Day: October 27, 2021

ಬಿಜೆಪಿ ನಾಯಕರ ಭಂಡವಾಳ ಹೊರ ತೆಗೆದರೆ ಅವರ ನಿಜವಾದ ಬಣ್ಣ ಬಯಲಾಗುತ್ತದೆ : HDKumarswamy ಗರಂ

ಯಡಿಯೂರಪ್ಪ ಅವರಿಂದ ಎಷ್ಟು ಸೂಟ್ ಕೇಸ್ ತೆಗೆದುಕೊಂಡಿರಿ ಸಿದ್ದರಾಮಯ್ಯ, ಈಗಲಾದರೂ ಜನರಿಗೆ ಸತ್ಯ ಹೇಳಿ – ಹೆಚ್.ಡಿ.ಕೆ ವಾಗ್ದಾಳಿ

ತಮ್ಮನ್ನು 'ಗ್ರೇಟ್ ಲಯರ್' ಎಂದು ಕರೆದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ತೀವ್ರ ತಿರುಗೇಟು ನೀಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, "ಉಪ ಚುನಾವಣೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಯಡಿಯೂರಪ್ಪ ...

ಬಿಹಾರದಲ್ಲಿ ಕಾಂಗ್ರೆಸ್‌ – ಆರ್‌ಜೆಡಿ ಗೆಳತನದಲ್ಲಿ ಬಿರುಕು: ಲಾಲೂ ಜೊತೆ ಸೋನಿಯಾ ಗಾಂಧಿ ಗೌಪ್ಯ ಚರ್ಚೆ!

ಬಿಹಾರದಲ್ಲಿ ಕಾಂಗ್ರೆಸ್‌ – ಆರ್‌ಜೆಡಿ ಗೆಳತನದಲ್ಲಿ ಬಿರುಕು: ಲಾಲೂ ಜೊತೆ ಸೋನಿಯಾ ಗಾಂಧಿ ಗೌಪ್ಯ ಚರ್ಚೆ!

ಬಿಹಾರದಲ್ಲಿ ರಾಷ್ಟ್ರೀಯ ಜನತಾ ದಳ (RJD) ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಮುರಿಯಲಿದೆ ಎಂಬ ಊಹಾಪೋಹಗಳ ಮಧ್ಯೆ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಮಂಗಳವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯ ನಂತರ ಸೋನಿಯಾ ಗಾಂಧಿ ಅವರು ಲಾಲು ಪ್ರಸಾದ್ ಯಾದವ್ ಅವರಿಗೆ ಕರೆ ಮಾಡಿದ್ದು, ಉಭಯ ನಾಯಕರು ಸುಮಾರು 10 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. https://twitter.com/ANI/status/1453217657621209089?s=20 ತಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ಬಿಹಾರ ಉಸ್ತುವಾರಿ ಮತ್ತು ಬಿಹಾರದ ರಾಜ್ಯಾಧ್ಯಕ್ಷರೊಂದಿಗೆ ದೆಹಲಿಯಲ್ಲಿ ನಡೆದ ಅತ್ಯಂತ ಮಹತ್ವದ ಸಭೆಯ ನಂತರ ಸೋನಿಯಾ ಗಾಂಧಿಯವರು ಲಾಲು ಪ್ರಸಾದ್ ಯಾದವ್ ಅವರೊಂದಿಗೆ ಫೋನ್ ಕರೆ ಮೂಲಕ ಮಾತುಕತೆ ನಡೆಸಿದ್ದಾರೆ. ಬಿಹಾರ ಕಾಂಗ್ರೆಸ್‌ನ ಉಸ್ತುವಾರಿ ಭಕ್ತ ಚರಣ್ ದಾಸ್ ಮತ್ತು ಇತರ ನಾಯಕರು ಆರ್‌ಜೆಡಿಯೊಂದಿಗೆ ಮೈತ್ರಿ ಮುರಿದುಕೊಳ್ಳುವ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಹೈಕಮಾಂಡ್ ಇದಕ್ಕೆ ಸಿದ್ಧವಿಲ್ಲ ಎಂಬುದು ಉಭಯ ನಾಯಕರ ಫೋನ್ ಮಾತುಕತೆ ಮೂಲಕ ತಿಳಿದುಬಂದಿದೆ. ಬಿಹಾರದ ಎರಡೂ ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವಉಪಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರ ಈ ಸಂಭಾಷಣೆಯನ್ನು ಬಹಳ ಮುಖ್ಯ ಎಂದು ಪರಿಗಣಿಸಲಾಗುತ್ತಿದೆ. ಅದಾಗ್ಯೂ, ಉಭಯ ನಾಯಕರ ನಡುವಿನ ಮಾತುಕತೆ ಬಗ್ಗೆ ಯಾವುದೇ ಮಾಹಿತಿ ಬಹಿರಂಗಗೊಂಡಿಲ್ಲ. ವಾಸ್ತವವಾಗಿ, ಬಿಹಾರದ ಎರಡು ಕ್ಷೇತ್ರಗಳಲ್ಲಿ ನಡೆಯುತ್ತಿರುವ ಉಪಚುನಾವಣೆ ವಿಚಾರದಲ್ಲಿ ಮಹಾಘಟಬಂಧನ್‌ನ ಎರಡು ಮಿತ್ರಪಕ್ಷಗಳಾದ ರಾಷ್ಟ್ರೀಯ ಜನತಾ ದಳ (RJD) ಮತ್ತು ಕಾಂಗ್ರೆಸ್ ನಡುವೆ ಒಡಕು ಏರ್ಪಟ್ಟಿದೆ. ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಕಾಂಗ್ರೆಸ್‌ಗೆ ಎರಡು ಸ್ಥಾನಗಳಲ್ಲಿ ಒಂದನ್ನು ಸಹ ನೀಡದಿರುವ ನಿರ್ಧಾರವನ್ನೂ ತೆಗೆದುಕೊಂಡಿರುವುದರ ಬಗ್ಗೆ ಬಹಿರಂವಾಗಿ ಹೇಳಿಕೆ ನೀಡಿದ್ದರು. ಮತ್ತು ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿಯನ್ನು ಭಕ್ಚೋನ್‌ಹರ್ ಎಂದು ಸಂಬೋಧಿಸಿದ್ದರು. ಅಂದಿನಿಂದ,  ಮಹಾಮೈತ್ರಿಕೂಟದಲ್ಲಿ ಕಹಿ ವಿಷಯಗಳು ಮುನ್ನೆಲೆಗೆ ಬರಲು ಪ್ರಾರಂಭಿಸಿದವು ಮತ್ತು ತಮ್ಮ ಈ ಹೇಳಿಕೆಯನ್ನು ಹಿಂಪಡೆಯುವಂತೆ ಲಾಲು ಯಾದವ್ ಅವರನ್ನು ಕಾಂಗ್ರೆಸ್ ಒತ್ತಾಯಿಸಿತು. ಇದಾದ ನಂತರ, ಇತ್ತೀಚಿನ ವಾಗ್ವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ಲಾಲು ಪ್ರಸಾದ್ ಯಾದವ್, ಆರ್‌ಜೆಡಿ ಮಾಡಿದಷ್ಟು ಯಾರೂ ಕಾಂಗ್ರೆಸ್‌ಗೆ ಸಹಾಯ ಮಾಡಿಲ್ಲ ಎಂದು ಹೇಳಿದ್ದರು. ಇದರೊಂದಿಗೆ, ದೇಶಕ್ಕೆ ಅಗತ್ಯವಿರುವ ರಾಷ್ಟ್ರೀಯ ಪರ್ಯಾಯವಾಗಿ ಕಾಂಗ್ರೆಸ್ ಅನ್ನು ಈಗಲೂ ಪರಿಗಣಿಸುವುದಾಗಿಯೂ ಸ್ಪಷ್ಟಪಡಿಸಿದ್ದರು. 

ದಿಶಾ ರವಿ ವಿರುದ್ದ ಸಾಕ್ಷ್ಯಾಧಾರಗಳ ಕೊರತೆ: ʻಟೂಲ್ ಕಿಟ್’ ಪ್ರಕರಣ ಮುಚ್ಚಲಿದ್ದಾರೆಯೇ ಪೊಲೀಸರು?

ದಿಶಾ ರವಿ ವಿರುದ್ದ ಸಾಕ್ಷ್ಯಾಧಾರಗಳ ಕೊರತೆ: ʻಟೂಲ್ ಕಿಟ್’ ಪ್ರಕರಣ ಮುಚ್ಚಲಿದ್ದಾರೆಯೇ ಪೊಲೀಸರು?

ಕಳೆದ ವರ್ಷದ ಜನವರಿ 26ರಂದು ದೆಹಲಿಯಲ್ಲಿ ನಡೆದ ರೈತ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆದಿದ್ದು ಅದರ ಹಿಂದೆ ಬೆಂಗಳೂರಿನ ವಿದ್ಯಾರ್ಥಿನಿ ದಿಶಾ ರವಿ ಇದ್ದರು ಎಂದು ಆರೋಪಿಸಿ ಫೆಬ್ರವರಿ ...

ಬೆಂಗಳೂರಿನಲ್ಲಿ ಮರಗಳ ಮಾರಣಹೋಮ!

ಬೆಂಗಳೂರಿನಲ್ಲಿ ಮರಗಳ ಮಾರಣಹೋಮ!

ಇತ್ತೀಚೆಗೆ ಸಿಲಿಕಾನ್ ಸಿಟಿಯಲ್ಲಿ ಪರಿಸರದ ಮೇಲಾಗುವ ದುಷ್ಟರಿಣಾಮಗಳು ಏರುಗತಿಯಲ್ಲಿ ಸಾಗುತ್ತಿವೆ. ಬೃಹತ್ ಗಾತ್ರದ ಕಟ್ಟಡಗಳು, ರಸ್ತೆ ಕಾಮಗಾರಿಗಳಿಗೆ ಮರಗಳನ್ನು ಕಡಿಯುತ್ತಿರುವುದು ಹೆಚ್ಚಾಗಿದೆ. ಬೆಂಗಳೂರಿನ ಸರ್ಜಾಪುರ-ಅತ್ತಿಬೆಲೆ ರಸ್ತೆ ಅಗಲೀಕರಣಕ್ಕೋಸ್ಕರ ...

ಗಡಿ ವಿವಾದ : ಹೊಸ ಕಾನೂನು ರೂಪಿಸಿದ ಚೀನಾ ; ಮೋದಿ ಸರ್ಕಾರ ಹೇಳಿದ್ದೇನು?

ಗಡಿ ವಿವಾದ : ಹೊಸ ಕಾನೂನು ರೂಪಿಸಿದ ಚೀನಾ ; ಮೋದಿ ಸರ್ಕಾರ ಹೇಳಿದ್ದೇನು?

ಭಾರತ-ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಈಗ ಚೀನಾ ಅಧ್ಯಕ್ಷ ಜಿನ್ಪಿಂಗ್ ನೇತೃತ್ವದ ಸರ್ಕಾರ ಹೊಸ ವರಸೆಯೊಂದು ಶುರು ಮಾಡಿದೆ. ಗಡಿ ವಿವಾದಕ್ಕೆ ಸಂಬಂಧ ಚೀನಾ ಹೊಸ ಕಾನೂನೊಂದನ್ನ ...

ಚುನಾವಣೆ ನಡೆಸಲು ಬಿಬಿಎಂಪಿ ಸನ್ನದ್ಧ : ಪಾಲಿಕೆ ಆಯುಕ್ತ ಗೌರವ್ ಗುಪ್ತಾ

ಚುನಾವಣೆ ನಡೆಸಲು ಬಿಬಿಎಂಪಿ ಸನ್ನದ್ಧ : ಪಾಲಿಕೆ ಆಯುಕ್ತ ಗೌರವ್ ಗುಪ್ತಾ

ಬಿಬಿಎಂಪಿ ಚುನಾವಣೆ ನಡೆಸಲು ಸುಪ್ರೀಂಕೋರ್ಟ್ ಸೂಚಿಸಿದರೆ ಚುನಾವಣೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ತಿಳಿಸಿದ್ದಾರೆ. ಚುನಾವಣೆ ವಿಚಾರವಾಗಿ ನವೆಂಬರ್ ...

ಜಾತಿವಾರು ಜನಗಣತಿ ವರದಿ ಬಿಡುಗಡೆ ಮಾಡದಂತೆ ಪುಟ್ಟರಂಗ ಶೆಟ್ಟರನ್ನು ಬೆದರಿಸಿದ್ದ HDK: ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಹಾನಗಲ್ ಕ್ಷೇತ್ರಕ್ಕೆ ಏನು ಮಾಡಿಲ್ಲ : ಸಿಎಂ ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಸಿಂದಗಿ ಮತ್ತು ಹಾನಗಲ್ ಉಪಚುನಾವಣೆ ಬಿಸಿ ದಿನದಿಂದ ದಿನಕ್ಕೆ ತಾರಕ್ಕೇರಿದೆ. ಇಂದು ಬುಧವಾರ ಪ್ರಚಾಋಕ್ಕೆ ಕಡೇ ದಿನವಾಘಿದ್ದು ಸಿದ್ದರಾಮಯ್ಯ ಮತ್ತೆ ಬಸವರಾಜ್ ಬೊಮ್ಮಾಯಿ ಸರ್ಕಾರವನ್ನು ಟೀಕಿಸಿದ್ದು, ಬಿಜೆಪಿ ...

ಪೆಗಾಸಸ್‌ ಗೂಢಚಾರಿಕೆ : ತಜ್ಞರ ಸಮಿತಿ ನೇಮಿಸಿದ ಸುಪ್ರೀಂ –ಕೇಂದ್ರಕ್ಕೆ ಹಿನ್ನಡೆ

ಪೆಗಾಸಸ್‌ ಗೂಢಚಾರಿಕೆ : ತಜ್ಞರ ಸಮಿತಿ ನೇಮಿಸಿದ ಸುಪ್ರೀಂ –ಕೇಂದ್ರಕ್ಕೆ ಹಿನ್ನಡೆ

ಪೆಗಾಸಸ್ ತಂತ್ರಾಂಶ ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಮೂವರು ತಜ್ಞರನ್ನೊಳಗೊಂಡ ಸಮಿತಿ ರಚಿಸಿದೆ. ಸುಪ್ರೀಂಕೋರ್ಟ್ ನಿವೃತ್ತ ನ್ಯಾ. ಆರ್ ...

Page 1 of 2 1 2