಪಿಸಲು ಮನವಿ

ಈ ಭೇಟಿಯ ಸಂದರ್ಭದಲ್ಲಿ ಸಚಿವರು, ಪಿಸಿಬಿ ತಯಾರಿಸುವ ಕೇನ್ಸ್ ಕಂಪನಿಯು ವಿಜಯಪುರದ ಮುಳವಾಡ ಕೈಗಾರಿಕಾ ಪ್ರದೇಶದಲ್ಲಿ ಕೂಡ ಒಂದು ಪಿಸಿಬಿ ಉತ್ಪಾದನಾ ಘಟಕ ಸ್ಥಾಪಿಸಬೇಕು; ಅಲ್ಲಿ ವಿದ್ಯುತ್ ಮತ್ತು ನೀರಿಗೆ ಯಾವ ಕೊರತೆಯೂ ಇಲ್ಲ. ಇದರಿಂದ ಕೈಗಾರಿಕಾ ವಿಕೇಂದ್ರೀಕರಣವನ್ನು ಕೂಡ ಸಾಧಿಸಿದಂತಾಗುತ್ತದೆ ಎಂದು ಮನವಿ ಮಾಡಿಕೊಂಡರು. ಜತೆಗೆ ಕೆಜಿಎಫ್ ನಲ್ಲಿ ಕೂಡ ಕೈಗಾರಿಕೆಗೆ ಭೂಮಿ ಲಭ್ಯವಿದೆ. ಕೇನ್ಸ್ ಕಂಪನಿ ಅಲ್ಲೂ ಘಟಕ ಸ್ಥಾಪಿಸಲು ಮನಸ್ಸು ಮಾಡಬೇಕು ಎಂದು ಸಚಿವರು ಪ್ರಸ್ತಾಪಿಸಿದರು.

ಕೇನ್ಸ್ ಟೆಕ್ನಾಲಜೀಸ್ ಕಾರ್ಯ ನಿರ್ವಾಹಕ ಉಪಾಧ್ಯಕ್ಷ ರಮೇಶ್ ಆರ್ ಕಣ್ಣನ್, ಅಧ್ಯಕ್ಷೆ ಸವಿತಾ ರಮೇಶ್, ನಿರ್ದೇಶಕ ಜಯರಾಂ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸೈಯಂಟ್ ಕಂಪನಿಗೂ ಭೇಟಿ

ಇದೇ ಸಂದರ್ಭದಲ್ಲಿ ಸಚಿವರು ಮತ್ತೊಂದು ಎಲೆಕ್ಟ್ರಾನಿಕ್ ಉತ್ಪನ್ನಗಳ ಕಂಪನಿಯಾದ ಸೈಯಂಟ್ ಗೂ ಭೇಟಿ ನೀಡಿ, ಅಲ್ಲಿಯ ಸೌಲಭ್ಯಗಳನ್ನು ವೀಕ್ಷಿಸಿದರು. ಕಂಪನಿಯ ಉನ್ನತಾಧಿಕಾರಿಗಳು ಕಂಪನಿಯು ಮಾಡುತ್ತಿರುವ ಉನ್ನತ ಮಟ್ಟದ ವಿನ್ಯಾಸ, ಡಿಜಿಟಲ್ ಟ್ವಿನ್ ಕ್ರಿಯೇಷನ್, ದೀರ್ಘಾವಧಿ ತಾಂತ್ರಿಕ ಸಹಭಾಗಿತ್ವ ಇತ್ಯಾದಿಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು. ಕಂಪನಿಯ ಸಿಎಫ್ಒ ಆರ್,ಸುಬ್ರಹ್ಮಣ್ಯನ್ ಉಪಸ್ಥಿತರಿದ್ದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತ ರಾದ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಎಂ.ಮಹೇಶ ಸೇರಿದಂತೆ ಇತರ ಅಧಿಕಾರಿಗಳು ಇದ್ದರು.

Tags: 60 seconds mb patilbm patilM B PatilMB Patilmb patil 60 secondsmb patil angrymb patil bhashanmb patil bijapurmb patil congressmb patil familymb patil fansmb patil housemb patil latestmb patil latest mewsmb patil latest newsmb patil meetingmb patil mlamb patil newsmb patil on yatnalmb patil press meetmb patil sonmb patil songmb patil speechmb patil supportersmb patil today newsmb patil videomb patil videosmbpatilMinister MB Patilyatnal vs mb patil
Previous Post

ಬಿಜೆಪಿ ನಾಯಕರಿಗೆ ಬೆಂಗಳೂರು ಅಭಿವೃದ್ಧಿ ಬಗ್ಗೆ ಕಾಳಜಿ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

MB Patil: ರಂಗಸನ್ಸ್ ಏರೋಸ್ಪೇಸ್ ನೂತನ ಕಚೇರಿಗೆ ಸಚಿವ ಎಂ ಬಿ ಪಾಟೀಲ ಚಾಲನೆ..!!

Related Posts

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
0

"ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್...

Read moreDetails

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

December 23, 2025

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

December 23, 2025
ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

ಹೊಸಕೋಟೆಗೆ ಬಿರಿಯಾನಿ ತಿನ್ನಲು ಹೋದವರ ಸುಲಿಗೆ..

December 23, 2025
Next Post

MB Patil: ರಂಗಸನ್ಸ್ ಏರೋಸ್ಪೇಸ್ ನೂತನ ಕಚೇರಿಗೆ ಸಚಿವ ಎಂ ಬಿ ಪಾಟೀಲ ಚಾಲನೆ..!!

Recent News

Top Story

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

by ಪ್ರತಿಧ್ವನಿ
December 23, 2025
Top Story

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

by ಪ್ರತಿಧ್ವನಿ
December 23, 2025
Top Story

ಜಾಮೀನು ಅರ್ಜಿ ವಜಾ: ಭೈರತಿ ಬಸವರಾಜುಗೆ ಬಂಧನದ ಭೀತಿ ಶುರು..

by ಪ್ರತಿಧ್ವನಿ
December 23, 2025
Top Story

ಜೀವರಕ್ಷಕ ಪ್ರಶಸ್ತಿ ಸ್ವೀಕರಿಸಿದ ಕಾರ್ಮಿಕ ಸಚಿವ ಸಂತೋಷ್‌ ಎಸ್‌ ಲಾಡ್‌

by ಪ್ರತಿಧ್ವನಿ
December 23, 2025
Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!
Top Story

Daily Horoscope: ಇಂದು ಈ ರಾಶಿಗಳ ಯಶಸ್ಸಿನ ಹಾದಿ ಸುಗಮ..!

by ಪ್ರತಿಧ್ವನಿ
December 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮನರೇಗಾ ಯೋಜನೆ ಹತ್ಯೆ ಮಾಡುತ್ತಿರುವ ಕೇಂದ್ರ : ಡಿಸಿಎಂ ಡಿ.ಕೆ.ಶಿವಕುಮಾರ್

December 23, 2025

ರೈತರ ಅಭಿವೃದ್ಧಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಹೆಚ್ಚು ಒತ್ತು ನೀಡಬೇಕು: ಎನ್. ಚಲುವರಾಯಸ್ವಾಮಿ.

December 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada