2023 ರವರೆಗೆ ಬಸವರಾಜ ಬೊಮ್ಮಾಯಿ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೇಳಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಗೊಂದಲಗಳಿಗೆ ತೆರೆ ಎಳೆದರು.
ಸಿಎಂ ಬದಲಾವಣೆಯಾಗುತ್ತಾರೆ ಎಂಬ ಈಶ್ವರಪ್ಪ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಆ ರೀತಿ ಏನೂ ಇಲ್ಲ. ಸಿಎಂ ಬದಲಾಣೆಯಾಗುವುದಿಲ್ಲ. ಈಶ್ವರಪ್ಪನವರು ʼಶಿಘ್ರವೇ ಬದಲಾವಣೆ ಆಗ್ತಾರೆʼ ಎಂದು ಹೇಳಿಲ್ಲ. ಆದರೂ ಈ ರೀತಿ ಹೇಳಿಕೆ ನೀಡುವುದು ತಪ್ಪು ಎಂದರು.
ಮೋದಿ ಸರ್ಕಾರ ಯಾವತ್ತೂ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಇನ್ನೂ ಗುತ್ತಿಗೆದಾರರ ಸಂಘದಿಂದ ಪ್ರಧಾನಿಗೆ ಪತ್ರದ ವಿಚಾರ ಕುರಿತು ಮಾತನಾಡಿದ ಅವರು, ಅದೊಂದು ಆಧಾರರಹಿತ ಆರೋಪವಾಗಿದೆ ಎಂದರು.
ಗುತ್ತಿಗೆದಾರರ ಬಳಿ ಏನಾದರೂ ಸಾಕ್ಷಿ ಇದ್ದರೆ ಕೊಡಲಿ. ಅದನ್ನು ತನಿಖೆ ಮಾಡೋಣ. ಮೋದಿ ನಾಯಕತ್ವದಲ್ಲಿ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ ಎಂದರು.
ಪ್ರಧಾನಿ ಮೋದಿ ಮಾತ್ತು ಮಾಜಿ ಪ್ರಧಾನಿ ದೇವೆಗೌಡರ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿ, ಪ್ರಧಾನಿ ಮೋದಿ ಹಾಗೂ ದೇವೇಗೌಡರು ಭೇಟಿಯಾಗಿದ್ದಾರೆ. ಕೆಲವು ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಹಾಸನಕ್ಕೆ ಐಐಟಿ ಮತ್ತು ಕೆಲವು ಅಭಿವೃದ್ದಿ ವಿಷಯಗಳ ಬಗ್ಗೆ ಮಾತನಾಡಿದ್ದಾರೆ. ಆದರೆಎ ಜೆಡಿಎಸ್ ಜೊತೆ ಮೈತ್ರಿ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಆ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ ಎಂದು ಹೇಳಿದರು.