ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ (Congress) ದುರಾಡಳಿತದಿಂದ ಕರ್ನಾಟಕದಲ್ಲಿ (Karnataka) ಕಳೆದ ಎರಡೂವರೆ ವರ್ಷಗಳಲ್ಲಿ ಒಟ್ಟು 2,422 ಮಂದಿ ರೈತರು ಆತ್ಮಹತ್ಯೆ (Farmers) ಮಾಡಿಕೊಂಡಿರುವುದು ಬಹಳ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಜೆಡಿಎಸ್ (Jds) ಕಳವಳ ವ್ಯಕ್ತಪಡಿಸಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ನಾಡಿನ ರೈತರ ಬಗ್ಗೆ ಕನಿಷ್ಠ ಕಾಳಜಿ ಕೂಡ ಇಲ್ಲ ಎನ್ನುವುದನ್ನು ಈ ಅಂಕಿ ಅಂಶಗಳೇ ಸಾಬೀತುಪಡಿಸುತ್ತಿದೆ ಎಂದು ಜೆಡಿಎಸ್ ವಾಗ್ದಾಳಿ ನಡೆಸಿದೆ.

ಇನ್ನು ನೆರೆಹಾವಳಿಯಿಂದ ಕಂಗೆಟ್ಟಿರುವ ರಾಜ್ಯದ ರೈತಾಪಿವರ್ಗ ಬೆಳೆ ನಷ್ಟ, ಸಾಲದ ಸುಳಿಗೆ ಸಿಲುಕಿ ಸಾವಿನ ದಾರಿ ಹಿಡಿಯುತ್ತಿದ್ದಾರೆ, ಅನ್ನದಾತರ ಆತ್ಮಹತ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಲೇ ಇದೆ. ಆದ್ರೆ ರಾಜ್ಯ ಸರ್ಕಾರ ಈ ಬಗ್ಗೆ ಯಾವುದೇ ರೀತಿ ಗಮನಹರಿಸುತ್ತಿಲ್ಲ ಎಂದು ಜೆಡಿಎಸ್ ಪೋಸ್ಟ್ ಮಾಡಿದೆ.

ರೈತರ ಆತ್ಮವಿಶ್ವಾಸ ಹೆಚ್ಚಳಕ್ಕೆ ಹಾಗೂ ಆತ್ಮಹತ್ಯೆ ತಡೆಗೆ ಕಾಂಗ್ರೆಸ್ ಸರ್ಕಾರವಾಗಲಿ, ಕೃಷಿ ಸಚಿವ ಚೆಲುವರಾಯ ಸ್ವಾಮಿ ಆಗಲಿ ಯಾವುದೇ ಯೋಜನೆ, ಕಾರ್ಯಕ್ರಮಗಳನ್ನು ಜಾರಿಗೊಳಿಸದಿರುವುದು ರಾಜ್ಯ ಜನರ ದುರಂತ. ಇದು ರೈತರ ಬಗ್ಗೆ ಕಾಂಗ್ರೆಸ್ ಗೆ ಇರುವ ನಿರ್ಲಕ್ಷ್ಯಕ್ಕೆ ಸಾಕ್ಷಿ ಎಂದು ರಾಜ್ಯ ಜೆಡಿಎಸ್ ಘಟಕ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ.










