Day: October 28, 2021

ಬಿಟ್ ಕಾಯಿನ್ ಕೇಸಲ್ಲಿ ದೊಡ್ಡವರ ಹೆಸರು ಕೇಳಿಬರುತ್ತಿದೆ, ಈ ಪ್ರಕರಣವನ್ನು ಮುಚ್ಚಿಹಾಕ್ತಾರೆ – ಡಿ.ಕೆ.ಶಿ

ಬಿಟ್ ಕಾಯಿನ್ ಹಗರಣ ದೊಡ್ಡ ಮಟ್ಟದಲ್ಲಿ ನಡೆದಿದ್ದು, ದೊಡ್ಡ ದೊಡ್ಡ ಹೆಸರುಗಳು ಕೇಳಿ ಬರುತ್ತಿವೆ. ಯಾರ್ಯಾರದ್ದೋ ಖಾತೆಗೆ ಹಣ ಬಂದಿದೆ ಎಂದು ಕೇಳಿಬರುತ್ತಿದ್ದು, ನಾನು ಮಾಹಿತಿ ಕಲೆಹಾಕಲು ...

Read moreDetails

ಎರಡು ಕ್ಷೇತ್ರಗಳ ಉಪ ಚುನಾವಣೆ ನಿಜಕ್ಕೂ ನಿರ್ಣಾಯಕವಾಗುವುದು ಯಾಕೆ?

ಆಡಳಿತಾರೂಢ ಬಿಜೆಪಿಗಾಗಲೀ ಅಥವಾ ಪ್ರತಿಪಕ್ಷಗಳಿಗಾಗಲೀ ರಾಜಕೀಯವಾಗಿ ತೀರಾ ನಿರ್ಣಾಯಕವೆನಿಸದೇ ಇದ್ದರೂ, ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಅವರಿಗೆ ಗಣನೀಯ ಎನಿಸಿರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ...

Read moreDetails

ಏನಿದು ಪೆಗಾಸಸ್ ಸ್ಪೈವೇರ್ ವಿವಾದ: ಈ ವೈರಸ್ ಹೇಗೆ ಕಾರ್ಯನಿರ್ವಹಿಸುತ್ತೇ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ತಂತ್ರಜ್ಞಾನ ಬೆಳೆದಂತೆಯೇ ಅದರ ದುರುಪಯೋಗವೂ ಮತ್ತಷ್ಟು ಆಧುನಿಕಗೊಳ್ಳುತ್ತಲೇ ಇರುತ್ತವೆ. ಸ್ಮಾರ್ಟ್ ಫೋನ್‌ನಾ ಈ ಯುಗದಲ್ಲಿ ಪ್ರೈವೆಸಿ ಅನ್ನೋದು ಬಹುತೇಕ ನೆರಳಿಗೆ ಬೇಡಿ ತೊಡಿಸಿದಂತೆ ಆಗಿದೆ. ಎಲ್ಲವೂ ಅಯೋಮಯವೆನ್ನುವಂತಾಗಿದೆ. ...

Read moreDetails

ಸವಾಲಿನ ಸಮರಕ್ಕೆ ಮುಂದಾದ ಸಮೀರ್ ವಾಂಖೆಡೆ ಮತ್ತು ನವಾಬ್ ಮಲಿಕ್

NCB ಅಧಿಕಾರಿ ಸಮೀರ್ ವಾಂಖೆಡೆ ಹಾಗೂ NCP ನಾಯಕ ನವಾಬ್ ಮಲಿಕ್ ನಡುವಿನ ಸಮರ ಈಗ ಪರಸ್ಪರ ಸವಾಲೆಸೆಯುವ ಮಟ್ಟಕ್ಕೆ ಏರಿದೆ. ಸಮೀರ್ ವಾಂಖೆಡೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರಿ ನೌಕರಿ ಪಡೆದಿದ್ದಾರೆ ಎಂದು ಮಲಿಕ್ ಆರೋಪಿಸಿದ್ದರೆ, ಅದಕ್ಕೆ ಪೂರಕ ದಾಖಲೆ ನೀಡಿ ಎಂದು ವಾಂಖೆಡೆ ಸವಾಲೆಸಿದ್ದಾರೆ.  ಸಮೀರ್ ಮದುವೆ ಕುರಿತ ಸಾಕ್ಷ್ಯಾಧಾರಗಳನ್ನು ಬಿಡುಗಡೆ ಮಾಡಿರುವ ಮಲಿಕ್, ಡಾ. ಶಬಾನಾ ಖುರೇಶಿ ಅವರೊಂದಿಗಿನ ಮದುವೆಯ ‘ನಿಖಾಹ್ ನಾಮ’ವನ್ನು ಟ್ವಿಟರ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ರೂ.33,000‘ಮೆಹೆರ್’ ನೀಡಿ ಸಮೀರ್ ದಾವುದ್ ವಾಂಖೆಡೆ ಅವರು ಶಬಾನಾ ಖುರೇಶಿ ಅವರೊಂದಿಗೆ ವಿವಾಹವಾಗಿದ್ದರು. ಇವರ ವಿವಾಹಕ್ಕೆ ಸಾಕ್ಷಿಯಾಗಿ ಸಮೀರ್ ವಾಂಖೆಡೆ ಅಕ್ಕ ಯಾಸ್ಮಿನ್ ದಾವುದ್ ವಾಂಖೆಡೆಯ ಪತಿ ಅಜೀಜ್ ಖಾನ್ ನಿಖಾಹ್ ನಾಮದಲ್ಲಿ ಸಹಿಯನ್ನೂ ಹಾಕಿದ್ದರು ಎಂದು ಮಿಲ್ ಹೇಳಿದ್ದಾರೆ.  https://twitter.com/nawabmalikncp/status/1453166741064863750 “ನಾನು ಬಿಡುಗಡೆ ಮಾಡಿರುವ ನಿಖಾಹ್ ನಾಮ ಅಥವಾ ಜನ್ಮ ಪ್ರಮಾಣ ಪತ್ರ ನಕಲಿಯಾಗಿದ್ದಲ್ಲಿ ನಾನು ರಾಜಕೀಯ ತೊರೆಯುತ್ತೇನೆ. ನನ್ನ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ. ಆದರೆ, ಸಮೀರ್ ವಾಂಖೆಡೆ ಬಳಿ ರಾಜಿನಾಮೆಯನ್ನು ನಾನು ಕೇಳುವುದಿಲ್ಲ. ಕಾನೂನಿನನ್ವಯ ಅವರು ಕೆಲಸ ಕಳೆದುಕೊಳ್ಳಲಿದ್ದಾರೆ,” ಎಂದು ಮಲಿಕ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.  ಸಮೀರ್ ವಾಂಖೆಡೆ ಅವರು ಸುಳ್ಳು ಪ್ರಕರಣ ದಾಖಲಿಸಿ ಅಮಾಯಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಕುರಿತು NCB ಮುಖ್ಯಸ್ಥರಿಗೆ ಅನಾಮಧೇಯ ಅಧಿಕಾರಿಯಿಂದ ಪತ್ರ ಬಂದಿತ್ತು. ಈ ಪತ್ರ ಬಹಿರಂಗಗೊಂಡ ಮರುದಿನವೇ, ಮಲಿಕ್ ಅವರು ನಿಖಾಹ್ ನಾಮವನ್ನು ಬಹಿಂಗಪಡಿಸಿ ಸಮೀರ್ ವಾಂಖೆಡೆಯನ್ನು ಮುಜುಗರಕ್ಕೀಡು ಮಾಡುವ ಪ್ರಯತ್ನ ಮಾಡಿದ್ದಾರೆ.  ನಾನು ಹುಟ್ಟಿನಿಂದಲೇ ಹಿಂದು- ಸಮೀರ್ ಮಲಿಕ್ ಅವರ ಆರೋಪಗಳಿಗೆ ಉತ್ತರಿಸಿರುವ ಸಮೀರ್ ವಾಂಖೆಡೆ, ನಾನು ದಲಿತ ಹಿಂದೂ ಕುಟುಂಬದಲ್ಲಿ ಹುಟ್ಟಿದವನು. ನಾನು ಇವತ್ತಿಗೂ ಹಿಂದೂ. ನಾನೂ ಮತಾಂತರಗೊಂಡಿಲ್ಲ. ಭಾರತವೊಂದು ಜಾತ್ಯಾತೀತ ರಾಷ್ಟ್ರ ಇದರ ಬಗ್ಗೆ ನನಗೆ ಅಭಿಮಾನವಿದೆ, ಎಂದಿದ್ದಾರೆ.  ನನ್ನ ತಂದೆ ಹಿಂದೂ, ನನ್ನ ತಾಯಿ ಮುಸ್ಲಿಂ. ನಾನು ಮುಸ್ಲಿಂ ಸಂಪ್ರದಾಯದ ಪ್ರಕಾರ ವಿವಾಹವಾಗಬೇಕೆಂದು ತಾಯಿಯ ಆಸೆಯಾಗಿತ್ತು. ಅದೇ ತಿಂಗಳು, ವಿಶೇಷ ವಿವಾಹ ಕಾಯ್ದೆಯಡಿ ನನ್ನ ಮದುವೆಯನ್ನು ನೋಂದಣಿ ಮಾಡಲಾಗಿತ್ತು. ಬಳಿಕ ಕಾನೂನಾತ್ಮಕವಾಗಿ ವಿಚ್ಛೇದನ ಪಡೆದಿದ್ದೇವೆ, ಎಂದು ಹೇಳಿದ್ದಾರೆ.  “ನಾನು ಬೇರೆ ಧರ್ಮಕ್ಕೆ ಮತಾಂತರವಾಗಿದ್ದರೆ ಅದಕ್ಕೆ ಪೂರಕವಾದ ದಾಖಲೆಗಳನ್ನು ನವಾಬ್ ಮಲಿಕ್ ನೀಡಬೇಕು. ಒಂದು ವೇಳೆ ಅವರು ದಾಖಲೆ ನೀಡಿದರೆ, ವಿಶೇಷ ವಿವಾಹ ಕಾಯ್ದೆಯಡಿ ನನ್ನ ಮದುವೆ ನೋಂದಣಿಯಾದ ದಾಖಲೆಗಳನ್ನು ನನ್ನ ತಂದೆ ಬಿಡುಗಡೆ ಮಾಡಲಿದ್ದಾರೆ,” ಎಂದು ಮಲಿಕ್ ಅವರಿಗೆ ಸವಾಲೆಸೆದಿದ್ದಾರೆ.  ಸಮೀರ್ ವಿರುದ್ದ ತನಿಖೆಯಿಲ್ಲ ಎಂದ NCB: ಅನಾಮಧೇಯ ವ್ಯಕ್ತಿ ಪತ್ರ ಬರೆದು ದೂರು ನೀಡಿರುವ ವಿಚಾರದ ಕುರಿತು ಸಮೀರ್ ವಾಂಖೆಡೆ ವಿರುದ್ದ ಯಾವುದೇ ರೀತಿಯ ತನಿಖೆ ಕೈಗೊಳ್ಳುವುದಿಲ್ಲ ಎಂದು NCB ಮಹಾ ನಿರ್ದೇಶಕರಾದ ಎಸ್ ಎನ್ ಪ್ರಧಾನ್ ಹೇಳಿದ್ದಾರೆ. ಪತ್ರದಲ್ಲಿ ಯಾರ ಸಹಿಯೂ ಇರದ ಕಾರಣ ದೂರನ್ನು ಊರ್ಜಿತಗೊಳಿಸಲು ಸಾದ್ಯವಿಲ್ಲ ಎಂದು ಹೇಳಿದ್ದಾರೆ.  ಇದಕ್ಕೆ ಪ್ರತಿಕ್ರಿಯಿಸಿದನವಾಬ್ ಮಲಿಕ್NCB ಮೊದಲು ತನಿಖೆ ನಡೆಸುವುದಾಗಿ ಹೇಳಿತ್ತು. ಆ ಬಳಿಕ ತನಿಖೆ ನಡೆಸುವುದಿಲ್ಲ ಎಂದು ಹೇಳಿದೆ. ಇದರಿಂದಾಗಿ ಸಂಪೂರ್ಣ NCB ಮೇಲೆ ಸಂದೇಹ ಪಡುವಂತಾಗಿದೆ, ಎಂದಿದ್ದಾರೆ.  “ಎಲೆಕ್ಟ್ರಾನಿಕ್ ಆಧಾರದ ಮೇಲೆ ತನಿಖೆ ನಡೆಸುವುದಾಗಿ NCB ಹೇಳುತ್ತಲೇ ಬಂದಿದೆ. ಸಮೀರ್ ವಾಂಖೆಡೆ, ಪ್ರಭಾಕರ್ ಸೈಲ್, ಕಿರಣ್ ಗೋಸಾವಿ, ಹಾಗೂ ಸಮೀರ್ ವಾಂಖೆಡೆ ಡ್ರೈವರ್ ಮಾನೆ ಅವರ ಕಾಲ್ ರೆಕಾರ್ಡ್ಸ್ NCB ಪಡೆದರೆ ಎಲ್ಲಾ ಸಂದೇಹಗಳು ನಿವಾರಣೆಯಾಗುವುದು,” ಎಂದು ಮಲಿಕ್ ಹೇಳಿದ್ದಾರೆ.  ಸಮೀರ್ ವಾಂಖೆಡೆ ಪರ ಸೋಶಿಯಲ್ ಮೀಡಿಯಾ ಅಭಿಯಾನ:  ನವಾಬ್ ಮಲಿಕ್ ಮತ್ತು ಸಮೀರ್ ವಾಂಖೆಡೆ ನಡುವಿನ ಸವಾಲಿನ ಸಮರಕ್ಕೆ ಸಾಮಾಜಿಕ ಜಾಲತಾಣವೂ ಸಾಥ್ ನೀಡಿದೆ. ನಾರ್ಕೋಟಿಕ್ಸ್ ಬ್ಯೂರೋ ಕಚೇರಿ ಎದುರು ಸಮೀರ್ ಪರ ಹಲವಾರು ಜನರು ಬೆಂಬಲ ಸೂಚಿಸಿದ ಘಟನೆಯು ನಡೆದಿದೆ. ನವಾಬ್ ಮಲಿಕ್, ಅವರು ಸಮೀರ್ ವಾಂಖೆಡೆ ವಿರುದ್ದ ಸುಳ್ಳು ದಾಖಲೆಗಳನ್ನು ನೀಡುತ್ತಿದ್ದಾರೆ ಎಂದು ಆರೋಪಿಸಿ ಸಮೀರ್ ಪರ #supportSameervankhede ಅಭಿಯಾನವನ್ನೂ ನಡೆಸಲಾಗುತ್ತಿದೆ.  https://twitter.com/iAtulKrishan/status/1452884637210988544

Read moreDetails

ಬಿಜೆಪಿ ಶಕ್ತಿ ಬಗ್ಗೆ ತಿಳಿಯದಿರುವುದೇ ರಾಹುಲ್‌ ಸಮಸ್ಯೆ, ಜನರ ಕೋಪ ಬಿಜೆಪಿಯನ್ನು ಸೋಲಿಸಲು ಸಾಕಾಗುವುದಿಲ್ಲ– ಪ್ರಶಾಂತ್‌ ಕಿಶೋರ್

ಮುಂದಿನ ಕೆಲವು ದಶಕಗಳವರೆಗೆ ಬಿಜೆಪಿ (ಕೇಂದ್ರ ರಾಜಕಾರಣದಿಂದ) ಎಲ್ಲಿಗೂ ಹೋಗುವುದಿಲ್ಲ, ಆದರೆ ರಾಹುಲ್‌ ಗಾಂಧಿ ಅವರ ಸಮಸ್ಯೆ ಏನೆಂದರೆ ಅವರು ಈ ಸತ್ಯವನ್ನು ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ...

Read moreDetails

ರಾಜಕೀಯ ಸಭ್ಯತೆಯೂ ಸಾಮಾಜಿಕ ಪ್ರಜ್ಞೆಯೂ : ಸಭ್ಯತೆ ಸೌಜನ್ಯ ಮತ್ತು ಪ್ರಾಮಾಣಿಕತೆಯ ಹುಡುಕಾಟದಲ್ಲಿ ಜನತೆ

“ ರಾಜಕಾರಣ ಪುಂಡರ/ಫಟಿಂಗರ/ದುಷ್ಟರ/ನೀಚರ/ಠಕ್ಕರ ಅಂತಿಮ ಆಶ್ರಯ ತಾಣ ” ಎಂಬ ಜಾರ್ಜ್ ಬರ್ನಾರ್ಡ್ ಷಾ ಅವರ ಮಾರ್ಮಿಕ ಹೇಳಿಕೆಯನ್ನು ಸುಳ್ಳು ಎಂದು ನಿರೂಪಿಸುವ ನಿಟ್ಟಿನಲ್ಲಿ ಯಾವುದೇ ದೇಶದ ...

Read moreDetails

ಮುಂಬೈ ಡ್ರಗ್ಸ್ ಪ್ರಕರಣ : 25 ದಿನಗಳ ಬಳಿಕ ಆರ್ಯನ್ ಖಾನ್‌ಗೆ ಜಾಮೀನು ನೀಡಿದ ಬಾಂಬೆ ಹೈಕೋರ್ಟ್

ಮೂರು ವಾರಗಳ ಜೈಲು ವಾಸದ ನಂತರ ಆರ್ಯನ್ ಖಾನ್‌ಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದೆ. ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್‌ಸಿಬಿ) ಕ್ರೂಸ್ ಶಿಪ್ ಪಾರ್ಟಿಯ ಮೇಲೆ ದಾಳಿ ...

Read moreDetails

ನೀವು ಇಂಜಿನಿಯರಿಂಗ್‌ ಪದವಿಧರರೇ? : ಹಾಗಾದರೆ ನೀವೂ ಸರ್ಕಾರಿ ಶಿಕ್ಷಕರಾಗಬಹುದು : ಹೇಗೆ ಗೊತ್ತೇ?

ಎಂಜಿನಿಯರಿಂಗ್ ಪಧವೀದರರು ಸರ್ಕಾರಿ ಶಾಲೆಗಳಲ್ಲಿ ಬೋಧನೆ ಮಾಡಲು ಅರ್ಹರು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಇಲಾಖೆ ತಿದ್ದುಪಡಿ ಜಾರಿಗೊಳಿಸಲು ಮುಂದಾಗಿದೆ. ಹೀಗಾಗಿ, ಎಂಜಿನಿಯರಿಂಗ್ ಪದವಿಧರರು ಶಿಕ್ಷಕರ ಅರ್ಹತಾ ...

Read moreDetails

ಕಡ್ಡಾಯ ಕನ್ನಡ ಕಲಿಕೆ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಸಂಘಪರಿವಾರ ಸಂಸ್ಥೆಯೇ? – ಇಲ್ಲಿದೇ ಸಂಪೂರ್ಣ ವರದಿ

ಬುಧವಾರ ಮುಂಜಾನೆ ‘ಪ್ರತಿಧ್ವನಿ’ ಪ್ರಕಟಿಸಿದ ವರದಿಯಲ್ಲಿ ಹೈಕೋರ್ಟ್ನಲ್ಲಿ ಕನ್ನಡ ವಿಚಾರವಾಗಿ ನಡೆಯುತ್ತಿರುವ ಕುರಿತ ವಿವರಗಳಿವೆ. ಪದವಿ ತರಗತಿಗಳಲ್ಲಿ ಕನ್ನಡವನ್ನು ಕಡ್ಡಾಯಗೊಳಿಸಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ಮುಂದೆ ಸ್ಟೇ ಆರ್ಡರ್ ...

Read moreDetails

ರಾಜ್ಯದ 9 ಜಿಲ್ಲೆಗಳಲ್ಲಿ ಝೀರೋ ಕೋವಿಡ್ ಕೇಸ್!

ರಾಜ್ಯದಲ್ಲಿ ನಿನ್ನೆ (ಬುಧವಾರ) 282 ಹೊಸ ಕರೋನಾ ಕೇಸ್ ಗಳು ಪತ್ತೆಯಾಗಿದ್ದು, 13 ಮಂದಿ ಮೃತಪಟ್ಟಿದ್ದಾರೆ. ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಶೂನ್ಯ ಕೋವಿಡ್ ಸೋಂಕು ವರದಿಯಾಗಿದ್ದು, ಬುಧವಾರ ...

Read moreDetails

ಸಿಂಧಗಿ, ಹಾನಗಲ್ ಉಪಚುನಾವಣೆ ಪ್ರಚಾರ ಅಂತ್ಯ : ಗೆಲುವಿನ ವಿಶ್ವಾಸದಲ್ಲಿ ಬಿಜೆಪಿ, ಕಾಂಗ್ರೆಸ್!

ರಾಜ್ಯದಲ್ಲಿ ಉಪಚುನಾವಣೆ ಕಾವು ಜೋರಾಗಿದ್ದು ರಾಜಕೀಯ ಪಕ್ಷಗಳ ನಾಯಕರು ಆರೋಪ ಪ್ರತ್ಯಾರೋಪಗಳ ಸುರಿಮಳೆ ಗೈಯುತ್ತಿದ್ದರು. ಈ ಉಪಚುನಾವಣೆ ರಾಜ್ಯದಲ್ಲಿ ಎಷ್ಟು ಪ್ರಾಮುಖ್ಯತೆ ಪಡೆದಿದೆ ಎಂದರೆ ಮುಂಬರುವ ಚುನಾವಣೆಗಳ ...

Read moreDetails

ಕೊಡಗು : ವಸತಿ ಶಾಲೆಯೊಂದರಲ್ಲಿ 32 ವಿದ್ಯಾರ್ಥಿಗಳಿಗೆ ‘ಕರೋನಾ ಪಾಸಿಟಿವ್’ – ಸ್ಥಳಕ್ಕೆ ಜಿಲ್ಲಾಧಿಕಾರಿಗಳು ದೌಡು!

ಕೊಡಗು ಜಿಲ್ಲೆಯ ಗಾಳಿಬೀಡು ಜವಾಹರ್ ನವೋದಯ ವಸತಿ ವಿದ್ಯಾಲಯದಲ್ಲಿ 32 ವಿದ್ಯಾರ್ಥಿಗಳಿಗೆ ಕರೋನಾ ಪಾಸಿಟಿವ್ ಕಂಡು ಬಂದಿದೆ. ಒಂದು ವಾರದ ಹಿಂದೆ ಶಾಲೆಯ 9 ರಿಂದ 12 ...

Read moreDetails

ಡಿಕೆ ಶಿವಕುಮಾರ್‌ ಆಪ್ತ ಯುಬಿ ಶೆಟ್ಟಿ ಮನೆ ಮೇಲೆ IT ದಾಳಿ: ರಾಜಕೀಯ ದುರುದ್ದೇಶದಿಂದ ದಾಳಿ – ಆರೋಪ

KPCC ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆಪ್ತರ ಮನೆಯ ಮೇಲೆ ಆದಾಯ ತೆರಿಗೆ (IT Raid) ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗುತ್ತಿಗೆದಾರರಾಗಿರುವ ಯು.ಬಿ. ಶೆಟ್ಟಿ ಅವರ ...

Read moreDetails

ಆರ್ಯನ್‌ ಖಾನ್‌ ಡ್ರಗ್ಸ್‌ ಪ್ರಕರಣ: ಲಕ್ನೋ ಪೊಲೀಸರಿಗೆ ಶರಣಾಗುತ್ತೇನೆಂದ ಕಿರಣ್‌ ಗೋಸಾವಿ ಪುಣೆ ಪೊಲೀಸ್ ವಶಕ್ಕೆ.!

ಆರ್ಯನ್‌ ಖಾನ್‌ ಡ್ರಗ್ಸ್‌ ಪ್ರಕರಣದಲ್ಲಿ ಪ್ರಮುಖ ಸಾಕ್ಷಿ ಎನ್ನಲಾಗುವ ಖಾಸಗಿ ಡಿಟೆಕ್ಟಿವ್‌ ಕಿರಣ್‌ ಗೋಸಾವಿ ಅವರನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ. ಕುತೂಹಲಕಾರಿಯೆಂದರೆ, ಹಲವು ಪ್ರಕರಣಗಳಲ್ಲಿ ಪುಣೆ ಪೊಲೀಸರಿಗೆ ...

Read moreDetails

ಅಧಿಕಾರಿಗಳ ಯಡವಟ್ಟು : ಸಂಭ್ರಮದ ಹೊತ್ತಲ್ಲಿ ಸಂಕಷ್ಟಕ್ಕೆ ಸಿಲುಕಿದ ತುಮರಿ ಶಾಲೆ?

ನೂರು ವರ್ಷದ ಸರ್ಕಾರಿ ಶಾಲೆಗಳು ಎಲ್ಲೆಡೆ ಶತಮಾನೋತ್ಸವದ ಸಂಭ್ರಮದಲ್ಲಿದ್ದರೆ, ಶರಾವತಿ ಹಿನ್ನೀರಿನ ದ್ವೀಪ ಪ್ರದೇಶ ತುಮರಿಯ ಸರ್ಕಾರಿ ಶಾಲೆಯದು ಸಂಕಟದ ಕಥೆ! 1918ರ ಹೊತ್ತಿಗೇ ಅಂದಿನ ಮೈಸೂರು ...

Read moreDetails

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ : ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾದ ರಾಜ್ಯ ಸರ್ಕಾರ!

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಗಳನ್ನು ನೀಗಿಸಲು ಪ್ರಾಥಮಿಕ ಮತ್ತು ಫ್ರೌಡ ಶಿಕ್ಷಣ ಇಲಾಖೆ ಮುಂದಾಗಿದ್ದು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಸಾಮಾನ್ಯ ಪ್ರವೇಶ ಪರೀಕ್ಷೇಗಳನ್ನು ...

Read moreDetails

ಬಿಜೆಪಿ ಭದ್ರಕೋಟೆ ಯುಪಿʼಯನ್ನು ಭೇದಿಸಲು ಮುಂದಾದ ಪ್ರಿಯಾಂಕಾ ಗಾಂಧಿ; ಜನರನ್ನು ತಲುಪಲು 12 ಸಾವಿರ ಕಿ.ಮೀ ‘ಪ್ರತಿಜ್ಞಾ ಯಾತ್ರೆ’

ಇತ್ತೀಚೆಗೆ ಬಿಜೆಪಿ ಮಾತು ಎತ್ತಿದರೆ ಸಾಕು "ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಅಂತ್ಯ ಕಾಣುತ್ತಿರುವ ಪಕ್ಷ" ಎಂದು ಸದಾ ಟೀಕಿಸುತ್ತಲೇ ಬರುತ್ತಿದೆ. ಈಗ ಬಿಜೆಪಿಗೆ ತಿರುಗೇಟು ನೀಡಲು ಮುಂದಾದ ...

Read moreDetails

ಸದ್ಯದಲ್ಲೇ ರಾಜ್ಯ ಪ್ರಮುಖ ಇಬ್ಬರು ರಾಜಕಾರಣಿಗಳ ಮೇಲೆ ಎನ್ಸಿಬಿ, ಇಡಿ ದಾಳಿ; ಯಾಕೆ? ಯಾರವರು?

ಇತ್ತೀಚಿನ ದಿನಗಳಲ್ಲಿ ಎನ್‌ಸಿಬಿ ಮತ್ತು ಇಡಿ ಸಂಸ್ಥೆಗಳು ಸಖತ್ ಆಕ್ಟೀವ್ ಆಗಿ ಕೆಲಸ ಮಾಡುತ್ತಿವೆ. ಭ್ರಷ್ಟ ಅಧಿಕಾರಿಗಳು, ರಾಜಕಾರಣಿಗಳಿಗೆ ಇಡಿ ಚಾಟಿ ಬೀಸುತ್ತಿದೆ. ಇನ್ನೊಂದೆಡೆ  ಮಾದಕ ಜಾಲಗಳನ್ನ ...

Read moreDetails

Cow Politics : ಅತ್ತ ರಫ್ತು.. ಇತ್ತ ಪೂಜೆ : ಇದೇ ಬಿಜೆಪಿಯ ಗೋ ರಾಜಕೀಯ!

ಬಿಜೆಪಿ ಇದೀಗ ಮತ್ತೊಮ್ಮೆ ತನ್ನ ಆಧ್ಯತೆ ಯಾವುದು ಮತ್ತು ಬದ್ಧತೆ ಏನೆಂದು ಸಾಬೀತು ಮಾಡಿದೆ. ಸದಾ ಹಿಂದುತ್ವದ ಹೆಸರನಲ್ಲಿ ರಾಜಕೀಯ ಮಾಡುವ ಬಿಜೆಪಿ, ಒಂದಿಲ್ಲೊಂದು ವಿವಾದಗಳನ್ನು ಹುಟ್ಟು ...

Read moreDetails

Recent News

Welcome Back!

Login to your account below

Retrieve your password

Please enter your username or email address to reset your password.

error: Content is protected !!