• Home
  • About Us
  • ಕರ್ನಾಟಕ
Thursday, July 10, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

2019ರಲ್ಲಿ SC, ST ಮೇಲಿನ ದೌರ್ಜನ್ಯಗಳಲ್ಲಿ ಕ್ರಮವಾಗಿ 7% ಹಾಗೂ 26% ರಷ್ಟು ಏರಿಕೆ: NCRB

by
October 1, 2020
in ದೇಶ
0
2019ರಲ್ಲಿ SC
Share on WhatsAppShare on FacebookShare on Telegram

ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ಪ್ರಕಟಿಸಿದ ವರದಿಯು ಪರಿಶಿಷ್ಟ ಜಾತಿ (SC) ಮತ್ತು ಪರಿಶಿಷ್ಟ ಪಂಗಡ (ST) ಮೇಲೆ ನಡೆದಿರುವ ಅಪರಾಧಗಳ ಪ್ರಮಾಣವು 2018 ಕ್ಕೆ ಹೋಲಿಸಿದರೆ 2019 ರಲ್ಲಿ ಕ್ರಮವಾಗಿ 7% ಮತ್ತು 26% ರಷ್ಟು ಹೆಚ್ಚಾಗಿದೆ ಎಂಬ ಆತಂಕಕಾರಿ ಅಂಶವನ್ನು ಹೊರಗೆಡವಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಪರಿಶಿಷ್ಟ ಜಾತಿಯವರ ವಿರುದ್ಧ ಅಪರಾಧ ಎಸಗಿದ್ದಕ್ಕಾಗಿ ಒಟ್ಟು 45,935 ಪ್ರಕರಣಗಳು ದಾಖಲಾಗಿದ್ದು, 2018 ಕ್ಕೆ ಹೋಲಿಸಿದರೆ 7.3% ಹೆಚ್ಚಳವಾಗಿದೆ, 2018ರಲ್ಲಿ ಪರಿಶಿಷ್ಟ ಜಾತಿಯವರ ವಿರುದ್ಧ ನಡೆದ ಅಪರಾಧಗಳ 42,793 ಪ್ರಕರಣಗಳು ದಾಖಲಾಗಿತ್ತು. ಇದರಲ್ಲಿ ಉತ್ತರ ಪ್ರದೇಶ ಒಂದರಲ್ಲೇ 11,829 ಪ್ರಕರಣಗಳು ದಾಖಲಾಗಿದ್ದು, 2019 ರಲ್ಲಿ ಎಸ್‌ಸಿಗಳ ವಿರುದ್ಧ ಅತಿ ಹೆಚ್ಚು ಅಪರಾಧಗಳು ದಾಖಲಾದ ರಾಜ್ಯವೆಂಬ ಕುಖ್ಯಾತಿಗೆ ಒಳಗಾಗಿದೆ. ನಂತರದ ಸ್ಥಾನವನ್ನು ರಾಜಸ್ಥಾನ ಹಾಗೂ ಬಿಹಾರ ಕ್ರಮವಾಗಿ ಪಡೆದುಕೊಂಡಿದೆ. ರಾಜಸ್ಥಾನದಲ್ಲಿ 6,794 ಮತ್ತು ಬಿಹಾರದಲ್ಲಿ 6,544 ಪ್ರಕರಣಗಳು ದಾಖಲಾಗಿವೆ ಎಂದು ವರದಿ ತಿಳಿಸಿದೆ.

Also Read: ಆದಿವಾಸಿ ಬುಡಕಟ್ಟು ಸಮುದಾಯಗಳ ಹಕ್ಕು, ಅಧಿಕಾರ, ಅಭಿವೃದ್ಧಿಯ ಒಳನೋಟ

ಅತ್ಯಾಚಾರ ಪ್ರಕರಣಗಳು

ಪರಿಶಿಷ್ಟ ಜಾತಿಗಳಿಗೆ ಸೇರಿದ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ 554 ಪ್ರಕರಣಗಳೊಂದಿಗೆ ರಾಜಸ್ಥಾನ ಅಗ್ರಸ್ಥಾನದಲ್ಲಿದ್ದರೆ, ಉತ್ತರ ಪ್ರದೇಶ 537 ಮತ್ತು ಮಧ್ಯಪ್ರದೇಶದದಲ್ಲಿ 510 ಪ್ರಕರಣಗಳಲ್ಲಿ ದಾಖಲಾಗಿವೆ.

Also Read: ಪರಿಶಿಷ್ಟ ಪಗಂಡದವರ ಜೀವಿತಾವಧಿ ಕುಸಿಯುತ್ತಿದೆ

ಪರಿಶಿಷ್ಟ ಪಂಗಡಗಳ ವಿರುದ್ಧ ಅಪರಾಧ ಎಸಗಿದ್ದಕ್ಕಾಗಿ 2019ರಲ್ಲಿ ಒಟ್ಟು 8,257 ಪ್ರಕರಣಗಳು ದಾಖಲಾಗಿದ್ದು, 2018 ಕ್ಕೆ ಹೋಲಿಸಿದರೆ 26.5% ಹೆಚ್ಚಳವಾಗಿದೆ, 2018 ರಲ್ಲಿ 6,528 ಪ್ರಕರಣಗಳು ದಾಖಲಾಗಿತ್ತು. ಮಧ್ಯಪ್ರದೇಶದಲ್ಲಿ ಪರಿಶಿಷ್ಟ ಪಂಗಡಗಳ ವಿರುದ್ಧ ಅಪರಾಧ ಎಸಗಿದ್ದಕ್ಕಾಗಿ 1,922 ಪ್ರಕರಣಗಳು ದಾಖಲಾಗಿದ್ದು (ಇದು ಅತಿ ಹೆಚ್ಚು), ರಾಜಸ್ಥಾನದಲ್ಲಿ 1,797 ಪ್ರಕರಣಗಳು ಮತ್ತು ಒಡಿಶಾದಲ್ಲಿ-576 ಪ್ರಕರಣಗಳು ದಾಖಲಾಗಿವೆ.

ಮಧ್ಯಪ್ರದೇಶದಲ್ಲಿ 358 (ಅತಿ ಹೆಚ್ಚು) ಬುಡಕಟ್ಟು ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಛತ್ತೀಸ್‌ಗಢದಲ್ಲಿ 180 ಮತ್ತು ಮಹಾರಾಷ್ಟ್ರದಲ್ಲಿ 114 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ.

2019 ರಲ್ಲಿ ದಾಖಲಾದ 51,56,172 ಪ್ರಕರಣಗಳಲ್ಲಿ32,25,701 ಪ್ರಕರಣಗಳು ಭಾರತೀಯ ದಂಡ ಸಂಹಿತೆ(IPC) ಯಡಿಯಲ್ಲಿ ಮತ್ತು 19,30,471 ಪ್ರಕರಣಗಳು ವಿಶೇಷ ಮತ್ತು ಸ್ಥಳೀಯ ಕಾನೂನುಗಳ(SLL) ಅಡಿಯಲ್ಲಿ ದಾಖಲಾಗಿದೆ. ಇದು 2018 ರ ಪ್ರಕರಣಗಳಿಗೆ ಹೋಲಿಸಿದರೆ 1.6% ಹೆಚ್ಚಳವನ್ನು ತೋರಿಸಿದೆ. 2018ರಲ್ಲಿ ಒಟ್ಟು 50,74,635 ಪ್ರಕರಣಗಳು ದಾಖಲಾಗಿದ್ದವು.

ಮಹಿಳೆಯರ ಮೇಲಿನ ಅಪರಾಧ ಪ್ರಕರಣಗಳಲ್ಲಿ 2018 ರಲ್ಲಿ 3,78,236 ಪ್ರಕರಣಗಳು ದಾಖಲಾಗಿತ್ತು, ಇದು 7.3% ರಷ್ಟು ಹೆಚ್ಚಳವಾಗಿದ್ದು 2019 ರಲ್ಲಿ ಒಟ್ಟು 4,05,861 ಪ್ರಕರಣಗಳು ದಾಖಲಾಗಿದೆ ಎಂದು ವರದಿ ತಿಳಿಸುತ್ತದೆ.

Tags: ದಲಿತರ ಮೇಲಿನ ದೌರ್ಜನ್ಯಗಳುದಲಿತರ ಮೇಲೆ ದೌರ್ಜನ್ಯಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯಿದೆ
Previous Post

ಯಡಿಯೂರಪ್ಪ ʼಢೋಂಗಿ ರೈತ ನಾಯಕʼ ಸಿದ್ದರಾಮಯ್ಯ ಗುಡುಗು

Next Post

ಬಾಬ್ರಿ ಪ್ರಕರಣದಲ್ಲಿ ʼಪಿತೂರಿʼಯನ್ನು ಸಾಬೀತು ಪಡಿಸಲು ಸಾಕಷ್ಟು ಪುರಾವೆಗಳಿವೆ- ನ್ಯಾ ಲಿಬರ್ಹಾನ್

Related Posts

Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
0

ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆಸರಕಾರದ ಖಾತೆಗೆ ಹಣ ಬಂದಾಗಲೇ ಖಾತರಿ “ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ಒಟ್ಟು ₹11,122.76 ಕೋಟಿ ಅನುದಾನಕ್ಕಾಗಿ ಮನವಿ ಸಲ್ಲಿಸಿದ್ದೇವೆ....

Read moreDetails

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

July 9, 2025

CM Siddaramaiah: ರಕ್ಷಣಾ ಸಚಿವ ರಾಜನಾಥಸಿಂಗ್‌ ಅವರನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..

July 9, 2025

CM, DCM: ಸಿಎಂ, ಡಿಸಿಎಂ ಹೆಸರಲ್ಲಿ ಕೋಟಿ ಕೋಟಿ ಹಣ ವಂಚನೆ: ಜನರಿಗೆ ಯಾಮಾರಿಸಿದ್ದ ಮಹಿಳೆ ಅರೆಸ್ಟ್‌

July 9, 2025

Gujarath: ಗುಜರಾತ್‌ನಲ್ಲಿ ಮತ್ತೊಮ್ಮೆ ನದಿಗೆ ಬಿದ್ದ ವಾಹನಗಳು..

July 9, 2025
Next Post
ಬಾಬ್ರಿ ಪ್ರಕರಣದಲ್ಲಿ ʼಪಿತೂರಿʼಯನ್ನು ಸಾಬೀತು ಪಡಿಸಲು ಸಾಕಷ್ಟು ಪುರಾವೆಗಳಿವೆ- ನ್ಯಾ ಲಿಬರ್ಹಾನ್

ಬಾಬ್ರಿ ಪ್ರಕರಣದಲ್ಲಿ ʼಪಿತೂರಿʼಯನ್ನು ಸಾಬೀತು ಪಡಿಸಲು ಸಾಕಷ್ಟು ಪುರಾವೆಗಳಿವೆ- ನ್ಯಾ ಲಿಬರ್ಹಾನ್

Please login to join discussion

Recent News

Top Story

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

by ಪ್ರತಿಧ್ವನಿ
July 9, 2025
Top Story

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

by ಪ್ರತಿಧ್ವನಿ
July 9, 2025
Top Story

DCM DK Shivakumar: ರಾಜ್ಯದ ಆರು ನೀರಾವರಿ ಯೋಜನೆಗಳಿಗೆ ₹11,122.76 ಕೋಟಿ ಅನುದಾನಕ್ಕಾಗಿ ಮನವಿ.

by ಪ್ರತಿಧ್ವನಿ
July 9, 2025
Top Story

HD Kumarswamy: ಗ್ರೀನ್ ಸ್ಟೀಲ್ ವಲಯಕ್ಕೆ ಒತ್ತು; ಲೋಹ ತ್ಯಾಜ್ಯ ಮರುಬಳಕೆಗೆ ಆದ್ಯತೆ.

by ಪ್ರತಿಧ್ವನಿ
July 9, 2025
Top Story

ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೊಂದಣಿ ಅಭಿಯಾನ ಗೌರಿಬಿದನೂರು

by ಪ್ರತಿಧ್ವನಿ
July 9, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Shivaraj Kumar: ʼಏಳುಮಲೆʼ ಟೈಟಲ್‌ ಟೀಸರ್‌ ರಿಲೀಸ್.. ತರುಣ್‌ ಸುಧೀರ್‌ ಸಿನಿಮಾಗೆ ಶಿವಣ್ಣ-ಪ್ರೇಮ್‌ ಸಾಥ್

July 9, 2025

Prajwal Revanna: ಜಾಮೀನು ವಿಚಾರವಾಗಿ ಮಹತ್ವದ ಸೂಚನೆ ನೀಡಿದ ಹೈಕೋರ್ಟ್..!!

July 9, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada