• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

2021ರಲ್ಲೂ ಮುಂದುವರೆಯಲಿದೆ ಕೋವಿಡ್-19: ಡಾ. ರಣದೀಪ್ ಗುಲೇರಿಯಾ

by
September 6, 2020
in ದೇಶ
0
2021ರಲ್ಲೂ ಮುಂದುವರೆಯಲಿದೆ ಕೋವಿಡ್-19: ಡಾ. ರಣದೀಪ್ ಗುಲೇರಿಯಾ
Share on WhatsAppShare on FacebookShare on Telegram

ಕರೋನಾ ಸದ್ಯಕ್ಕೆ ಮುಗಿಯುವಂಥ ಕಷ್ಟ ಅಲ್ಲ. 2020 ಅನ್ನು‌ ಮರೆತು 2021ರಲ್ಲಾದರೂ ನೆಮ್ಮದಿಯಿಂದ ಕಸುಬು ಮಾಡಬಹುದು, ಕಾಸು, ಕಿಮ್ಮತ್ತು ಗಿಟ್ಟಿಸಬಹುದು ಎಂದುಕೊಂಡರೆ, ಬಸವಳಿರುವ ಜನ-ಜೀವನ ಮತ್ತೆ ಹಳಿ ಮೇಲೆ ನಿರಾತಂಕವಾಗಿ ವಿಹರಿಸಲಿದೆ ಎಂದುಕೊಂಡರೆ ಅದು ಅಷ್ಟು ಸುಲಭವಲ್ಲ. ಕರೋನಾ ಅಬ್ಬರ, ಅಟ್ಟಹಾಸ, ಆರ್ಭಟಗಳು 2021ರಲ್ಲೂ ಮುಂದುವರೆಯಲಿವೆ. ಮುಂದಿನ ವರ್ಷ ಕರೋನಾ ದೇಶದಲ್ಲಿ 2ನೇ ಹಂತದಲ್ಲಿ ಕಾಣಿಸಿಕೊಂಡು‌ ಸುನಾಮಿ‌ ಸ್ವರೂಪ ಪಡೆಯಲಿದೆ. ಹಾಗಂತ ಕೇಂದ್ರ ಸರ್ಕಾರದ ಸ್ಪೆಷಲ್ ಟಾಸ್ಕ್ ಫೋರ್ಸ್ ಸದಸ್ಯ ಡಾ. ರಣದೀಪ್ ಗುಲೇರಿಯಾ ಅವರೇ ಆತಂಕಕಾರಿ ಭವಿಷ್ಯ ನುಡಿದಿದ್ದಾರೆ.

ADVERTISEMENT

ಕರೋನಾವನ್ನು ನಿಯಂತ್ರಿಸಲು ಏನೇನು ಉಪಕ್ರಮಗಳನ್ನು ತೆಗೆದುಕೊಳ್ಳಬೇಕೆಂದೇ ಕೇಂದ್ರ ಸರ್ಕಾರ ಸ್ಪೆಷಲ್ ಟಾಸ್ಕ್ ಫೋರ್ಸ್ ರಚನೆ ಮಾಡಿದೆ. ಅದರಲ್ಲಿ ದೆಹಲಿಯ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆಯ ನಿರ್ದೇಶಕರಾದ ಡಾ. ರಣದೀಪ್ ಗುಲೇರಿಯಾ ಕೂಡ ಒಬ್ಬ ಸದಸ್ಯರು. ಅವರೇ ಈಗ 2021ರಲ್ಲೂ ಕರೋನಾ ಕಷ್ಟ ಮುಂದುವರೆಯಲಿದೆ ಅಂತಾ ಹೇಳಿಬಿಟ್ಟಿದ್ದಾರೆ. ರಾಷ್ಟ್ರೀಯ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಅವರು, ಯಾವ ಕಾರಣಕ್ಕೆ ಕರೋನಾ ನಿಯಂತ್ರಣಕ್ಕೆ ಬರುವುದಿಲ್ಲ ಎಂಬ ಸಂಗತಿಯನ್ನೂ ವಿವರಿಸಿದ್ದಾರೆ.

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ಡಾ. ರಣದೀಪ್ ಗುಲೇರಿಯಾ ಅವರ ಪ್ರಕಾರ ಕರೋನಾ ಸೋಂಕು ಹರಡುವಿಕೆ ಮೊದಲು ದೊಡ್ಡ ದೊಡ್ಡ ನಗರಗಳಲ್ಲಿ ಮಾತ್ರ ಕಂಡುಬರುತ್ತಿತ್ತು. ಈಗ ಎಲ್ಲಾ ಚಿಕ್ಕ-ಪುಟ್ಟ ಪಟ್ಟಣ ಮತ್ತು ಹಳ್ಳಿಗಳಿಗೂ ಪಸರಿಸಿದೆ. ಸಮುದಾಯಕ್ಕೆ ವಿಸ್ತರಿಸಿಕೊಂಡಿದೆ. ಆದುದರಿಂದ ಕರೋನಾ ಸೋಂಕು ಹರಡುವಿಕೆ ನಿಯಂತ್ರಣಕ್ಕೆ ಬರುತ್ತೆ ಎಂದು ಎದೆಯುಬ್ಬಿಸಿ‌ ಹೇಳಲು ಸಾಧ್ಯವಿಲ್ಲ. ಜೊತೆಗೆ ದೇಶದಲ್ಲಿ ತುಂಬಿ ತುಳುಕುತ್ತಿರುವ ಜನಸಂಖ್ಯೆ. ಅಂದರೆ 136 ಕೋಟಿ ಜನರಲ್ಲಿ 1 ಪರ್ಸೆಂಟ್ ಜನರಿಗೆ ಕರೋನಾ ಬಂದು ಹೋಗುತ್ತೆ ಎಂದುಕೊಂಡರೂ 1 ಕೋಟಿ 36 ಲಕ್ಷ ಜನರಿಗೆ ಬರಬೇಕಾಗುತ್ತದೆ. ಸದ್ಯ ದೇಶದಲ್ಲಿ ಕರೋನಾ ಪೀಡಿತರ ಸಂಖ್ಯೆ 40 ಲಕ್ಷ. ಹಾಗಾಗಿ ಇದು ಇನ್ನೂ ಹೆಚ್ಚಾಗಲಿದೆ.

ದೇಶದಲ್ಲಿ ಕರೋನಾ ಬೆಳೆಯುತ್ತಿರುವುದನ್ನು ನೋಡುವುದಾದರೆ ಆಗಸ್ಟ್ 6ರಿಂದ ದಿನನಿತ್ಯ 60 ಸಾವಿರಕ್ಕೂ ಹೆಚ್ಚು ಕರೋನಾ ಸೋಂಕು ಪ್ರಕರಣಗಳು ಕಂಡುಬರುತ್ತಿದ್ದವು. ಆಗಸ್ಟ್‌ 19ರಿಂದ 70 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದ್ದವು. ಆಗಸ್ಟ್ 26ರಿಂದ 75 ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗತೊಡಗಿದವು. ಸೆಪ್ಟೆಂಬರ್ 2ರಿಂದ 80 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಗೋಚರಿಸುತ್ತಿವೆ. ಹೀಗೆ ವೇಗವಾಗಿ ಕರೋನಾ ಸೋಂಕು ಹರಡುತ್ತಿರುವುದು ಭಾರತದಲ್ಲಿ ಮಾತ್ರ. ಜನವರಿ 30ರಂದು ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಕರೊನಾ ಎಂಬ ಕ್ರೂರಿ ತನ್ನ ಕರಿನೆರಳು ಬಿಟ್ಟಿತು. ಅಂದಿನಿಂದ ದೇಶದಲ್ಲಿ 10 ಲಕ್ಷ‌ ಸೋಂಕು ಪೀಡಿತರು ಪತ್ತೆಯಾಗಲು ಅದು ತೆಗೆದುಕೊಂಡಿದ್ದು ಬರೊಬ್ಬರಿ 168 ದಿನ‌. ಆಮೇಲೆ ಕರೋನಾ ತನ್ನ ವೇಗವನ್ನು ಹೆಚ್ಚಿಸಿಕೊಂಡಿತು. ಕೇವಲ 50 ದಿನದಲ್ಲಿ 10 ಲಕ್ಷದಿಂದ 40 ಲಕ್ಷ ಪ್ರಕರಣಗಳು ಕಾಣಿಸಿಕೊಂಡವು. ಈ ಪೈಕಿ 30 ಲಕ್ಷ ಇದ್ದ ಸೋಂಕು ಪೀಡಿತರ ಸಂಖ್ಯೆ 40 ಲಕ್ಷಕ್ಕೆ ಬಡ್ತಿ ಪಡೆದಿದ್ದು ಕೇವಲ 13 ದಿನಗಳ ಅಂತರದಲ್ಲಿ. ಭಾರತದಲ್ಲಿ 10ರಿಂದ 40 ಲಕ್ಷ ಆಗಲು 13 ದಿನಗಳಾದರೆ ಬ್ರಿಜಿಲ್ 10ರಿಂದ 40 ಲಕ್ಷ ಆಗಲು 75 ದಿನ ತೆಗೆದುಕೊಂಡಿದೆ. ಅಮೇರಿಕಾದಲ್ಲಿ 86 ದಿನ ತೆಗೆದುಕೊಂಡಿದೆ.

ಡಾ. ರಂಣದೀಪ್ ಗುಲೇರಿಯಾ ಕರೋನಾ ದೇಶದಲ್ಲಿ 2ನೇ ಹಂತದಲ್ಲಿ ಕಾಣಿಸಿಕೊಳ್ಳುತ್ತದೆ ಎಂಬುದಕ್ಕೆ ರಾಷ್ಟ್ರ ರಾಜಧಾನಿ ದೆಹಲಿಯ ಉದಾಹರಣೆ ನೀಡಿದ್ದಾರೆ. ಮೊದಲು ದೆಹಲಿಯಲ್ಲಿ ಪ್ರತಿದಿನ 4 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಕಂಡುಬರುತ್ತಿದ್ದವು. ದೆಹಲಿ ಸರ್ಕಾರ ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಂಡದ್ದರಿಂದ ನಿಯಂತ್ರಣಕ್ಕೆ ಬಂದಿತ್ತು. ಪ್ರತಿದಿನ 600 ರಿಂದ 700 ಪ್ರಕರಣಗಳು‌ ಪತ್ತೆಯಾಗತೊಡಗಿದವು. ಆದರೀಗ ಮತ್ತೆ ಏರಿಕೆಯಾಗುತ್ತಿದೆ. ಸುಮಾರು 3 ಸಾವಿರ ಪ್ರಕರಣಗಳು ವರದಿಯಾಗತೊಡಗಿವೆ. ಹೀಗೆ ಸದ್ಯ ಕಡಿಮೆ ಆಗಿರುವ ರಾಜ್ಯ, ನಗರ, ಪಟ್ಟಣಗಳಲ್ಲಿ ಮತ್ತೊಮ್ಮೆ ಕರೋನಾ ಕಂಗೆಣ್ಣು ಕಾರುವ ಸಾಧ್ಯತೆಗಳು ದಟ್ಟವಾಗಿವೆ.

136 ಕೋಟಿ ಜನಸಂಖ್ಯೆ ಇರುವ ದೇಶದಲ್ಲಿ ಸದ್ಯ ಪ್ರತಿದಿನ ಕರೋನಾ ಪರೀಕ್ಷೆ ನಡೆಸುತ್ತಿರುವುದು ಸುಮಾರು 10 ಲಕ್ಷ ಜನರಿಗೆ ಮಾತ್ರ. ಅದರಲ್ಲಿ ಸುಮಾರು 80 ಸಾವಿರ ಪ್ರಕರಣಗಳು ಪತ್ತೆಯಾಗುತ್ತಿವೆ. ಒಂದೊಮ್ಮೆ ಕರೋನಾ ಪರೀಕ್ಷೆ ಸಂಖ್ಯೆಗಳನ್ನು ದ್ವಿಗುಣ-ತ್ರಿಗುಣ ಗೊಳಿಸಿದರೆ ಸೋಂಕು ಪೀಡಿತರ ಸಂಖ್ಯೆಯೂ ದುಪ್ಪಟ್ಟು-ತ್ರಿಪ್ಪಟ್ಟು ಆಗುತ್ತವೆ. ಸಂಖ್ಯೆ ಹೆಚ್ಚಾದರೆ ಕೆಟ್ಟ ಹೆಸರು ಬರುತ್ತದೆ ಎನ್ನುವ ಕಾರಣಕ್ಕೆ ಸರ್ಕಾರ ಪರೀಕ್ಷೆಯನ್ನು ಹೆಚ್ಚಿಸುವ ಧೈರ್ಯ ತೋರುತ್ತಿಲ್ಲ.

ಜಗತ್ತಿಗೆ ಎಷ್ಟು ಬೇಗ‌ ಕರೋನಾ ಲಸಿಕೆ ಸಿಗಬಹುದು ಎಂಬ ಬಗ್ಗೆ ಮಾತನಾಡಿರುವ ಡಾ. ರಣದೀಪ್ ಗುಲೇರಿಯಾ, ಭಾರತದಲ್ಲಿ ಮೂರು ಸಂಸ್ಥೆಗಳು ಲಸಿಕೆಯ ಸಂಶೋಧನೆ ನಡೆಸುತ್ತಿವೆ. ಅವು ಯಾವಾಗ ಬರುತ್ತವೆ ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ. ಬೇಗ ಬರುವ ಸಾಧ್ಯತೆಗಳು ಕಡಿಮೆ ಇದೆ. ರಷ್ಯಾದಲ್ಲಿ ಲಸಿಕೆ ಕಂಡುಹಿಡಿಯಲಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಅಲ್ಲಿ‌ ಕಡಿಮೆ ಜನರ ಮೇಲೆ ಪ್ರಯೋಗಗಳನ್ನು ಮಾಡಲಾಗಿದೆ. ಆದುದರಿಂದ ಅದರ ಬಗ್ಗೆ ಕೂಡ ತುಂಬಾ ನಿರೀಕ್ಷೆ ಇಟ್ಟುಕೊಳ್ಳುವುದು ತರವಲ್ಲ ಎಂದಿದ್ದಾರೆ.

ಸಾರ್ವತ್ರಿಕ ವ್ಯಾಕ್ಸಿನೇಷನ್ ವಿಷಯಕ್ಕೆ ಬಂದರೆ ದೇಶದಲ್ಲಿ 136 ಕೋಟಿ ಜನರಿಗೆ ಮಾಡಬೇಕೆಂದರೆ ಇದು ಸಾಹಸದ ಕೆಲಸವಾಗಲಿದೆ. ಸದ್ಯ ಕರೋನಾ ಬರದಂತೆ ಹೆಚ್ಚೆಚ್ಚು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಈ ಬಗ್ಗೆ ಜಾಗೃತಿ ಮೂಡಿಸಬೇಕು. ಅನಾವಶ್ಯಕ ಪ್ರವಾಸಗಳನ್ನು ನಿಷೇಧಿಸಬೇಕು. ಬಾರ್‌ಗಳು, ಪಬ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಬೇಕು. ಹೆಚ್ಚೆಚ್ಚು ಸರಳವಾಗಿರಬೇಕು ಎಂಬ ಸಲಹೆಗಳನ್ನೂ ನೀಡಿದ್ದಾರೆ.

Tags: CoronaCovid 19ಕರೋನಾಕೋವಿಡ್-19
Previous Post

ಡ್ರಗ್ಸ್ ಪ್ರಕರಣದಲ್ಲಿ ಅಪರಾಧ ಸಾಬೀತಾದರೆ ಸಿಗುವ ಶಿಕ್ಷೆಯೇನು?

Next Post

ಅಕ್ಬರ್ ಹೆಸರು ಉಲ್ಲೇಖಿಸಲು ಅಣ್ಣಾಮಲೈ ಹಿಂಜರಿಕೆ: ನೆಟ್ಟಿಗರಿಂದ ತಪರಾಕಿ

Related Posts

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್
ಇದೀಗ

“ಮಂಥ್ಲಿ ಮಂತ್ರಿ ಆರ್.ಬಿ.ತಿಮ್ಮಾಪೂರ‌” : ಲಂಚ ಹಗರಣದ ವಿರುದ್ಧ ಸಿಡಿದೆದ್ದ ಬಿಜೆಪಿ, ಜೆಡಿಎಸ್

by ಪ್ರತಿಧ್ವನಿ
January 18, 2026
0

ಬೆಂಗಳೂರು : ರಾಜ್ಯದ ಅಬಕಾರಿ ಇಲಾಖೆಯಲ್ಲಿ ಕೇಳಿ ಬಂದಿರುವ ಲಂಚ ಹಗರಣದಲ್ಲಿ ಬೆಂಗಳೂರು ನಗರ ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಈ ವಿಚಾರವನ್ನು ಮುಂದಿಟ್ಟುಕೊಂಡು ವಿಪಕ್ಷಗಳು...

Read moreDetails
ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

ಲೋಕಸಭಾ ಎಲೆಕ್ಷನ್‌ ಪ್ರಚಾರಕ್ಕೆ ನಮಗೆ ಅವ್ರು ಜಾಗನೂ ನೀಡಿರಲಿಲ್ಲ : ರೆಡ್ಡಿ, ರಾಮುಲು ವಿರುದ್ಧ ಸಿದ್ದು ವಾಗ್ದಾಳಿ

January 18, 2026
ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

ನ್ಯೂಜಿಲೆಂಡ್ ವಿರುದ್ಧ ಟಾಸ್ ಗೆದ್ದ ಗಿಲ್‌ ಪಡೆಯಿಂದ ಬೌಲಿಂಗ್ ಆಯ್ಕೆ

January 18, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Next Post
ಅಕ್ಬರ್ ಹೆಸರು ಉಲ್ಲೇಖಿಸಲು ಅಣ್ಣಾಮಲೈ ಹಿಂಜರಿಕೆ: ನೆಟ್ಟಿಗರಿಂದ ತಪರಾಕಿ

ಅಕ್ಬರ್ ಹೆಸರು ಉಲ್ಲೇಖಿಸಲು ಅಣ್ಣಾಮಲೈ ಹಿಂಜರಿಕೆ: ನೆಟ್ಟಿಗರಿಂದ ತಪರಾಕಿ

Please login to join discussion

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

“ಅಬಕಾರಿ ಲೈಸೆನ್ಸ್‌ಗೆ ಲಂಚ ಇದೊಂದು ಪ್ಯಾಕೇಜ್‌ ಡೀಲ್‌, ತಿಮ್ಮಾಪುರ ರಾಜೀನಾಮೆವರೆಗೂ ನಾವು ಹೋರಾಡ್ತೀವಿ”

January 18, 2026
ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

ಅಬಕಾರಿ ಇಲಾಖೆಯಲ್ಲಿ 3,542 ಕೋಟಿ ಭ್ರಷ್ಟಾಚಾರ :‌ ಸಿದ್ದು ಸರ್ಕಾರದ ವಿರುದ್ಧ ಛಲವಾದಿ ಹೊಸ ಬಾಂಬ್..!

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada