• Home
  • About Us
  • ಕರ್ನಾಟಕ
Wednesday, January 14, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

2026 ಕೇರಳ ವಿಧಾನಸಭಾ ಚುನಾವಣೆ; ಪಿಣರಾಯಿ ವಿಜಯನ್ ವಿರುದ್ಧ ಹೋರಾಟಕ್ಕೆ ವಿಪಕ್ಷಗಳಿಗೆ ಸಿಕ್ತು ಪ್ರಮುಖ ಅಸ್ತ್ರ

ನಚಿಕೇತು by ನಚಿಕೇತು
November 1, 2021
in ದೇಶ, ರಾಜಕೀಯ
0
2026 ಕೇರಳ ವಿಧಾನಸಭಾ ಚುನಾವಣೆ; ಪಿಣರಾಯಿ ವಿಜಯನ್ ವಿರುದ್ಧ ಹೋರಾಟಕ್ಕೆ ವಿಪಕ್ಷಗಳಿಗೆ ಸಿಕ್ತು ಪ್ರಮುಖ ಅಸ್ತ್ರ
Share on WhatsAppShare on FacebookShare on Telegram

ಮುಂದಿನ ಕೇರಳ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಈಗಿನಿಂದಲೇ ತಯಾರಿ ನಡೆಸಿಕೊಂಡಿವೆ. ಹೇಗಾದರೂ ಮಾಡಿ ಸಿಎಂ ಪಿಣರಾಯಿ ವಿಜಯನ್ ನೇತೃತ್ವದ ಸಿಪಿಐ(ಎಂ) ಸರ್ಕಾರವನ್ನು ಕೆಡವಲೇಬೇಕು ಎಂದು ಕಾಯುತ್ತಿವೆ. ಹೀಗಿರುವಾಗಲೇ ಸಿಎಂ ಪಿಣರಾಯಿ ವಿಜಯನ್ ಸರ್ಕಾರದ ವಿರುದ್ಧ ಹೋರಾಟಕ್ಕೆ ವಿರೋಧ ಪಕ್ಷಗಳಿಗೆ ಪ್ರಬಲ ಅಸ್ತ್ರ ಸಿಕ್ಕಿದೆ.

ADVERTISEMENT

ಹೌದು, ಕೇರಳ ಸಿಎಂ ಪಿಣರಾಯಿ ವಿಜಯನ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಳಿಯನ ಮೇಲಿನ ನ್ಯಾಯಾಂಗ ಬಂಧನದಿಂದ ಮುಜುಗರಕ್ಕೀಡಾದ್ರೂ ಭರ್ಜರಿ ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ಪಿಣರಾಯಿ ಅಬ್ಬರಕ್ಕೆ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಬ್ರೇಕ್ ಹಾಕಿದೆ. ಹೀಗಾಗಿ ಮುಂದಿನ ವಿಧಾನಸಭಾ ಚುನಾವಣೆಗೆ ಇದನ್ನೇ ಅಸ್ತ್ರವನ್ನಾಗಿ ಮಾಡಿಕೊಂಡು ಹೋರಾಟಕ್ಕೆ ವಿಪಕ್ಷಗಳು ಮುಂದಾಗಿವೆ. ಹೀಗಾದರೆ ಈ ಬೆಳವಣಿಗೆ ಎಲ್ಡಿಎಫ್ಗೆ ಹಿನ್ನಡೆ ಉಂಟುಮಾಡೋ ಸಾಧ್ಯತೆ ಇದೆ.

ಎಲ್ಡಿಎಫ್ ನೇತೃತ್ವ ವಹಿಸಿರುವ ಕೇರಳ ಸಿಎಂ ಪಿಣರಾಯಿ ವಿಜಯನ್ಗೆ, ಅವರ ಅಳಿಯ ನ್ಯಾಯಾಂಗ ಬಂಧನಕ್ಕೆ ಹೋಗಿರೋದು ಮುಜುಗರವನ್ನುಂಟು ಮಾಡಿತ್ತು. ಆದ್ರೆ ಇದೀಗ ಪಿಣರಾಯಿಯಿಂದ್ಲೇ ಪಕ್ಷಕ್ಕೆ ಮುಜುಗರವಾಗುವಂತಹ ಪರಿಸ್ಥಿತಿ ಕೇರಳದಲ್ಲಿ ನಿರ್ಮಾಣವಾಗಿದೆ.

ಮತ್ತೆ ಸಿಎಂ ಆಗೋ ಕನಸು ಕಂಡಿರುವ ಕೇರಳ ಸಿಎಂ ಪಿಣರಾಯಿ ವಿಜಯನ್ ಈಗಿನಿಂದಲೇ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಆದ್ರೆ ಅವರ ಅಬ್ಬರದ ಪ್ರಚಾರಕ್ಕೆ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಬ್ರೇಕ್ ಹಾಕಿದೆ. ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಪಿಣರಾಯಿ ಹೆಸರು ತಳುಕುಹಾಕಿಕೊಂಡಿದೆ. ಕಸ್ಟಮ್ಸ್ ಅಧಿಕಾರಿಗಳ ವಿಚಾರಣೆಯಲ್ಲಿ ಆರೋಪಿ ಸ್ವಪ್ನಾ ಸುರೇಶ್ ಬಿಚ್ಚಿಟ್ಟ ವಿಚಾರಗಳು ಕೇರಳ ಸರ್ಕಾರವನ್ನು ಶೇಕ್ ಮಾಡಿದ್ದು, ಪಿಣರಾಯಿಗೆ ಬಿಗ್ ಶಾಕ್ ಕೊಟ್ಟಿದೆ.

ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ಸಿಎಂ ಅವರ ಮಾಜಿ ಮುಖ್ಯ ಕಾರ್ಯದರ್ಶಿ ಎಂ ಶಿವಶಂಕರ್ ರಾಜಕಾರಣಿಗಳು ಹಾಗೂ ಸ್ಮಗ್ಲರ್ಗಳ ನಡುವಿನ ಕೊಂಡಿಯಾಗಿ ಕಾರ್ಯ ನಿರ್ವಹಿಸಿದ್ದರು. ಸ್ಮಗ್ಲಿಂಗ್ನಲ್ಲಿ ಸಿಎಂ ಪಿಣರಾಯಿ ವಿಜಯನ್ಗೆ ಕಿಕ್ ಬ್ಯಾಕ್ ನೀಡಲಾಗಿದೆ. ಸರ್ಕಾರದ ಮೂವರು ಸಚಿವರು ಹಾಗೂ ಸ್ಪೀಕರ್ಗೆ ಕೂಡ ಗೋಲ್ಡ್ ಸ್ಮಗ್ಲಿಂಗ್ ಪಾಲು ಕೊಡಲಾಗಿದೆ.

ಕಸ್ಟಮ್ಸ್ ಅಧಿಕಾರಿಗಳಿಗೆ ಸ್ವಪ್ನ ಈ ರೀತಿಯಾಗಿ ಹೇಳಿಕೆ ನೀಡಿದ್ದಾರೆ. ಇದೇ ಹೇಳಿಕೆಯನ್ನು ಒಳಗೊಂಡ ವರದಿಯನ್ನು ಅಧಿಕಾರಿಗಳು ಹೈಕೋರ್ಟ್ಗೆ ಸಲ್ಲಿಸಿದ್ದಾರೆ. ಇದು ಸಿಎಂ ಪಿಣರಾಯಿ ವಿಜಯನ್ಗೆ ಸಂಕಷ್ಟ ತಂದೊಡ್ಡಿದೆ.

ಹೈಕೋರ್ಟ್ಗೆ ಸಲ್ಲಿಕೆಯಾಗಿರುವ ದೋಶಾರೋಪಣ ಪಟ್ಟಿಯಲ್ಲಿ ಪಿಣರಾಯಿ ವಿಜಯನ್ ಹೆಸರು ಉಲ್ಲೇಖವಾಗಿರುವುದನ್ನೇ ಚುನಾವಣಾ ಅಸ್ತ್ರವಾಗಿ ಬಳಸಿಕೊಳ್ಳಲು ಕಾಂಗ್ರೆಸ್ ಮೈತ್ರಿಕೂಟದ ಯುಡಿಎಫ್ ಹಾಗೂ ಬಿಜೆಪಿ ಮುಂದಾಗಿವೆ. ತಕ್ಷಣವೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಅಂತ ಬಿಜೆಪಿ ಹಾಗೂ ಕಾಂಗ್ರೆಸ್ ಆಗ್ರಹಿಸಿವೆ. ಇದೆಲ್ಲಾ ರಾಜಕೀಯ ಪಿತೂರಿ. ಗೋಲ್ಡ್ ಸ್ಮಗ್ಲಿಂಗ್ ಕೇಸಲ್ಲಿ ನಾನಿಲ್ಲ ಅಂತ ಪಿಣರಾಯಿ ವಿಜಯನ್ ಹೇಳಿದ್ದಾರೆ.

ಅತ್ತ ಅಳಿಯನಿಂದ ಮುಜುಗರವಾಗ್ತಿದೆ. ಇತ್ತ ತನ್ನ ಮೇಲೆ ಗೋಲ್ಡ್ ಸ್ಮಗ್ಲಿಂಗ್ ಆರೋಪ ಬೇರೆ ಬಂದಿದೆ. ಪಕ್ಷ ಹಾಗೂ ವೈಯಕ್ತಿಕವಾಗಿ ದೊಡ್ಡ ಡ್ಯಾಮೇಜ್ ಆಗ್ತಿದೆ. ಮುಂದೇನು? ಚುನಾವಣೆ ಎದುರಿಸೋದು ಹೇಗೆ ಅನ್ನೋ ಯೋಚನೆ ಪಿಣರಾಜಿ ವಿಜಯನ್ ಅವರನ್ನ ಬಿಟ್ಟೂ ಬಿಡದೆ ಕಾಡಲಾರಂಭಿಸಿದೆ.

Tags: BJPCongress Partyಕೇರಳ ಸರ್ಕಾರನರೇಂದ್ರ ಮೋದಿಬಿಜೆಪಿವಿಪಕ್ಷ
Previous Post

ಭಾವನೆಗಳ ಮಡುವಿನಲ್ಲಿ ಕರ್ನಾಟಕ ರಾಜ್ಯೋತ್ಸವ

Next Post

ಭಾರತ್ ಬಯೋಟೆಕ್ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಹಗ್ಗಜಗ್ಗಾಟದಲ್ಲಿ ಸಂಕಷ್ಟಕ್ಕೊಳಗಾಗುತ್ತಿರುವ ಭಾರತೀಯರು!

Related Posts

Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
0

ಬೆಂಗಳೂರು: ನಾನು ಎಂಎಲ್ಎ ಆದ ಮೇಲೆ ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಯಾವ ಜಾತಿ ಗಲಭೆ, ಜಾತಿ ರಾಜಕಾರಣ, ಪೊಲೀಸರ ಮೇಲೆ ಒತ್ತಡ, ಒತ್ತಾಯ ಮಾಡಿಲ್ಲ.ಕುವೆಂಪುರವರು ಹೇಳಿದಂತೆ ನಮ್ಮ...

Read moreDetails

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

January 13, 2026
ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

ಅಕ್ರಮ ತೆರವಿನ ಹೆಸರಿನಲ್ಲಿ ಬಡವರ ಬದುಕು ಧ್ವಂಸ!: ರಾ ಚಿಂತನ್..!!

January 13, 2026
ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

ಮಹಾತ್ಮ ಗಾಂಧಿ ಹೆಸರು ಎಂದರೆ ಬಿಜೆಪಿಗೆ ಅಲರ್ಜಿ: ಸಿ.ಎಂ ಸಿದ್ದರಾಮಯ್ಯ

January 13, 2026
ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಹುಲ್ ಗಾಂಧಿ ಜೊತೆಗೆ ರಾಜಕಾರಣ ಚರ್ಚೆ ಮಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

January 13, 2026
Next Post
ಭಾರತ್ ಬಯೋಟೆಕ್ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಹಗ್ಗಜಗ್ಗಾಟದಲ್ಲಿ ಸಂಕಷ್ಟಕ್ಕೊಳಗಾಗುತ್ತಿರುವ ಭಾರತೀಯರು!

ಭಾರತ್ ಬಯೋಟೆಕ್ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ಹಗ್ಗಜಗ್ಗಾಟದಲ್ಲಿ ಸಂಕಷ್ಟಕ್ಕೊಳಗಾಗುತ್ತಿರುವ ಭಾರತೀಯರು!

Please login to join discussion

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ
Top Story

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

by ಪ್ರತಿಧ್ವನಿ
January 14, 2026
Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!
Top Story

Sankranti 2026: ಎಳ್ಳು ಬೆಲ್ಲದ ನಡುವೆ ಲೌಕಿಕ ಬದುಕಿನ ಸಿಕ್ಕುಗಳು..!

by ನಾ ದಿವಾಕರ
January 14, 2026
Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!
Top Story

Daily Horoscope: ಸಂಕ್ರಾಂತಿಗೆ ಅದೃಷ್ಟ ಹೊತ್ತು ತರುವ ರಾಶಿಗಳಿವು..!

by ಪ್ರತಿಧ್ವನಿ
January 14, 2026
Top Story

ಸಿದ್ದು, ಬಿಎಸ್ವೈ ಅವರಂತೆ ಕೆಲಸಮಾಡಿ ಜನಪ್ರಿಯ ನಾಯಕಿಯಾಗೋ ಹುಚ್ಚಿದೆ : ಲಕ್ಷ್ಮಿ ಹೆಬ್ಬಾಳ್ಕರ್ ಭಾವನಾತ್ಮಕ ಮಾತು..

by ಪ್ರತಿಧ್ವನಿ
January 13, 2026
Top Story

ಇತಿಹಾಸ ಸೃಷ್ಟಿಸಿದ ಕುಣಿಗಲ್ ಉತ್ಸವ ! 35 ಸಾವಿರ ಜನ ಜನರ ಉಪಸ್ಥಿತಿಯಲ್ಲಿ ನಡೆದ ಬೃಹತ್ ತಾರಾಮೇಳ !

by ಪ್ರತಿಧ್ವನಿ
January 13, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

BBK 12: ಕರವೇ ಮಹಿಳಾ ಘಟಕದ ಅಧ್ಯಕ್ಷೆಗೆ ಕನ್ನಡ ಬರೆಯಲು ಬರಲ್ಲ-ಅಶ್ವಿನಿ ಗೌಡ ವಿರುದ್ಧ ಭಾರೀ ಟೀಕೆ

January 14, 2026
ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

ನಡುರಸ್ತೆಯಲ್ಲಿ ರೌಡಿ ಶೀಟರ್ ಬರ್ಬರ ಹತ್ಯೆ

January 14, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada